High Blood Pressure: ಅಧಿಕ ರಕ್ತದೊತ್ತಡವು ಆರೋಗ್ಯದ ಮೇಲೆ ಹೇಗೆಲ್ಲಾ ಪರಿಣಾಮ ಬೀರಬಹುದು

High BP:ಬದಲಾದ ಜೀವನಶೈಲಿಯು ಅನೇಕ ಆರೋಗ್ಯ ಸಮಸ್ಯೆಗಳಿಗೆ ಎಡೆ ಮಾಡಿಕೊಡುತ್ತಿದ್ದು, ಅದರಲ್ಲಿ ಅಧಿಕ ರಕ್ತದೊತ್ತಡ( High Blood Pressure) ಕೂಡ ಸೇರಿದೆ. ಅಧಿಕ ರಕ್ತದೊತ್ತಡವು ದೇಹದ ವಿವಿಧ ಅಂಗಗಳ ಮೇಲೆ ಕೂಡ ಪರಿಣಾಮ ಬೀರಬಹುದು.

High Blood Pressure: ಅಧಿಕ ರಕ್ತದೊತ್ತಡವು ಆರೋಗ್ಯದ ಮೇಲೆ ಹೇಗೆಲ್ಲಾ ಪರಿಣಾಮ ಬೀರಬಹುದು
High Blood Pressure
Follow us
| Updated By: ನಯನಾ ರಾಜೀವ್

Updated on: May 21, 2022 | 10:21 AM

ಬದಲಾದ ಜೀವನಶೈಲಿಯು ಅನೇಕ ಆರೋಗ್ಯ ಸಮಸ್ಯೆಗಳಿಗೆ ಎಡೆ ಮಾಡಿಕೊಡುತ್ತಿದ್ದು, ಅದರಲ್ಲಿ ಅಧಿಕ ರಕ್ತದೊತ್ತಡ( High Blood Pressure) ಕೂಡ ಸೇರಿದೆ. ಅಧಿಕ ರಕ್ತದೊತ್ತಡವು ದೇಹದ ವಿವಿಧ ಅಂಗಗಳ ಮೇಲೆ ಕೂಡ ಪರಿಣಾಮ ಬೀರಬಹುದು. ವಿಶ್ವಾದ್ಯಂತ ಶೇ.30ರಷ್ಟು ಯುವಕರು ಅಧಿಕ ರಕ್ತದೊತ್ತಡದಿಂದ ಬಳಲುತ್ತಿದ್ದಾರೆ. ಇಂಡಿಯಾ ಕೌನ್ಸಿಲ್ ಫಾರ್ ಮೆಡಿಕಲ್ ರಿಸರ್ಚ್ ವರದಿ ನೀಡಿದ್ದು, ಭಾರತದಲ್ಲಿ ನಾಲ್ಕರಲ್ಲಿ ಒಬ್ಬರು ಅಧಿಕ ರಕ್ತದೊತ್ತಡದಿಂದ ಬಳಲುತ್ತಿದ್ದಾರೆ ಎಂಬುದು ತಿಳಿದುಬಂದಿದೆ.

ಅಧಿಕ ರಕ್ತದೊತ್ತಡವು ಹೃದಯದ ಮೇಲೂ ಪರಿಣಾಮ ಬೀರಲಿದ್ದು, ಪಾರ್ಶ್ವವಾಯು ಉಂಟಾಗುವ ಸಾಧ್ಯತೆ ಇದೆ. ಇದು ಬೇರೆ ಬೇರೆ ಭಾಗಗಳಿಗೆ ಹಾನಿ ಮಾಡುವವರೆಗೂ ಈ ಸಮಸ್ಯೆ ಇರುವುದು ಗಮನಕ್ಕೆ ಬರುವುದಿಲ್ಲ.

ಮಧುಮೇಹಿಗಳಲ್ಲಿ ಸಾಮಾನ್ಯವಾಗಿ ಅಧಿಕ ರಕ್ತದೊತ್ತಡ ಕಾಣಿಸಿಕೊಳ್ಳುತ್ತದೆ. ಹೃದಯ, ಕಿಡ್ನಿ ಸಮಸ್ಯೆ,ಆಯಾಸ, ಮೂಗಿನಿಂದ ರಕ್ತ ಬರುವುದು, ಉಸಿರಾಟ ಸಮಸ್ಯೆ ದೃಷ್ಟಿದೋಷವೂ ಉಂಟಾಗಬಹುದು.

