AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜೀರಿಗೆ ಸೇವಿಸಿ ಆರೋಗ್ಯವಂತರಾಗಿ: ಇಲ್ಲಿದೆ ಜೀರಿಗೆಯ ಮಹತ್ವ

ಜೀರಿಗೆಯಲ್ಲಿನ ಕೆಲವು ಅಂಶಗಳು ಮಧುಮೇಹ ನಿಯಂತ್ರಣಕ್ಕೆ ನೆರವಾಗುತ್ತದೆ. ರಕ್ತದಲ್ಲಿನ ಸಕ್ಕರೆ ಪ್ರಮಾಣವನ್ನು ನಿಯಂತ್ರಿಸುವ ಮೂಲಕ ಮಧುಮೇಹವನ್ನು ಒಂದ ಹಂತದವರೆಗೆ ನಿಯಂತ್ರಣದಲ್ಲಿಡಲು ಜೀರಿಗೆ ಸಹಾಯಕವಾಗಿದೆ.

ಜೀರಿಗೆ ಸೇವಿಸಿ ಆರೋಗ್ಯವಂತರಾಗಿ: ಇಲ್ಲಿದೆ ಜೀರಿಗೆಯ ಮಹತ್ವ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on:Feb 17, 2022 | 3:04 PM

Share

ಭಾರತೀಯ ಅಡುಗೆ ಪದ್ಧತಿಯಲ್ಲಿ ಜೀರಿಗೆಗೆ ಪ್ರಮುಖ ಸ್ಥಾನವಿದೆ. ದೇಹದ ಆರೋಗ್ಯವನ್ನು ಕಾಪಾಡಿಕೊಳ್ಳಲು, ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುವಲ್ಲಿ  ಜೀರಿಗೆ (Cumin) ಪಾತ್ರ ದೊಡ್ಡದು. ಅನಾದಿಕಾಲದಿಂದಲೂ ಸಾಂಪ್ರದಾಯಿಕ ಔಷಧವಾಗಿ ಜೀರಿಗೆ ಬಳಕೆಯಲ್ಲಿದೆ.  ಜೀರ್ಣಕ್ರಿಯೆಯನ್ನು ಉತ್ತಮಪಡಿಸಲು ಜತೆಗೆ ಆಹಾರದಿಂದ ಹರಡುವ ಸೋಂಕನ್ನು ತಡೆಯಲು ಜೀರಿಗೆ ನೆರವಾಗುತ್ತದೆ.  ಸಂಶೋಧನೆಯಲ್ಲಿಯೂ ಜೋರಿಗೆಯಲ್ಲಿ ಆರೋಗ್ಯ ಗುಣಗಳು ಸಾಬೀತಾಗಿದೆ. ಹೌದು ಜೀರಿಗೆಯು ರಕ್ತದಲ್ಲಿನ ಸಕ್ಕರೆಯನ್ನು ನಿಯಂತ್ರಿಸುತ್ತದೆ ಹಾಗೂ ಕೊಲೆಸ್ಟ್ರಾಲ್(Cholesterol)​ ಮಟ್ಟವನ್ನೂ ಸುಧಾರಿಸುತ್ತದೆ ಎಂದು ಅಧ್ಯಯನದಲ್ಲಿ ಕಂಡುಕೊಳ್ಳಲಾಗಿದೆ.  ಹೀಗಾಗಿ ಜೀರಿಗೆ ದೇಹದ ಸಂಪೂರ್ಣ ಆರೋಗ್ಯಕ್ಕೆ ಉತ್ತಮ ಎನ್ನಬಹುದು. ಇನ್ನುಳಿದಂತೆ ಜೀರಿಗೆಯ ಆರೋಗ್ಯ ಗುಣಗಳಿ ಬಗ್ಗೆ ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ:

ಜೀರ್ಣಕ್ರಿಯೆಯನ್ನು ಉತ್ತೇಜಿಸುತ್ತದೆ: ಅಜೀರ್ಣ ಸಮಸ್ಯೆಗೆ ಜೀರಿಗೆ ರಾಮಬಾಣವಾಗಿದೆ. ಆಧುನಿಕ ಸಂಶೋಧನೆಯಲ್ಲಿಯೂ ಜೀರಿಗೆ ಚಯಾಪಯ ಕ್ರಿಯೆಯನ್ನು ಉತ್ತಮಪಡಿಸುತ್ತದೆ ಎಂದು ಸಾಬೀತಾಗಿದೆ. ಜೀರಿಗೆ ಪಿತ್ತಜನಕಾಂಗದಿಂದ ಬಿಡುಗಡೆಯಾಗುವ ಪಿತ್ತರಸವನ್ನು ಹೆಚ್ಚಿಸುತ್ತದೆ. ಇದು ಕರುಳಿನಲ್ಲಿರುವ ಕೊಬ್ಬು ಮತ್ತು ಕೆಲವು ಅನಗತ್ಯ ಪೋಷಕಾಂಶಗಳನ್ನು ಜೀರ್ಣಿಸಿಕೊಳ್ಳಲು ಸಹಾಯ ಮಾಡುತ್ತದೆ.

