Home remedies: ಚರ್ಮದಲ್ಲಿ ಉಂಟಾಗುವ ತುರಿಕೆಗೆ ಇಲ್ಲಿದೆ ಸರಳ ಮನೆಮದ್ದು

ಇತ್ತೀಚಿನ ದಿನಗಳಲ್ಲಿ ನಾನಾ ರೀತಿಯ ಚರ್ಮ ಸಮಸ್ಯೆಗಳು ಕಂಡು ಬರುತ್ತಿದ್ದು ಇದರಿಂದ ತುರಿಕೆ ಜಾಸ್ತಿಯಾಗುತ್ತಿದೆ, ಚರ್ಮ ಕೆಂಪಗಾಗುತ್ತದೆ, ದದ್ದುಗಳು ಕಂಡು ಬರುತ್ತದೆ. ಈ ರೀತಿಯ ನೆವೆ ಅಥವಾ ತುರಿಕೆಗೆ ಕಂಡು ಬರಲು ಕೆಲವೊಮ್ಮೆ ಕಾರಣಗಳು ಇರುವುದಿಲ್ಲ. ಗಾಳಿಯಲ್ಲಿರುವ ರೋಗಾಣುಗಳಿಂದಲೂ ಈ ರೀತಿಯ ಸಮಸ್ಯೆ ಕಂಡು ಬರಬಹುದು. ಹಾಗಾಗಿ ಇದನ್ನು ತಡೆಯಲು ಡಾ. ಗೌರಿ ಸುಬ್ರಹ್ಮಣ್ಯ ಅವರು ಸರಳವಾದ ಮನೆ ಮದ್ದಿನ ಬಗ್ಗೆ ತಿಳಿಸಿ ಕೊಟ್ಟಿದ್ದಾರೆ.

Home remedies: ಚರ್ಮದಲ್ಲಿ ಉಂಟಾಗುವ ತುರಿಕೆಗೆ ಇಲ್ಲಿದೆ ಸರಳ ಮನೆಮದ್ದು
Skin Problems
Follow us
| Updated By: ಅಕ್ಷತಾ ವರ್ಕಾಡಿ

Updated on: Aug 07, 2024 | 7:14 PM

ಸಾಮಾನ್ಯವಾಗಿ ತುರಿಕೆ ದೊಡ್ಡ ಸಮಸ್ಯೆಯಲ್ಲ ಎಂದು ಎನಿಸಬಹುದು ಆದರೆ ಇದರಿಂದ ಉಂಟಾಗುವ ಕಿರಿಕಿರಿ ಮಾತ್ರ ಯಾರಿಗೂ ಬೇಡ. ಇದನ್ನು ಹಲವಾರು ರೀತಿಯ ಔಷಧಗಳನ್ನು ಮಾಡಿ ಗುಣಪಡಿಸಿಕೊಳ್ಳುವ ಬದಲು ಮನೆಯಲ್ಲಿಯೇ ಸರಳವಾದ ಪದಾರ್ಥಗಳನ್ನು ಬಳಸಿಕೊಂಡು ಸಮಸ್ಯೆಯನ್ನು ನಿವಾರಣೆ ಮಾಡಿಕೊಳ್ಳಬಹುದು. ಹಾಗಾದರೆ ದೇಹದ ಯಾವುದೇ ಭಾಗದಲ್ಲಿಯಾದರೂ ತುರಿಕೆ ಕಂಡು ಬಂದರೆ ಏನು ಮಾಡಬಹುದು? ಇಲ್ಲಿದೆ ಸರಳ ಮನೆಮದ್ದು.

