AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Health Tips: ಆರೋಗ್ಯ ವೃದ್ಧಿಸುವ ನೀಲಿ ಶಂಖಪುಷ್ಪ: ಇಲ್ಲಿದೆ ಉಪಯುಕ್ತ ಮಾಹಿತಿ

ಸಾಮಾನ್ಯವಾಗಿ ಬೇಸಿಗೆಯ ನಂತರ ಮಳೆಗಾಲದ ಆರಂಭದ ದಿನಗಳಲ್ಲಿ ಬಿಡುವ ನೀಲಿ ಶಂಖ ಪುಷ್ಪ ಶಿವನಿಗೂ ಅತ್ಯಂತ ಪ್ರಿಯ. ಅದೇ ರೀತಿ ಆರೋಗ್ಯ ವೃದ್ಧಿಗೂ ಅಷ್ಟೇ ಸಹಕಾರಿ.

Health Tips: ಆರೋಗ್ಯ ವೃದ್ಧಿಸುವ ನೀಲಿ ಶಂಖಪುಷ್ಪ: ಇಲ್ಲಿದೆ ಉಪಯುಕ್ತ ಮಾಹಿತಿ
ನೀಲಿ ಶಂಖಪುಷ್ಪ
TV9 Web
| Edited By: |

Updated on: Mar 06, 2022 | 12:21 PM

Share

ಹಿತ್ತಲ ಗಿಡ ಮದ್ದಲ್ಲ ಎನ್ನುವ ಮಾತಿದೆ. ಆದರೆ ನಮ್ಮ ಮನೆಯಲ್ಲಿ ಇರುವ ಗಿಡಗಳಿಂದಲೇ ಹಲವಾರು ರೋಗಗಳಿಗೆ ಪರಿಹಾರ ಕಂಡುಕೊಳ್ಳಬಹುದು. ಆಯುರ್ವೇದದಲ್ಲಿ ಬಹು ಮಹತ್ವ ಪಡೆದ ಹಲವು ಗಿಡಮೂಲಿಕೆಗಳು ನಮ್ಮ ಸುತ್ತಮುತ್ತಲಿನಲ್ಲಿಯೇ ಇದ್ದರೂ ನಮ್ಮ ಗಮನಕ್ಕೆ ಬಾರದೆ ಇದ್ದುಬಿಡುತ್ತವೆ. ಅಂತಹವುಗಳಲ್ಲಿ ನೀಲಿಶಂಖಪುಷ್ಪ (Blue Conch Flower)  ಕೂಡ ಒಂದು.  ಸಾಮಾನ್ಯವಾಗಿ ಬೇಸಿಗೆಯ ನಂತರ ಮಳೆಗಾಲದ ಆರಂಭದ ದಿನಗಳಲ್ಲಿ ಬಿಡುವ ಈ ಹೂವು ಶಿವನಿಗೂ ಅತ್ಯಂತ ಪ್ರಿಯ. ಅದೇ ರೀತಿ ಆರೋಗ್ಯ ವೃದ್ಧಿಗೂ ಅಷ್ಟೇ ಸಹಕಾರಿ,. ಇದೇ ಕಾರಣದಿಂದಲೇ ಅನಾದಿ ಕಾಲದಿಂದಲೂ ನೀಲಿ ಶಂಖಪುಷ್ಟದ ಬಳಕೆಯಿದೆ. ಸಂಸ್ಕೃತದಲ್ಲಿ ಗಿರಿಕರ್ಣಿಕ ಎಂದು ಕರೆಯಲ್ಪಡುವ ಈ ಹೂವು ಶಿವನ ಪೂಜೆಯಲ್ಲಿ ಮಹತ್ವದ ಸ್ಥಾನ ಹೊಂದಿದೆ. ದಕ್ಷಿಣ ಮತ್ತು ಪೂರ್ವ ಭಾರತದಲ್ಲಿ ಈ ನೀಲಿ ಶಂಖಪುಷ್ಟ ಹೆಚ್ಚು ಕಾಣಿಸಿಕೊಳ್ಳುತ್ತದೆ. ಈ ಶಂಖಪುಷ್ಪದ ಹೂವಿನ ಪಕಳೆಗಳನ್ನು ಒಣಗಿಸಿ ಟೀಯನ್ನು ಕೂಡ ಮಾಡಿ ಸೇವಿಸುತ್ತಾರೆ. ನೀಲಿಶಂಖ ಪುಷ್ಟ ಯಾವೆಲ್ಲಾ ಆರೋಗ್ಯ ಪ್ರಯೋಜನಗಳನ್ನು ಹೊಂದಿದೆ ಎನ್ನುವ ಮಾಹಿತಿ ಇಲ್ಲಿದೆ.

  1. ಈ ಹೂವಿನ ಶಕ್ತಿಯುತವಾದ ಉತ್ಕರ್ಷಣ ನಿರೋಧಕಗಳು ಏಕಾಗ್ರತೆಗೆ ಸಹಾಯ ಮಾಡುತ್ತದೆ ಮತ್ತು ಮೆದುಳನ್ನು ಶಾಂತಗೊಳಿಸುತ್ತದೆ. ಪರೀಕ್ಷೆಯ ತಯಾರಿ ಸಮಯದಲ್ಲಿ ವಿದ್ಯಾರ್ಥಿಗಳಿಗೆ ಇದು ಪ್ರಯೋಜನಕಾರಿಯಾಗಿದೆ.
  2.  

