AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Home remedies: ಚರ್ಮದಲ್ಲಿ ಉಂಟಾಗುವ ತುರಿಕೆಗೆ ಇಲ್ಲಿದೆ ಸರಳ ಮನೆಮದ್ದು

ಇತ್ತೀಚಿನ ದಿನಗಳಲ್ಲಿ ನಾನಾ ರೀತಿಯ ಚರ್ಮ ಸಮಸ್ಯೆಗಳು ಕಂಡು ಬರುತ್ತಿದ್ದು ಇದರಿಂದ ತುರಿಕೆ ಜಾಸ್ತಿಯಾಗುತ್ತಿದೆ, ಚರ್ಮ ಕೆಂಪಗಾಗುತ್ತದೆ, ದದ್ದುಗಳು ಕಂಡು ಬರುತ್ತದೆ. ಈ ರೀತಿಯ ನೆವೆ ಅಥವಾ ತುರಿಕೆಗೆ ಕಂಡು ಬರಲು ಕೆಲವೊಮ್ಮೆ ಕಾರಣಗಳು ಇರುವುದಿಲ್ಲ. ಗಾಳಿಯಲ್ಲಿರುವ ರೋಗಾಣುಗಳಿಂದಲೂ ಈ ರೀತಿಯ ಸಮಸ್ಯೆ ಕಂಡು ಬರಬಹುದು. ಹಾಗಾಗಿ ಇದನ್ನು ತಡೆಯಲು ಡಾ. ಗೌರಿ ಸುಬ್ರಹ್ಮಣ್ಯ ಅವರು ಸರಳವಾದ ಮನೆ ಮದ್ದಿನ ಬಗ್ಗೆ ತಿಳಿಸಿ ಕೊಟ್ಟಿದ್ದಾರೆ.

Home remedies: ಚರ್ಮದಲ್ಲಿ ಉಂಟಾಗುವ ತುರಿಕೆಗೆ ಇಲ್ಲಿದೆ ಸರಳ ಮನೆಮದ್ದು
Skin Problems
ಪ್ರೀತಿ ಭಟ್​, ಗುಣವಂತೆ
| Edited By: |

Updated on: Aug 07, 2024 | 7:14 PM

Share

ಸಾಮಾನ್ಯವಾಗಿ ತುರಿಕೆ ದೊಡ್ಡ ಸಮಸ್ಯೆಯಲ್ಲ ಎಂದು ಎನಿಸಬಹುದು ಆದರೆ ಇದರಿಂದ ಉಂಟಾಗುವ ಕಿರಿಕಿರಿ ಮಾತ್ರ ಯಾರಿಗೂ ಬೇಡ. ಇದನ್ನು ಹಲವಾರು ರೀತಿಯ ಔಷಧಗಳನ್ನು ಮಾಡಿ ಗುಣಪಡಿಸಿಕೊಳ್ಳುವ ಬದಲು ಮನೆಯಲ್ಲಿಯೇ ಸರಳವಾದ ಪದಾರ್ಥಗಳನ್ನು ಬಳಸಿಕೊಂಡು ಸಮಸ್ಯೆಯನ್ನು ನಿವಾರಣೆ ಮಾಡಿಕೊಳ್ಳಬಹುದು. ಹಾಗಾದರೆ ದೇಹದ ಯಾವುದೇ ಭಾಗದಲ್ಲಿಯಾದರೂ ತುರಿಕೆ ಕಂಡು ಬಂದರೆ ಏನು ಮಾಡಬಹುದು? ಇಲ್ಲಿದೆ ಸರಳ ಮನೆಮದ್ದು.