ಅಧಿಕ ರಕ್ತದೊತ್ತಡದ ಅಂದರೆ ಬಿಪಿ ಸಮಸ್ಯೆ ದೇಹದ ಆರೋಗ್ಯ ಸಮಸ್ಯೆಗಳಲ್ಲಿ ಒಂದು. ಬಿಪಿ ಕಡಿಮೆ ಆಗುವುದು, ಮತ್ತು ಹೆಚ್ಚಾಗುವುದು ಎರಡೂ ರೋಗಿಯ ಜೀವಕ್ಕೆ ಕುತ್ತು ತರುತ್ತದೆ. ಅದರಲ್ಲೂ ಅಧಿಕ ರಕ್ತದೊತ್ತಡವನ್ನು ನಿರ್ಲಕ್ಷ್ಯ ಮಾಡಿದರೆ ಮಾರಣಾಂತಿಕವಾಗಬಹುದು. ಕೆಲ ಸನ್ನಿವೇಶಗಳಲ್ಲಿ

ಇದು ಹೃದಯಾಘಾತ, ಪಾರ್ಶ್ವವಾಯು, ಬುದ್ಧಿಮಾಂದ್ಯತೆಯನ್ನು ಉಂಟು ಮಾಡುತ್ತದೆ. ಬಿಪಿ ಸಮಸ್ಯೆ ಇದ್ದವರು ತಮ್ಮ ಜೀವನಶೈಲಿ ಮತ್ತು ಆಹಾರ ಅಭ್ಯಾಸದ ಬಗ್ಗೆ ಹೆಚ್ಚು ಗಮನ ಹರಿಸಬೇಕು.

ಹೆಚ್ಚಿನ ರಕ್ತದೊತ್ತಡ ಹೊಂದಿರುವ ಜನರಿಗೆ ತಮ್ಮ ಜೀವನಶೈಲಿ ಸುಧಾರಿಸುವಂತೆ ವೈದ್ಯರು, ತಜ್ಞರು ಸಲಹೆ ನೀಡುತ್ತಾರೆ. ಸಾಮಾನ್ಯ ರಕ್ತದೊತ್ತಡವು 120/80 mmHg ವರೆಗೆ ಇರುತ್ತದೆ.

ನಿತ್ಯ ವ್ಯಾಯಾಮ ಮಾಡಿ: ದೈನಂದಿನ ವ್ಯಾಯಾಮವು ರಕ್ತದೊತ್ತಡ ಕಡಿಮೆ ಮಾಡುವಲ್ಲಿ ಸಹಕಾರಿ. ತಜ್ಞರ ಪ್ರಕಾರ, ಪ್ರತಿ ವಾರ ಸುಮಾರು 150 ನಿಮಿಷಗಳ ಚಟುವಟಿಕೆ ಅಥವಾ ಪ್ರತಿದಿನ ಸುಮಾರು 30 ನಿಮಿಷಗಳ ಚಟುವಟಿಕೆ ರಕ್ತದೊತ್ತಡದ ಸಮಸ್ಯೆ ಕಡಿಮೆ ಮಾಡುತ್ತದೆ.

ಆರೋಗ್ಯಕರ ಆಹಾರ ಕ್ರಮ ಅನುಸರಿಸಿ: ಕೊಬ್ಬು, ಟ್ರಾನ್ಸ್ ಕೊಬ್ಬು ಮತ್ತು ಕೊಲೆಸ್ಟ್ರಾಲ್ ಹೆಚ್ಚಿಸುವ ಆಹಾರ ಸೇವನೆ ತಪ್ಪಿಸಿ. ಧಾನ್ಯ, ಹಣ್ಣು, ತರಕಾರಿ ಮತ್ತು ಕಡಿಮೆ ಕೊಬ್ಬಿನ ಡೈರಿ ಉತ್ಪನ್ನಗಳಲ್ಲಿ ಸಮೃದ್ಧವಾಗಿರುವ ಆಹಾರ ಸೇವನೆ ಮಾಡುವುದು ರಕ್ತದೊತ್ತಡ ಕಡಿಮೆ ಮಾಡಲು ಸಹಕಾರಿ.

