AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸ್ವಾತಿ ಮಳೆಯ ಔಷಧೀಯ ಗುಣಗಳು ತಿಳಿದರೆ ಆಶ್ಚರ್ಯ ಪಡುತ್ತೀರಿ

ಮಳೆಗಾಲದಲ್ಲಿ ಅಕ್ಟೋಬರ್ ಕೊನೆಯ ವಾರದಿಂದ ನವೆಂಬರ್ ಮೊದಲನೆಯ ವಾರದಲ್ಲಿ (ಅ. 26 ರಿಂದ ನ. 6) ಬರುವ ಮಳೆಯನ್ನು 'ಸ್ವಾತಿ ಮಳೆ' ಎಂದು ಕರೆಯಲಾಗುತ್ತದೆ. ಪ್ರತಿವರ್ಷ ಈ ಅವಧಿಯಲ್ಲಿ ಅಂದರೆ ಮಳೆಗಾಲದ ಕೊನೆಯಲ್ಲಿ ಬರುವ ಈ ಮಳೆ ಸರಿಯಾಗಿ ಬಂದರೆ ಬೇಸಗೆಯಲ್ಲಿ ನೀರಿನ ಬರ ಬರುವುದಿಲ್ಲ ಎಂಬ ನಂಬಿಕೆ ಇದೆ. ಅದರಲ್ಲಿಯೂ ನಮ್ಮ ಕರ್ನಾಟಕದ ಹಲವು ಭಾಗಗಳಲ್ಲಿ 'ಸ್ವಾತಿ ಮಳೆ' ಬರುವುದಕ್ಕೆ ಕಾಯುತ್ತಿರುತ್ತಾರೆ. ಇದರಲ್ಲಿ ಏನಿದೆ ಅಂತಹ ಮಹತ್ವ? ಯಾಕಾಗಿ ಶೇಖರಿಸಿ ಇಟ್ಟುಕೊಳ್ಳಬೇಕು ಎಂಬ ಅನುಮಾನ ಮೂಡಬಹುದು. ಈ ಮಳೆಯಲ್ಲಿ ಅನೇಕ ರೀತಿಯ ಔಷಧೀಯ ಗುಣವಿರುತ್ತದೆ ಎಂದು ಹೇಳಲಾಗುತ್ತದೆ. ಹಾಗಾದರೆ ಇದನ್ನು ಬಳಸುವುದು ಹೇಗೆ? ಇದರಿಂದ ಸಿಗುವ ಮತ್ತಷ್ಟು ಪ್ರಯೋಜನಗಳು ಇಲ್ಲಿದೆ.

ಸ್ವಾತಿ ಮಳೆಯ ಔಷಧೀಯ ಗುಣಗಳು ತಿಳಿದರೆ ಆಶ್ಚರ್ಯ ಪಡುತ್ತೀರಿ
ಸಾಂದರ್ಭಿಕ ಚಿತ್ರ
ಪ್ರೀತಿ ಭಟ್​, ಗುಣವಂತೆ
| Edited By: |

