Sign In

By signing in or creating an account, you agree with Associated Broadcasting Company's Terms & Conditions and Privacy Policy.

Health Tips: ನೀವು ಮಧುಮೇಹಿಗಳಾಗಿದ್ದು , ಚಾಕೊಲೇಟ್‌ಗಳನ್ನು ತಿನ್ನಲು ಇಷ್ಟಪಡುತ್ತೀರಾ? ಮನೆಯಲ್ಲೇ ಆರೋಗ್ಯಕರ ಚಾಕೋಲೇಟ್ ತಯಾರಿಸಿ

ಈ ಖರ್ಜೂರ ಚಾಕೊಲೇಟ್ ಟೇಸ್ಟಿ ಮಾತ್ರವಲ್ಲದೆ ರೋಗ ನಿರೋಧಕ ಶಕ್ತಿಯನ್ನು ಹೊಂದಿದೆ. ಖರ್ಜೂರದಲ್ಲಿ ಅಪಾರ ವಿಟಮಿನ್‌ ಅಂಶಗಳನ್ನು ಹೊಂದಿದ್ದು, ನಿಮ್ಮ ದೇಹದಲ್ಲಿ ಹಿಮೋಗ್ಲೋಬಿನ್ ಮಟ್ಟವನ್ನು ಸುಧಾರಿಸಲು ಸಹಾಯ ಮಾಡುತ್ತದೆ.

Health Tips: ನೀವು ಮಧುಮೇಹಿಗಳಾಗಿದ್ದು , ಚಾಕೊಲೇಟ್‌ಗಳನ್ನು ತಿನ್ನಲು ಇಷ್ಟಪಡುತ್ತೀರಾ? ಮನೆಯಲ್ಲೇ ಆರೋಗ್ಯಕರ ಚಾಕೋಲೇಟ್ ತಯಾರಿಸಿ
Dates chocolateImage Credit source: Happy food tube
Follow us
TV9 Web
| Updated By: ಅಕ್ಷತಾ ವರ್ಕಾಡಿ

Updated on: Nov 01, 2022 | 3:41 PM

ನೀವು ಮಧುಮೇಹ ಕಾಯಿಲೆಯಿಂದ ಬಳಲುತ್ತಿದ್ದು, ಸಾಕಷ್ಟು ವರ್ಷಗಳಿಂದ ಸಿಹಿ ತಿಂಡಿಗಳಿಂದ ದೂರವಿದ್ದೀರಾ? ಸಿಹಿ ತಿಂಡಿಗಳನ್ನು ತಿನ್ನಲು ಬಯಸಿದರೆ, ಮನೆಯಲ್ಲಿಯೇ ಈ ರೆಸಿಪಿಯನ್ನೊಮ್ಮೆ ಪ್ರಯತ್ನಿಸಿ. ಇದು ಆರೋಗ್ಯಕ್ಕೂ ತುಂಬಾ ಉತ್ತಮ. ಮನೆಯ ಅಡುಗೆ ಮನೆಯಲ್ಲಿ ಸಿಗುವ 3 ಸರಳ ಅಡುಗೆ ಪದಾರ್ಥಗಳೊಂದಿಗೆ ಕೆಲವೇ ನಿಮಿಷಗಳಲ್ಲಿ ತಯಾರಿಸಬಹುದಾದ ಆರೋಗ್ಯಕರ ಖರ್ಜೂರ ಚಾಕೊಲೇಟ್ ಟ್ರೀಟ್ ಇಲ್ಲಿದೆ.

ಈ ಖರ್ಜೂರ ಚಾಕೊಲೇಟ್ ಟೇಸ್ಟಿ ಮಾತ್ರವಲ್ಲದೆ ರೋಗ ನಿರೋಧಕ ಶಕ್ತಿಯನ್ನು ಹೊಂದಿದೆ. ಖರ್ಜೂರದಲ್ಲಿ ಅಪಾರ ವಿಟಮಿನ್‌ ಅಂಶಗಳನ್ನು ಹೊಂದಿದ್ದು, ನಿಮ್ಮ ದೇಹದಲ್ಲಿ ಹಿಮೋಗ್ಲೋಬಿನ್ ಮಟ್ಟವನ್ನು ಸುಧಾರಿಸಲು ಸಹಾಯ ಮಾಡುತ್ತದೆ. ಈ ಸರಳ ಚಾಕೊಲೇಟ್ ಅತ್ಯಂತ ರುಚಿಕರ ಹಾಗೂ ಮಧುಮೇಹಿಗಳಿಗೂ ಯಾವುದೇ ಭಯವಿಲ್ಲದೆ ಸೇವಿಸಬಹುದಾಗಿದೆ. ಆದ್ದರಿಂದ, ಈ ಸರಳ ರೆಸಿಪಿಯನ್ನು ನಿಮ್ಮ ಮನೆಯಲ್ಲಿ ಪ್ರಯತ್ನಿಸಿ, ರಚಿಯನ್ನು ಆನಂದಿಸಿ.

