AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Home Remedies: ಆ್ಯಸಿಡಿಟಿಗೆ ರಾಮಬಾಣ ಈ ಮನೆಮದ್ದು

ಆಹಾರಗಳನ್ನು ತಿಂದಮೇಲೆ ಹೆಚ್ಚಿನವರಿಗೆ ಆಸಿಡಿಟಿ ಇದ್ದೇ ಇರುತ್ತದೆ. ಅನೇಕ ಜನರು ಈ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲು ವೈದ್ಯರ ಬಳಿ ಹೋಗುತ್ತಾರೆ. ಆದರೆ ಇದಕ್ಕೆ ಮನೆಯಲ್ಲಿಯೇ ಪರಿಹಾರವಿದೆ.

Home Remedies: ಆ್ಯಸಿಡಿಟಿಗೆ ರಾಮಬಾಣ ಈ ಮನೆಮದ್ದು
ಸಾಂದರ್ಭಿಕ ಚಿತ್ರ
TV9 Web
| Edited By: |

Updated on:Mar 20, 2023 | 4:17 PM

Share

ಇಂದಿನ ದಿನಗಳಲ್ಲಿ ಅನೇಕ ಜನರು ಎದುರಿಸುತ್ತಿರುವ ಸಮಸ್ಯೆಯೆಂದರೆ ಆ್ಯಸಿಡಿಟಿ. ಇದರಿಂದ ಉಂಟಾಗುವ ಎದೆಯುರಿ, ಅಜೀರ್ಣ, ಹೊಟ್ಟೆ ಉಬ್ಬುವುದು, ವಾಕರಿಕೆ ಬಂದಂತಾಗುವುದು, ಈ ರೀತಿಯ ಲಕ್ಷಣಗಳು ಉಂಟಾಗುತ್ತದೆ. ಅನೇಕ ಜನರು ಈ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲು ವೈದ್ಯರ ಬಳಿ ಹೋಗುತ್ತಾರೆ. ಆದರೆ ಇದಕ್ಕೆ ಮನೆಯಲ್ಲಿಯೇ ಪರಿಹಾರವಿದೆ. ಈ 9 ಪರಿಣಾಮಕಾರಿ ಮನೆಮದ್ದುಗಳ ಮೂಲಕ ಆ್ಯಸಿಡಿಟಿಯನ್ನು ಕಡಿಮೆ ಮಾಡಬಹುದು.

ಶುಂಠಿ: ಶುಂಠಿಯು ಉರಿಯೂತ ವಿರೋಧಿ ಗುಣಲಕ್ಷಣವನ್ನು ಹೊಂದಿದೆ. ಇದು ಆಮ್ಲೀಯತೆಯಿಂದ ಉಂಟಾಗುವ ಅಸ್ವಸ್ಥತೆಯನ್ನು ನಿವಾರಿಸಲು ಸಹಾಯ ಮಾಡುತ್ತದೆ. ನೀವು ಒಂದು ಸಣ್ಣ ಶುಂಠಿಯನ್ನು ಅಗಿಯಬಹುದು ಅಥವಾ ಚಹಾಕ್ಕೆ ಸೇರಿಸಿ ಕುಡಿಯಬಹುದು.

ಅಲೋವೆರಾ ಜ್ಯೂಸ್: ಅಲೋವೆರಾ ಜ್ಯೂಸ್ ಆ್ಯಸಿಡಿಟಿಯಿಂದ ಉಂಟಾಗುವ ಊರಿಯೂತ ಮತ್ತು ಕಿರಿಕಿರಿಯನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಊಟಕ್ಕೆ 20 ನಿಮಿಷಗಳ ಮೊದಲು 1/4 ಕಪ್ ಅಲೋವೆರಾ ಜ್ಯೂಸ್ ಕುಡಿಯಿರಿ.

ಬಾಳೆಹಣ್ಣು: ಬಾಳೆಹಣ್ಣು ದೇಹದ ಮೇಲೆ ನೈಸರ್ಗಿಕ ಆಂಟಿಸಿಡ್ ಪರಿಣಾಮವನ್ನು ಒದಗಿಸುತ್ತದೆ. ಇದು ಆಮ್ಲೀಯತೆಯನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಆ್ಯಸಿಡಿಟಿಯಿಂದ ತ್ವರಿತ ಪರಿಹಾರವನ್ನು ಪಡೆಯಲು ಬಾಳೆಹಣ್ಣು ತಿನ್ನಿರಿ ಅಥವಾ ಬಾಳೆಹಣ್ಣು ಸ್ಮೂಥಿ ಕುಡಿಯಿರಿ.

