AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೇಹದಲ್ಲಿ ಕೊಬ್ಬು ಹೇಗೆ ಸಂಗ್ರಹವಾಗುತ್ತದೆ? ಅಧಿಕ ಕೊಲೆಸ್ಟ್ರಾಲ್ ನಿಯಂತ್ರಿಸುವುದು ಹೇಗೆ?

ನಿಮ್ಮ ಲಿವರ್, ನಿಮ್ಮ ದೇಹದಲ್ಲಿನ ಇತರ ಜೀವಕೋಶಗಳು ನಿಮ್ಮ ರಕ್ತದಲ್ಲಿ ಸುಮಾರು ಶೇ. 80ರಷ್ಟು ಕೊಲೆಸ್ಟ್ರಾಲ್ ಅನ್ನು ಉತ್ಪಾದಿಸುತ್ತವೆ. ನಿಮ್ಮ ದೇಹದಲ್ಲಿನ ಕೊಲೆಸ್ಟ್ರಾಲ್​ನ ಉಳಿದ ಶೇ. 20ರಷ್ಟು ಭಾಗ ನೀವು ತಿನ್ನುವ ಆಹಾರದಿಂದ ಬರುತ್ತದೆ.

ದೇಹದಲ್ಲಿ ಕೊಬ್ಬು ಹೇಗೆ ಸಂಗ್ರಹವಾಗುತ್ತದೆ? ಅಧಿಕ ಕೊಲೆಸ್ಟ್ರಾಲ್ ನಿಯಂತ್ರಿಸುವುದು ಹೇಗೆ?
ಕೊಲೆಸ್ಟ್ರಾಲ್Image Credit source: iStock
ಸುಷ್ಮಾ ಚಕ್ರೆ
|

Updated on: Sep 29, 2023 | 5:38 PM

Share

ನಮ್ಮ ಆಹಾರಶೈಲಿಯಿಂದಾಗಿ ಅಧಿಕ ಕೊಲೆಸ್ಟ್ರಾಲ್​ ಇತ್ತೀಚೆಗೆ ಮಕ್ಕಳಿಂದ ವೃದ್ಧರವರೆಗೆ ಎಲ್ಲ ವಯೋಮಾನದವರನ್ನೂ ಕಾಡುವ ಆರೋಗ್ಯ ಸಮಸ್ಯೆಯಾಗಿದೆ. ಈ ಅಧಿಕ ಕೊಬ್ಬಿನಂಶದಿಂದ ಹೃದ್ರೋಗ, ಹೃದಯಾಘಾತ, ಬಿಪಿ, ಡಯಾಬಿಟಿಸ್ ಮುಂತಾದ ಸಮಸ್ಯೆಗಳು ಉಂಟಾಗುತ್ತವೆ. ಅಧಿಕ ಕೊಲೆಸ್ಟ್ರಾಲ್​ಗೆ ಯಾವುದೇ ಲಕ್ಷಣಗಳಿರುವುದಿಲ್ಲ. ನಿಮ್ಮ ದೇಹದಲ್ಲಿ ಕೊಬ್ಬಿನಂಶ ಹೆಚ್ಚಾಗಿದೆಯಾ ಎಂಬುದನ್ನು ರಕ್ತದ ಪರೀಕ್ಷೆಯಿಂದ ತಿಳಿದುಕೊಳ್ಳಬಹುದು. ಅಧಿಕ ಕೊಲೆಸ್ಟ್ರಾಲ್ ಹೃದಯನಾಳಕ್ಕೆ ರಕ್ತದ ಹರಿವನ್ನು ಕಡಿಮೆ ಮಾಡುತ್ತದೆ.

