AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Home Remedies: ದೊಡ್ಡಪತ್ರೆ ಎಲೆಗಳನ್ನು ಈ ರೀತಿ ಬಳಸಿದರೆ ಶೀತ, ಜ್ವರ ಹತ್ತಿರವೂ ಸುಳಿಯುವುದಿಲ್ಲ

ಮನೆಯಲ್ಲಿರುವ ಕೆಲವು ಸಸ್ಯಗಳಿಂದ ಸಣ್ಣ ಪುಟ್ಟ ಶೀತ, ಜ್ವರವನ್ನು ಕಡಿಮೆ ಮಾಡಿಕೊಳ್ಳಬಹುದು. ಇಂತಹ ಪರಿಣಾಮಕಾರಿ ಔಷಧಿ ಗಿಡಗಳಲ್ಲಿ ದೊಡ್ಡ ಪತ್ರೆ ಗಿಡವೂ ಒಂದಾಗಿದೆ. ಇದು ಶೀತ, ಜ್ವರಕ್ಕೆ ಮನೆ ಮದ್ದಾಗಿದೆ. ಹಾಗಾದರೆ ಇದನ್ನು ಬಳಸುವುದು ಹೇಗೆ? ಮಕ್ಕಳಿಗೂ ನೀಡಬಹುದೇ? ಇಲ್ಲಿದೆ ಸಂಪೂರ್ಣ ಮಾಹಿತಿ.

Home Remedies: ದೊಡ್ಡಪತ್ರೆ ಎಲೆಗಳನ್ನು ಈ ರೀತಿ ಬಳಸಿದರೆ ಶೀತ, ಜ್ವರ ಹತ್ತಿರವೂ ಸುಳಿಯುವುದಿಲ್ಲ
ಪ್ರೀತಿ ಭಟ್​, ಗುಣವಂತೆ
| Updated By: ಅಕ್ಷತಾ ವರ್ಕಾಡಿ|

Updated on: Jun 25, 2024 | 7:42 PM

Share

ಮನೆಯ ಹಿತ್ತಲಿನಲ್ಲಿರುವ ಸಸ್ಯಗಳು ಅನೇಕ ರೀತಿಯ ಸಣ್ಣ ಪುಟ್ಟ ಕಾಯಿಲೆಗಳಿಗೆ ರಾಮಬಾಣವಾಗಿರುತ್ತದೆ. ಹಿಂದಿನ ಕಾಲದಲ್ಲಿ ಜ್ವರ, ಶೀತಕ್ಕೆ ಮೊದಲು ಮನೆಮದ್ದುಗಳನ್ನು ಮಾಡುತ್ತಿದ್ದರು. ಆದರೆ ಇಂದು ನಾವು ಮಾತ್ರೆಗಳ ಮೊರೆ ಹೋಗಿದ್ದೇವೆ. ಮಕ್ಕಳಿಗೂ ನಾವು ಈ ಅಭ್ಯಾಸವನ್ನೇ ರೂಢಿಸಿಕೊಂಡು ಬರುತ್ತಿದ್ದೇವೆ. ಇದಕ್ಕಿಂತ ಮನೆಯಲ್ಲಿರುವ ಕೆಲವು ಸಸ್ಯಗಳಿಂದ ಸಣ್ಣ ಪುಟ್ಟ ಶೀತ, ಜ್ವರವನ್ನು ಕಡಿಮೆ ಮಾಡಿಕೊಳ್ಳಬಹುದು. ಇಂತಹ ಪರಿಣಾಮಕಾರಿ ಔಷಧಿ ಗಿಡಗಳಲ್ಲಿ ದೊಡ್ಡ ಪತ್ರೆ ಗಿಡವೂ ಒಂದಾಗಿದೆ. ಇದು ಶೀತ, ಜ್ವರಕ್ಕೆ ಮನೆ ಮದ್ದಾಗಿದೆ. ಹಾಗಾದರೆ ಇದನ್ನು ಬಳಸುವುದು ಹೇಗೆ? ಮಕ್ಕಳಿಗೂ ನೀಡಬಹುದೇ? ಇಲ್ಲಿದೆ ಸಂಪೂರ್ಣ ಮಾಹಿತಿ.