ಸೋಂಪು ಕಾಳು: ಸೋಂಪು ಅನೆಥೋಲ್ ಎಂಬ ಸಂಯುಕ್ತವನ್ನು ಹೊಂದಿದೆ. ಇದು ಉರಿಯೂತವನ್ನು ಕಡಿಮೆ ಮಾಡಲು ಮತ್ತು ಹೊಟ್ಟೆಯಲ್ಲಿ ಉಂಟಾಗುವ ಆ್ಯಸಿಡಿಟಿಯನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಊಟದ ನಂತರ ಸ್ವಲ್ಪ ಸೋಂಪುಕಾಳುಗಳನ್ನು ಅಗಿಯಿರಿ.

ತೆಂಗಿನ ನೀರು: ತೆಂಗಿನ ನೀರು ನೈಸರ್ಗಿಕ ಶೀತಕವಾಗಿದೆ ಮತ್ತು ಇದು ಆಮ್ಲೀಯತೆಯನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಉತ್ತಮ ಫಲಿತಾಂಶಕ್ಕಾಗಿ ದಿನಕ್ಕೆ ಎರಡು ಬಾರಿ ಒಂದು ಲೋಟ ತೆಂಗಿನ ನೀರು ಕುಡಿಯಿರಿ.

ಜೀರಿಗೆ: ಜೀರಿಗೆಯು ಹೊಟ್ಟೆಯುರಿಯನ್ನು ಶಮನಗೊಳಿಸಲು ಮತ್ತು ಆಮ್ಲೀಯತೆಯನ್ನು ನಿವಾರಿಸಲು ಸಹಾಯ ಮಾಡುವ ಗುಣಗಳನ್ನು ಹೊಂದಿದೆ. ನಿಮ್ಮ ಆಹಾರಗಳಲ್ಲಿ ಜೀರಿಗೆಯನ್ನು ಸೇರಿಸಬಹುದು ಅಥವಾ ಜೀರಿಗೆ ಚಹಾವನ್ನು ಕುಡಿಯಬಹುದು.

ಇದನ್ನೂ ಓದಿ: Home Remedies For Bloating: ಊಟದ ನಂತರ ಹೊಟ್ಟೆ ಉಬ್ಬುತ್ತದೆಯೇ? ಈ ಸಮಸ್ಯೆಗೆ ಇಲ್ಲಿದೆ 5 ಮನೆಮದ್ದು

ಆಪಲ್ ಸೈಡರ್ ವಿನೆಗರ್: ಆಪಲ್ ಸೈಡರ್ ವಿನೆಗರ್ ಆಮ್ಲೀಯವಾಗಿದ್ದರೂ, ಹೊಟ್ಟೆಯ ಪಿಹೆಚ್ ಮಟ್ಟವನ್ನು ಸಮತೋಲನಗೊಳಿಸಲು ಮತ್ತು ಆಮ್ಲೀಯತೆಯನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಇಂದು ಚಮಚ ಆಪಲ್ ಸೈಡರ್ ವಿನೆಗರ್‌ನ್ನು ಒಂದು ಲೋಟ ನೀರಿನಲ್ಲಿ ಬೆರಿಸಿ ಊಟಕ್ಕೆ ಮೊದಲು ಕುಡಿಯಿರಿ.

ಬಾದಾಮಿ: ಬಾದಾಮಿಯು ಕ್ಯಾಲ್ಸಿಯಂನ ಉತ್ತಮ ಮೂಲವಾಗಿದೆ. ಇದು ಹೊಟ್ಟೆಯ ಆಮ್ಲವನ್ನು ತಟಸ್ಥಗೊಳಿಸಲು ಸಹಾಯ ಮಾಡುತ್ತದೆ. ಕೆಲವು ಬಾದಾಮಿಗಳನ್ನು ರಾತ್ರಿಯಿಡಿ ನೆನೆಸಿ ಮತ್ತು ಬೆಳಗ್ಗೆ ಅವುಗಳನ್ನು ತಿನ್ನಿರಿ.

ಅರಶಿನ: ಅರಶಿನವು ಉರಿಯೂತ ವಿರೋಧಿ ಗುಣಲಕ್ಷಣವನ್ನು ಹೊಂದಿದೆ. ಇದು ಆಮ್ಲೀಯತೆಯನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ನೀವು ತಯಾರಿಸುವ ಆಹಾರಕ್ಕೆ ಅರಶಿನವನ್ನು ಸೇರಿಸಿ ಅಥವಾ ಅರಶಿನ ಚಹಾವನ್ನು ಕುಡಿಯಿರಿ.

