Home Remedies: ದೊಡ್ಡಪತ್ರೆ ಎಲೆಗಳನ್ನು ಈ ರೀತಿ ಬಳಸಿದರೆ ಶೀತ, ಜ್ವರ ಹತ್ತಿರವೂ ಸುಳಿಯುವುದಿಲ್ಲ

ಮನೆಯಲ್ಲಿರುವ ಕೆಲವು ಸಸ್ಯಗಳಿಂದ ಸಣ್ಣ ಪುಟ್ಟ ಶೀತ, ಜ್ವರವನ್ನು ಕಡಿಮೆ ಮಾಡಿಕೊಳ್ಳಬಹುದು. ಇಂತಹ ಪರಿಣಾಮಕಾರಿ ಔಷಧಿ ಗಿಡಗಳಲ್ಲಿ ದೊಡ್ಡ ಪತ್ರೆ ಗಿಡವೂ ಒಂದಾಗಿದೆ. ಇದು ಶೀತ, ಜ್ವರಕ್ಕೆ ಮನೆ ಮದ್ದಾಗಿದೆ. ಹಾಗಾದರೆ ಇದನ್ನು ಬಳಸುವುದು ಹೇಗೆ? ಮಕ್ಕಳಿಗೂ ನೀಡಬಹುದೇ? ಇಲ್ಲಿದೆ ಸಂಪೂರ್ಣ ಮಾಹಿತಿ.

Home Remedies: ದೊಡ್ಡಪತ್ರೆ ಎಲೆಗಳನ್ನು ಈ ರೀತಿ ಬಳಸಿದರೆ ಶೀತ, ಜ್ವರ ಹತ್ತಿರವೂ ಸುಳಿಯುವುದಿಲ್ಲ
Follow us
| Updated By: ಅಕ್ಷತಾ ವರ್ಕಾಡಿ

Updated on: Jun 25, 2024 | 7:42 PM

ಮನೆಯ ಹಿತ್ತಲಿನಲ್ಲಿರುವ ಸಸ್ಯಗಳು ಅನೇಕ ರೀತಿಯ ಸಣ್ಣ ಪುಟ್ಟ ಕಾಯಿಲೆಗಳಿಗೆ ರಾಮಬಾಣವಾಗಿರುತ್ತದೆ. ಹಿಂದಿನ ಕಾಲದಲ್ಲಿ ಜ್ವರ, ಶೀತಕ್ಕೆ ಮೊದಲು ಮನೆಮದ್ದುಗಳನ್ನು ಮಾಡುತ್ತಿದ್ದರು. ಆದರೆ ಇಂದು ನಾವು ಮಾತ್ರೆಗಳ ಮೊರೆ ಹೋಗಿದ್ದೇವೆ. ಮಕ್ಕಳಿಗೂ ನಾವು ಈ ಅಭ್ಯಾಸವನ್ನೇ ರೂಢಿಸಿಕೊಂಡು ಬರುತ್ತಿದ್ದೇವೆ. ಇದಕ್ಕಿಂತ ಮನೆಯಲ್ಲಿರುವ ಕೆಲವು ಸಸ್ಯಗಳಿಂದ ಸಣ್ಣ ಪುಟ್ಟ ಶೀತ, ಜ್ವರವನ್ನು ಕಡಿಮೆ ಮಾಡಿಕೊಳ್ಳಬಹುದು. ಇಂತಹ ಪರಿಣಾಮಕಾರಿ ಔಷಧಿ ಗಿಡಗಳಲ್ಲಿ ದೊಡ್ಡ ಪತ್ರೆ ಗಿಡವೂ ಒಂದಾಗಿದೆ. ಇದು ಶೀತ, ಜ್ವರಕ್ಕೆ ಮನೆ ಮದ್ದಾಗಿದೆ. ಹಾಗಾದರೆ ಇದನ್ನು ಬಳಸುವುದು ಹೇಗೆ? ಮಕ್ಕಳಿಗೂ ನೀಡಬಹುದೇ? ಇಲ್ಲಿದೆ ಸಂಪೂರ್ಣ ಮಾಹಿತಿ.

