AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Home Remedies: ಗಂಟುನೋವಿಗೆ ಈ ಸೊಪ್ಪು ರಾಮಬಾಣ!

 ವಯಸ್ಸಾದಂತೆ ಬೆನ್ನು, ಸೊಂಟ ನೋವು ಹೀಗೆ ನಾನಾ ರೀತಿಯ ಸಮಸ್ಯೆಗಳು ಕಂಡು ಬರುತ್ತದೆ. ಇಂತಹ ವಾತ ದೋಷಗಳನ್ನು ಪ್ರಾಥಮಿಕವಾಗಿ ಮನೆಯಲ್ಲಿಯೇ ಕಡಿಮೆ ಮಾಡಿಕೊಳ್ಳುವ ಉತ್ತಮ ವಿಧಾನವೆಂದರೆ ನುಕ್ಕೆಸೊಪ್ಪು ಅಥವಾ ಲಕ್ಕಿ ಸೊಪ್ಪಿನ ಬಳಕೆ. ಇದು ಯಾವ ರೀತಿಯಲ್ಲಿ ನೋವನ್ನು ನಿವಾರಣೆ ಮಾಡುತ್ತದೆ? ಉಪಯೋಗಿಸುವುದು ಹೇಗೆ? ಇಲ್ಲಿದೆ ಮಾಹಿತಿ.

Home Remedies: ಗಂಟುನೋವಿಗೆ ಈ ಸೊಪ್ಪು ರಾಮಬಾಣ!
ಪ್ರೀತಿ ಭಟ್​, ಗುಣವಂತೆ
| Edited By: |

Updated on:Jun 03, 2024 | 3:39 PM

Share

ವಾತ, ಪಿತ್ತ ಮತ್ತು ಕಫ ಎಂದು ಕರೆಯಲ್ಪಡುವ ಮೂರು ಮೂಲಭೂತ ಶಾರೀರಿಕ ದೋಷಗಳ ನಡುವೆ ಸಮತೋಲನವಿದ್ದಾಗ ಆರೋಗ್ಯವಿರುತ್ತದೆ ಎಂಬುದು ಆಯುರ್ವೇದಿಕ ಔಷಧಶಾಸ್ತ್ರದ ಪರಿಕಲ್ಪನೆ. ಈ ತ್ರಿದೋಷವನ್ನು ಕಾಪಾಡಿಕೊಳ್ಳುವುದು ಸುಲಭವಲ್ಲ. ಆದರೆ ಇದನ್ನು ಪರಿಹರಿಸಿಕೊಳ್ಳಲು ಇರುವ ಮಾರ್ಗಗಳನ್ನು ಸರಿಯಾಗಿ ಪಾಲಿಸಿದಲ್ಲಿ ಇದರಿಂದ ಮುಕ್ತಿ ಪಡೆಯಬಹುದು. ಸಾಮಾನ್ಯವಾಗಿ ವಯಸ್ಸಾದಂತೆ ಬೆನ್ನು, ಸೊಂಟ ನೋವು ಹೀಗೆ ನಾನಾ ರೀತಿಯ ಸಮಸ್ಯೆಗಳು ಕಂಡು ಬರುತ್ತದೆ. ಇಂತಹ ವಾತ ದೋಷಗಳನ್ನು ಪ್ರಾಥಮಿಕವಾಗಿ ಮನೆಯಲ್ಲಿಯೇ ಕಡಿಮೆ ಮಾಡಿಕೊಳ್ಳುವ ಉತ್ತಮ ವಿಧಾನವೆಂದರೆ ನುಕ್ಕೆಸೊಪ್ಪು ಅಥವಾ ಲಕ್ಕಿ ಸೊಪ್ಪಿನ ಬಳಕೆ. ಇದು ಯಾವ ರೀತಿಯಲ್ಲಿ ನೋವನ್ನು ನಿವಾರಣೆ ಮಾಡುತ್ತದೆ? ಉಪಯೋಗಿಸುವುದು ಹೇಗೆ? ಇಲ್ಲಿದೆ ಮಾಹಿತಿ.