ಇತ್ತೀಚಿನ ದಿನಗಳಲ್ಲಿ ನಾನಾ ರೀತಿಯ ಚರ್ಮ ಸಮಸ್ಯೆಗಳು ಕಂಡು ಬರುತ್ತಿದ್ದು ಇದರಿಂದ ತುರಿಕೆ ಜಾಸ್ತಿಯಾಗುತ್ತಿದೆ, ಚರ್ಮ ಕೆಂಪಗಾಗುತ್ತದೆ, ದದ್ದುಗಳು ಕಂಡು ಬರುತ್ತದೆ. ಈ ರೀತಿಯ ನೆವೆ ಅಥವಾ ತುರಿಕೆಗೆ ಕಂಡು ಬರಲು ಕೆಲವೊಮ್ಮೆ ಕಾರಣಗಳು ಇರುವುದಿಲ್ಲ. ಗಾಳಿಯಲ್ಲಿರುವ ರೋಗಾಣುಗಳಿಂದಲೂ ಈ ರೀತಿಯ ಸಮಸ್ಯೆ ಕಂಡು ಬರಬಹುದು. ಹಾಗಾಗಿ ಇದನ್ನು ತಡೆಯಲು ಡಾ. ಗೌರಿ ಸುಬ್ರಹ್ಮಣ್ಯ ಅವರು ಖಾಸಗಿ ವಾಹಿನಿಯೊಂದರಲ್ಲಿ, ಸರಳವಾದ ಮನೆ ಮದ್ದನ್ನು ತಿಳಿಸಿದ್ದು ಇದನ್ನು ಉಪಯೋಗಿಸುವುದರಿಂದ ಚರ್ಮಕ್ಕೆ ಸಂಬಂಧಿಸಿದ ನಾನಾ ರೀತಿಯ ಸಮಸ್ಯೆಗಳನ್ನು ತಡೆಯಬಹುದು ಜೊತೆಗೆ ಚರ್ಮವನ್ನು ಆರೋಗ್ಯವಾಗಿ ಇರಿಸಿಕೊಳ್ಳಬಹುದು.

ಬೇಕಾಗುವ ಸಾಮಾಗ್ರಿಗಳು:

  • ತುಂಬೆ ಸೊಪ್ಪು
  • ಜಾಜಿ ಹೂವಿನ ಸೊಪ್ಪು
  • ಗರಿಕೆ ಹುಲ್ಲು
  • ಅರಿಶಿನ
  • ಸ್ವಲ್ಪ ಶ್ರೀಗಂಧ
  • ಕೊಬ್ಬರಿ ಎಣ್ಣೆ

ಮಾಡುವ ವಿಧಾನ:

ಮೊದಲು ಮೂರು ಸೊಪ್ಪುಗಳನ್ನು ಹುರಿದುಕೊಂಡು ಅದನ್ನು ನುಣ್ಣಗೆ ರುಬ್ಬಿಕೊಳ್ಳಿ, ಬಳಿಕ ಒಲೆಯ ಮೇಲೆ ಸ್ವಲ್ಪ ಕೊಬ್ಬರಿ ಎಣ್ಣೆ ಹಾಕಿ ಅದಕ್ಕೆ ರುಬ್ಬಿರುವ ಮಿಶ್ರಣವನ್ನು ಸೇರಿಸಿಕೊಂಡು ಅದಕ್ಕೆ ಅರಿಶಿನ ಸೇರಿಸಿ, ಬಳಿಕ ಶ್ರೀಗಂಧವನ್ನು ಸ್ವಲ್ಪ ತೈದು ಅದನ್ನು ಕೂಡ ಮಿಶ್ರಣಕ್ಕೆ ಸೇರಿಸಿಕೊಳ್ಳಿ. ಬಳಿಕ ಅದರ ತೇವಾಂಶ ಹೋಗುವವರೆಗೆ ಚೆನ್ನಾಗಿ ಕುದಿಸಿ ಒಂದು ಗಾಜಿನ ಬಾಟಲ್ ಹಾಕಿ ಇಟ್ಟುಕೊಳ್ಳಿ.

ಇದರ ಬಳಕೆಯಿಂದ ಸಿಗುವ ಉಪಯೋಗಗಳೇನು?