ಸಾಮಾನ್ಯವಾಗಿ ಆಹಾರ ಸೇವನೆಯಲ್ಲಿ ಆದಂತಹ ಬದಲಾವಣೆ, ಹವಾಮಾನದಲ್ಲಿನ ವ್ಯತ್ಯಾಸದಿಂದ ಶ್ವಾಸಕೋಶದಲ್ಲಿ ಕಫ ಕಟ್ಟಿಕೊಳ್ಳುತ್ತದೆ. ಇದರಿಂದ ಶೀತವಾದರೆ ಎಷ್ಟು ದಿನವಾದರೂ ಕಡಿಮೆಯಾಗುವುದಿಲ್ಲ. ಇದಕ್ಕೆ ದೊಡ್ಡ ಪತ್ರೆ ಸೊಪ್ಪು ಉತ್ತಮ ಮನೆಮದ್ದಾಗಿದೆ. ಇನ್ನು ಚಿಕ್ಕ ಮಕ್ಕಳಿಗೂ ಕೂಡ ಈ ಸೊಪ್ಪನ್ನು ಔಷಧವಾಗಿ ಬಳಸಬಹುದಾಗಿದೆ. ಇದರ ರಸವನ್ನು ಸ್ವಲ್ಪ ಕುಡಿಯಲು ಕೊಡುವುದರಿಂದ ನೆಗಡಿಯನ್ನು ಕಡಿಮೆ ಮಾಡಬಹುದಾಗಿದೆ.

ಇದನ್ನೂ ಓದಿ: ಆಹಾರದಲ್ಲಿ ಕೃತಕ ಬಣ್ಣ ಬಳಸುವುದರಿಂದ ಏನೆಲ್ಲಾ ಆರೋಗ್ಯ ಸಮಸ್ಯೆ? ಡಾಕ್ಟರ್ ಮಾತು ಕೇಳಿ

ಹೇಗೆ ತಯಾರಿಸುವುದು?

  • ದೊಡ್ಡ ಪತ್ರೆ ಸೊಪ್ಪನ್ನು ಬೆಂಕಿಯಲ್ಲಿ ಸುಟ್ಟು ಅದರ ರಸವನ್ನು ತೆಗದು ಅದಕ್ಕೆ ಅರ್ಧ ಚಮಚ ಬೆಲ್ಲ ಸೇರಿಸಿ ಕುಡಿದರೆ ಒಂದೇ ದಿನದಲ್ಲಿ ಶೀತ, ಕಟ್ಟಿದ ಮೂಗಿನ ಸಮಸ್ಯೆ ನಿವಾರಣೆಯಾಗುತ್ತದೆ.
  • ಇನ್ನು ಸಣ್ಣ ಮಕ್ಕಳಿಗೆ ಕೊಡುವಾಗ ದೊಡ್ಡ ಪತ್ರೆಯನ್ನು ಚೆನ್ನಾಗಿ ಸುಡಬೇಕು. ಬಳಿಕ ಅದನ್ನು ಒಂದು ಪಾತ್ರೆಗೆ ಹಾಕಿ ಜಜ್ಜಬೇಕು. ನಂತರ ಅದರ ರಸವನ್ನು ತೆಗೆದು ಮಕ್ಕಳಿಗೆ ಕುಡಿಯಲು ಕೊಡಬೇಕು. ಕೇವಲ 5 ರಿಂದ 6 ಸಣ್ಣ ಸಣ್ಣ ಎಲೆಗಳು ಮಕ್ಕಳಿಗೆ ಸಾಕಾಗುತ್ತದೆ. ದೊಡ್ಡವರಿಗಾದರೆ ಸ್ವಲ್ಪ ಜಾಸ್ತಿ ಬಳಸಬಹುದು. ಆದರೆ ಇದನ್ನು 6 ತಿಂಗಳು ಮೇಲ್ಪಟ್ಟ ಮಕ್ಕಳಿಗೆ ಮಾತ್ರ ನೀಡಬೇಕು.
  • ದೊಡ್ಡ ಪತ್ರೆ ಸೊಪ್ಪನ್ನು ಬೆಂಕಿಯ ಮೇಲೆ ಇಟ್ಟು ಬಾಡಿಸಿ ನಂತರ ಅದನ್ನು ನೆತ್ತಿಯ ಮೇಲೆ ಹಾಕಿದರೆ ದೇಹದಲ್ಲಿನ ತಣ್ಣನೆಯ ಅಂಶ ನಿವಾರಣೆಯಾಗಿ ಜ್ವರ, ಶೀತ ಕಡಿಮೆಯಾಗುತ್ತದೆ.

