Health Tips: ಇಡ್ಲಿ-ಸಾಂಬಾರ್​​ನಿಂದ ದೀರ್ಘಾಯುಷ್ಯ, ತಜ್ಞರ ಅಭಿಪ್ರಾಯ ಇಲ್ಲಿದೆ

ನಿಮ್ಮಲ್ಲಿ ಸಾಕಷ್ಟು ಜನರಿಗೆ ಬೆಳಗಿನ ಉಪಹಾರಗಳಲ್ಲಿ ಇಡ್ಲಿ-ಸಾಂಬಾರ್ ನೆಚ್ಚಿನ ಆಹಾರವಾಗಿದೆ. ತೆಂಗಿನಕಾಯಿ ಚಟ್ನಿ, ಸಂಬಾರು ಇದರಂತೂ ಇಡ್ಲಿಯ ರುಚಿಯಂತೂ ಅದ್ಭುತ.

Health Tips: ಇಡ್ಲಿ-ಸಾಂಬಾರ್​​ನಿಂದ ದೀರ್ಘಾಯುಷ್ಯ, ತಜ್ಞರ ಅಭಿಪ್ರಾಯ ಇಲ್ಲಿದೆ
ಸಾಂದರ್ಭಿಕ ಚಿತ್ರImage Credit source: NDTV FOOD
Follow us
| Updated By: ಅಕ್ಷತಾ ವರ್ಕಾಡಿ

Updated on:Dec 03, 2022 | 7:25 PM

ನಿಮ್ಮಲ್ಲಿ ಸಾಕಷ್ಟು ಜನರಿಗೆ ಬೆಳಗಿನ ಉಪಹಾರಗಳಲ್ಲಿ ಇಡ್ಲಿ-ಸಾಂಬಾರ್ (Idli Sambar) ನೆಚ್ಚಿನ ಆಹಾರವಾಗಿದೆ. ತೆಂಗಿನಕಾಯಿ ಚಟ್ನಿ, ಸಾಂಬಾರ್  ಇದರಂತೂ ಇಡ್ಲಿಯ ರುಚಿ ಅದ್ಭುತವಾಗಿರುತ್ತದೆ. ಇಡ್ಲಿ-ಸಾಂಬಾರ್ ಇದು ನಿಮ್ಮ ತೂಕ ಇಳಿಸುವಲ್ಲಿ ಸಹಾಯಕವಾಗಿದೆ ಎಂದು ನಿಮಗೆ ತಿಳಿದಿದೆಯೇ? ನೀವು ಪ್ರತಿ ದಿನ ಇಡ್ಲಿ-ಸಾಂಬಾರ್ ಸೇವಿಸುವುದರಿಂದ ನಿಮ್ಮ ದೇಹದಲ್ಲಿನ ಹೆಚ್ಚಿನ ಕೊಬ್ಬಿನ ಅಂಶವನ್ನು ಕರಗಿಸುವ ಶಕ್ತಿ ಇದಕ್ಕಿದೆ. ಇಡ್ಲಿ ಸಾಂಬಾರ್ ನಿಮ್ಮ ಜೀರ್ಣಕ್ರಿಯೆ ಸರಾಗವಾಗಿ ಆಗುವಂತೆ ಸಹಾಯ ಮಾಡುತ್ತದೆ ಎಂದು ಪೌಷ್ಟಿಕತಜ್ಞ ಶಿಲ್ಪಾ ಅರೋರಾ ಸಲಹೆ ನೀಡುತ್ತಾರೆ.