Updated on: Nov 05, 2024 | 10:00 AM

Share

ಮಳೆಗಾಲ ಬರುತ್ತದೆ ಹೋಗುತ್ತದೆ ಬಳಿಕ ಮತ್ತೊಂದು ಕಾಲ ಆರಂಭವಾಗುತ್ತದೆ. ಆದರೆ ಮಳೆಗಾಲದಲ್ಲಿ ಅಕ್ಟೋಬರ್ ಕೊನೆಯ ವಾರದಿಂದ ನವೆಂಬರ್ ಮೊದಲನೆಯ ವಾರದಲ್ಲಿ (ಅ. 26 ರಿಂದ ನ. 6) ಬರುವ ಮಳೆಯನ್ನು ‘ಸ್ವಾತಿ ಮಳೆ’ ಎಂದು ಕರೆಯಲಾಗುತ್ತದೆ. ಪ್ರತಿವರ್ಷ ಈ ಅವಧಿಯಲ್ಲಿ ಅಂದರೆ ಮಳೆಗಾಲದ ಕೊನೆಯಲ್ಲಿ ಬರುವ ಈ ಮಳೆ ಸರಿಯಾಗಿ ಬಂದರೆ ಬೇಸಗೆಯಲ್ಲಿ ನೀರಿನ ಬರ ಬರುವುದಿಲ್ಲ ಎಂಬ ನಂಬಿಕೆ ಇದೆ. ಅದರಲ್ಲಿಯೂ ನಮ್ಮ ಕರ್ನಾಟಕದ ಹಲವು ಭಾಗಗಳಲ್ಲಿ ‘ಸ್ವಾತಿ ಮಳೆ’ ಬರುವುದಕ್ಕೆ ಕಾಯುತ್ತಿರುತ್ತಾರೆ. ಇದರಲ್ಲಿ ಏನಿದೆ ಅಂತಹ ಮಹತ್ವ? ಯಾಕಾಗಿ ಶೇಖರಿಸಿ ಇಟ್ಟುಕೊಳ್ಳಬೇಕು ಎಂಬ ಅನುಮಾನ ಮೂಡಬಹುದು. ಈ ಮಳೆಯಲ್ಲಿ ಅನೇಕ ರೀತಿಯ ಔಷಧೀಯ ಗುಣವಿರುತ್ತದೆ ಎಂದು ಹೇಳಲಾಗುತ್ತದೆ. ಹಾಗಾದರೆ ಇದನ್ನು ಬಳಸುವುದು ಹೇಗೆ? ಇದರಿಂದ ಸಿಗುವ ಮತ್ತಷ್ಟು ಪ್ರಯೋಜನಗಳು ಇಲ್ಲಿದೆ.

ಹಾಲಿಗೆ ಹೆಪ್ಪು ಹಾಕುವ ಅಪರೂಪದ ಸಂಪ್ರದಾಯ;

ಸ್ವಾತಿ ಮಳೆಯ ಮಹತ್ವದ ಬಗ್ಗೆ ಅಜಯ್ ಕುಮಾರ್ ಶರ್ಮಾ ಎಂಬುವರು ತಮ್ಮ ಫೇಸ್ ಬುಕ್ ಖಾತೆಯಲ್ಲಿ ಕೆಲವು ವಿಚಾರಗಳನ್ನು ಹಂಚಿಕೊಂಡಿದ್ದು, ಅವರು ಹೇಳಿರುವ ಪ್ರಕಾರ, ಅನೇಕ ಔಷಧೀಯ ಗುಣವುಳ್ಳ ಸ್ವಾತಿ ಮಳೆಯನ್ನು ನೀರಿನ ಪಾತ್ರೆಯಲ್ಲಿ ಹಿಡಿದು ಬಳಿಕ ಗಾಜಿನ ಭರಣಿ, ಬಾಟಲಿಗಳಲ್ಲಿ ಸಂಗ್ರಹಿಸಿಟ್ಟು ಕೊಂಡರೆ ಅದನ್ನು ವರ್ಷದ ವರೆಗೂ ಬಳಸಲು ಯೋಗ್ಯವಾಗಿರುತ್ತದೆ. ಈ ಮಳೆಯ ನೀರನ್ನು ಸಂಗ್ರಹಿಸಿ ಅದರಿಂದ ಹಾಲಿಗೆ ಹೆಪ್ಪು ಹಾಕುವ ಅಪರೂಪದ ಸಂಪ್ರದಾಯವೊಂದು ಹಿಂದಿನಿಂದಲೂ ನಡೆದುಕೊಂಡು ಬಂದಿದೆ. ಇದರಿಂದಾಗಿ ಹಾಲು ಹೆಪ್ಪಾಗುವ ಜೈವಿಕ ಕ್ರಿಯೆ ವರ್ಷಕ್ಕೊಮ್ಮೆ ಹೊಸದಾಗಿ ಪ್ರಾರಂಭಗೊಂಡು ಗುಣಮಟ್ಟದ ಮೊಸರು ಲಭ್ಯವಾಗುತ್ತದೆ.