ಕಬ್ಬಿಣ ಅಂಶವನ್ನು ಹೆಚ್ಚಿಸುತ್ತದೆ: ಜೀರಿಗೆಯಲ್ಲಿ ಯಥೇಚ್ಛವಾದ ಕಬ್ಬಿಣದ ಅಂಶವಿದೆ.  ಒಂದು ಚಮಚ ಜೀರಿಗೆಯಲ್ಲಿ ಸುಮಾರು 1.4 ಮಿಗ್ರಾಂ ಕಬ್ಭಿಣದ ಅಂಶವನ್ನು ಹೊಂದಿರುತ್ತದೆ ಎನ್ನುತ್ತಾರೆ ತಜ್ಞರು. ಮಹಿಳೆಯರ ಮುಟ್ಟಿನ ಸಮಸ್ಯೆಗೆ ಮತ್ತು ಮಕ್ಕಳ ಸರ್ವತೋಮುಖ ಬೆಳವಣಿಗೆಗೆ ಕಬ್ಬಿಣದ ಅಂಶ ಅತಿ ಮುಖ್ಯವಾಗಿದೆ. ಅದು ಜೀರಿಗೆಯಿಂದ ದೊರಕುತ್ತದೆ.

ಮಧುಮೇಹಿಗಳಿಗೂ ಸಹಾಯಕ: ಜೀರಿಗೆಯಲ್ಲಿನ ಕೆಲವು ಅಂಶಗಳು ಮಧುಮೇಹ ನಿಯಂತ್ರಣಕ್ಕೆ ನೆರವಾಗುತ್ತದೆ. ರಕ್ತದಲ್ಲಿನ ಸಕ್ಕರೆ ಪ್ರಮಾಣವನ್ನು ನಿಯಂತ್ರಿಸುವ ಮೂಲಕ ಮಧುಮೇಹವನ್ನು ಒಂದ ಹಂತದವರೆಗೆ ನಿಯಂತ್ರಣದಲ್ಲಿಡಲು ಜೀರಿಗೆ ಸಹಾಯಕವಾಗಿದೆ.  ಅಲ್ಲದೆ ರಕ್ತದಲ್ಲಿನ ಕೊಲೆಸ್ಟ್ರಾಲ್​ ಮಟ್ಟವನ್ನು  ನಿಯಂತ್ರಿಸುತ್ತದೆ.

ತೂಕ ನಷ್ಟಕ್ಕೆ ಸಹಾಯಕ: ಜೀರಿಗೆಯಲ್ಲಿನ ಪೂರಕಗಳು ದೇಹದ ಅತಿಯಾದ ತೂಕ ನಷ್ಟಕ್ಕೆ ಕಾರಣವಾಗುತ್ತದೆ ಎಂದು ಅಧ್ಯಯನದಲ್ಲಿ ಸಾಬೀತಾಗಿದೆ.  ರಕ್ದಲ್ಲಿನ ಕೊಬ್ಬನ್ನು ಕಡಿಮೆ ಮಾಡಿ, ದೇಹವನ್ನು ಸುರಕ್ಷಿತವಾಗಿರಿಸಿಕೊಳ್ಳಲು ಜೀರಿಗೆ ಸಹಾಯಕವಾಗಿದೆ.

ಆಹಾರದಿಂದ ಹರಡುವ ಕಾಯಿಲೆಗೆ ತಡೆ: ಮಸಾಲೆಯಲ್ಲಿ ಜೀರಿಗೆಯನ್ನು ಆಹಾರದ ಸುರಕ್ಷತೆಯ ದೃಷ್ಟಿಯಿಂದಲು ಬಳಸುತ್ತಾರೆ.  ಜೀರಿಗೆಯಲ್ಲಿನ ಹಲವು ಅಂಶಗಳು ಆಹಾರದಿಂದ ಹರಡುವ ವ್ಯಾಕ್ಟೀರಿಯಾ ಮತ್ತು ಕೆಲವು ರೀತಿಯ ಸಾಂಕ್ರಾಮಿಕ ಶೀಲೀಂದ್ರಗಳ ಬೆಳವಣಿಗೆಯನ್ನು ಕಡಿಮೆ ಮಾಡುತ್ತದೆ.

ಉರಿಯೂತದ ಸಮಸ್ಯೆಗೆ ಪರಿಹಾರ: ಜೀರಿಗೆಯಲ್ಲಿನ ಸಾರಗಳು ದೇಹದಲ್ಲಿ ಕಾಣಿಸಿಕೊಳ್ಳುವ ಉರಿಯೂತದ ಸಮಸ್ಯೆಗಳಿಗೆ ಪರಿಹಾರ ನೀಡುತ್ತದೆ.  ಜೀರಿಗೆಯನ್ನು ಪುಡಿ ಮಾಡಿ ಅನ್ನದ ಜೊತೆಯೂ ಸೇವಿಸಬಹುದಾಗಿದೆ. ದೇಹವನ್ನು ತಂಪಾಗಿರಿಸಲು ಕೂಡ ಜೀರಿಗೆ ನೆರವಾಗುತ್ತದೆ.  ಪ್ರತಿದಿನ ಜೀರಿಗೆಯನ್ನು ಕುದಿಸಿ ಅದರ ನಿರನ್ನು ಸೇವಿಸುವುದರಿಂದ ದೇಹವನ್ನು ತಂಪಾಗಿರಿಸಿ ಉರಿಯೂತದ ಸಮಸ್ಯೆಗಳನ್ನು ನಿವಾರಿಸುತ್ತದೆ.

ಇದನ್ನೂ ಓದಿ:

ಹಿಂಸೆ ನೀಡುವ ಫುಡ್​ ಪಾಯ್ಸನ್​ ಬಗ್ಗೆ ತಿಳಿದುಕೊಳ್ಳಿ: ಇಲ್ಲಿದೆ ಮಾಹಿತಿ

Published On - 2:59 pm, Thu, 17 February 22

Follow Us
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್