AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Health Care Tips in Kannada : ಭೇದಿ ಸಮಸ್ಯೆಗೆ ಸರಳ ಮನೆ ಮದ್ದು ಇಲ್ಲಿದೆ

ಹವಾಮಾನ ಬದಲಾಗುತ್ತಿದ್ದಂತೆ ನಾನಾ ರೀತಿಯ ಆರೋಗ್ಯ ಸಮಸ್ಯೆಗಳು ಒಕ್ಕರಿಸಿಕೊಂಡು ಬಿಡುತ್ತವೆ. ಈ ಬೇಸಿಗೆಯಲ್ಲಿ ಸುಡುವ ಸೂರ್ಯನ ಕಿರಣವನ್ನು ತ್ವಚೆಯನ್ನು ರಕ್ಷಿಸುವುದೇ ದೊಡ್ಡ ಸವಾಲಿನ ವಿಚಾರ. ಈ ಸಮಯದಲ್ಲಿ ಕೆಲವರು ಮಲಬದ್ಧತೆಯಿಂದ ಒದ್ದಾಡಿದರೆ, ಇನ್ನು ಕೆಲವರು ಅತಿಸಾರ (ಬೇಧಿ) ಸಮಸ್ಯೆಯಿಂದ ಬಳಲುತ್ತಿರುತ್ತಾರೆ. ಆಹಾರ ಹಾಗೂ ನೀರಿನಿಂದ ಸ್ವಲ್ಪ ವ್ಯತ್ಯಾಸವಾದರೂ ಕೂಡ ಈ ಸಮಸ್ಯೆಯು ಬಿಗಡಾಯಿಸುತ್ತಾ ಬಿಡುತ್ತದೆ. ಹೀಗಾದಾಗ ತಕ್ಷಣವೇ ಮನೆ ಮದ್ದಿನ ಮೂಲಕ ಪರಿಹಾರವನ್ನು ಕಂಡುಕೊಳ್ಳಬಹುದು.

Health Care Tips in Kannada : ಭೇದಿ ಸಮಸ್ಯೆಗೆ ಸರಳ ಮನೆ ಮದ್ದು ಇಲ್ಲಿದೆ
ಸಾಯಿನಂದಾ
| Edited By: |

Updated on: May 04, 2024 | 4:15 PM

Share

ಸುಡು ಬಿಸಿಲಿನ ನಡುವೆ ಈ ಹೊಟ್ಟೆ ಕೆಟ್ಟು ಹೋದರೆ ಮುಗಿದೇ ಹೋಯಿತು. ಪದೇ ಪದೇ ಶೌಚಾಲಯಕ್ಕೆ ಹೋಗಿ ಬಂದು ಸುಸ್ತೋ ಸುಸ್ತು. ಭೇದಿಯಂತಹ ಸಮಸ್ಯೆಯನ್ನು ಅನುಭವಿಸಿದವರಿಗೆ ಮಾತ್ರ ಗೊತ್ತು. ಆದರೆ, ಮನೆಯಲ್ಲೇ ಇರುವ ಕೆಲವು ಪದಾರ್ಥಗಳಿಂದ ಔಷಧ ತಯಾರಿಸಿ ಸೇವಿಸುವುದು ಉತ್ತಮ. ಒಂದು ವೇಳೆ ಸಮಸ್ಯೆಯು ಅತಿಯಾದರೆ ವೈದ್ಯರನ್ನು ಭೇಟಿಯಾಗಿ ಸೂಕ್ತ ಚಿಕಿತ್ಸೆಯನ್ನು ಪಡೆದುಕೊಳ್ಳಬೇಕು.

ಭೇದಿ ಸಮಸ್ಯೆಗೆ ಸರಳ ಮನೆ ಮದ್ದುಗಳು:

