AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Health Care Tips in Kannada : ಭೇದಿ ಸಮಸ್ಯೆಗೆ ಸರಳ ಮನೆ ಮದ್ದು ಇಲ್ಲಿದೆ

ಹವಾಮಾನ ಬದಲಾಗುತ್ತಿದ್ದಂತೆ ನಾನಾ ರೀತಿಯ ಆರೋಗ್ಯ ಸಮಸ್ಯೆಗಳು ಒಕ್ಕರಿಸಿಕೊಂಡು ಬಿಡುತ್ತವೆ. ಈ ಬೇಸಿಗೆಯಲ್ಲಿ ಸುಡುವ ಸೂರ್ಯನ ಕಿರಣವನ್ನು ತ್ವಚೆಯನ್ನು ರಕ್ಷಿಸುವುದೇ ದೊಡ್ಡ ಸವಾಲಿನ ವಿಚಾರ. ಈ ಸಮಯದಲ್ಲಿ ಕೆಲವರು ಮಲಬದ್ಧತೆಯಿಂದ ಒದ್ದಾಡಿದರೆ, ಇನ್ನು ಕೆಲವರು ಅತಿಸಾರ (ಬೇಧಿ) ಸಮಸ್ಯೆಯಿಂದ ಬಳಲುತ್ತಿರುತ್ತಾರೆ. ಆಹಾರ ಹಾಗೂ ನೀರಿನಿಂದ ಸ್ವಲ್ಪ ವ್ಯತ್ಯಾಸವಾದರೂ ಕೂಡ ಈ ಸಮಸ್ಯೆಯು ಬಿಗಡಾಯಿಸುತ್ತಾ ಬಿಡುತ್ತದೆ. ಹೀಗಾದಾಗ ತಕ್ಷಣವೇ ಮನೆ ಮದ್ದಿನ ಮೂಲಕ ಪರಿಹಾರವನ್ನು ಕಂಡುಕೊಳ್ಳಬಹುದು.

Health Care Tips in Kannada : ಭೇದಿ ಸಮಸ್ಯೆಗೆ ಸರಳ ಮನೆ ಮದ್ದು ಇಲ್ಲಿದೆ
ಸಾಯಿನಂದಾ
| Edited By: |

Updated on: May 04, 2024 | 4:15 PM

Share

ಸುಡು ಬಿಸಿಲಿನ ನಡುವೆ ಈ ಹೊಟ್ಟೆ ಕೆಟ್ಟು ಹೋದರೆ ಮುಗಿದೇ ಹೋಯಿತು. ಪದೇ ಪದೇ ಶೌಚಾಲಯಕ್ಕೆ ಹೋಗಿ ಬಂದು ಸುಸ್ತೋ ಸುಸ್ತು. ಭೇದಿಯಂತಹ ಸಮಸ್ಯೆಯನ್ನು ಅನುಭವಿಸಿದವರಿಗೆ ಮಾತ್ರ ಗೊತ್ತು. ಆದರೆ, ಮನೆಯಲ್ಲೇ ಇರುವ ಕೆಲವು ಪದಾರ್ಥಗಳಿಂದ ಔಷಧ ತಯಾರಿಸಿ ಸೇವಿಸುವುದು ಉತ್ತಮ. ಒಂದು ವೇಳೆ ಸಮಸ್ಯೆಯು ಅತಿಯಾದರೆ ವೈದ್ಯರನ್ನು ಭೇಟಿಯಾಗಿ ಸೂಕ್ತ ಚಿಕಿತ್ಸೆಯನ್ನು ಪಡೆದುಕೊಳ್ಳಬೇಕು.

ಭೇದಿ ಸಮಸ್ಯೆಗೆ ಸರಳ ಮನೆ ಮದ್ದುಗಳು:

  • ಬೇಸಿಗೆಯಲ್ಲಿ ಭೇದಿಯ ಸಮಸ್ಯೆ ಕಾಣಿಸಿಕೊಂಡರೆ ಮೊಸರು ಸೇವಿಸುವುದು ಉತ್ತಮ.
  • ಹೊಟ್ಟೆ ಕೆಟ್ಟು ಹೋಗಿದ್ದರೆ ಎಳನೀರು ಕುಡಿದರೆ ಈ ಸಮಸ್ಯೆಯು ನಿವಾರಣೆಯಾಗುತ್ತದೆ.
  • ಮೊಸರಿಗೆ ಮೆಂತ್ಯೆ ಪುಡಿ ಹಾಗೂ ಜೀರಿಗೆ ಪುಡಿಯನ್ನು ಚೆನ್ನಾಗಿ ಮಿಶ್ರಣ ಮಾಡಿ ಸೇವಿಸುವುದರಿಂದ ಭೇದಿ ಸಮಸ್ಯೆಯು ನಿವಾರಣೆಯಾಗುತ್ತದೆ.
  • ಒಂದು ಲೋಟ ನೀರಿಗೆ ಒಂದು ಚಮಚ ಕೋಕಮ್ ಜ್ಯೂಸ್, ಸ್ವಲ್ಪ ಸಕ್ಕರೆ ಹಾಗೂ ಉಪ್ಪನ್ನು ಹಾಕಿ ಬೆರೆಸಿ ಕುಡಿದರೆ ಪರಿಣಾಮಕಾರಿಯಾಗಿದೆ.
  • ದಾಳಿಂಬೆಯ ಒಣ ಸಿಪ್ಪೆಯ ಹುಡಿಯನ್ನು ಮೊಸರಿನೊಂದಿಗೆ ಬೆರೆಸಿ ಸೇವಿಸುವುದು ಅತಿಸಾರಕ್ಕೆ ಉತ್ತಮವಾದ ಮನೆ ಮದ್ದಾಗಿದೆ.
  • ಒಂದು ಲೋಟ ನೀರಿಗೆ ನಿಂಬೆ ರಸವನ್ನು ಸೇರಿಸಿ ಉಪ್ಪು ಹಾಗೂ ಸಕ್ಕರೆಯನ್ನು ಮಿಶ್ರಣ ಮಾಡಿಡಿ ಕುಡಿದರೆ ಲೂಸ್ ಮೋಷನ್ ತಕ್ಷಣವೇ ನಿಲ್ಲುತ್ತದೆ.

ಈ ಮನೆ ಮದ್ದನ್ನೊಮ್ಮೆ ಪ್ರಯತ್ನಿಸುವ ಮುನ್ನ ವೈದ್ಯರ ಸಲಹೆ ಪಡೆದುಕೊಳ್ಳುವುದು ಉತ್ತಮ.

ಇನ್ನಷ್ಟು ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಸೆಪ್ಟೆಂಬರ್ 14 ರಿಂದ 20ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಸೆಪ್ಟೆಂಬರ್ 14 ರಿಂದ 20ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ವಿನಯ್ ಜತೆ ಜೋಡಿಯಾಗಿ ನಟಿಸಿ, ರಿಯಲ್ ಲೈಫ್​ನಲ್ಲಿ ಅಣ್ಣ ಎಂದು ಕರೆದಿದ್ದ ನಟಿ
ವಿನಯ್ ಜತೆ ಜೋಡಿಯಾಗಿ ನಟಿಸಿ, ರಿಯಲ್ ಲೈಫ್​ನಲ್ಲಿ ಅಣ್ಣ ಎಂದು ಕರೆದಿದ್ದ ನಟಿ
ಹಾಸನದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಅಪಘಾತ: ಗೃಹಿಣಿ ಸಾವು
ಹಾಸನದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಅಪಘಾತ: ಗೃಹಿಣಿ ಸಾವು
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಎಚ್ಚರದಿಂದಿರಿ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಎಚ್ಚರದಿಂದಿರಿ
ಓಡಿಬಂದು ನಟ ಅಜಿತ್​​ನನ್ನು ತಬ್ಬಿಕೊಂಡ ತಮಿಳುನಾಡು ಸಿಎಂ ವಿಜಯ್
ಓಡಿಬಂದು ನಟ ಅಜಿತ್​​ನನ್ನು ತಬ್ಬಿಕೊಂಡ ತಮಿಳುನಾಡು ಸಿಎಂ ವಿಜಯ್
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್