AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Health Tips: ಕರುಳನ್ನು ಎರಡನೇ ಮೆದುಳು ಎಂದು ಏಕೆ ಕರೆಯಲಾಗುತ್ತದೆ, ತಜ್ಞರ ಅಭಿಪ್ರಾಯ ಇಲ್ಲಿದೆ

ಏನಾದರೂ ಹೆದರಿಕೆ, ಭಯ, ಆತಂಕ, ಖುಷಿಯಾದಾಗ ಹೊಟ್ಟೆಯೊಳಗೆ ಚಿಟ್ಟೆ ಬಿಟ್ಟಂಗೈಯಿತದೆ ಎಂದು ಹೇಳುವುದುಂಟು ಅಥವಾ ಬೇರೆಯವರು ಹೇಳಿದನ್ನು ನೀವೂ ಕೇಳಿರ್ತಿರಾ. ಆದರೆ ಇದು ನಿಜ ನೀವು ವ್ಯಕ್ತಪಡಿಸುವ ಪ್ರತಿಯೊಂದು ಭಾವನೆಗಳು ನಿಮ್ಮ ಕರುಳಿನೊಂದಿಗೆ ನೇರ ಸಂಬಂಧವನ್ನು ಹೊಂದಿದೆ.

Health Tips: ಕರುಳನ್ನು ಎರಡನೇ ಮೆದುಳು ಎಂದು ಏಕೆ ಕರೆಯಲಾಗುತ್ತದೆ,  ತಜ್ಞರ ಅಭಿಪ್ರಾಯ ಇಲ್ಲಿದೆ
ಸಾಂದರ್ಭಿಕ ಚಿತ್ರImage Credit source: Metabolic Meals - Blog
TV9 Web
| Edited By: |

Updated on:Dec 10, 2022 | 12:01 PM

Share

ನಿಮ್ಮ ದೇಹದ ಪ್ರತಿಯೊಂದು ಅಂಗವು ಸರಿಯಾಗಿ ಕಾರ್ಯನಿರ್ವಹಿಸುವಲ್ಲಿ ಕರುಳಿನ ಪಾತ್ರ ಪ್ರಮುಖವಾಗಿರುತ್ತದೆ. ಕರುಳಿನ ಆರೋಗ್ಯವು ನಿಮ್ಮ ದೇಹದಲ್ಲಿನ ವಿವಿಧ ಪ್ರಕ್ರಿಯೆಗಳೊಂದಿಗೆ ನೇರವಾಗಿ ಸಂಪರ್ಕ ಹೊಂದಿದೆ. ಆದ್ದರಿಂದ ಕರುಳನ್ನು ಎರಡನೇ ಮೆದುಳು ಎಂದು ಏಕೆ ಕರೆಯಲಾಗುತ್ತದೆ ಎಂದು ಆಯುರ್ವೇದ ಮತ್ತು ಕರುಳಿನ ಆರೋಗ್ಯ ತರಬೇತುದಾರರಾದ ಡಾ ಡಿಂಪಲ್ ಜಂಗ್ಡಾರವರು ಹೇಳುತ್ತಾರೆ.

ಕರುಳು ನಿಮ್ಮ ಚರ್ಮ, ಕೂದಲು ಜಠರಗರುಳು, ಶ್ವಾಸನಾಳದ ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆ. ಕ್ಯಾನ್ಸರ್ ಸೇರಿದಂತೆ ಶೇಕಡಾ 90ರಷ್ಟು ಕಾಯಿಲೆಗೆ ನಿಮ್ಮ ಕರುಳು ನೇರವಾಗಿ ಕಾರಣವಾಗಿರುತ್ತದೆ. ಆದ್ದರಿಂದ ಕರುಳಿನ ಆರೋಗ್ಯವನ್ನು ಕಾಪಾಡುವುದು ಅತ್ಯಂತ ಎಂದು ಜಂಗ್ಡಾರವರು ಸಲಹೆ ನೀಡುತ್ತಾರೆ.

ಕರುಳಿನ ಬಗ್ಗೆ ನಿಮಗೆ ತಿಳಿದಿಲ್ಲದಿರುವ ಸಂಗತಿಗಳನ್ನು ತಮ್ಮ ಇನ್‌ಸ್ಟಾಗ್ರಾಮ್‌ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಕರುಳಿನ ಆರೋಗ್ಯಕ್ಕೆ ಸಂಬಂಧಿಸಿರುವ ವಿಡಿಯೋ ಇಲ್ಲಿದೆ.