ಇಲ್ಲಿ ಉಪಯೋಗಿಸಿದ ಮೂರು ಸೊಪ್ಪುಗಳು ಕೂಡ ಚರ್ಮಕ್ಕೆ ತುಂಬಾ ಒಳ್ಳೆಯದು. ಗರಿಕೆ ಅತ್ಯಂತ ಶ್ರೇಷ್ಠವಾದ ಹುಲ್ಲು. ಇದರಿಂದ ನೀವು ಸೋರಿಯಾಸಿಸ್ ನಂತಹ ಸಮಸ್ಯೆಗಳನ್ನು ಕೂಡ ಕಡಿಮೆ ಮಾಡಿಕೊಳ್ಳಬಹುದು. ಇನ್ನು ಜಾಜಿ ಎಲೆ ಮತ್ತು ತುಂಬೆ ಎಲೆಗಳು ಕೂಡ ಹಲವಾರು ರೀತಿಯ ಆರೋಗ್ಯ ಪ್ರಯೋಜನಗಳನ್ನು ಒಳಗೊಂಡಿದೆ. ಇನ್ನು ಅರಿಶಿನ, ಶ್ರೀಗಂಧ ಮತ್ತು ಕೊಬ್ಬರಿ ಎಣ್ಣೆ ಚರ್ಮಕ್ಕೆ ಸಂಬಂಧಿಸಿದ ಸಮಸ್ಯೆಗಳನ್ನು ದೂರ ಮಾಡುತ್ತದೆ. ಇಲ್ಲಿ ಹೇಳಿರುವ ಔಷಧಿಯನ್ನು ತಲೆಯಲ್ಲಿನ ಹೊಟ್ಟಿನ ಸಮಸ್ಯೆ, ತುರಿಕೆ, ಚರ್ಮದಲ್ಲಿ ಅಲ್ಲಲ್ಲಿ ಆಗುವಂತಹ ಗುಳ್ಳೆಗಳು ಅಥವಾ ಗಾಯಗಳಂತಹ ಸಮಸ್ಯೆಗಳಿಗೆ ಮತ್ತು ವಿಪರೀತ ಹುಣ್ಣುಗಳಾಗುತ್ತಿದ್ದವರಿಗೆ ಈ ಎಣ್ಣೆಯನ್ನು ಬಳಸಬಹುದು. ಚಿಕ್ಕ ಮಕ್ಕಳಿಗೂ ಇದನ್ನು ಬಳಸಬಹುದು.