ಇತ್ತೀಚಿನ ದಿನಗಳಲ್ಲಿ ನಾನಾ ರೀತಿಯ ಚರ್ಮ ಸಮಸ್ಯೆಗಳು ಕಂಡು ಬರುತ್ತಿದ್ದು ಇದರಿಂದ ತುರಿಕೆ ಜಾಸ್ತಿಯಾಗುತ್ತಿದೆ, ಚರ್ಮ ಕೆಂಪಗಾಗುತ್ತದೆ, ದದ್ದುಗಳು ಕಂಡು ಬರುತ್ತದೆ. ಈ ರೀತಿಯ ನೆವೆ ಅಥವಾ ತುರಿಕೆಗೆ ಕಂಡು ಬರಲು ಕೆಲವೊಮ್ಮೆ ಕಾರಣಗಳು ಇರುವುದಿಲ್ಲ. ಗಾಳಿಯಲ್ಲಿರುವ ರೋಗಾಣುಗಳಿಂದಲೂ ಈ ರೀತಿಯ ಸಮಸ್ಯೆ ಕಂಡು ಬರಬಹುದು. ಹಾಗಾಗಿ ಇದನ್ನು ತಡೆಯಲು ಡಾ. ಗೌರಿ ಸುಬ್ರಹ್ಮಣ್ಯ ಅವರು ಖಾಸಗಿ ವಾಹಿನಿಯೊಂದರಲ್ಲಿ, ಸರಳವಾದ ಮನೆ ಮದ್ದನ್ನು ತಿಳಿಸಿದ್ದು ಇದನ್ನು ಉಪಯೋಗಿಸುವುದರಿಂದ ಚರ್ಮಕ್ಕೆ ಸಂಬಂಧಿಸಿದ ನಾನಾ ರೀತಿಯ ಸಮಸ್ಯೆಗಳನ್ನು ತಡೆಯಬಹುದು ಜೊತೆಗೆ ಚರ್ಮವನ್ನು ಆರೋಗ್ಯವಾಗಿ ಇರಿಸಿಕೊಳ್ಳಬಹುದು.

ಬೇಕಾಗುವ ಸಾಮಾಗ್ರಿಗಳು:

  • ತುಂಬೆ ಸೊಪ್ಪು
  • ಜಾಜಿ ಹೂವಿನ ಸೊಪ್ಪು
  • ಗರಿಕೆ ಹುಲ್ಲು
  • ಅರಿಶಿನ
  • ಸ್ವಲ್ಪ ಶ್ರೀಗಂಧ
  • ಕೊಬ್ಬರಿ ಎಣ್ಣೆ

ಮಾಡುವ ವಿಧಾನ:

ಮೊದಲು ಮೂರು ಸೊಪ್ಪುಗಳನ್ನು ಹುರಿದುಕೊಂಡು ಅದನ್ನು ನುಣ್ಣಗೆ ರುಬ್ಬಿಕೊಳ್ಳಿ, ಬಳಿಕ ಒಲೆಯ ಮೇಲೆ ಸ್ವಲ್ಪ ಕೊಬ್ಬರಿ ಎಣ್ಣೆ ಹಾಕಿ ಅದಕ್ಕೆ ರುಬ್ಬಿರುವ ಮಿಶ್ರಣವನ್ನು ಸೇರಿಸಿಕೊಂಡು ಅದಕ್ಕೆ ಅರಿಶಿನ ಸೇರಿಸಿ, ಬಳಿಕ ಶ್ರೀಗಂಧವನ್ನು ಸ್ವಲ್ಪ ತೈದು ಅದನ್ನು ಕೂಡ ಮಿಶ್ರಣಕ್ಕೆ ಸೇರಿಸಿಕೊಳ್ಳಿ. ಬಳಿಕ ಅದರ ತೇವಾಂಶ ಹೋಗುವವರೆಗೆ ಚೆನ್ನಾಗಿ ಕುದಿಸಿ ಒಂದು ಗಾಜಿನ ಬಾಟಲ್ ಹಾಕಿ ಇಟ್ಟುಕೊಳ್ಳಿ.

ಇದರ ಬಳಕೆಯಿಂದ ಸಿಗುವ ಉಪಯೋಗಗಳೇನು?