ಸಾಮಾನ್ಯವಾಗಿ ಇಡ್ಲಿ ತಯಾರಿಸುವಾಗ ಅದರ ಹಿಟ್ಟನ್ನು ಹಿಂದಿನ ದಿನವೇ ಸಿದ್ಧಪಡಿಸಿ ಇಡಲಾಗುತ್ತದೆ. ಇಂತಹ ಹುದುಗಿಸಿದ ಆಹಾರಗಳಿಂದ ನಿಮ್ಮ ದೇಹಕ್ಕೆ ಸಾಕಷ್ಟು ಪ್ರಯೋಜನಗಳಿವೆ. ಆದ್ದರಿಂದ ನೀವು ಇಡ್ಲಿ ಸೇವಿಸುವುದ್ದರಿಂದ ನಿಮ್ಮ ದೇಹವನ್ನು ಆರೋಗ್ಯವಾಗಿ ಇಡಬಹುದಾಗಿದೆ. ಮುಂದಿನ ದಿನ ರಾತ್ರಿಯೇ ಹಿಟ್ಟು ತಯಾರಿಸಿ ಇಡುವುದರಿಂದ ಮಾರನೇ ದಿನ ಹಿಟ್ಟು ಹುಬ್ಬಿಕೊಂಡು ಇರುತ್ತದೆ. ಇದು ನಿಮ್ಮ ಜೀರ್ಣಾಂಗ ವ್ಯವಸ್ಥೆಯಲ್ಲಿ ಉತ್ತಮವಾಗಿ ಕಾರ್ಯ ನಿರ್ವಹಿಸುವಂತೆ ಮಾಡುತ್ತದೆ. ಇಡ್ಲಿಯಂತಹ ಹುದುಗಿದ ಆಹಾರಗಳು ನಿಮ್ಮ ದೇಹದಲ್ಲಿನ ಜೀವಸತ್ವಗಳು ಮತ್ತು ಖನಿಜಗಳ ಉತ್ತಮ ವಿಭಜನೆಯನ್ನು ಮಾಡಿ, ಜೀರ್ಣಕ್ರಿಯೆಗೆ ಸಹಾಯ ಮಾಡುತ್ತದೆ. ಜೀರ್ಣಕ್ರಿಯೆಗೆ ಸಹಾಯ ಮಾಡುವುದರ ಹೊರತಾಗಿ, ಹುದುಗಿಸಿದ ಆಹಾರಗಳಲ್ಲಿ ಇರುವ ಲ್ಯಾಕ್ಟಿಕ್ ಆಸಿಡ್ ಬ್ಯಾಕ್ಟೀರಿಯಾವು ಕರುಳಿನ ಆರೋಗ್ಯವನ್ನು ಕಾಪಾಡುವಲ್ಲಿ ಸಹಾಯಕವಾಗಿದೆ. ಇದು ನಿಮಗೆ ಉತ್ತಮ ಆರೋಗ್ಯ ಹಾಗೂ ದೀರ್ಘಾಯುಷ್ಯ ನೀಡುತ್ತದೆ ಎಂದು ಶಿಲ್ಪಾ ಅರೋರಾ ಹೇಳುತ್ತಾರೆ.

ಇದನ್ನು ಓದಿ: ನುಗ್ಗೆ ಸೊಪ್ಪು ನಿಮ್ಮ ದೈನಂದಿನ ಆಹಾರಕ್ರಮದಲ್ಲಿ ಅಳವಡಿಸಿಕೊಳ್ಳಿ

ಕೇವಲ ಇಡ್ಲಿ ಮಾತ್ರವಲ್ಲದೇ ಇಡ್ಲಿಯೊಂದಿಗೆ ಸವಿಯುವ ಸಾಂಬಾರಿನಿಂದಲೂ ಕೂಡ ಆರೋಗ್ಯದ ಮೇಲೆ ಸಾಕಷ್ಟು ಪ್ರಯೋಜನಗಳಿವೆ. ಸಾಮಾನ್ಯವಾಗಿ ಇಡ್ಲಿಯೊಂದಿನ ಸಾಂಬಾರಿನಲ್ಲಿ ಸಾಕಷ್ಟು ತರಕಾರಿಗಳನ್ನು ಬಳಸಲಾಗುತ್ತದೆ. ಇಂತಹ ತರಕಾರಿಗಳು ನಿಮ್ಮ ಆರೋಗ್ಯವನ್ನು ವೃದ್ದಿಸುವಲ್ಲಿ ಸಹಕಾರಿಯಾಗಿದೆ. ಸಾಂಬಾರ್ ವಿಷಯಕ್ಕೆ ಬಂದರೆ, ಇದರಲ್ಲಿ ಫೈಬರ್, ಪ್ರೋಟೀನ್ ಮತ್ತು ಆಂಟಿಆಕ್ಸಿಡೆಂಟ್‌ಗಳು ಹೆಚ್ಚಾಗಿದ್ದು, ನಿಮ್ಮಲ್ಲಿ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ. ಜೊತೆಗೆ ಜೀರ್ಣಕ್ರಿಯೆಯನ್ನು ಸುಧಾರಿಸುವ ಶಕ್ತಿಯನ್ನು ಹೊಂದಿದೆ. ಉತ್ತಮವಾದ ಜೀರ್ಣಕ್ರಿಯೆಯು ನಿಮ್ಮ ದೇಹದಲ್ಲಿ ಕೆಟ್ಟ ಕೊಲೆಸ್ಟ್ರಾಲ್ ಉಳಿಯದಂತೆ ಸಹಾಯ ಮಾಡುತ್ತದೆ. ಇದರಿಂದಾಗಿ ನಿಮ್ಮ ದೇಹದಲ್ಲಿನ ಹೆಚ್ಚಿನ ತೂಕವನ್ನು ಇಳಿಸಲು ಪ್ರಚೋದನೆ ನೀಡುತ್ತದೆ.