Published On - 4:17 pm, Mon, 20 March 23

Follow Us
ರೌಡಿಶೀಟರ್ ಬರ್ತ್‌ಡೇ ಪಾರ್ಟಿಯಲ್ಲಿ ಬಿಜೆಪಿ ಶಾಸಕ ಭಾಗಿ
ರೌಡಿಶೀಟರ್ ಬರ್ತ್‌ಡೇ ಪಾರ್ಟಿಯಲ್ಲಿ ಬಿಜೆಪಿ ಶಾಸಕ ಭಾಗಿ
ಲಿಂಗನಮಕ್ಕಿ ಡ್ಯಾಮ್ ಹಿನ್ನೀರು ಇಳಿಕೆ: ನಿಂತಿದ್ದ ಲಾಂಚ್ ಮತ್ತೆ ಶುರು
ಲಿಂಗನಮಕ್ಕಿ ಡ್ಯಾಮ್ ಹಿನ್ನೀರು ಇಳಿಕೆ: ನಿಂತಿದ್ದ ಲಾಂಚ್ ಮತ್ತೆ ಶುರು
ಪೈಪ್ ಲೈನ್ ಕಾಮಗಾರಿ: ಗುಂಡಿಗೆ ಸಿಲುಕಿದ BMTC ಬಸ್, ಸಂಚಾರಕ್ಕೆ ಅಡ್ಡಿ
ಪೈಪ್ ಲೈನ್ ಕಾಮಗಾರಿ: ಗುಂಡಿಗೆ ಸಿಲುಕಿದ BMTC ಬಸ್, ಸಂಚಾರಕ್ಕೆ ಅಡ್ಡಿ
ಒಮೈದಿಯಾ ಏರ್​ಪೋರ್ಟ್​ ಮೇಲೆ ಅಮೆರಿಕ ಬಾಂಬ್ ದಾಳಿ
ಒಮೈದಿಯಾ ಏರ್​ಪೋರ್ಟ್​ ಮೇಲೆ ಅಮೆರಿಕ ಬಾಂಬ್ ದಾಳಿ
Dudhsagar Falls: ಹಾಲಿನ ಕಡಲಿನಂತೆ ಹರಿಯುತ್ತಿದೆ ದೂದ್‌ ಸಾಗರ್​!
Dudhsagar Falls: ಹಾಲಿನ ಕಡಲಿನಂತೆ ಹರಿಯುತ್ತಿದೆ ದೂದ್‌ ಸಾಗರ್​!
ಸ್ಕೂಟಿಯಲ್ಲಿ ಗಾಂಜಾ ಮಾರಲು ಬಂದು ಪೊಲೀಸರ ಕೈಗೆ ಸಿಕ್ಕಿಬಿದ್ದ ಮಹಿಳೆ
ಸ್ಕೂಟಿಯಲ್ಲಿ ಗಾಂಜಾ ಮಾರಲು ಬಂದು ಪೊಲೀಸರ ಕೈಗೆ ಸಿಕ್ಕಿಬಿದ್ದ ಮಹಿಳೆ
ಮಿಥುನ ರಾಶಿಯಲ್ಲಿ ಸೂರ್ಯ, ಚಂದ್ರ ಸಂಚಾರ: ಇಂದಿನ ರಾಶಿ ಭವಿಷ್ಯ ಹೇಗಿದೆ ನೋಡಿ
ಮಿಥುನ ರಾಶಿಯಲ್ಲಿ ಸೂರ್ಯ, ಚಂದ್ರ ಸಂಚಾರ: ಇಂದಿನ ರಾಶಿ ಭವಿಷ್ಯ ಹೇಗಿದೆ ನೋಡಿ
ಎಸ್ ಜಾನಕಿ ಅವರೊಟ್ಟಿಗಿನ ಅನುಬಂಧ ನೆನೆದ ಹಿರಿಯ ನಟ ಶ್ರೀನಾಥ್
ಎಸ್ ಜಾನಕಿ ಅವರೊಟ್ಟಿಗಿನ ಅನುಬಂಧ ನೆನೆದ ಹಿರಿಯ ನಟ ಶ್ರೀನಾಥ್
ಬೆಳೆ ಹಾನಿ ಪರಿಹಾರದ ಬಗ್ಗೆ ಸರ್ಕಾರ ನಿರ್ಧಾರ ಮಾಡುತ್ತದೆ: ಸತೀಶ್ ಜಾರಕಿಹೊಳಿ
ಬೆಳೆ ಹಾನಿ ಪರಿಹಾರದ ಬಗ್ಗೆ ಸರ್ಕಾರ ನಿರ್ಧಾರ ಮಾಡುತ್ತದೆ: ಸತೀಶ್ ಜಾರಕಿಹೊಳಿ
ಹೊಳೆ ದಾಟೋಕೆ ದೊಣ್ಣೆ‌ನಾಯಕನ ಅಪ್ಪಣೆ ಬೇಕೆ: ಖರ್ಗೆಗೆ ಜೋಶಿ ತಿರುಗೇಟು
ಹೊಳೆ ದಾಟೋಕೆ ದೊಣ್ಣೆ‌ನಾಯಕನ ಅಪ್ಪಣೆ ಬೇಕೆ: ಖರ್ಗೆಗೆ ಜೋಶಿ ತಿರುಗೇಟು