ನೀವು ಬಿಳಿ ನುಕ್ಕೆಸೊಪ್ಪು ಅಥವಾ ಲಕ್ಕಿ ಸೊಪ್ಪಿನ ಬಗ್ಗೆ ಕೇಳಿರಬಹುದು. ಇದು ಕರಾವಳಿ ಮತ್ತು ಮಲೆನಾಡು ಪ್ರದೇಶಗಳಲ್ಲಿ ಹೆಚ್ಚಾಗಿ ಕಂಡುಬರುತ್ತದೆ. ಇದು ತೋಟದ ಬದಿಗಳಲ್ಲಿ ಹೆಚ್ಚಾಗಿ ಕಂಡು ಬರುತ್ತದೆ. ಇದರಿಂದಲೂ ಆರೋಗ್ಯ ಪ್ರಯೋಜನಗಳಿವೆಯೇ ಎಂಬ ಪ್ರಶ್ನೆ ಮೂಡಬಹುದು. ಖಂಡಿತವಾಗಿಯೂ ಇದರಿಂದ ಅನೇಕ ರೀತಿಯ ಪ್ರಯೋಜನಗಳಿವೆ.

ಇದನ್ನೂ ಓದಿ: ಬೆಳಗಿನ ವಾಕಿಂಗ್ ನಂತರ ಯಾವ ರೀತಿಯ ಆಹಾರ ಸೇವನೆ ಮಾಡಬೇಕು?

ಉಪಯೋಗಿಸುವುದು ಹೇಗೆ?

ಡಾ। ಸೌಮ್ಯಶ್ರೀ ಶರ್ಮ ಅವರು ಹೇಳುವ ಪ್ರಕಾರ, ಬಿಳಿ ನುಕ್ಕೆಸೊಪ್ಪುನ್ನು ಅರೆದು ನುಣ್ಣಗೆ ಪೇಸ್ಟ್ ರೀತಿಯಲ್ಲಿ ತಯಾರಿಸಿಕೊಂಡು ಸ್ವಲ್ಪ ಬಿಸಿ ಮಾಡಿ ಕಾಲಿಗೆ ಅಥವಾ ನೋವಿದ್ದಲ್ಲಿ ಹಚ್ಚಿದರೆ ನೋವು ಶಮನವಾಗುತ್ತದೆ. ಅದಲ್ಲದೆ ಎಣ್ಣೆಗೆ ಹಾಕಿ ಸ್ವಲ್ಪ ಕುದಿಸಿ ಇಟ್ಟುಕೊಂಡು, ಆ ತೈಲವನ್ನು ಪ್ರತಿನಿತ್ಯ ಹಚ್ಚಿಕೊಳ್ಳುವುದರಿಂದ ಕುತ್ತಿಗೆ, ಬೆನ್ನು, ಸೊಂಟ ನೋವನ್ನು ಮನೆಯಲ್ಲಿಯೇ ಪ್ರಥಮ ಹಂತದಲ್ಲಿ ಗುಣಪಡಿಸಬಹುದಾಗಿದೆ.

ಇತರ ಪ್ರಯೋಜನಗಳು?

ಈ ಸೊಪ್ಪನ್ನು ಒಣಗಿಸಿ ಕೈಯಲ್ಲಿ ತಿಕ್ಕಿ ಪುಡಿ ಮಾಡಿ, ಆ ಪುಡಿಯಿಂದ ನಸ್ಯ ಮಾಡಿದರೆ ನೆಗಡಿ ಗುಣವಾಗುತ್ತದೆ. ಲಕ್ಕಿ ಸೊಪ್ಪಿನ ರಸಕ್ಕೆ ಜೇನುತುಪ್ಪವನ್ನು ಸೇರಿಸಿ ನಿಯಮಿತವಾಗಿ ಸೇವಿಸಿದರೆ ಕಫ ಅಥವಾ ಜ್ವರ ಇದ್ದಲ್ಲಿ ಕಡಿಮೆಯಾಗುತ್ತದೆ. (ಇದನ್ನು ಬಳಸುವ ಮೊದಲು ನಿಮ್ಮ ವೈದ್ಯರ ಸಲಹೆ ಪಡೆದುಕೊಳ್ಳಿ)

ಆರೋಗ್ಯಕ್ಕೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

Published On - 3:37 pm, Mon, 3 June 24

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