ಆರೋಗ್ಯಕ್ಕೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

ನೀವು ಏನಾದರೂ ಅಂದುಕೊಳ್ರಿ ನಾನಿರೋದು ಹೀಗೆ: ಶಿವಣ್ಣ
ನೀವು ಏನಾದರೂ ಅಂದುಕೊಳ್ರಿ ನಾನಿರೋದು ಹೀಗೆ: ಶಿವಣ್ಣ
ತುಂಬಿ ಹರಿಯುವ ಹೊಳೆಯಲ್ಲೇ ಗರ್ಭಿಣಿ ಹೆಂಡತಿಯನ್ನು ಹೊತ್ತು ನಡೆದ ಗಂಡ
ತುಂಬಿ ಹರಿಯುವ ಹೊಳೆಯಲ್ಲೇ ಗರ್ಭಿಣಿ ಹೆಂಡತಿಯನ್ನು ಹೊತ್ತು ನಡೆದ ಗಂಡ
ನಾಳೆ ಹಮ್ಮಿಕೊಂಡಿದ್ದ ಚಾಮುಂಡಿ ಚಲೋ ರದ್ದು: ಪ್ರತಾಪ್ ಸಿಂಹ ಹೇಳಿದ್ದಿಷ್ಟು
ನಾಳೆ ಹಮ್ಮಿಕೊಂಡಿದ್ದ ಚಾಮುಂಡಿ ಚಲೋ ರದ್ದು: ಪ್ರತಾಪ್ ಸಿಂಹ ಹೇಳಿದ್ದಿಷ್ಟು
ಮಧ್ಯಪ್ರದೇಶದ ಶಾಜಾಪುರದಲ್ಲಿ ಭೀಕರ ಅಪಘಾತ; ಶಾಲಾ ಬಸ್ ಪಲ್ಟಿ, ಮಕ್ಕಳಿಗೆ ಗಾಯ
ಮಧ್ಯಪ್ರದೇಶದ ಶಾಜಾಪುರದಲ್ಲಿ ಭೀಕರ ಅಪಘಾತ; ಶಾಲಾ ಬಸ್ ಪಲ್ಟಿ, ಮಕ್ಕಳಿಗೆ ಗಾಯ
ಗ್ಯಾರಂಟಿ ಯೋಜನೆಗಳು, ಬಡವರ ಸುರಕ್ಷತೆ, ಕಲ್ಯಾಣ ಕೃತಿ ಬಿಡುಗಡೆ ಮಾಡಿದ ಸಿಎಂ
ಗ್ಯಾರಂಟಿ ಯೋಜನೆಗಳು, ಬಡವರ ಸುರಕ್ಷತೆ, ಕಲ್ಯಾಣ ಕೃತಿ ಬಿಡುಗಡೆ ಮಾಡಿದ ಸಿಎಂ
ಕೋಲಾರ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾರಾಮಾರಿ
ಕೋಲಾರ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾರಾಮಾರಿ
ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು, ಸಿಟಿವಿಯಲ್ಲಿ ಭೀಕರ ದೃಶ್ಯ ಸೆರೆ
ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು, ಸಿಟಿವಿಯಲ್ಲಿ ಭೀಕರ ದೃಶ್ಯ ಸೆರೆ
ಕೊತ್ವಾಲನ ಶಿಷ್ಯರು ವಿಧಾನಸೌಧಕ್ಕೆ ಬಂದ್ಮೇಲೆ ಕುಲಗೆಟ್ಟಿದ್ದು: ಹೆಚ್​ಡಿಕೆ
ಕೊತ್ವಾಲನ ಶಿಷ್ಯರು ವಿಧಾನಸೌಧಕ್ಕೆ ಬಂದ್ಮೇಲೆ ಕುಲಗೆಟ್ಟಿದ್ದು: ಹೆಚ್​ಡಿಕೆ
ಸ್ಯಾಮ್​ಸಂಗ್ ಎಲೆಕ್ಟ್ರಾನಿಕ್ಸ್ ಹಬ್ಬದ ವಿಶೇಷ ಮಾರಾಟ ಕೊಡುಗೆ ಆರಂಭ
ಸ್ಯಾಮ್​ಸಂಗ್ ಎಲೆಕ್ಟ್ರಾನಿಕ್ಸ್ ಹಬ್ಬದ ವಿಶೇಷ ಮಾರಾಟ ಕೊಡುಗೆ ಆರಂಭ
ಶಿವಣ್ಣ-ಉಪ್ಪಿ ನಟನೆಯ ‘45’ ಚಿತ್ರದ ಸುದ್ದಿಗೋಷ್ಠಿ ಲೈವ್ ನೋಡಿ
ಶಿವಣ್ಣ-ಉಪ್ಪಿ ನಟನೆಯ ‘45’ ಚಿತ್ರದ ಸುದ್ದಿಗೋಷ್ಠಿ ಲೈವ್ ನೋಡಿ