AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Home Remedies: ಗಂಟುನೋವಿಗೆ ಈ ಸೊಪ್ಪು ರಾಮಬಾಣ!

 ವಯಸ್ಸಾದಂತೆ ಬೆನ್ನು, ಸೊಂಟ ನೋವು ಹೀಗೆ ನಾನಾ ರೀತಿಯ ಸಮಸ್ಯೆಗಳು ಕಂಡು ಬರುತ್ತದೆ. ಇಂತಹ ವಾತ ದೋಷಗಳನ್ನು ಪ್ರಾಥಮಿಕವಾಗಿ ಮನೆಯಲ್ಲಿಯೇ ಕಡಿಮೆ ಮಾಡಿಕೊಳ್ಳುವ ಉತ್ತಮ ವಿಧಾನವೆಂದರೆ ನುಕ್ಕೆಸೊಪ್ಪು ಅಥವಾ ಲಕ್ಕಿ ಸೊಪ್ಪಿನ ಬಳಕೆ. ಇದು ಯಾವ ರೀತಿಯಲ್ಲಿ ನೋವನ್ನು ನಿವಾರಣೆ ಮಾಡುತ್ತದೆ? ಉಪಯೋಗಿಸುವುದು ಹೇಗೆ? ಇಲ್ಲಿದೆ ಮಾಹಿತಿ.

Home Remedies: ಗಂಟುನೋವಿಗೆ ಈ ಸೊಪ್ಪು ರಾಮಬಾಣ!
ಪ್ರೀತಿ ಭಟ್​, ಗುಣವಂತೆ
| Updated By: ಅಕ್ಷಯ್​ ಪಲ್ಲಮಜಲು​​|

Updated on:Jun 03, 2024 | 3:39 PM

Share

ವಾತ, ಪಿತ್ತ ಮತ್ತು ಕಫ ಎಂದು ಕರೆಯಲ್ಪಡುವ ಮೂರು ಮೂಲಭೂತ ಶಾರೀರಿಕ ದೋಷಗಳ ನಡುವೆ ಸಮತೋಲನವಿದ್ದಾಗ ಆರೋಗ್ಯವಿರುತ್ತದೆ ಎಂಬುದು ಆಯುರ್ವೇದಿಕ ಔಷಧಶಾಸ್ತ್ರದ ಪರಿಕಲ್ಪನೆ. ಈ ತ್ರಿದೋಷವನ್ನು ಕಾಪಾಡಿಕೊಳ್ಳುವುದು ಸುಲಭವಲ್ಲ. ಆದರೆ ಇದನ್ನು ಪರಿಹರಿಸಿಕೊಳ್ಳಲು ಇರುವ ಮಾರ್ಗಗಳನ್ನು ಸರಿಯಾಗಿ ಪಾಲಿಸಿದಲ್ಲಿ ಇದರಿಂದ ಮುಕ್ತಿ ಪಡೆಯಬಹುದು. ಸಾಮಾನ್ಯವಾಗಿ ವಯಸ್ಸಾದಂತೆ ಬೆನ್ನು, ಸೊಂಟ ನೋವು ಹೀಗೆ ನಾನಾ ರೀತಿಯ ಸಮಸ್ಯೆಗಳು ಕಂಡು ಬರುತ್ತದೆ. ಇಂತಹ ವಾತ ದೋಷಗಳನ್ನು ಪ್ರಾಥಮಿಕವಾಗಿ ಮನೆಯಲ್ಲಿಯೇ ಕಡಿಮೆ ಮಾಡಿಕೊಳ್ಳುವ ಉತ್ತಮ ವಿಧಾನವೆಂದರೆ ನುಕ್ಕೆಸೊಪ್ಪು ಅಥವಾ ಲಕ್ಕಿ ಸೊಪ್ಪಿನ ಬಳಕೆ. ಇದು ಯಾವ ರೀತಿಯಲ್ಲಿ ನೋವನ್ನು ನಿವಾರಣೆ ಮಾಡುತ್ತದೆ? ಉಪಯೋಗಿಸುವುದು ಹೇಗೆ? ಇಲ್ಲಿದೆ ಮಾಹಿತಿ.

