AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸ್ವಾತಿ ಮಳೆಯ ಔಷಧೀಯ ಗುಣಗಳು ತಿಳಿದರೆ ಆಶ್ಚರ್ಯ ಪಡುತ್ತೀರಿ

ಮಳೆಗಾಲದಲ್ಲಿ ಅಕ್ಟೋಬರ್ ಕೊನೆಯ ವಾರದಿಂದ ನವೆಂಬರ್ ಮೊದಲನೆಯ ವಾರದಲ್ಲಿ (ಅ. 26 ರಿಂದ ನ. 6) ಬರುವ ಮಳೆಯನ್ನು 'ಸ್ವಾತಿ ಮಳೆ' ಎಂದು ಕರೆಯಲಾಗುತ್ತದೆ. ಪ್ರತಿವರ್ಷ ಈ ಅವಧಿಯಲ್ಲಿ ಅಂದರೆ ಮಳೆಗಾಲದ ಕೊನೆಯಲ್ಲಿ ಬರುವ ಈ ಮಳೆ ಸರಿಯಾಗಿ ಬಂದರೆ ಬೇಸಗೆಯಲ್ಲಿ ನೀರಿನ ಬರ ಬರುವುದಿಲ್ಲ ಎಂಬ ನಂಬಿಕೆ ಇದೆ. ಅದರಲ್ಲಿಯೂ ನಮ್ಮ ಕರ್ನಾಟಕದ ಹಲವು ಭಾಗಗಳಲ್ಲಿ 'ಸ್ವಾತಿ ಮಳೆ' ಬರುವುದಕ್ಕೆ ಕಾಯುತ್ತಿರುತ್ತಾರೆ. ಇದರಲ್ಲಿ ಏನಿದೆ ಅಂತಹ ಮಹತ್ವ? ಯಾಕಾಗಿ ಶೇಖರಿಸಿ ಇಟ್ಟುಕೊಳ್ಳಬೇಕು ಎಂಬ ಅನುಮಾನ ಮೂಡಬಹುದು. ಈ ಮಳೆಯಲ್ಲಿ ಅನೇಕ ರೀತಿಯ ಔಷಧೀಯ ಗುಣವಿರುತ್ತದೆ ಎಂದು ಹೇಳಲಾಗುತ್ತದೆ. ಹಾಗಾದರೆ ಇದನ್ನು ಬಳಸುವುದು ಹೇಗೆ? ಇದರಿಂದ ಸಿಗುವ ಮತ್ತಷ್ಟು ಪ್ರಯೋಜನಗಳು ಇಲ್ಲಿದೆ.

ಸ್ವಾತಿ ಮಳೆಯ ಔಷಧೀಯ ಗುಣಗಳು ತಿಳಿದರೆ ಆಶ್ಚರ್ಯ ಪಡುತ್ತೀರಿ
ಸಾಂದರ್ಭಿಕ ಚಿತ್ರ
ಪ್ರೀತಿ ಭಟ್​, ಗುಣವಂತೆ
| Edited By: |

