AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಳಿಗಾಲದಲ್ಲಿ ಯೂರಿಕ್ ಆಸಿಡ್ ಕಮ್ಮಿ ಮಾಡುವ ಪಾನೀಯಗಳು

ರಕ್ತದಲ್ಲಿ ಒಂದು ವೇಳೆ ಯೂರಿಕ್ ಆಮ್ಲ ಹೆಚ್ಚಾದರೆ ಅದರಿಂದ ಬಗೆ ಬಗೆಯ ಆರೋಗ್ಯ ಸಮಸ್ಯೆಗಳು ಕಂಡು ಬರುತ್ತದೆ. ಇದನ್ನು ನಿಯಂತ್ರಿಸಲು ಹಲವಾರು ವಿಧಗಳಿವೆ. ಅವುಗಳಲ್ಲಿ ಆರೋಗ್ಯಕರ ಪಾನೀಯಗಳನ್ನು ಸೇವಿಸುವುದು ಕೂಡ ಒಂದು. ಈ ಪಾನೀಯಗಳನ್ನು ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ಸೇವನೆ ಮಾಡುವುದರಿಂದ ಈ ಸಮಸ್ಯೆಯಿಂದ ಮುಕ್ತಿ ಪಡೆಯಬಹುದಾಗಿದೆ. ಹಾಗಾದರೆ ಯಾವ ಪಾನೀಯಗಳನ್ನು ಸೇವನೆ ಮಾಡಬೇಕು? ಯಾವುದು ಒಳ್ಳೆಯದು? ಇಲ್ಲಿದೆ ಮಾಹಿತಿ.

ಚಳಿಗಾಲದಲ್ಲಿ ಯೂರಿಕ್ ಆಸಿಡ್ ಕಮ್ಮಿ ಮಾಡುವ ಪಾನೀಯಗಳು
ಸಾಂದರ್ಭಿಕ ಚಿತ್ರ
ಪ್ರೀತಿ ಭಟ್​, ಗುಣವಂತೆ
| Edited By: |

Updated on: Jan 15, 2025 | 3:16 PM

Share

ಯೂರಿಕ್ ಆಮ್ಲ ಬಗ್ಗೆ ನೀವು ತಿಳಿದಿರಬಹುದು. ರಕ್ತದಲ್ಲಿ ಒಂದು ವೇಳೆ ಈ ಅಂಶ ಹೆಚ್ಚಾದರೆ, ಅದರಿಂದ ಬಗೆ ಬಗೆಯ ಆರೋಗ್ಯ ಸಮಸ್ಯೆಗಳು ಕಂಡು ಬರುತ್ತದೆ. ಇತ್ತೀಚಿನ ವರ್ಷಗಳಲ್ಲಿ ಈ ಸಮಸ್ಯೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದೆ. ಇದರ ಪರಿಣಾಮವಾಗಿ ಗಂಟುಗಳಲ್ಲಿ ನೋವು ಕಾಣಿಸಿಕೊಳ್ಳುತ್ತದೆ. ಹೀಗಾಗಿ ಯೂರಿಕ್ ಆಮ್ಲದ ನಿಯಂತ್ರಣ ಮಾಡಿಕೊಳ್ಳುವುದು ಆದಷ್ಟು ಒಳ್ಳೆಯದು. ಇದನ್ನು ನಿಯಂತ್ರಿಸಲು ಹಲವಾರು ವಿಧಗಳಿವೆ. ಅವುಗಳಲ್ಲಿ ಆರೋಗ್ಯಕರ ಪಾನೀಯಗಳನ್ನು ಸೇವಿಸುವುದು ಕೂಡ ಒಂದು. ಈ ಪಾನೀಯಗಳನ್ನು ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ಸೇವನೆ ಮಾಡುವುದರಿಂದ ಈ ಸಮಸ್ಯೆಯಿಂದ ಮುಕ್ತಿ ಪಡೆಯಬಹುದಾಗಿದೆ. ಹಾಗಾದರೆ ಯಾವ ಪಾನೀಯಗಳನ್ನು ಸೇವನೆ ಮಾಡಬೇಕು? ಯಾವುದು ಒಳ್ಳೆಯದು? ಇಲ್ಲಿದೆ ಮಾಹಿತಿ.