ಅಧಿಕ ಕೊಬ್ಬಿನಾಂಶವಿರುವುದರ ಲಕ್ಷಣಗಳು ಹೀಗಿವೆ:

– ಎದೆ ನೋವು

– ಹೃದಯಾಘಾತ

– ಸ್ಟ್ರೋಕ್

– ದೀರ್ಘಕಾಲದ ಮೂತ್ರಪಿಂಡ ಕಾಯಿಲೆ

ಅಧಿಕ ಕೊಲೆಸ್ಟ್ರಾಲ್ ಹೃದಯಾಘಾತ ಅಥವಾ ಪಾರ್ಶ್ವವಾಯುವಿಗೆ ಕಾರಣವಾಗಬಹುದು. ಅಧಿಕ ಕೊಲೆಸ್ಟ್ರಾಲ್‌ನಿಂದಾಗಿ ಸ್ಯಾಚುರೇಟೆಡ್ ಕೊಬ್ಬು ಹೃದ್ರೋಗವನ್ನು ಉಂಟುಮಾಡುತ್ತದೆ ಎನ್ನಲಾಗಿದೆ. ಆದರೂ ಇತ್ತೀಚಿನ ಸಂಶೋಧನೆಗಳು ಸ್ಯಾಚುರೇಟೆಡ್ ಕೊಬ್ಬು ಹೃದಯರಕ್ತನಾಳದ ಆರೋಗ್ಯದ ಮೇಲೆ ಹೆಚ್ಚೇನೂ ಪರಿಣಾಮ ಬೀರುವುದಿಲ್ಲ ಎಂದು ಹೇಳಿದೆ. ಹೃದ್ರೋಗಕ್ಕೆ ಕೊಲೆಸ್ಟ್ರಾಲ್ ಸಹ ಒಂದು ಸಣ್ಣ ಕಾರಣವಾಗಿರಬಹುದು ಎಂದು ಹೇಳಿದೆ.

ಇದನ್ನೂ ಓದಿ: ಕ್ಯಾನ್ಸರ್​ನಿಂದಾಗುವ ಭಾರತದ ಶೇ. 63ರಷ್ಟು ಮಹಿಳೆಯರ ಸಾವನ್ನು ತಡೆಗಟ್ಟಬಹುದು; ಅಧ್ಯಯನದಲ್ಲಿ ಏನಿದೆ?

ನಿಮ್ಮ ದೇಹದಲ್ಲಿನ ಕೊಲೆಸ್ಟ್ರಾಲ್ ಎರಡು ಮುಖ್ಯ ಮೂಲಗಳಿಂದ ಬರುತ್ತದೆ. ನಿಮ್ಮ ಲಿವರ್ ಮತ್ತು ನಿಮ್ಮ ಆಹಾರಗಳಿಂದ ಕೊಬ್ಬು ಸಂಗ್ರಹವಾಗುತ್ತದೆ. ನಿಮ್ಮ ಲಿವರ್, ನಿಮ್ಮ ದೇಹದಲ್ಲಿನ ಇತರ ಜೀವಕೋಶಗಳು ನಿಮ್ಮ ರಕ್ತದಲ್ಲಿ ಸುಮಾರು ಶೇ. 80ರಷ್ಟು ಕೊಲೆಸ್ಟ್ರಾಲ್ ಅನ್ನು ಉತ್ಪಾದಿಸುತ್ತವೆ.

ನಿಮ್ಮ ದೇಹದಲ್ಲಿನ ಕೊಲೆಸ್ಟ್ರಾಲ್​ನ ಉಳಿದ ಶೇ. 20ರಷ್ಟು ಭಾಗ ನೀವು ತಿನ್ನುವ ಆಹಾರದಿಂದ ಬರುತ್ತದೆ. ಟ್ರಾನ್ಸ್ ಮತ್ತು ಸ್ಯಾಚುರೇಟೆಡ್ ಕೊಬ್ಬುಗಳಲ್ಲಿ ಹೆಚ್ಚಿನ ಆಹಾರಗಳು ಅನಾರೋಗ್ಯಕರ ಕೊಲೆಸ್ಟ್ರಾಲ್ ಮಟ್ಟಗಳಿಗೆ ಕಾರಣವಾಗಬಹುದು.