ಇಲ್ಲಿ ಉಪಯೋಗಿಸಿದ ಮೂರು ಸೊಪ್ಪುಗಳು ಕೂಡ ಚರ್ಮಕ್ಕೆ ತುಂಬಾ ಒಳ್ಳೆಯದು. ಗರಿಕೆ ಅತ್ಯಂತ ಶ್ರೇಷ್ಠವಾದ ಹುಲ್ಲು. ಇದರಿಂದ ನೀವು ಸೋರಿಯಾಸಿಸ್ ನಂತಹ ಸಮಸ್ಯೆಗಳನ್ನು ಕೂಡ ಕಡಿಮೆ ಮಾಡಿಕೊಳ್ಳಬಹುದು. ಇನ್ನು ಜಾಜಿ ಎಲೆ ಮತ್ತು ತುಂಬೆ ಎಲೆಗಳು ಕೂಡ ಹಲವಾರು ರೀತಿಯ ಆರೋಗ್ಯ ಪ್ರಯೋಜನಗಳನ್ನು ಒಳಗೊಂಡಿದೆ. ಇನ್ನು ಅರಿಶಿನ, ಶ್ರೀಗಂಧ ಮತ್ತು ಕೊಬ್ಬರಿ ಎಣ್ಣೆ ಚರ್ಮಕ್ಕೆ ಸಂಬಂಧಿಸಿದ ಸಮಸ್ಯೆಗಳನ್ನು ದೂರ ಮಾಡುತ್ತದೆ. ಇಲ್ಲಿ ಹೇಳಿರುವ ಔಷಧಿಯನ್ನು ತಲೆಯಲ್ಲಿನ ಹೊಟ್ಟಿನ ಸಮಸ್ಯೆ, ತುರಿಕೆ, ಚರ್ಮದಲ್ಲಿ ಅಲ್ಲಲ್ಲಿ ಆಗುವಂತಹ ಗುಳ್ಳೆಗಳು ಅಥವಾ ಗಾಯಗಳಂತಹ ಸಮಸ್ಯೆಗಳಿಗೆ ಮತ್ತು ವಿಪರೀತ ಹುಣ್ಣುಗಳಾಗುತ್ತಿದ್ದವರಿಗೆ ಈ ಎಣ್ಣೆಯನ್ನು ಬಳಸಬಹುದು. ಚಿಕ್ಕ ಮಕ್ಕಳಿಗೂ ಇದನ್ನು ಬಳಸಬಹುದು.

ಆರೋಗ್ಯಕ್ಕೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
Preethi Bhat Gunavante
Preethi Bhat Gunavante

ಪ್ರೀತಿ ಭಟ್ ಗುಣವಂತೆ – ಮೂಲತಃ ಹೊನ್ನಾವರದ ಗುಣವಂತೆಯವಳು. ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ (M.C.J) ಎಂ.ಎ ಮಾಡಿದ್ದು ಪತ್ರಿಕಾ ರಂಗದಲ್ಲಿ 6 ವರ್ಷಗಳ ಅನುಭವವಿದೆ. ಸುದ್ದಿ ಬಿಡುಗಡೆ ವಾರ ಪತ್ರಿಕೆಯಲ್ಲಿ, ಉದಯವಾಣಿ ದಿನ ಪತ್ರಿಕೆಯಲ್ಲಿ ಕೆಲಸ ಮಾಡಿದ್ದೇನೆ. ಅದಾದ ಬಳಿಕ 2023ರಿಂದ ಟಿವಿ9 ಕನ್ನಡದಲ್ಲಿ ಕೆಲಸ ಮಾಡುತ್ತಿದ್ದೇನೆ. ಅಧ್ಯಾತ್ಮ, ಆರೋಗ್ಯ, ಜೀವನಶೈಲಿಗೆ ಸಂಬಂಧಿಸಿದ ಲೇಖನಗಳನ್ನು ಬರೆಯುವುದರಲ್ಲಿ ಆಸಕ್ತಿ ಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುವಲ್ಲಿ ಪ್ರೀತಿಯಿಂದ, ಪ್ರಾಮಾಣಿಕವಾಗಿ ಪ್ರಯತ್ನಿಸುತ್ತಿದ್ದೇನೆ. ಬರವಣಿಗೆ ಹೊರತು ಪಡಿಸಿದರೆ ನನ್ನ ಆಸಕ್ತಿಕರ ಕ್ಷೇತ್ರ ಪ್ರವಾಸ.

Read More
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!