ನಿಂಬೆ ನೀರು

ಬೆಳಿಗ್ಗೆ ಎದ್ದ ತಕ್ಷಣ ಒಂದು ಲೋಟ ಬೆಚ್ಚಗಿರುವ ನಿಂಬೆ ನೀರನ್ನು ಕುಡಿಯುವುದು ದೇಹಕ್ಕೆ ಬಹಳ ಒಳ್ಳೆಯದು. ಇದು ದೇಹದಲ್ಲಿರುವ ಯೂರಿಕ್ ಆಮ್ಲವನ್ನು ಕಡಿಮೆ ಮಾಡಿ ಆಮ್ಲ ಹೆಚ್ಚಾಗದಂತೆ ನೋಡಿ ಕೊಳ್ಳುತ್ತದೆ.

ಅಜ್ವೈನ್ ನೀರು

ಇದರ ನೀರು ಯೂರಿಕ್ ಆಮ್ಲದಿಂದ ಮುಕ್ತಿ ಸಿಗುವಂತೆ ಮಾಡುತ್ತದೆ. ಜೊತೆಗೆ ಉರಿಯೂತದ ಗುಣಲಕ್ಷಣಗಳನ್ನು ಕಡಿಮೆ ಮಾಡುವ ಗುಣವನ್ನು ಹೊಂದಿದೆ.

ನೆಲ್ಲಿಕಾಯಿ ರಸ

ಇದರಲ್ಲಿ ವಿಟಮಿನ್ ಸಿ ಸಮೃದ್ಧವಾಗಿದ್ದು, ದೇಹವನ್ನು ನಿರ್ವಿಷಗೊಳಿಸಲು ಸಹಾಯ ಮಾಡುತ್ತದೆ. ಜೊತೆಗೆ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಿ ದೇಹದಲ್ಲಿ ಹೆಚ್ಚಾದ ಯೂರಿಕ್ ಆಮ್ಲವನ್ನು ಕೂಡ ನಿಯಂತ್ರಣ ಮಾಡುತ್ತದೆ.

ತುಳಸಿ ಚಹಾ

ಈ ಎಲೆಗಳನ್ನು ನೀರಿನಲ್ಲಿ ಚೆನ್ನಾಗಿ ಕುದಿಸಿ ಚಹಾದ ರೀತಿಯಲ್ಲಿ ಕುಡಿಯಬಹುದು. ತುಳಸಿ ಎಲೆಗಳು, ದೇಹದಿಂದ ಹೆಚ್ಚುವರಿ ಯೂರಿಕ್ ಆಮ್ಲವನ್ನು ನಿವಾರಣೆ ಮಾಡುವಲ್ಲಿ ಸಹಕಾರಿಯಾಗುತ್ತದೆ.

ಶುಂಠಿ ಚಹಾ

ಹಸಿ ಶುಂಠಿ ಚೂರುಗಳನ್ನು ನೀರಿನಲ್ಲಿ ಚೆನ್ನಾಗಿ ಕುದಿಸಿ, ಬಳಿಕ ಅದನ್ನು ಸೋಸಿ ಕುಡಿಯುವುದರಿಂದ ದೇಹದಲ್ಲಿ ಉರಿಯೂತ ನಿಯಂತ್ರಣವಾಗುತ್ತದೆ ಜೊತೆಗೆ ನೈಸರ್ಗಿಕವಾಗಿ ಯೂರಿಕ್ ಆಮ್ಲ ಕೂಡ ನಿಯಂತ್ರಣಕ್ಕೆ ಬರುತ್ತದೆ.

ಇದನ್ನೂ ಓದಿ: ಏಲಕ್ಕಿ ಸೇವನೆ ಮಾಡಿದರೆ ಈ ಆರೋಗ್ಯ ಸಮಸ್ಯೆ ಹತ್ತಿರವೂ ಸುಳಿಯುವುದಿಲ್ಲ

ಸೌತೆಕಾಯಿ ಜ್ಯೂಸ್

ಇದರಲ್ಲಿ ಹೆಚ್ಚಿನ ನೀರಿನ ಅಂಶವಿದ್ದು, ಹೆಚ್ಚುವರಿ ಯೂರಿಕ್ ಆಮ್ಲವನ್ನು ಹೊರಹಾಕಲು ಸಹಾಯ ಮಾಡುತ್ತದೆ. ಜೊತೆಗೆ ದೇಹದಲ್ಲಿ ನೀರಿನ ಅಂಶ ಕಡಿಮೆ ಆದಾಗಲೂ ಕೂಡ ಈ ರಸದ ಸೇವನೆ ಮಾಡುವುದು ಬಹಳ ಒಳ್ಳೆಯದು.

ಮೆಂತ್ಯ ನೀರು

ರಾತ್ರಿ ಮಲಗುವಾಗ ಒಂದು ಲೋಟ ನೀರಿಗೆ ಸ್ವಲ್ಪ ಮೆಂತ್ಯ ಕಾಳುಗಳನ್ನು ಹಾಕಿ ಇಡೀ ರಾತ್ರಿ ನೆನೆಹಾಕಿ ಬೆಳಗ್ಗೆ ಎದ್ದು ಖಾಲಿ ಹೊಟ್ಟೆಯಲ್ಲಿ ಆ ನೀರನ್ನು ಕುಡಿಯುವುದರಿಂದ ಕೇವಲ ಬ್ಲಡ್ ಶುಗರ್ ಲೆವೆಲ್ ಮಾತ್ರವಲ್ಲ, ರಕ್ತದಲ್ಲಿರುವ ಯೂರಿಕ್ ಆಮ್ಲ ಕೂಡ ಕಡಿಮೆ ಯಾಗುತ್ತದೆ.

ಬಾರ್ಲಿ ನೀರು

ಒಂದು ಕಪ್ ನೀರಿಗೆ ಬಾರ್ಲಿ ಹಾಕಿ ಐದು ನಿಮಿಷಗಳ ಕಾಲ ಕುದಿಸಿ. ಬಳಿಕ ಅದನ್ನು ಸೋಸಿಕೊಂಡು ಕುಡಿಯಿರಿ. ಇದು ದೇಹದಲ್ಲಿ ಯೂರಿಕ್ ಆಮ್ಲದ ಪ್ರಮಾಣವನ್ನು ನಿಯಂತ್ರಣ ಮಾಡುತ್ತದೆ. ಈ ನೀರನ್ನು ಪ್ರತಿದಿನ ಬೆಳಗ್ಗೆ ಎದ್ದ ತಕ್ಷಣ ಖಾಲಿ ಹೊಟ್ಟೆಯಲ್ಲಿ ಕುಡಿಯುವುದನ್ನು ಮರೆಯಬೇಡಿ.

ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Preethi Bhat Gunavante
Preethi Bhat Gunavante

ಪ್ರೀತಿ ಭಟ್ ಗುಣವಂತೆ – ಮೂಲತಃ ಹೊನ್ನಾವರದ ಗುಣವಂತೆಯವಳು. ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ (M.C.J) ಎಂ.ಎ ಮಾಡಿದ್ದು ಪತ್ರಿಕಾ ರಂಗದಲ್ಲಿ 6 ವರ್ಷಗಳ ಅನುಭವವಿದೆ. ಸುದ್ದಿ ಬಿಡುಗಡೆ ವಾರ ಪತ್ರಿಕೆಯಲ್ಲಿ, ಉದಯವಾಣಿ ದಿನ ಪತ್ರಿಕೆಯಲ್ಲಿ ಕೆಲಸ ಮಾಡಿದ್ದೇನೆ. ಅದಾದ ಬಳಿಕ 2023ರಿಂದ ಟಿವಿ9 ಕನ್ನಡದಲ್ಲಿ ಕೆಲಸ ಮಾಡುತ್ತಿದ್ದೇನೆ. ಅಧ್ಯಾತ್ಮ, ಆರೋಗ್ಯ, ಜೀವನಶೈಲಿಗೆ ಸಂಬಂಧಿಸಿದ ಲೇಖನಗಳನ್ನು ಬರೆಯುವುದರಲ್ಲಿ ಆಸಕ್ತಿ ಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುವಲ್ಲಿ ಪ್ರೀತಿಯಿಂದ, ಪ್ರಾಮಾಣಿಕವಾಗಿ ಪ್ರಯತ್ನಿಸುತ್ತಿದ್ದೇನೆ. ಬರವಣಿಗೆ ಹೊರತು ಪಡಿಸಿದರೆ ನನ್ನ ಆಸಕ್ತಿಕರ ಕ್ಷೇತ್ರ ಪ್ರವಾಸ.

Read More
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