ಸಾಮಾನ್ಯವಾಗಿ ಆಹಾರ ಸೇವನೆಯಲ್ಲಿ ಆದಂತಹ ಬದಲಾವಣೆ, ಹವಾಮಾನದಲ್ಲಿನ ವ್ಯತ್ಯಾಸದಿಂದ ಶ್ವಾಸಕೋಶದಲ್ಲಿ ಕಫ ಕಟ್ಟಿಕೊಳ್ಳುತ್ತದೆ. ಇದರಿಂದ ಶೀತವಾದರೆ ಎಷ್ಟು ದಿನವಾದರೂ ಕಡಿಮೆಯಾಗುವುದಿಲ್ಲ. ಇದಕ್ಕೆ ದೊಡ್ಡ ಪತ್ರೆ ಸೊಪ್ಪು ಉತ್ತಮ ಮನೆಮದ್ದಾಗಿದೆ. ಇನ್ನು ಚಿಕ್ಕ ಮಕ್ಕಳಿಗೂ ಕೂಡ ಈ ಸೊಪ್ಪನ್ನು ಔಷಧವಾಗಿ ಬಳಸಬಹುದಾಗಿದೆ. ಇದರ ರಸವನ್ನು ಸ್ವಲ್ಪ ಕುಡಿಯಲು ಕೊಡುವುದರಿಂದ ನೆಗಡಿಯನ್ನು ಕಡಿಮೆ ಮಾಡಬಹುದಾಗಿದೆ.

ಇದನ್ನೂ ಓದಿ: ಆಹಾರದಲ್ಲಿ ಕೃತಕ ಬಣ್ಣ ಬಳಸುವುದರಿಂದ ಏನೆಲ್ಲಾ ಆರೋಗ್ಯ ಸಮಸ್ಯೆ? ಡಾಕ್ಟರ್ ಮಾತು ಕೇಳಿ

ಹೇಗೆ ತಯಾರಿಸುವುದು?

  • ದೊಡ್ಡ ಪತ್ರೆ ಸೊಪ್ಪನ್ನು ಬೆಂಕಿಯಲ್ಲಿ ಸುಟ್ಟು ಅದರ ರಸವನ್ನು ತೆಗದು ಅದಕ್ಕೆ ಅರ್ಧ ಚಮಚ ಬೆಲ್ಲ ಸೇರಿಸಿ ಕುಡಿದರೆ ಒಂದೇ ದಿನದಲ್ಲಿ ಶೀತ, ಕಟ್ಟಿದ ಮೂಗಿನ ಸಮಸ್ಯೆ ನಿವಾರಣೆಯಾಗುತ್ತದೆ.
  • ಇನ್ನು ಸಣ್ಣ ಮಕ್ಕಳಿಗೆ ಕೊಡುವಾಗ ದೊಡ್ಡ ಪತ್ರೆಯನ್ನು ಚೆನ್ನಾಗಿ ಸುಡಬೇಕು. ಬಳಿಕ ಅದನ್ನು ಒಂದು ಪಾತ್ರೆಗೆ ಹಾಕಿ ಜಜ್ಜಬೇಕು. ನಂತರ ಅದರ ರಸವನ್ನು ತೆಗೆದು ಮಕ್ಕಳಿಗೆ ಕುಡಿಯಲು ಕೊಡಬೇಕು. ಕೇವಲ 5 ರಿಂದ 6 ಸಣ್ಣ ಸಣ್ಣ ಎಲೆಗಳು ಮಕ್ಕಳಿಗೆ ಸಾಕಾಗುತ್ತದೆ. ದೊಡ್ಡವರಿಗಾದರೆ ಸ್ವಲ್ಪ ಜಾಸ್ತಿ ಬಳಸಬಹುದು. ಆದರೆ ಇದನ್ನು 6 ತಿಂಗಳು ಮೇಲ್ಪಟ್ಟ ಮಕ್ಕಳಿಗೆ ಮಾತ್ರ ನೀಡಬೇಕು.
  • ದೊಡ್ಡ ಪತ್ರೆ ಸೊಪ್ಪನ್ನು ಬೆಂಕಿಯ ಮೇಲೆ ಇಟ್ಟು ಬಾಡಿಸಿ ನಂತರ ಅದನ್ನು ನೆತ್ತಿಯ ಮೇಲೆ ಹಾಕಿದರೆ ದೇಹದಲ್ಲಿನ ತಣ್ಣನೆಯ ಅಂಶ ನಿವಾರಣೆಯಾಗಿ ಜ್ವರ, ಶೀತ ಕಡಿಮೆಯಾಗುತ್ತದೆ.

ಆರೋಗ್ಯಕ್ಕೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!