Health Tips: ರೋಗ ನಿರೋಧಕ ಶಕ್ತಿ ಹೆಚ್ಚಿಸಿಕೊಳ್ಳಲು ಮನೆಯಲ್ಲಿಯೇ ತಯಾರಿಸಬಹುದಾದ ಪಾನೀಯಗಳು

Immunity Booster: ಮನೆಯಲ್ಲಿಯೇ ಅದೆಷ್ಟೋ ಮದ್ದುಗಳಿವೆ. ಸಾಮಾನ್ಯವಾದ ತಲೆನೋವು, ನೆಗಡಿ, ಕಫದಂತಹ ಸಮಸ್ಯೆಗಳನ್ನು ಬಹುಬೇಗ ನಿವಾರಿಸುವ ಗುಣಗಳನ್ನು ಹೊಂದಿದೆ.

Health Tips: ರೋಗ ನಿರೋಧಕ ಶಕ್ತಿ ಹೆಚ್ಚಿಸಿಕೊಳ್ಳಲು ಮನೆಯಲ್ಲಿಯೇ ತಯಾರಿಸಬಹುದಾದ ಪಾನೀಯಗಳು
ಸಾಂದರ್ಭಿಕ ಚಿತ್ರ
Follow us
| Updated By: shruti hegde

Updated on: Jun 25, 2021 | 1:42 PM

ದೇಹದಲ್ಲಿರುವ ಬ್ಯಾಕ್ಟೀರಿಯಾ ವಿರುದ್ಧ ಹೋರಾಡಲು ನಮ್ಮಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚಿಸಿಕೊಳ್ಳಬೇಕು. ಅದರಲ್ಲಿಯೂ ಕೊರೊನಾ ಸೋಂಕಿನ ವಿರುದ್ಧ ಹೋರಾಡಲು ನಮ್ಮ ದೇಹ ಸದೃಢವಾಗಿರಬೇಕು. ಈಗಿರುವಾಗ ಪ್ರತಿನಿತ್ಯ ರೋಗ ನಿರೋಧಕ ಶಕ್ತಿ ಇರುವಂತಹ ಆಹಾರವನ್ನು ಸೇವಿಸುವುದು ಉತ್ತಮವಾಗಿದೆ. ಇದು ವೈರಸ್​ ವಿರುದ್ಧ ಹೋರಾಡಲು ಸಹಾಯ ಮಾಡುತ್ತದೆ. ಹಾಗಿರುವಾಗ ಮನೆಯಲ್ಲಿಯೇ ಸುಲಭವಾಗಿ ತಯಾರಿಸಬಹುದಾದ ಪಾನೀಯಗಳ ಬಗ್ಗೆ ತಿಳಿಯೋಣ.

ತುಳಸಿ ಚಹಾ ತುಳಸಿಯಲ್ಲಿರುವ ರೋಗನಿರೋಧಕ ಶಕ್ತಿ ಸಾಮಾನ್ಯವಾದ ಕಫ, ಶೀತದಂತಹ ಸಮಸ್ಯೆಗಳನ್ನು ನಿವಾರಿಸುತ್ತದೆ. ಓಂ ಕಾಳನ್ನು ಅರ್ಧ ಕಪ್​ ನೀರಿನೊಂದಿಗೆ ಕುದಿಸಿ ಅದಕ್ಕೆ ಒಂದೆರಡು ತುಳಸಿ ಎಲೆಗಳನ್ನು ಸೇರಿಸಿ ಚಿಟಿಕೆ ಕಾಳು ಮೆಣಸಿನ ಪುಡಿ ಮತ್ತು ಜೇನುತುಪ್ಪವನ್ನು ಸೇರಿಸಿ ಕುಡಿಯುವುದರಿಂದ ನಿಮ್ಮ ದೇಹದಲ್ಲಿ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಿಕೊಳ್ಳಲು ಸಹಾಯವಾಗಿದೆ.