ಆರೋಗ್ಯಕ್ಕೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ:

Published On - 6:55 pm, Sat, 3 December 22

ತಾಜಾ ಸುದ್ದಿ
Daily Devotional: ಸನಾತನ ಧರ್ಮದಲ್ಲಿ 108ರ ಮಹತ್ವ ತಿಳಿದುಕೊಳ್ಳಿ
Daily Devotional: ಸನಾತನ ಧರ್ಮದಲ್ಲಿ 108ರ ಮಹತ್ವ ತಿಳಿದುಕೊಳ್ಳಿ
Daily Horoscope: ವೈವಾಹಿಕ ಜೀವನವು ಸುಖಮಯವಾಗಿ ಸಾಗಲಿದೆ
Daily Horoscope: ವೈವಾಹಿಕ ಜೀವನವು ಸುಖಮಯವಾಗಿ ಸಾಗಲಿದೆ
‘ದರ್ಶನ್ ರಿಲೀಸ್​ ಆಗ್ತಾರಾ?’: ದೇವರಿಗೆ ಪ್ರಶ್ನೆ ಕೇಳಿ ಉತ್ತರ ಪಡೆದ ಪೂಜಾರಿ
‘ದರ್ಶನ್ ರಿಲೀಸ್​ ಆಗ್ತಾರಾ?’: ದೇವರಿಗೆ ಪ್ರಶ್ನೆ ಕೇಳಿ ಉತ್ತರ ಪಡೆದ ಪೂಜಾರಿ
ಭಾರೀ ಮಳೆಯಿಂದ ಟ್ರಾಫಿಕ್ ಮಧ್ಯೆ 8 ಅಡಿ ಉದ್ದದ ಮೊಸಳೆ ಪ್ರತ್ಯಕ್ಷ!
ಭಾರೀ ಮಳೆಯಿಂದ ಟ್ರಾಫಿಕ್ ಮಧ್ಯೆ 8 ಅಡಿ ಉದ್ದದ ಮೊಸಳೆ ಪ್ರತ್ಯಕ್ಷ!
ಅಪ್ಪ ಕೊಚ್ಚಿ ಹೋಗುವ ವಿಡಿಯೋ ಮಗಳ ಮೊಬೈಲ್​ನಲ್ಲಿ ಸೆರೆ
ಅಪ್ಪ ಕೊಚ್ಚಿ ಹೋಗುವ ವಿಡಿಯೋ ಮಗಳ ಮೊಬೈಲ್​ನಲ್ಲಿ ಸೆರೆ
ಪಿಕ್ನಿಕ್ ಹೋದ ಐವರು ಜಲಪಾತದಲ್ಲಿ ಕೊಚ್ಚಿ ಹೋದ ಭಯಾನಕ ವಿಡಿಯೋ ವೈರಲ್
ಪಿಕ್ನಿಕ್ ಹೋದ ಐವರು ಜಲಪಾತದಲ್ಲಿ ಕೊಚ್ಚಿ ಹೋದ ಭಯಾನಕ ವಿಡಿಯೋ ವೈರಲ್
ಸಿದ್ದರಾಮಯ್ಯ ಮೇಲಿನ ವೈರತ್ವ ಮಗನ ಮೇಲೆ ಸಾಧಿಸುವುದು ಸರಿಯಲ್ಲ:ಭೈರತಿ ಸುರೇಶ್
ಸಿದ್ದರಾಮಯ್ಯ ಮೇಲಿನ ವೈರತ್ವ ಮಗನ ಮೇಲೆ ಸಾಧಿಸುವುದು ಸರಿಯಲ್ಲ:ಭೈರತಿ ಸುರೇಶ್
ಶೇ 60 ರಷ್ಟು ಕನ್ನಡ ಕಡ್ಡಾಯ; ಸರ್ಕಾರದಿಂದ  ಸೂಕ್ತ ಕ್ರಮ: ನಾರಾಯಣಗೌಡ, ಕರವೇ
ಶೇ 60 ರಷ್ಟು ಕನ್ನಡ ಕಡ್ಡಾಯ; ಸರ್ಕಾರದಿಂದ  ಸೂಕ್ತ ಕ್ರಮ: ನಾರಾಯಣಗೌಡ, ಕರವೇ
ಪ್ರಜ್ವಲ್​ ಮಾತಾಡಿಸಲು ಜೈಲಿಗೆ ಬಂದ ಭವಾನಿ ಮಾಧ್ಯಮಗಳಿಗೆ ಮುಖ ತೋರಿಸಲಿಲ್ಲ!
ಪ್ರಜ್ವಲ್​ ಮಾತಾಡಿಸಲು ಜೈಲಿಗೆ ಬಂದ ಭವಾನಿ ಮಾಧ್ಯಮಗಳಿಗೆ ಮುಖ ತೋರಿಸಲಿಲ್ಲ!
ಸ್ಟಿಕ್ ಹಿಡಿದು ಕುಂಟುತ್ತ ಪ್ರಜ್ವಲ್​ ನೋಡಲು ಬಂದ ಭವಾನಿ ರೇವಣ್ಣ
ಸ್ಟಿಕ್ ಹಿಡಿದು ಕುಂಟುತ್ತ ಪ್ರಜ್ವಲ್​ ನೋಡಲು ಬಂದ ಭವಾನಿ ರೇವಣ್ಣ