    ನೀಲಿಶಂಖಪುಷ್ಪ ದೀರ್ಘಕಾಲ ಕೆಲಸ ಮಾಡಿ ಉಂಟಾದ ಮಾನಸಿಕ ಆಯಾಸವನ್ನು ಕಡಿಮೆ ಮಾಡುತ್ತದೆ. ಜತೆಗೆ ಒತ್ತಡವನ್ನು ನಿವಾರಿಸುತ್ತದೆ

  3.  

    ಖಿನ್ನತೆಯಿರುವ ಜನರು ತಮ್ಮ ದಿನಚರಿಯಲ್ಲಿ ನೀಲಿಶಂಖಪುಷ್ಪವನ್ನು ಬಳಕೆ ಮಾಡುವುದು ಒಳಿತು. ಏಕೆಂದರೆ ಇದು ಮೆದುಳಿನ ರಾಸಾಯನಿಕಗಳಾದ ನ್ಯೂರೋಟ್ರಾನ್ಸ್‌ಮಿಟರ್‌ಗಳು ಮತ್ತು ಡೋಪಮೈನ್ನ ಸ್ರವಿಸುವಿಕೆಯನ್ನು ಸಮತೋಲನಗೊಳಿಸಲು ಸಹಾಯ ಮಾಡುತ್ತದೆ ಜತೆಗೆ ಇದು ಸಿರೊಟೋನಿನ್ ಮಟ್ಟವನ್ನು ನಿಯಂತ್ರಣದಲ್ಲಿಡುತ್ತದೆಆತಂಕದ ವಿವಿಧ ಲಕ್ಷಣಗಳಾದ, ಚಡಪಡಿಕೆ, ಅಸ್ವಸ್ಥತೆ, ತಣ್ಣನೆಯ ಕೈಗಳು ಮತ್ತು ಪಾದಗಳನ್ನು ರಕ್ಷಿಸಿ ವ್ಯಕ್ತಿಯನ್ನು ಮಾನಸಿಕವಾಗಿ ಬಲಗೊಳಿಸುತ್ತದೆ.

  4.  

    ಈ ಹೂವುಗಳಲ್ಲಿನ ಎಥೋಲಿಕ್ ಸಾರವು ಅಪಾಯ ತರುವ ಕೊಬ್ಬಿನಾಮ್ಲಗಳ ಮಟ್ಟವನ್ನು ಕಡಿಮೆ ಮಾಡುತ್ತದೆ, ಇದರಿಂದ ಹೃದಯಾಘಾತ, ಹೃದಯಾಘಾತ, ರಕ್ತ ಹೆಪ್ಪುಗಟ್ಟುವಿಕೆಯ ಅಪಾಯವನ್ನು ಕಡಿಮೆ ಮಾಡುತ್ತದೆ.

  5.  

    ಜೀರ್ಣ ಶಕ್ತಿಯನ್ನು ಉತ್ತಮಗೊಳಿಸಿ, ಹಸಿವು ಹೆಚ್ಚುವಂತೆ ಮಾಡುತ್ತದೆ. ಆದ್ದರಿಂದ ಆಯುರ್ವೇದದಲ್ಲಿ ನೀಲಿ ಶಂಖಪುಷ್ಪವನ್ನು  ಹೆಚ್ಚು ಬಳಕೆ ಮಾಡುತ್ತಾರೆ

  6.  

    ನೀಲಿ ಶಂಖಪುಷ್ಪ ಹೂವುಗಳು ಮೂತ್ರಕೋಶದ ಕಾಯಿಲೆಗಳನ್ನು ಗುಣಪಡಿಸುವಲ್ಲಿ ಸಹಾಯಕವಾಗಿದೆ. ಅಲ್ಲದೆ  ವೀರ್ಯ ದುರ್ಬಲತೆ ಸಮಸ್ಯೆಗೆ ಚಿಕಿತ್ಸೆ ನೀಡಲು ಬಳಸಲಾಗುತ್ತದೆ ಎನ್ನುತ್ತಾರೆ ತಜ್ಞರು

  7.  

    ದೇಹದ ಅತಿಯಾದ ತೂಕ ಇಳಿಕೆಯಲ್ಲಿಯೂ ನೀಲಿ ಶಂಖಪುಷ್ಪದ ಹೂವುಗಳನ್ನು ಬಳಸಲಾಗುತ್ತದೆ. ಈ ಹೂವುಗಳ ಎಸಳುಗಳನ್ನು ಟೀ ಯಲ್ಲಿ ಬೆರೆಸಿ ಸೇವಿಸಿದರೆ ದೇರಹದ ತೂಕ ಕಡಿಮೆಯಾಗುತ್ತದೆ ಎನ್ನುತ್ತಾರೆ.

ಇದನ್ನೂ ಓದಿ:

Obesity: ದೇಹದಲ್ಲಿನ ಬೊಜ್ಜು ಕಡಿಮೆ ಮಾಡಿಕೊಳ್ಳಲು ಈ ಅಭ್ಯಾಸಗಳನ್ನು ರೂಢಿಸಿಕೊಳ್ಳಿ

ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ಕೇಸ್​: ಸಿಎಂ ವಿರುದ್ಧ ಜೋಶಿ ವಾಗ್ದಾಳಿ
ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ಕೇಸ್​: ಸಿಎಂ ವಿರುದ್ಧ ಜೋಶಿ ವಾಗ್ದಾಳಿ