ನಿಂಬೆ ಪಾನಕ ಸುಲಭದಲ್ಲಿ ಮನೆಯಲ್ಲೇ ತಯಾರಿಸಬಹುದಾಗ ಪಾನೀಯ ಇದಾಗಿದೆ. ಒಂದು ಚೂರು ಶುಂಠಿ, ದಾಲ್ಚಿನ್ನಿ, ಮೂರರಿಂದ ನಾಲ್ಕು ಕತ್ತರಿಸಿದ ಬೆಳ್ಳುಳ್ಳಿ ಮತ್ತು ಲವಂಗದ ಚೂರು, ಒಂದು ಚಮಚ ಪುದೀನ ರಸ, ನಿಂಬೆ ರಸದೊಂದಿಗೆ ನಾಲ್ಕುಕಪ್​ ನೀರು ಸೇರಿಸಿ ಚೆನ್ನಾಗಿ ಕುದಿಸಿ. ಕೆಮ್ಮು, ನೆಗಡಿಯಂತಹ ಸಮಸ್ಯೆಯಿಂದ ಪರಿಹಾರ ಕಂಡುಕೊಳ್ಳಬಹುದು ಜತೆಗೆ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸಿಕೊಳ್ಳಬಹುದು.

ಮಸಾಲಾ ಚಹ ಶುಂಠಿ, ಲವಂಗ, ಏಲಕ್ಕಿ, ಮೆಣಸಿಕಾಯಿ ಮತ್ತು ತುಳಸಿಯನ್ನು ಸೇರಿಸಿ ಬಿಸಿ ಬಿಸಿ ಮಸಾಲಾ ಚಹ ಮಾಡಿ ಸವಿದರೆ ನಿಮ್ಮ ದೇಹದಲ್ಲಿರುವ ಬ್ಯಾಕ್ಟೀರಿಯಾ ವಿರುದ್ಧ ಹೋರಾಡಲು ಸಹಾಯವಾಗುತ್ತದೆ. ಜತೆಗೆ ಉರಿಯೂತದಂತಹ ಸಮಸ್ಯೆಯಿಂದ ಪರಿಹಾರ ಕಂಡುಕೊಳ್ಳಬಹುದಾಗಿದೆ.

ಮನೆಯಲ್ಲಿಯೇ ಅದೆಷ್ಟೋ ಮದ್ದುಗಳಿವೆ. ಸಾಮಾನ್ಯವಾದ ತಲೆನೋವು, ನೆಗಡಿ, ಕಫದಂತಹ ಸಮಸ್ಯೆಗಳನ್ನು ಬಹುಬೇಗ ನಿವಾರಿಸುವ ಗುಣಗಳನ್ನು ಹೊಂದಿದೆ. ಹಾಗಾಗಿ ಆರೋಗ್ಯವನ್ನು ಸುಧಾರಿಸುವ ಮತ್ತು ನಿಮ್ಮ ದೇಹದಲ್ಲಿ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುವ ಇಂತಹ ಪಾನೀಯಗಳನ್ನು ಸೇವಿಸಿ.

ಇದನ್ನೂ ಓದಿ:

Health Tips: ನೇರಳೆ ಹಣ್ಣಿನ ಬೀಜದಿಂದಲೂ ಎಷ್ಟೆಲ್ಲಾ ಪ್ರಯೋಜನಗಳಿವೆ ಗೊತ್ತಾ?

ಹುಣಸೆ ಬೀಜ: ನೀವು ಮೊಣಕಾಲು ನೋವು ಮತ್ತು ಕೀಲು ನೋವಿನಿಂದ ಬಳಲುತ್ತಿದ್ದೀರಾ?

ಹಮಾಸ್ ಮುಖ್ಯಸ್ಥ ಯಾಹ್ಯಾ ಸಿನ್ವಾರ್ ಸಾವಿನ ಕ್ಷಣದ ವಿಡಿಯೋ ವೈರಲ್
ಹಮಾಸ್ ಮುಖ್ಯಸ್ಥ ಯಾಹ್ಯಾ ಸಿನ್ವಾರ್ ಸಾವಿನ ಕ್ಷಣದ ವಿಡಿಯೋ ವೈರಲ್
ಯಲಾ ಕುನ್ನಿ ಚಿತ್ರದಲ್ಲಿ ಕೋಮಲ್ ಜತೆ ಮಿತ್ರಾಗೆ ಸಿಕ್ಕಿದೆ ಡಿಫರೆಂಟ್ ಪಾತ್ರ
ಯಲಾ ಕುನ್ನಿ ಚಿತ್ರದಲ್ಲಿ ಕೋಮಲ್ ಜತೆ ಮಿತ್ರಾಗೆ ಸಿಕ್ಕಿದೆ ಡಿಫರೆಂಟ್ ಪಾತ್ರ
'ಡಿ. 9ರೊಳಗೆ ನಿರ್ಧಾರ ಪ್ರಕಟಿಸದಿದ್ದರೆ ಸುವರ್ಣ ಸೌಧಕ್ಕೆ ಮುತ್ತಿಗೆ'
'ಡಿ. 9ರೊಳಗೆ ನಿರ್ಧಾರ ಪ್ರಕಟಿಸದಿದ್ದರೆ ಸುವರ್ಣ ಸೌಧಕ್ಕೆ ಮುತ್ತಿಗೆ'
ತೆಲಂಗಾಣದಲ್ಲಿ ಮಿತಿ ಮೀರಿದ ಕೋಳಿಗಳ ಕಳ್ಳತನ
ತೆಲಂಗಾಣದಲ್ಲಿ ಮಿತಿ ಮೀರಿದ ಕೋಳಿಗಳ ಕಳ್ಳತನ
ದೀಪಕ್ ಅರಸ್​ಗೆ ನಿಜಕ್ಕೂ ಏನಾಗಿತ್ತು? ಮಾಹಿತಿ ನೀಡಿದ ಅಮೂಲ್ಯ ಪತಿ ಜಗದೀಶ್
ದೀಪಕ್ ಅರಸ್​ಗೆ ನಿಜಕ್ಕೂ ಏನಾಗಿತ್ತು? ಮಾಹಿತಿ ನೀಡಿದ ಅಮೂಲ್ಯ ಪತಿ ಜಗದೀಶ್
ಚನ್ನಪಟ್ಟಣಕ್ಕೆ ನಾನೇ ಅಭ್ಯರ್ಥಿ ಅಂತ 53ನೇ ಸಲ ಹೇಳಿದ ಡಿಕೆ ಶಿವಕುಮಾರ್!
ಚನ್ನಪಟ್ಟಣಕ್ಕೆ ನಾನೇ ಅಭ್ಯರ್ಥಿ ಅಂತ 53ನೇ ಸಲ ಹೇಳಿದ ಡಿಕೆ ಶಿವಕುಮಾರ್!
ಶಿಗ್ಗಾವಿ ಮತ್ತು ಸಂಡೂರು ಜೆಡಿಎಸ್ ಮುಖಂಡರ ಜೊತೆ ನಾಳೆ ಮಾತುಕತೆ: ನಿಖಿಲ್
ಶಿಗ್ಗಾವಿ ಮತ್ತು ಸಂಡೂರು ಜೆಡಿಎಸ್ ಮುಖಂಡರ ಜೊತೆ ನಾಳೆ ಮಾತುಕತೆ: ನಿಖಿಲ್
ದೀಪಕ್ ಅರಸ್ ನಿಧನ: ಅಂತಿಮ ದರ್ಶನ ಪಡೆದು ಒಡನಾಟ ನೆನಪಿಸಿಕೊಂಡ ತರುಣ್ ಸುಧೀರ್
ದೀಪಕ್ ಅರಸ್ ನಿಧನ: ಅಂತಿಮ ದರ್ಶನ ಪಡೆದು ಒಡನಾಟ ನೆನಪಿಸಿಕೊಂಡ ತರುಣ್ ಸುಧೀರ್
ಜೈಲಿಗೆ ಬಂದ ಸಹೋದರ, ಪತ್ನಿಯ ಭೇಟಿಗೆ ಬೇಸರದಲ್ಲೇ ಬಂದ ದರ್ಶನ್: ವಿಡಿಯೋ
ಜೈಲಿಗೆ ಬಂದ ಸಹೋದರ, ಪತ್ನಿಯ ಭೇಟಿಗೆ ಬೇಸರದಲ್ಲೇ ಬಂದ ದರ್ಶನ್: ವಿಡಿಯೋ
ಅತ್ಯಂತ ದುರದೃಷ್ಟಕರ ರೀತಿಯಲ್ಲಿ ಔಟಾದ ರೋಹಿತ್ ಶರ್ಮಾ
ಅತ್ಯಂತ ದುರದೃಷ್ಟಕರ ರೀತಿಯಲ್ಲಿ ಔಟಾದ ರೋಹಿತ್ ಶರ್ಮಾ