ಆರೋಗ್ಯಕ್ಕೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Nithya Bhavishya: ಈ ರಾಶಿಯವರಿಗೆ ಸ್ವ ಉದ್ಯೋಗವು ಇಂದು ಕೈ ಹಿಡಿಯುವುದು
Nithya Bhavishya: ಈ ರಾಶಿಯವರಿಗೆ ಸ್ವ ಉದ್ಯೋಗವು ಇಂದು ಕೈ ಹಿಡಿಯುವುದು
ಗುಜರಾತ್ ಪ್ರವಾಹದಲ್ಲಿ ಸಿಲುಕಿದ ಕಾರು ಹತ್ತಿ ಕುಳಿತು ಹರಟೆ ಹೊಡೆದ ದಂಪತಿ
ಗುಜರಾತ್ ಪ್ರವಾಹದಲ್ಲಿ ಸಿಲುಕಿದ ಕಾರು ಹತ್ತಿ ಕುಳಿತು ಹರಟೆ ಹೊಡೆದ ದಂಪತಿ
ಕಾಂಗ್ರೆಸ್​-JDS ಮೈತ್ರಿ: ಬಹುಮತ ಇಲ್ಲದಿದ್ರೂ ಅಧ್ಯಕ್ಷ ಸ್ಥಾನ ಕೈ ವಶಕ್ಕೆ
ಕಾಂಗ್ರೆಸ್​-JDS ಮೈತ್ರಿ: ಬಹುಮತ ಇಲ್ಲದಿದ್ರೂ ಅಧ್ಯಕ್ಷ ಸ್ಥಾನ ಕೈ ವಶಕ್ಕೆ
ದರ್ಶನ್​ ಜಾಮೀನು ಅರ್ಜಿ ಸಲ್ಲಿಸೋದು ಯಾವಾಗ? ಉತ್ತರ ನೀಡಿದ ಲಾಯರ್​
ದರ್ಶನ್​ ಜಾಮೀನು ಅರ್ಜಿ ಸಲ್ಲಿಸೋದು ಯಾವಾಗ? ಉತ್ತರ ನೀಡಿದ ಲಾಯರ್​
ಗಣಪತಿ ವಿಸರ್ಜನೆ ಬಳಿಕ ಈಜಲು ಹೊಳೆಗೆ ಹಾರಿದ ಯುವಕರು
ಗಣಪತಿ ವಿಸರ್ಜನೆ ಬಳಿಕ ಈಜಲು ಹೊಳೆಗೆ ಹಾರಿದ ಯುವಕರು
ಭಾಗ್ಯಲಕ್ಷ್ಮೀ ಬಾಂಡ್ ಹಣ ಹಾಕುವ ಬಗ್ಗೆ ಮಹತ್ವದ ಮಾಹಿತಿ ಹಂಚಿಕೊಂಡ ಸಚಿವೆ
ಭಾಗ್ಯಲಕ್ಷ್ಮೀ ಬಾಂಡ್ ಹಣ ಹಾಕುವ ಬಗ್ಗೆ ಮಹತ್ವದ ಮಾಹಿತಿ ಹಂಚಿಕೊಂಡ ಸಚಿವೆ
ದೆಹಲಿ ಕ್ಲಬ್ ಹೊರಗೆ ಬೌನ್ಸರ್​ಗೆ ಹೆದರಿಸಿ ಗುಂಡು ಹಾರಿಸಿದ ವಿಡಿಯೋ ವೈರಲ್
ದೆಹಲಿ ಕ್ಲಬ್ ಹೊರಗೆ ಬೌನ್ಸರ್​ಗೆ ಹೆದರಿಸಿ ಗುಂಡು ಹಾರಿಸಿದ ವಿಡಿಯೋ ವೈರಲ್
ದೀಪಾವಳಿ ಒಳಗೆ ಸಿದ್ದರಾಮಯ್ಯ ಸರ್ಕಾರ ಪತನ: ಸಿಟಿ ರವಿ
ದೀಪಾವಳಿ ಒಳಗೆ ಸಿದ್ದರಾಮಯ್ಯ ಸರ್ಕಾರ ಪತನ: ಸಿಟಿ ರವಿ
ಕೊನೆಯ ಓವರ್​ನಲ್ಲಿ 5 ಸಿಕ್ಸ್ ಸಿಡಿಸಿ ಇಡೀ ಪಂದ್ಯದ ಚಿತ್ರಣ ಬದಲಿಸಿದ ಮಯಾಂಕ್
ಕೊನೆಯ ಓವರ್​ನಲ್ಲಿ 5 ಸಿಕ್ಸ್ ಸಿಡಿಸಿ ಇಡೀ ಪಂದ್ಯದ ಚಿತ್ರಣ ಬದಲಿಸಿದ ಮಯಾಂಕ್
ಲಕ್ಷ್ಮಿಯ ಪುತ್ರ ಗಣಪನಿಗೆ ಭಾರೀ ಬಂದೋಬಸ್ತ್​: ಸಿಸಿಟಿವಿ ಕಣ್ಗಾವಲು, ವಿಡಿಯೋ
ಲಕ್ಷ್ಮಿಯ ಪುತ್ರ ಗಣಪನಿಗೆ ಭಾರೀ ಬಂದೋಬಸ್ತ್​: ಸಿಸಿಟಿವಿ ಕಣ್ಗಾವಲು, ವಿಡಿಯೋ