Updated on: Nov 05, 2024 | 10:00 AM

Share

ಮಳೆಗಾಲ ಬರುತ್ತದೆ ಹೋಗುತ್ತದೆ ಬಳಿಕ ಮತ್ತೊಂದು ಕಾಲ ಆರಂಭವಾಗುತ್ತದೆ. ಆದರೆ ಮಳೆಗಾಲದಲ್ಲಿ ಅಕ್ಟೋಬರ್ ಕೊನೆಯ ವಾರದಿಂದ ನವೆಂಬರ್ ಮೊದಲನೆಯ ವಾರದಲ್ಲಿ (ಅ. 26 ರಿಂದ ನ. 6) ಬರುವ ಮಳೆಯನ್ನು ‘ಸ್ವಾತಿ ಮಳೆ’ ಎಂದು ಕರೆಯಲಾಗುತ್ತದೆ. ಪ್ರತಿವರ್ಷ ಈ ಅವಧಿಯಲ್ಲಿ ಅಂದರೆ ಮಳೆಗಾಲದ ಕೊನೆಯಲ್ಲಿ ಬರುವ ಈ ಮಳೆ ಸರಿಯಾಗಿ ಬಂದರೆ ಬೇಸಗೆಯಲ್ಲಿ ನೀರಿನ ಬರ ಬರುವುದಿಲ್ಲ ಎಂಬ ನಂಬಿಕೆ ಇದೆ. ಅದರಲ್ಲಿಯೂ ನಮ್ಮ ಕರ್ನಾಟಕದ ಹಲವು ಭಾಗಗಳಲ್ಲಿ ‘ಸ್ವಾತಿ ಮಳೆ’ ಬರುವುದಕ್ಕೆ ಕಾಯುತ್ತಿರುತ್ತಾರೆ. ಇದರಲ್ಲಿ ಏನಿದೆ ಅಂತಹ ಮಹತ್ವ? ಯಾಕಾಗಿ ಶೇಖರಿಸಿ ಇಟ್ಟುಕೊಳ್ಳಬೇಕು ಎಂಬ ಅನುಮಾನ ಮೂಡಬಹುದು. ಈ ಮಳೆಯಲ್ಲಿ ಅನೇಕ ರೀತಿಯ ಔಷಧೀಯ ಗುಣವಿರುತ್ತದೆ ಎಂದು ಹೇಳಲಾಗುತ್ತದೆ. ಹಾಗಾದರೆ ಇದನ್ನು ಬಳಸುವುದು ಹೇಗೆ? ಇದರಿಂದ ಸಿಗುವ ಮತ್ತಷ್ಟು ಪ್ರಯೋಜನಗಳು ಇಲ್ಲಿದೆ.

ಹಾಲಿಗೆ ಹೆಪ್ಪು ಹಾಕುವ ಅಪರೂಪದ ಸಂಪ್ರದಾಯ;

ಸ್ವಾತಿ ಮಳೆಯ ಮಹತ್ವದ ಬಗ್ಗೆ ಅಜಯ್ ಕುಮಾರ್ ಶರ್ಮಾ ಎಂಬುವರು ತಮ್ಮ ಫೇಸ್ ಬುಕ್ ಖಾತೆಯಲ್ಲಿ ಕೆಲವು ವಿಚಾರಗಳನ್ನು ಹಂಚಿಕೊಂಡಿದ್ದು, ಅವರು ಹೇಳಿರುವ ಪ್ರಕಾರ, ಅನೇಕ ಔಷಧೀಯ ಗುಣವುಳ್ಳ ಸ್ವಾತಿ ಮಳೆಯನ್ನು ನೀರಿನ ಪಾತ್ರೆಯಲ್ಲಿ ಹಿಡಿದು ಬಳಿಕ ಗಾಜಿನ ಭರಣಿ, ಬಾಟಲಿಗಳಲ್ಲಿ ಸಂಗ್ರಹಿಸಿಟ್ಟು ಕೊಂಡರೆ ಅದನ್ನು ವರ್ಷದ ವರೆಗೂ ಬಳಸಲು ಯೋಗ್ಯವಾಗಿರುತ್ತದೆ. ಈ ಮಳೆಯ ನೀರನ್ನು ಸಂಗ್ರಹಿಸಿ ಅದರಿಂದ ಹಾಲಿಗೆ ಹೆಪ್ಪು ಹಾಕುವ ಅಪರೂಪದ ಸಂಪ್ರದಾಯವೊಂದು ಹಿಂದಿನಿಂದಲೂ ನಡೆದುಕೊಂಡು ಬಂದಿದೆ. ಇದರಿಂದಾಗಿ ಹಾಲು ಹೆಪ್ಪಾಗುವ ಜೈವಿಕ ಕ್ರಿಯೆ ವರ್ಷಕ್ಕೊಮ್ಮೆ ಹೊಸದಾಗಿ ಪ್ರಾರಂಭಗೊಂಡು ಗುಣಮಟ್ಟದ ಮೊಸರು ಲಭ್ಯವಾಗುತ್ತದೆ.

