AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Health Care Tips in Kannada : ಭೇದಿ ಸಮಸ್ಯೆಗೆ ಸರಳ ಮನೆ ಮದ್ದು ಇಲ್ಲಿದೆ

ಹವಾಮಾನ ಬದಲಾಗುತ್ತಿದ್ದಂತೆ ನಾನಾ ರೀತಿಯ ಆರೋಗ್ಯ ಸಮಸ್ಯೆಗಳು ಒಕ್ಕರಿಸಿಕೊಂಡು ಬಿಡುತ್ತವೆ. ಈ ಬೇಸಿಗೆಯಲ್ಲಿ ಸುಡುವ ಸೂರ್ಯನ ಕಿರಣವನ್ನು ತ್ವಚೆಯನ್ನು ರಕ್ಷಿಸುವುದೇ ದೊಡ್ಡ ಸವಾಲಿನ ವಿಚಾರ. ಈ ಸಮಯದಲ್ಲಿ ಕೆಲವರು ಮಲಬದ್ಧತೆಯಿಂದ ಒದ್ದಾಡಿದರೆ, ಇನ್ನು ಕೆಲವರು ಅತಿಸಾರ (ಬೇಧಿ) ಸಮಸ್ಯೆಯಿಂದ ಬಳಲುತ್ತಿರುತ್ತಾರೆ. ಆಹಾರ ಹಾಗೂ ನೀರಿನಿಂದ ಸ್ವಲ್ಪ ವ್ಯತ್ಯಾಸವಾದರೂ ಕೂಡ ಈ ಸಮಸ್ಯೆಯು ಬಿಗಡಾಯಿಸುತ್ತಾ ಬಿಡುತ್ತದೆ. ಹೀಗಾದಾಗ ತಕ್ಷಣವೇ ಮನೆ ಮದ್ದಿನ ಮೂಲಕ ಪರಿಹಾರವನ್ನು ಕಂಡುಕೊಳ್ಳಬಹುದು.

Health Care Tips in Kannada : ಭೇದಿ ಸಮಸ್ಯೆಗೆ ಸರಳ ಮನೆ ಮದ್ದು ಇಲ್ಲಿದೆ
ಸಾಯಿನಂದಾ
| Updated By: ಅಕ್ಷಯ್​ ಪಲ್ಲಮಜಲು​​|

Updated on: May 04, 2024 | 4:15 PM

Share

ಸುಡು ಬಿಸಿಲಿನ ನಡುವೆ ಈ ಹೊಟ್ಟೆ ಕೆಟ್ಟು ಹೋದರೆ ಮುಗಿದೇ ಹೋಯಿತು. ಪದೇ ಪದೇ ಶೌಚಾಲಯಕ್ಕೆ ಹೋಗಿ ಬಂದು ಸುಸ್ತೋ ಸುಸ್ತು. ಭೇದಿಯಂತಹ ಸಮಸ್ಯೆಯನ್ನು ಅನುಭವಿಸಿದವರಿಗೆ ಮಾತ್ರ ಗೊತ್ತು. ಆದರೆ, ಮನೆಯಲ್ಲೇ ಇರುವ ಕೆಲವು ಪದಾರ್ಥಗಳಿಂದ ಔಷಧ ತಯಾರಿಸಿ ಸೇವಿಸುವುದು ಉತ್ತಮ. ಒಂದು ವೇಳೆ ಸಮಸ್ಯೆಯು ಅತಿಯಾದರೆ ವೈದ್ಯರನ್ನು ಭೇಟಿಯಾಗಿ ಸೂಕ್ತ ಚಿಕಿತ್ಸೆಯನ್ನು ಪಡೆದುಕೊಳ್ಳಬೇಕು.

ಭೇದಿ ಸಮಸ್ಯೆಗೆ ಸರಳ ಮನೆ ಮದ್ದುಗಳು:

  • ಬೇಸಿಗೆಯಲ್ಲಿ ಭೇದಿಯ ಸಮಸ್ಯೆ ಕಾಣಿಸಿಕೊಂಡರೆ ಮೊಸರು ಸೇವಿಸುವುದು ಉತ್ತಮ.
  • ಹೊಟ್ಟೆ ಕೆಟ್ಟು ಹೋಗಿದ್ದರೆ ಎಳನೀರು ಕುಡಿದರೆ ಈ ಸಮಸ್ಯೆಯು ನಿವಾರಣೆಯಾಗುತ್ತದೆ.
  • ಮೊಸರಿಗೆ ಮೆಂತ್ಯೆ ಪುಡಿ ಹಾಗೂ ಜೀರಿಗೆ ಪುಡಿಯನ್ನು ಚೆನ್ನಾಗಿ ಮಿಶ್ರಣ ಮಾಡಿ ಸೇವಿಸುವುದರಿಂದ ಭೇದಿ ಸಮಸ್ಯೆಯು ನಿವಾರಣೆಯಾಗುತ್ತದೆ.
  • ಒಂದು ಲೋಟ ನೀರಿಗೆ ಒಂದು ಚಮಚ ಕೋಕಮ್ ಜ್ಯೂಸ್, ಸ್ವಲ್ಪ ಸಕ್ಕರೆ ಹಾಗೂ ಉಪ್ಪನ್ನು ಹಾಕಿ ಬೆರೆಸಿ ಕುಡಿದರೆ ಪರಿಣಾಮಕಾರಿಯಾಗಿದೆ.
  • ದಾಳಿಂಬೆಯ ಒಣ ಸಿಪ್ಪೆಯ ಹುಡಿಯನ್ನು ಮೊಸರಿನೊಂದಿಗೆ ಬೆರೆಸಿ ಸೇವಿಸುವುದು ಅತಿಸಾರಕ್ಕೆ ಉತ್ತಮವಾದ ಮನೆ ಮದ್ದಾಗಿದೆ.
  • ಒಂದು ಲೋಟ ನೀರಿಗೆ ನಿಂಬೆ ರಸವನ್ನು ಸೇರಿಸಿ ಉಪ್ಪು ಹಾಗೂ ಸಕ್ಕರೆಯನ್ನು ಮಿಶ್ರಣ ಮಾಡಿಡಿ ಕುಡಿದರೆ ಲೂಸ್ ಮೋಷನ್ ತಕ್ಷಣವೇ ನಿಲ್ಲುತ್ತದೆ.

ಈ ಮನೆ ಮದ್ದನ್ನೊಮ್ಮೆ ಪ್ರಯತ್ನಿಸುವ ಮುನ್ನ ವೈದ್ಯರ ಸಲಹೆ ಪಡೆದುಕೊಳ್ಳುವುದು ಉತ್ತಮ.

ಇನ್ನಷ್ಟು ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