ನಿಮ್ಮ ಕರುಳು ಮಾನಸಿಕವಾಗಿಯೂ ಭಾವನೆಗಳು ಮತ್ತು ನೆನಪುಗಳನ್ನು ವ್ಯಕ್ತಪಡಿಸುತ್ತದೆ. ಆತಂಕ, ಭಯ, ಉತ್ಸುಕತೆ, ಸಂತೋಷ ಅಥವಾ ಉದ್ವೇಗವನ್ನು ಅನುಭವಿಸಿದಾಗ, ನೀವು ಅದನ್ನು ಮೊದಲು ನಿಮ್ಮ ಕರುಳಿನಲ್ಲಿ ಅನುಭವಿಸುತ್ತೀರಿ ಎಂದು ಇವರು ಹೇಳುತ್ತಾರೆ. ಅಂದರೆ ಉದಾಹರಣೆಗೆ ಹೇಳುವುದಾದರೆ ನಿಮಗೆ ಎನಾದರೂ ಹೆದರಿಕೆ, ಭಯ, ಆತಂಕ, ಖುಷಿಯಾದಾಗ ಸಾಮಾನ್ಯವಾಗಿ ಹೇಳುವ ಮಾತು ಹೊಟ್ಟೆಯೊಳಗೆ ಚಿಟ್ಟೆ ಬಿಟ್ಟಂಗೈಯಿತದೆ. ಆದ್ದರಿಂದ ನೀವು ವ್ಯಕ್ತಪಡಿಸುವ ಪ್ರತಿಯೊಂದು ಭಾವನೆಗೂ ನಿಮ್ಮ ಕರುಳಿಗೆ ನೇರ ಸಂಬಂಧವನ್ನು ಹೊಂದಿದೆ.

ಇದನ್ನು ಓದಿ: ಪದೇ ಪದೇ ನೀವು ಮೂತ್ರ ವಿಸರ್ಜನೆ ಮಾಡುತ್ತಿದ್ದರೆ ಮಧುಮೇಹ ಮಾತ್ರವಲ್ಲ ಈ ಆರೋಗ್ಯ ಸಮಸ್ಯೆಯೂ ನಿಮಗಿರಬಹುದು

ನೀವು ಆತಂಕ, ಭಯ, ಉತ್ಸುಕತೆ, ಸಂತೋಷ ಅಥವಾ ಉದ್ವೇಗವನ್ನು ಅನುಭವಿಸಿದಾಗ, ನೀವು ಅದನ್ನು ಮೊದಲು ನಿಮ್ಮ ಕರುಳಿನಲ್ಲಿ ಅನುಭವಿಸುತ್ತೀರಿ. 75 ರಷ್ಟು ಸಿರೊಟೋನಿನ್ ಕರುಳಿನಲ್ಲಿ ಬಿಡುಗಡೆಯಾಗುತ್ತದೆ. ಆರೋಗ್ಯವಂತ ಕರುಳು 1 ಕೆಜಿ ಬ್ಯಾಕ್ಟೀರಿಯಾವನ್ನು ಹೊಂದಿರುತ್ತದೆ. ಇದು ಮಾನಸಿಕ ಸ್ಥಿತಿಯ ಮೇಲೆ ನೇರ ಪರಿಣಾಮ ಬೀರುತ್ತವೆ ಎಂದು ಹೇಳುತ್ತಾರೆ.

ಆರೋಗ್ಯಕ್ಕೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ:

Published On - 11:53 am, Sat, 10 December 22

Follow Us
Web contact
Web contact

TV9 Kannada

Read More
ಎಷ್ಟೇ ಕಷ್ಟಪಟ್ಟರೂ ಮನೆ ಕಟ್ಟೋಕೆ ಸಾಧ್ಯವಾಗ್ತಿಲ್ವಾ?
ಎಷ್ಟೇ ಕಷ್ಟಪಟ್ಟರೂ ಮನೆ ಕಟ್ಟೋಕೆ ಸಾಧ್ಯವಾಗ್ತಿಲ್ವಾ?
ಇಂದು ಈ ರಾಶಿಯವರಿಗೆ ಖರ್ಚು ಹೆಚ್ಚಾಗುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಖರ್ಚು ಹೆಚ್ಚಾಗುವ ಸಾಧ್ಯತೆ
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಧಾರಾಕಾರ ಮಳೆ: ಅಂಡರ್‌ಪಾಸ್‌ನಲ್ಲಿ ಸಿಲುಕಿದ ಕಾರು; ವಿಡಿಯೋ ನೋಡಿ
ಧಾರಾಕಾರ ಮಳೆ: ಅಂಡರ್‌ಪಾಸ್‌ನಲ್ಲಿ ಸಿಲುಕಿದ ಕಾರು; ವಿಡಿಯೋ ನೋಡಿ
40ಕ್ಕೂ ಹೆಚ್ಚು ಶಾಸಕರಿಂದ ಮಂತ್ರಿಗಿರಿಗಾಗಿ ತೀವ್ರ ಲಾಬಿ: ಯಾರ್ಯಾರು?
40ಕ್ಕೂ ಹೆಚ್ಚು ಶಾಸಕರಿಂದ ಮಂತ್ರಿಗಿರಿಗಾಗಿ ತೀವ್ರ ಲಾಬಿ: ಯಾರ್ಯಾರು?