ಇದನ್ನೂ ಓದಿ: ಹೃದಯಾಘಾತದ ಲಕ್ಷಣಗಳನ್ನು 30 ದಿನಗಳ ಮುಂಚಿತವಾಗಿ ಪತ್ತೆಹಚ್ಚಬಹುದು

ಕಣ್ಣಿಗೆ ದಿವ್ಯೌಷಧ

ಸ್ವಾತಿ ಮಳೆಯ ನೀರನ್ನು ಶುದ್ಧವಾದ ಪಾತ್ರೆಯಲ್ಲಿ ನೇರವಾಗಿ ಹಿಡಿದು, ಸ್ವಚ್ಛವಾದ ಬಾಟಲಿಯಲ್ಲಿ ಸಂಗ್ರಹಿಸಿ ಇಟ್ಟುಕೊಳ್ಳಬೇಕು. ಈ ನೀರು ಒಂದು ರೀತಿಯಲ್ಲಿ ಐ’ಡ್ರಾಪ್ ಆಗಿ ಕಾರ್ಯ ನಿರ್ವಹಿಸುತ್ತದೆ. ಇದು ಕಣ್ಣು ಉರಿ, ಕಣ್ಣುಗಳು ಮಂಜಾಗುವುದು, ಟಿ ವಿ- ಮೊಬೈಲ್ ನೋಡಿ ಬರುವ ಕಣ್ಣು ನೋವಿಗೆ ಒಂದೆರಡು ಹನಿ ಬಿಟ್ಟು ಕೊಂಡರೆ ಬಹಳಷ್ಟು ಶಮನಕಾರಿಯಾಗಿದೆ. ಹಾಗಾಗಿ ಇದನ್ನು ಕಣ್ಣಿಗೆ ದಿವ್ಯೌಷಧ ಎನ್ನಬಹುದು. ಈ ಸ್ವಾತಿ ಮಳೆಯ ನೀರು ಕೆಡದಂತೆ ದೀರ್ಘ ಕಾಲ ಇಡಬಹುದು. ಆದರೆ ನೀರನ್ನು ನೇರವಾಗಿ ಶುದ್ಧವಾಗಿ ಸಂಗ್ರಹಿಸುವುದು ಮುಖ್ಯವಾಗುತ್ತದೆ.

ಇನ್ನೊಂದು ಪ್ರಚಲಿತ ಪದ್ಧತಿ ಎಂದರೆ ಸ್ವಾತಿ ನಕ್ಷತ್ರದ ಬಿಸಿಲಿಗೆ ಮನೆಯ ಹೆಣ್ಣುಮಕ್ಕಳು ತಮ್ಮ ರೇಷ್ಮೆ ಸೀರೆಯನ್ನು ಒಮ್ಮೆ ಬಿಸಿಲಿಗೆ ಹಾಕಿ ತೆಗೆಯುತ್ತಾರೆ. ಈ ಸ್ವಾತಿ ಬಿಸಿಲು ನಿಮ್ಮ ಸೀರೆಗಳು ಹುಳಹುಪ್ಟಟೆ ಹಿಡಿದು ಹಾಳಾಗುವುದನ್ನು ತಪ್ಪಿಸುತ್ತದೆ. ನೀವೂ ಸಹ ನವೆಂಬರ್ 6 ರ ಒಳಗೆ ಬೀಳುವ ಮಳೆಯನ್ನು ಹಿಡಿದು, ಸಂಗ್ರಹಿಸಿಟ್ಟುಕೊಂಡು ಇದರ ಉಪಯೋಗ ಪಡೆದುಕೊಳ್ಳಬಹುದು.

ಇನ್ನಷ್ಟು ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