ಬೇಕಾಗುವ ಸಾಮಾಗ್ರಿಗಳು:

ಖರ್ಜೂರ– 1ಕಪ್

ಜೇನು ತುಪ್ಪ– 2 ಚಮಚ

ಡಾರ್ಕ್ ಚಾಕೊಲೇಟ್– 200 ಕಿಲೋ ಗ್ರಾಂ

ಮಾಡುವ ವಿಧಾನ :

  • ಒಂದು ಕಪ್ ಖರ್ಜೂರ ತೆಗೆದು ಕೊಂಡು, ಅದರ ಬೀಜಗಳನ್ನು ಬೇರ್ಪಡಿಸಿ .

ಚಾಕೊಲೇಟ್ ಕರಗಿಸಲು:

  • ಮಧ್ಯಮ ಉರಿಯಲ್ಲಿ ಪ್ಯಾನ್ ಅನ್ನು ಬಿಸಿ ಮಾಡಿ ಮತ್ತು ಅದರ ಮೇಲೆ ನೀರು ತುಂಬಿದ ಪಾತ್ರೆಯನ್ನು ಇಡಿ. ನಂತರ ಅದರ ಮೇಲೆ ಗಾಜಿನ ಬಟ್ಟಲನ್ನು ಇರಿಸಿ.
  • ನಂತರ ಚಾಕೊಲೇಟ್ ತುಂಡುಗಳನ್ನು ಸೇರಿಸಿ ಮತ್ತು ಅದನ್ನು ಕರಗಲು ಬಿಡಿ.
  • ಚಾಕೊಲೇಟ್ ಕರಗಿದ ನಂತರ, ಬೆಂಕಿಯನ್ನು ಆಫ್ ಮಾಡಿ ಮತ್ತು ತಣ್ಣಗಾಗಲು ಬಿಡಿ.
  • ಮುಂದೆ, ಕರಗಿದ ಚಾಕೊಲೇಟ್ ಗೆ ಜೇನುತುಪ್ಪವನ್ನು ಸೇರಿಸಿ.
  • ನಂತರ ಖರ್ಜೂರವನ್ನು ಸೇರಿಸಿ ಮತ್ತು ಖರ್ಜೂರ ಮೇಲೆ ಕರಗಿದ ಚಾಕೊಲೇಟ್ ಅನ್ನು ಚೆನ್ನಾಗಿ ಹಚ್ಚಿ
  • ನಂತರ ದೊಡ್ಡ ಟ್ರೇ ಅನ್ನು ತೆಗೆದುಕೊಂಡು ಅದರ ಮೇಲೆ ಈ ಖರ್ಜೂರವನ್ನು ಜೋಡಿಸಿ.
  • ಈ ಜೋಡಿಸಿದ ಖರ್ಜೂರವನ್ನು 2 ಗಂಟೆಗಳ ಕಾಲ ಫ್ರೀಜರ್‌ನಲ್ಲಿ ಇರಿಸಿ.
  • ಮನೆಯಲ್ಲಿ ತಯಾರಿಸಿದ ಆರೋಗ್ಯಕರ ಚಾಕೊಲೇಟ್‌ ಸವಿಯಲು ಸಿದ್ದ.

ಆರೋಗ್ಯಕ್ಕೆ ಸಂಬಂಧಿಸಿದ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ: 

