AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Nausea Problem: ವಾಕರಿಕೆ ಸಮಸ್ಯೆ ನಿಯಂತ್ರಿಸಲು ಇಲ್ಲಿದೆ ಸರಳ ಸಲಹೆಗಳು

Health Benefits: ವಾಂತಿ ಸಮಸ್ಯೆ ನಿಮಗೆ ಕಾಡುತ್ತಿದ್ದರೆ, ಮನೆಮದ್ದುಗಳನ್ನು ಬಳಸಿ ನಿಮ್ಮ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಬಹುದಾಗಿದೆ. ಹಾಗಿರುವಾಗ ಯಾವ ಮನೆಮದ್ದುಗಳನ್ನು ಬಳಸಬಹುದು ಎಂದು ಯೋಚಿಸುತ್ತಿದ್ದೀರಾ? ಇಲ್ಲಿದೆ ಕೆಲವು ಸಲಹೆಗಳು.

Nausea Problem: ವಾಕರಿಕೆ ಸಮಸ್ಯೆ ನಿಯಂತ್ರಿಸಲು ಇಲ್ಲಿದೆ ಸರಳ ಸಲಹೆಗಳು
ಸಂಗ್ರಹ ಚಿತ್ರ
TV9 Web
| Edited By: |

Updated on: Oct 07, 2021 | 8:19 AM

Share

ಕೆಲವು ಬಾರಿ ರಸ್ತೆಯ ಅಕ್ಕ ಪಕ್ಕದಲ್ಲಿ ಸಿಗುವ ತಿಂಡಿಗಳನ್ನು ಅತಿಯಾಗಿ ತಿಂದು ಕೆಲವರಿಗೆ ಹೊಟ್ಟೆ ನೋವು, ವಾಕರಿಕೆ ಬರುವಂತಾಗುವುದು ಹೀಗೆ ಅನೇಕ ಸಮಸ್ಯೆಗಳು ಕಾಡುತ್ತಿರಬಹುದು. ಇದರಿಂದಾಗಿ ದೈಹಿಕ ಸಮಸ್ಯೆ ಜತೆಗೆ ಮಾನಸಿಕ ಅಸ್ವಸ್ಥತೆಯ ಸಮಸ್ಯೆಯನ್ನು ಎದುರಿಸಬೇಕಾಗುತ್ತದೆ. ವಾಂತಿ ಸಮಸ್ಯೆ ನಿಮಗೆ ಕಾಡುತ್ತಿದ್ದರೆ, ಮನೆಮದ್ದುಗಳನ್ನು ಬಳಸಿ ನಿಮ್ಮ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಬಹುದಾಗಿದೆ. ಹಾಗಿರುವಾಗ ಯಾವ ಮನೆಮದ್ದುಗಳನ್ನು ಬಳಸಬಹುದು ಎಂದು ಯೋಚಿಸುತ್ತಿದ್ದೀರಾ? ಇಲ್ಲಿದೆ ಕೆಲವು ಸಲಹೆಗಳು.

ಪುದೀನ ನೈಸರ್ಗಿಕವಾಗಿ ಮನೆಯಲ್ಲಿಯೇ ಬೆಳೆದ ಪುದೀನ ಎಲೆಗಳನ್ನು ಅಗಿದು ರಸ ಸೇವಿಸುವ ಮೂಲಕ ವಾಕರಿಕೆ ಸಮಸ್ಯೆಯನ್ನು ದೂರವಾಗಿಸಬಹುದು. ಇದು ಹೊಟ್ಟೆ ನೋವು, ಅಜೀರ್ಣ ಈ ರೀತಿಯ ಸಮಸ್ಯೆಯಿಂದ ಪರಿಹಾರ ಕಂಡುಕೊಳ್ಳಲು ಸಹಾಯ ಮಾಡುತ್ತದೆ.

ಶುಂಠಿ ಶುಂಠಿಯು ಹೊಟ್ಟೆಯಲ್ಲಿನ ಸಮಸ್ಯೆಯಿಂದ ಉಂಟಾಗುವ ಕಿರಿಕಿರಿಯನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ವಾಂತಿ ಸಮಸ್ಯೆಯನ್ನು ಕಡಿಮೆ ಮಾಡಿಕೊಳ್ಳಲು ಶುಂಠಿ ನೀರು, ಶುಂಠಿ ಕಷಾಯ ಸೇವನೆ ಒಳ್ಳೆಯದು. ಇಲ್ಲವೇ ಶುಂಠಿ, ಲಿಂಬು ರಸ ಮತ್ತು ರುಚಿಗೆ ಚೂರು ಉಪ್ಪು ಮಿಶ್ರಣ ಮಾಡಿ ಸವಿಯುವ ಮೂಲಕ ಅಜೀರ್ಣ ಸಮಸ್ಯೆ ನಿವಾರಣೆ ಆಗುತ್ತದೆ. ಈ ಮೂಲಕ ನಿಮ್ಮ ವಾಕರಿಕೆ ಸಮಸ್ಯೆಯಿಂದ ಪರಿಹಾರ ಕಂಡುಕೊಳ್ಳಬಹುದು.

ಲವಂಗ ಲವಂಗ ಅಗಿದು ರಸ ನುಂಗುವ ಮೂಲಕವೂ ಸಹ ವಾಕರಿಕೆ ಸಮಸ್ಯೆಯಿಂದ ಪರಿಹಾರ ಕಂಡುಕೊಳ್ಳಬಹುದಾಗಿದೆ. ಲವಂಗದ ಪರಿಮಳ ಮತ್ತು ರುಚಿ ವಾಂತಿ ಸಮಸ್ಯೆಗೆ ಪರಿಹಾರ ನೀಡುತ್ತದೆ.

ಏಲಕ್ಕಿ ಏಲಕ್ಕಿ ವಾಕರಿಕೆ ಸಮಸ್ಯೆಗೆ ಉತ್ತಮ ಪರಿಹಾರವಾಗಿದೆ. ಏಲಕ್ಕಿ ಬೀಜಗಳನ್ನು ಅಗಿಯುವ ಮೂಲಕ ವಾಕರಿಕೆಯನ್ನು ಶಮನಗೊಳಿಸಬಹುದು. ಇಲ್ಲವೇ ಏಲಕ್ಕಿ ಬೀಜವನ್ನು ಜೇನುತುಪ್ಪದೊಂದಿಗೆ ಬೆರೆಸಿ ತಿನ್ನುವ ಮೂಲಕ ಸಮಸ್ಯೆಯಿಂದ ಪರಿಹಾರ ಕಂಡುಕೊಳ್ಳಬಹುದಾಗಿದೆ.

ಇದನ್ನೂ ಓದಿ:

Health Tips: ಶೀತ, ಕೆಮ್ಮಿನ ಸಮಸ್ಯೆಗಳ ಪರಿಹಾರಕ್ಕಾಗಿ ಸಲಹೆಗಳು ಇಲ್ಲಿವೆ

Health Tips: ಆಫೀಸು, ಮನೆ ಈ ಎಲ್ಲವುಗಳ ಒತ್ತಡದಿಂದ ಬಳಲುತ್ತಿದ್ದೀರಾ?; ಹೊರಬರಲು ಇಲ್ಲಿವೆ ಸುಲಭ ವಿಧಾನಗಳು

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