ಅಧಿಕ ಕೊಲೆಸ್ಟ್ರಾಲ್ ತಡೆಯುವುದು ಹೇಗೆ?:

ಕೆಲವು ಸಂದರ್ಭಗಳಲ್ಲಿ ಅಧಿಕ ಕೊಲೆಸ್ಟ್ರಾಲ್ ಆನುವಂಶಿಕವಾಗಿರುತ್ತದೆ. ಆದರೆ, ಕೆಲವು ಜೀವನಶೈಲಿಯ ಬದಲಾವಣೆಗಳು ನಿಮ್ಮ ಕೊಲೆಸ್ಟ್ರಾಲ್ ಮಟ್ಟವನ್ನು ಸುಧಾರಿಸಲು ಮತ್ತು ಕಡಿಮೆ ಮಾಡಲು ನಿಮಗೆ ಸಹಾಯ ಮಾಡುತ್ತವೆ. ಕೊಬ್ಬಿನಾಂಶವನ್ನು ನಿಯಂತ್ರಣದಲ್ಲಿಡಲು ಕೆಲವು ಸಲಹೆಗಳು ಇಲ್ಲಿವೆ:

– ಆರೋಗ್ಯಕರ ಕೊಬ್ಬುಗಳು, ಧಾನ್ಯಗಳು ಮತ್ತು ಕಡಿಮೆ ಕೊಬ್ಬಿನಂಶವಿರುವ ಡೈರಿ ಉತ್ಪನ್ನಗಳನ್ನು ಸೇವಿಸಿ. ಹೃದಯಕ್ಕೆ ಆರೋಗ್ಯಕರವಾದ ಆಹಾರವನ್ನು ಸೇವಿಸಿ.

ಇದನ್ನೂ ಓದಿ: ಕ್ಯಾರೆಟ್ ರುಚಿಗಷ್ಟೇ ಅಲ್ಲ, ಆರೋಗ್ಯಕ್ಕೂ ಅತ್ಯುತ್ತಮ ಆಯ್ಕೆ!

– ಕರಿದ ಆಹಾರಗಳು, ಟ್ರಾನ್ಸ್ ಕೊಬ್ಬಿನ ಆಹಾರಗಳು ಮತ್ತು ಭಾಗಶಃ ಹೈಡ್ರೋಜನೀಕರಿಸಿದ ತೈಲಗಳನ್ನು ಹೊಂದಿರುವ ಆಹಾರಗಳನ್ನು ತ್ಯಜಿಸಿ.

– ಸಾಲ್ಮನ್ ಮೀನು ಮತ್ತು ಅಗಸೆಬೀಜಗಳಂತಹ ಒಮೆಗಾ-3 ಕೊಬ್ಬಿನಾಮ್ಲಗಳು ಹೆಚ್ಚಿರುವ ಆಹಾರವನ್ನು ಸೇವಿಸಿ.

– ಹೆಚ್ಚು ಓಟ್ಸ್, ಮಸೂರ, ಹಣ್ಣುಗಳು ಮತ್ತು ತರಕಾರಿಗಳನ್ನು ತಿನ್ನುವ ಮೂಲಕ ನಿಮ್ಮ ಕರಗುವ ಫೈಬರ್ ಸೇವನೆಯನ್ನು ಹೆಚ್ಚಿಸಿ.

– ನಿಯಮಿತವಾಗಿ ವ್ಯಾಯಾಮ ಮಾಡಿ, ದಿನಕ್ಕೆ ಕನಿಷ್ಠ 30 ನಿಮಿಷಗಳ ಕಾಲ ವ್ಯಾಯಾಮ, ವಾಕಿಂಗ್ ಮಾಡಿ.

– ನೀವು ಧೂಮಪಾನ ಮಾಡುತ್ತಿದ್ದರೆ ಅದರಿಂದ ಆದಷ್ಟೂ ದೂರವಿರಲು ಪ್ರಯತ್ನಿಸಿ.

– ನೀವು ಅಧಿಕ ತೂಕ ಹೊಂದಿದ್ದರೆ ನಿಮ್ಮ ದೇಹದ ತೂಕವನ್ನು ಇಳಿಸಿಕೊಳ್ಳಲು ಪ್ರಯತ್ನಿಸಿ.

ಇನ್ನಷ್ಟು ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