ಮನೋಹರ್, ಹನುಮಂತರಾಯಪ್ಪ, ವೆಂಕಟೇಶ್ ನೇತೃತ್ವದಲ್ಲಿ ಪ್ರತಿಭಟನೆ
ಮನೋಹರ್, ಹನುಮಂತರಾಯಪ್ಪ, ವೆಂಕಟೇಶ್ ನೇತೃತ್ವದಲ್ಲಿ ಪ್ರತಿಭಟನೆ
ಪೋಷಕರಲ್ಲಿ ನಿರಾಳತೆ ಉಂಟು ಮಾಡಿದ ಸರ್ಕಾರದ ನಿರ್ಧಾರ
ಪೋಷಕರಲ್ಲಿ ನಿರಾಳತೆ ಉಂಟು ಮಾಡಿದ ಸರ್ಕಾರದ ನಿರ್ಧಾರ
ಆಟೋಗ್ರಾಫ್ ಕೇಳುವವರೆ ಇರಲಿಲ್ಲ.. ಈಗ ಕ್ಯೂ ನಿಲ್ಲುತ್ತಿದ್ದಾರೆ; ಜಿತೇಶ್
ಆಟೋಗ್ರಾಫ್ ಕೇಳುವವರೆ ಇರಲಿಲ್ಲ.. ಈಗ ಕ್ಯೂ ನಿಲ್ಲುತ್ತಿದ್ದಾರೆ; ಜಿತೇಶ್
ಸರ್ಕಾರಗಳು ನಮ್ಮ ಬವಣೆಯನ್ನು ಅರ್ಥಮಾಡಿಕೊಳ್ಳಬೇಕು: ಲಾರಿ ಮಾಲೀಕ
ಸರ್ಕಾರಗಳು ನಮ್ಮ ಬವಣೆಯನ್ನು ಅರ್ಥಮಾಡಿಕೊಳ್ಳಬೇಕು: ಲಾರಿ ಮಾಲೀಕ
ವರದಿಯಲ್ಲಿರುವ ಶಿಫಾರಸ್ಸುಗಳನ್ನು ಸರ್ಕಾರ ತಿರಸ್ಕರಿಸಬಹುದಾಗಿದೆ: ಖರ್ಗೆ
ವರದಿಯಲ್ಲಿರುವ ಶಿಫಾರಸ್ಸುಗಳನ್ನು ಸರ್ಕಾರ ತಿರಸ್ಕರಿಸಬಹುದಾಗಿದೆ: ಖರ್ಗೆ
Video: ವೇಗವಾಗಿ ಬಂದು ವಾಹನಗಳ ಮೇಲೆ ಹರಿದ ಬಸ್, ಮೂವರು ಸಾವು
Video: ವೇಗವಾಗಿ ಬಂದು ವಾಹನಗಳ ಮೇಲೆ ಹರಿದ ಬಸ್, ಮೂವರು ಸಾವು
ಮತ್ತೆ ಪೊಲೀಸರ ಬಂಧನದಲ್ಲಿ ರಜತ್, ವೈದ್ಯಕೀಯ ಪರೀಕ್ಷೆಗೆ ಕರೆದೊಯ್ದ ವಿಡಿಯೋ
ಮತ್ತೆ ಪೊಲೀಸರ ಬಂಧನದಲ್ಲಿ ರಜತ್, ವೈದ್ಯಕೀಯ ಪರೀಕ್ಷೆಗೆ ಕರೆದೊಯ್ದ ವಿಡಿಯೋ
ದಾವಣೆಗೆರೆಯಲ್ಲಿ ಮಹಿಳೆ ಮೇಲೆ ಹಲ್ಲೆ ನಡೆಸಿದವರನ್ನು ಬಿಡಲ್ಲ: ಸಿದ್ದರಾಮಯ್ಯ
ದಾವಣೆಗೆರೆಯಲ್ಲಿ ಮಹಿಳೆ ಮೇಲೆ ಹಲ್ಲೆ ನಡೆಸಿದವರನ್ನು ಬಿಡಲ್ಲ: ಸಿದ್ದರಾಮಯ್ಯ
ಲಿಂಗಾಯತ ಸಚಿವರು ಜಾತಿ ಗಣತಿ ಬಗ್ಗೆ ಸಮುದಾಯದವರೊಂದಿಗೆ ಚರ್ಚಿಸಿಲ್ಲ: ಶಾಸಕ
ಲಿಂಗಾಯತ ಸಚಿವರು ಜಾತಿ ಗಣತಿ ಬಗ್ಗೆ ಸಮುದಾಯದವರೊಂದಿಗೆ ಚರ್ಚಿಸಿಲ್ಲ: ಶಾಸಕ
ರಾಜ್ಯ ನಾಯಕರೆಲ್ಲ ಬೆಳಗಾವಿಯಲ್ಲಿದ್ದರೂ ರಮೇಶ್ ಜಾರಕಿಹೊಳಿ ನಾಪತ್ತೆ!
ರಾಜ್ಯ ನಾಯಕರೆಲ್ಲ ಬೆಳಗಾವಿಯಲ್ಲಿದ್ದರೂ ರಮೇಶ್ ಜಾರಕಿಹೊಳಿ ನಾಪತ್ತೆ!