ತೂಕ ಕಡಿಮೆ ಮಾಡುವುದು: ಅಧಿಕ ತೂಕ ಅಥವಾ ಬೊಜ್ಜು ಹೊಂದಿದ್ದರೆ ತೂಕ ಕಡಿಮೆ ಮಾಡಿ. ತೂಕದ ಜೊತೆಗೆ ಬೆಲ್ಲಿ ಫ್ಯಾಟ್ ಕೂಡ ಕಡಿಮೆ ಮಾಡಿ. ಸೊಂಟದ ಸುತ್ತಲಿನ ಕೊಬ್ಬು ರಕ್ತದೊತ್ತಡವನ್ನು ಹೆಚ್ಚಿಸುವ ಅಪಾಯವಿದೆ. ತೂಕ ಹೆಚ್ಚಾದಂತೆ ನಿಮ್ಮ ರಕ್ತದೊತ್ತಡ ಹೆಚ್ಚುತ್ತದೆ. ಮತ್ತೊಂದೆಡೆ ಅಧಿಕ ತೂಕ ನಿದ್ದೆ ಮಾಡುವಾಗ ಉಸಿರಾಡಲು ಕಷ್ಟವನ್ನುಂಟು ಮಾಡುತ್ತದೆ. ಇದು ರಕ್ತದೊತ್ತಡವನ್ನು ಹೆಚ್ಚಿಸುತ್ತದೆ. ರಕ್ತದೊತ್ತಡವನ್ನು ನಿಯಂತ್ರಿಸಲು ಉತ್ತಮ ಮಾರ್ಗವೆಂದರೆ ತೂಕ ಕಡಿಮೆ ಮಾಡುವದು.

ಆಲ್ಕೋಹಾಲ್ ಸೇವನೆ ಬೇಡ: ಸಾಮಾನ್ಯವಾಗಿ ಆಲ್ಕೋಹಾಲ್ ಆರೋಗ್ಯಕ್ಕೆ ಒಳ್ಳೆಯದಲ್ಲ. ಪುರುಷರು ತಮ್ಮ ಆಲ್ಕೋಹಾಲ್ ಸೇವನೆ ಸೀಮಿತಗೊಳಿಸಿದರೂ ಸಹ ರಕ್ತದೊತ್ತಡ ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಆದರೆ ನೀವು ಹೆಚ್ಚು ಆಲ್ಕೋಹಾಲ್ ಸೇವಿಸಿದರೆ ಅದು ನಿಮ್ಮ ಸಮಸ್ಯೆಯನ್ನು ಇನ್ನಷ್ಟು ಹೆಚ್ಚಿಸುತ್ತದೆ.

ಕಡಿಮೆ ಉಪ್ಪು ತಿನ್ನಿರಿ: ಆಹಾರದಲ್ಲಿ ಕಡಿಮೆ ಉಪ್ಪು ಸೇವಿಸುವುದು ರಕ್ತದೊತ್ತಡ ಕಡಿಮೆ ಮಾಡುತ್ತದೆ. ಇದು ಹೃದಯದ ಆರೋಗ್ಯ ಸುಧಾರಿಸಲು ಸಹಾಯ ಮಾಡುತ್ತದೆ. ಯಾರಾದರೂ ಆಹಾರದಲ್ಲಿ ಕಡಿಮೆ ಉಪ್ಪು ಸೇವಿಸಿದರೆ, ಅವರ ರಕ್ತದೊತ್ತಡವು ಸುಮಾರು 5 ರಿಂದ 6 mm Hg ವರೆಗೆ ಇಳಿಯಬಹುದು.

ಈ ಮಾಹಿತಿಯು ಟಿವಿ9ನ ಅಧಿಕೃತ ಮಾಹಿತಿಯಾಗಿರುವುದಿಲ್ಲ, ಸಾಮಾನ್ಯ ಮಾಹಿತಿಯನ್ನು ಆಧರಿಸಿರುತ್ತದೆ.

ಆರೋಗ್ಯಕ್ಕೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಪ್ರಮುಖ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