ಇದನ್ನೂ ಓದಿ: ಹೃದಯಾಘಾತದ ಲಕ್ಷಣಗಳನ್ನು 30 ದಿನಗಳ ಮುಂಚಿತವಾಗಿ ಪತ್ತೆಹಚ್ಚಬಹುದು

ಕಣ್ಣಿಗೆ ದಿವ್ಯೌಷಧ

ಸ್ವಾತಿ ಮಳೆಯ ನೀರನ್ನು ಶುದ್ಧವಾದ ಪಾತ್ರೆಯಲ್ಲಿ ನೇರವಾಗಿ ಹಿಡಿದು, ಸ್ವಚ್ಛವಾದ ಬಾಟಲಿಯಲ್ಲಿ ಸಂಗ್ರಹಿಸಿ ಇಟ್ಟುಕೊಳ್ಳಬೇಕು. ಈ ನೀರು ಒಂದು ರೀತಿಯಲ್ಲಿ ಐ’ಡ್ರಾಪ್ ಆಗಿ ಕಾರ್ಯ ನಿರ್ವಹಿಸುತ್ತದೆ. ಇದು ಕಣ್ಣು ಉರಿ, ಕಣ್ಣುಗಳು ಮಂಜಾಗುವುದು, ಟಿ ವಿ- ಮೊಬೈಲ್ ನೋಡಿ ಬರುವ ಕಣ್ಣು ನೋವಿಗೆ ಒಂದೆರಡು ಹನಿ ಬಿಟ್ಟು ಕೊಂಡರೆ ಬಹಳಷ್ಟು ಶಮನಕಾರಿಯಾಗಿದೆ. ಹಾಗಾಗಿ ಇದನ್ನು ಕಣ್ಣಿಗೆ ದಿವ್ಯೌಷಧ ಎನ್ನಬಹುದು. ಈ ಸ್ವಾತಿ ಮಳೆಯ ನೀರು ಕೆಡದಂತೆ ದೀರ್ಘ ಕಾಲ ಇಡಬಹುದು. ಆದರೆ ನೀರನ್ನು ನೇರವಾಗಿ ಶುದ್ಧವಾಗಿ ಸಂಗ್ರಹಿಸುವುದು ಮುಖ್ಯವಾಗುತ್ತದೆ.

ಇನ್ನೊಂದು ಪ್ರಚಲಿತ ಪದ್ಧತಿ ಎಂದರೆ ಸ್ವಾತಿ ನಕ್ಷತ್ರದ ಬಿಸಿಲಿಗೆ ಮನೆಯ ಹೆಣ್ಣುಮಕ್ಕಳು ತಮ್ಮ ರೇಷ್ಮೆ ಸೀರೆಯನ್ನು ಒಮ್ಮೆ ಬಿಸಿಲಿಗೆ ಹಾಕಿ ತೆಗೆಯುತ್ತಾರೆ. ಈ ಸ್ವಾತಿ ಬಿಸಿಲು ನಿಮ್ಮ ಸೀರೆಗಳು ಹುಳಹುಪ್ಟಟೆ ಹಿಡಿದು ಹಾಳಾಗುವುದನ್ನು ತಪ್ಪಿಸುತ್ತದೆ. ನೀವೂ ಸಹ ನವೆಂಬರ್ 6 ರ ಒಳಗೆ ಬೀಳುವ ಮಳೆಯನ್ನು ಹಿಡಿದು, ಸಂಗ್ರಹಿಸಿಟ್ಟುಕೊಂಡು ಇದರ ಉಪಯೋಗ ಪಡೆದುಕೊಳ್ಳಬಹುದು.

ಇನ್ನಷ್ಟು ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು