AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Home Remedies: ಆ್ಯಸಿಡಿಟಿಗೆ ರಾಮಬಾಣ ಈ ಮನೆಮದ್ದು

ಆಹಾರಗಳನ್ನು ತಿಂದಮೇಲೆ ಹೆಚ್ಚಿನವರಿಗೆ ಆಸಿಡಿಟಿ ಇದ್ದೇ ಇರುತ್ತದೆ. ಅನೇಕ ಜನರು ಈ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲು ವೈದ್ಯರ ಬಳಿ ಹೋಗುತ್ತಾರೆ. ಆದರೆ ಇದಕ್ಕೆ ಮನೆಯಲ್ಲಿಯೇ ಪರಿಹಾರವಿದೆ.

Home Remedies: ಆ್ಯಸಿಡಿಟಿಗೆ ರಾಮಬಾಣ ಈ ಮನೆಮದ್ದು
ಸಾಂದರ್ಭಿಕ ಚಿತ್ರ
TV9 Web
| Updated By: ಅಕ್ಷಯ್​ ಪಲ್ಲಮಜಲು​​|

Updated on:Mar 20, 2023 | 4:17 PM

Share

ಇಂದಿನ ದಿನಗಳಲ್ಲಿ ಅನೇಕ ಜನರು ಎದುರಿಸುತ್ತಿರುವ ಸಮಸ್ಯೆಯೆಂದರೆ ಆ್ಯಸಿಡಿಟಿ. ಇದರಿಂದ ಉಂಟಾಗುವ ಎದೆಯುರಿ, ಅಜೀರ್ಣ, ಹೊಟ್ಟೆ ಉಬ್ಬುವುದು, ವಾಕರಿಕೆ ಬಂದಂತಾಗುವುದು, ಈ ರೀತಿಯ ಲಕ್ಷಣಗಳು ಉಂಟಾಗುತ್ತದೆ. ಅನೇಕ ಜನರು ಈ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲು ವೈದ್ಯರ ಬಳಿ ಹೋಗುತ್ತಾರೆ. ಆದರೆ ಇದಕ್ಕೆ ಮನೆಯಲ್ಲಿಯೇ ಪರಿಹಾರವಿದೆ. ಈ 9 ಪರಿಣಾಮಕಾರಿ ಮನೆಮದ್ದುಗಳ ಮೂಲಕ ಆ್ಯಸಿಡಿಟಿಯನ್ನು ಕಡಿಮೆ ಮಾಡಬಹುದು.

ಶುಂಠಿ: ಶುಂಠಿಯು ಉರಿಯೂತ ವಿರೋಧಿ ಗುಣಲಕ್ಷಣವನ್ನು ಹೊಂದಿದೆ. ಇದು ಆಮ್ಲೀಯತೆಯಿಂದ ಉಂಟಾಗುವ ಅಸ್ವಸ್ಥತೆಯನ್ನು ನಿವಾರಿಸಲು ಸಹಾಯ ಮಾಡುತ್ತದೆ. ನೀವು ಒಂದು ಸಣ್ಣ ಶುಂಠಿಯನ್ನು ಅಗಿಯಬಹುದು ಅಥವಾ ಚಹಾಕ್ಕೆ ಸೇರಿಸಿ ಕುಡಿಯಬಹುದು.

ಅಲೋವೆರಾ ಜ್ಯೂಸ್: ಅಲೋವೆರಾ ಜ್ಯೂಸ್ ಆ್ಯಸಿಡಿಟಿಯಿಂದ ಉಂಟಾಗುವ ಊರಿಯೂತ ಮತ್ತು ಕಿರಿಕಿರಿಯನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಊಟಕ್ಕೆ 20 ನಿಮಿಷಗಳ ಮೊದಲು 1/4 ಕಪ್ ಅಲೋವೆರಾ ಜ್ಯೂಸ್ ಕುಡಿಯಿರಿ.

ಬಾಳೆಹಣ್ಣು: ಬಾಳೆಹಣ್ಣು ದೇಹದ ಮೇಲೆ ನೈಸರ್ಗಿಕ ಆಂಟಿಸಿಡ್ ಪರಿಣಾಮವನ್ನು ಒದಗಿಸುತ್ತದೆ. ಇದು ಆಮ್ಲೀಯತೆಯನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಆ್ಯಸಿಡಿಟಿಯಿಂದ ತ್ವರಿತ ಪರಿಹಾರವನ್ನು ಪಡೆಯಲು ಬಾಳೆಹಣ್ಣು ತಿನ್ನಿರಿ ಅಥವಾ ಬಾಳೆಹಣ್ಣು ಸ್ಮೂಥಿ ಕುಡಿಯಿರಿ.

ಸೋಂಪು ಕಾಳು: ಸೋಂಪು ಅನೆಥೋಲ್ ಎಂಬ ಸಂಯುಕ್ತವನ್ನು ಹೊಂದಿದೆ. ಇದು ಉರಿಯೂತವನ್ನು ಕಡಿಮೆ ಮಾಡಲು ಮತ್ತು ಹೊಟ್ಟೆಯಲ್ಲಿ ಉಂಟಾಗುವ ಆ್ಯಸಿಡಿಟಿಯನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಊಟದ ನಂತರ ಸ್ವಲ್ಪ ಸೋಂಪುಕಾಳುಗಳನ್ನು ಅಗಿಯಿರಿ.

ತೆಂಗಿನ ನೀರು: ತೆಂಗಿನ ನೀರು ನೈಸರ್ಗಿಕ ಶೀತಕವಾಗಿದೆ ಮತ್ತು ಇದು ಆಮ್ಲೀಯತೆಯನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಉತ್ತಮ ಫಲಿತಾಂಶಕ್ಕಾಗಿ ದಿನಕ್ಕೆ ಎರಡು ಬಾರಿ ಒಂದು ಲೋಟ ತೆಂಗಿನ ನೀರು ಕುಡಿಯಿರಿ.

ಜೀರಿಗೆ: ಜೀರಿಗೆಯು ಹೊಟ್ಟೆಯುರಿಯನ್ನು ಶಮನಗೊಳಿಸಲು ಮತ್ತು ಆಮ್ಲೀಯತೆಯನ್ನು ನಿವಾರಿಸಲು ಸಹಾಯ ಮಾಡುವ ಗುಣಗಳನ್ನು ಹೊಂದಿದೆ. ನಿಮ್ಮ ಆಹಾರಗಳಲ್ಲಿ ಜೀರಿಗೆಯನ್ನು ಸೇರಿಸಬಹುದು ಅಥವಾ ಜೀರಿಗೆ ಚಹಾವನ್ನು ಕುಡಿಯಬಹುದು.

ಇದನ್ನೂ ಓದಿ: Home Remedies For Bloating: ಊಟದ ನಂತರ ಹೊಟ್ಟೆ ಉಬ್ಬುತ್ತದೆಯೇ? ಈ ಸಮಸ್ಯೆಗೆ ಇಲ್ಲಿದೆ 5 ಮನೆಮದ್ದು

ಆಪಲ್ ಸೈಡರ್ ವಿನೆಗರ್: ಆಪಲ್ ಸೈಡರ್ ವಿನೆಗರ್ ಆಮ್ಲೀಯವಾಗಿದ್ದರೂ, ಹೊಟ್ಟೆಯ ಪಿಹೆಚ್ ಮಟ್ಟವನ್ನು ಸಮತೋಲನಗೊಳಿಸಲು ಮತ್ತು ಆಮ್ಲೀಯತೆಯನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಇಂದು ಚಮಚ ಆಪಲ್ ಸೈಡರ್ ವಿನೆಗರ್‌ನ್ನು ಒಂದು ಲೋಟ ನೀರಿನಲ್ಲಿ ಬೆರಿಸಿ ಊಟಕ್ಕೆ ಮೊದಲು ಕುಡಿಯಿರಿ.

ಬಾದಾಮಿ: ಬಾದಾಮಿಯು ಕ್ಯಾಲ್ಸಿಯಂನ ಉತ್ತಮ ಮೂಲವಾಗಿದೆ. ಇದು ಹೊಟ್ಟೆಯ ಆಮ್ಲವನ್ನು ತಟಸ್ಥಗೊಳಿಸಲು ಸಹಾಯ ಮಾಡುತ್ತದೆ. ಕೆಲವು ಬಾದಾಮಿಗಳನ್ನು ರಾತ್ರಿಯಿಡಿ ನೆನೆಸಿ ಮತ್ತು ಬೆಳಗ್ಗೆ ಅವುಗಳನ್ನು ತಿನ್ನಿರಿ.

ಅರಶಿನ: ಅರಶಿನವು ಉರಿಯೂತ ವಿರೋಧಿ ಗುಣಲಕ್ಷಣವನ್ನು ಹೊಂದಿದೆ. ಇದು ಆಮ್ಲೀಯತೆಯನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ನೀವು ತಯಾರಿಸುವ ಆಹಾರಕ್ಕೆ ಅರಶಿನವನ್ನು ಸೇರಿಸಿ ಅಥವಾ ಅರಶಿನ ಚಹಾವನ್ನು ಕುಡಿಯಿರಿ.

Published On - 4:17 pm, Mon, 20 March 23

ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?