  • ಬೇಸಿಗೆಯಲ್ಲಿ ಭೇದಿಯ ಸಮಸ್ಯೆ ಕಾಣಿಸಿಕೊಂಡರೆ ಮೊಸರು ಸೇವಿಸುವುದು ಉತ್ತಮ.
  • ಹೊಟ್ಟೆ ಕೆಟ್ಟು ಹೋಗಿದ್ದರೆ ಎಳನೀರು ಕುಡಿದರೆ ಈ ಸಮಸ್ಯೆಯು ನಿವಾರಣೆಯಾಗುತ್ತದೆ.
  • ಮೊಸರಿಗೆ ಮೆಂತ್ಯೆ ಪುಡಿ ಹಾಗೂ ಜೀರಿಗೆ ಪುಡಿಯನ್ನು ಚೆನ್ನಾಗಿ ಮಿಶ್ರಣ ಮಾಡಿ ಸೇವಿಸುವುದರಿಂದ ಭೇದಿ ಸಮಸ್ಯೆಯು ನಿವಾರಣೆಯಾಗುತ್ತದೆ.
  • ಒಂದು ಲೋಟ ನೀರಿಗೆ ಒಂದು ಚಮಚ ಕೋಕಮ್ ಜ್ಯೂಸ್, ಸ್ವಲ್ಪ ಸಕ್ಕರೆ ಹಾಗೂ ಉಪ್ಪನ್ನು ಹಾಕಿ ಬೆರೆಸಿ ಕುಡಿದರೆ ಪರಿಣಾಮಕಾರಿಯಾಗಿದೆ.
  • ದಾಳಿಂಬೆಯ ಒಣ ಸಿಪ್ಪೆಯ ಹುಡಿಯನ್ನು ಮೊಸರಿನೊಂದಿಗೆ ಬೆರೆಸಿ ಸೇವಿಸುವುದು ಅತಿಸಾರಕ್ಕೆ ಉತ್ತಮವಾದ ಮನೆ ಮದ್ದಾಗಿದೆ.
  • ಒಂದು ಲೋಟ ನೀರಿಗೆ ನಿಂಬೆ ರಸವನ್ನು ಸೇರಿಸಿ ಉಪ್ಪು ಹಾಗೂ ಸಕ್ಕರೆಯನ್ನು ಮಿಶ್ರಣ ಮಾಡಿಡಿ ಕುಡಿದರೆ ಲೂಸ್ ಮೋಷನ್ ತಕ್ಷಣವೇ ನಿಲ್ಲುತ್ತದೆ.

ಈ ಮನೆ ಮದ್ದನ್ನೊಮ್ಮೆ ಪ್ರಯತ್ನಿಸುವ ಮುನ್ನ ವೈದ್ಯರ ಸಲಹೆ ಪಡೆದುಕೊಳ್ಳುವುದು ಉತ್ತಮ.

ಇನ್ನಷ್ಟು ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಫಿಲಿಪೈನ್ಸ್​ನಲ್ಲಿ ಭೂಕುಸಿತ, ಬೃಹತ್ ಕಸದ ರಾಶಿ ಮೈಮೇಲೆ ಬಿದ್ದು ಓರ್ವ ಸಾವು
ಫಿಲಿಪೈನ್ಸ್​ನಲ್ಲಿ ಭೂಕುಸಿತ, ಬೃಹತ್ ಕಸದ ರಾಶಿ ಮೈಮೇಲೆ ಬಿದ್ದು ಓರ್ವ ಸಾವು
ಹುಲಿಗೆಮ್ಮ ದೇವಿ ಹುಂಡಿಲಿ ಅಪಾರ ಆಭರಣ! 44 ದಿನಗಳಲ್ಲಿ 1.09 ಕೋಟಿ ಸಂಗ್ರಹ!
ಹುಲಿಗೆಮ್ಮ ದೇವಿ ಹುಂಡಿಲಿ ಅಪಾರ ಆಭರಣ! 44 ದಿನಗಳಲ್ಲಿ 1.09 ಕೋಟಿ ಸಂಗ್ರಹ!
ಗಿಲ್ಲಿ ಕಂಡ್ರೆ ರಕ್ಷಿತಾಗೆ ಅದೆಷ್ಟು ಪ್ರೀತಿ ನೋಡಿ; ಈ ವಿಡಿಯೋನೆ ಸಾಕ್ಷಿ
ಗಿಲ್ಲಿ ಕಂಡ್ರೆ ರಕ್ಷಿತಾಗೆ ಅದೆಷ್ಟು ಪ್ರೀತಿ ನೋಡಿ; ಈ ವಿಡಿಯೋನೆ ಸಾಕ್ಷಿ
ರೈಲಿನ ಮೇಲೆ ಹತ್ತಿ ಪವರ್​ ಲೈನ್ ಕೆಳಗೆ ಕುಳಿತ ಯುವಕ
ರೈಲಿನ ಮೇಲೆ ಹತ್ತಿ ಪವರ್​ ಲೈನ್ ಕೆಳಗೆ ಕುಳಿತ ಯುವಕ
S ಅಕ್ಷರದಿಂದ ಶುರುವಾಗುವ ಹೆಸರುಗಳಿಗೆ ಈ ವರ್ಷ ಅದೃಷ್ಟವೋ ಅದೃಷ್ಟ
S ಅಕ್ಷರದಿಂದ ಶುರುವಾಗುವ ಹೆಸರುಗಳಿಗೆ ಈ ವರ್ಷ ಅದೃಷ್ಟವೋ ಅದೃಷ್ಟ
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲ ಇರಲಿದೆ
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲ ಇರಲಿದೆ
ದಾರಿ ತಪ್ಪಿ ಊರೊಳಗೆ ಬಂದ ಜಿಂಕೆಯ ಬೆನ್ನಟ್ಟಿದ ನಾಯಿಗಳು; ಆಮೇಲೇನಾಯ್ತು?
ದಾರಿ ತಪ್ಪಿ ಊರೊಳಗೆ ಬಂದ ಜಿಂಕೆಯ ಬೆನ್ನಟ್ಟಿದ ನಾಯಿಗಳು; ಆಮೇಲೇನಾಯ್ತು?
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