ನೀವು ಬಿಳಿ ನುಕ್ಕೆಸೊಪ್ಪು ಅಥವಾ ಲಕ್ಕಿ ಸೊಪ್ಪಿನ ಬಗ್ಗೆ ಕೇಳಿರಬಹುದು. ಇದು ಕರಾವಳಿ ಮತ್ತು ಮಲೆನಾಡು ಪ್ರದೇಶಗಳಲ್ಲಿ ಹೆಚ್ಚಾಗಿ ಕಂಡುಬರುತ್ತದೆ. ಇದು ತೋಟದ ಬದಿಗಳಲ್ಲಿ ಹೆಚ್ಚಾಗಿ ಕಂಡು ಬರುತ್ತದೆ. ಇದರಿಂದಲೂ ಆರೋಗ್ಯ ಪ್ರಯೋಜನಗಳಿವೆಯೇ ಎಂಬ ಪ್ರಶ್ನೆ ಮೂಡಬಹುದು. ಖಂಡಿತವಾಗಿಯೂ ಇದರಿಂದ ಅನೇಕ ರೀತಿಯ ಪ್ರಯೋಜನಗಳಿವೆ.

ಇದನ್ನೂ ಓದಿ: ಬೆಳಗಿನ ವಾಕಿಂಗ್ ನಂತರ ಯಾವ ರೀತಿಯ ಆಹಾರ ಸೇವನೆ ಮಾಡಬೇಕು?

ಉಪಯೋಗಿಸುವುದು ಹೇಗೆ?

ಡಾ। ಸೌಮ್ಯಶ್ರೀ ಶರ್ಮ ಅವರು ಹೇಳುವ ಪ್ರಕಾರ, ಬಿಳಿ ನುಕ್ಕೆಸೊಪ್ಪುನ್ನು ಅರೆದು ನುಣ್ಣಗೆ ಪೇಸ್ಟ್ ರೀತಿಯಲ್ಲಿ ತಯಾರಿಸಿಕೊಂಡು ಸ್ವಲ್ಪ ಬಿಸಿ ಮಾಡಿ ಕಾಲಿಗೆ ಅಥವಾ ನೋವಿದ್ದಲ್ಲಿ ಹಚ್ಚಿದರೆ ನೋವು ಶಮನವಾಗುತ್ತದೆ. ಅದಲ್ಲದೆ ಎಣ್ಣೆಗೆ ಹಾಕಿ ಸ್ವಲ್ಪ ಕುದಿಸಿ ಇಟ್ಟುಕೊಂಡು, ಆ ತೈಲವನ್ನು ಪ್ರತಿನಿತ್ಯ ಹಚ್ಚಿಕೊಳ್ಳುವುದರಿಂದ ಕುತ್ತಿಗೆ, ಬೆನ್ನು, ಸೊಂಟ ನೋವನ್ನು ಮನೆಯಲ್ಲಿಯೇ ಪ್ರಥಮ ಹಂತದಲ್ಲಿ ಗುಣಪಡಿಸಬಹುದಾಗಿದೆ.

ಇತರ ಪ್ರಯೋಜನಗಳು?

ಈ ಸೊಪ್ಪನ್ನು ಒಣಗಿಸಿ ಕೈಯಲ್ಲಿ ತಿಕ್ಕಿ ಪುಡಿ ಮಾಡಿ, ಆ ಪುಡಿಯಿಂದ ನಸ್ಯ ಮಾಡಿದರೆ ನೆಗಡಿ ಗುಣವಾಗುತ್ತದೆ. ಲಕ್ಕಿ ಸೊಪ್ಪಿನ ರಸಕ್ಕೆ ಜೇನುತುಪ್ಪವನ್ನು ಸೇರಿಸಿ ನಿಯಮಿತವಾಗಿ ಸೇವಿಸಿದರೆ ಕಫ ಅಥವಾ ಜ್ವರ ಇದ್ದಲ್ಲಿ ಕಡಿಮೆಯಾಗುತ್ತದೆ. (ಇದನ್ನು ಬಳಸುವ ಮೊದಲು ನಿಮ್ಮ ವೈದ್ಯರ ಸಲಹೆ ಪಡೆದುಕೊಳ್ಳಿ)

ಆರೋಗ್ಯಕ್ಕೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

Published On - 3:37 pm, Mon, 3 June 24

ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!