AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Immunity Booster Juices: ತ್ವರಿತ ಶಕ್ತಿಗಾಗಿ ಈ ಏಳು ಬಗೆಯ ಜ್ಯೂಸ್​ಗಳನ್ನು ಸೇವಿಸುವ ಅಭ್ಯಾಸ ಮಾಡಿಕೊಳ್ಳಿ

ರೋಗನಿರೋಧಕ ಶಕ್ತಿ ಬಲವಾಗಿದ್ದರೆ, ಕೊರೊನಾ, ನೆಗಡಿ, ಕೆಮ್ಮು ಮತ್ತು ಇನ್ನಿತರ ಅಪಾಯವನ್ನು ನಿವಾರಿಸಬಹುದು ಎಂದು ವೈದ್ಯಕೀಯ ತಜ್ಞರು ಹೇಳಿದ್ದಾರೆ. ಹೀಗಾಗಿ ರೋಗನಿರೋಧಕ ಶಕ್ತಿ ಹೆಚ್ಚಿಸಲು ವಿವಿಧ ಜ್ಯೂಸ್​ಗಳನ್ನು ಕುಡಿಯುವ ಅಭ್ಯಾಸ ಮಾಡಿಕೊಳ್ಳಿ.

Immunity Booster Juices: ತ್ವರಿತ ಶಕ್ತಿಗಾಗಿ ಈ ಏಳು ಬಗೆಯ ಜ್ಯೂಸ್​ಗಳನ್ನು ಸೇವಿಸುವ ಅಭ್ಯಾಸ ಮಾಡಿಕೊಳ್ಳಿ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Sep 22, 2021 | 8:53 AM

Share

ಒಂದೆಡೆ ಕೊರೊನಾ, ಇನ್ನೊಂದೆಡೆ ಕಾಲೋಚಿತ ರೋಗಗಳು ಜನರನ್ನು ಕಾಡುತ್ತಿವೆ. ಹೀಗಾಗಿ ನಾವು ಆರೋಗ್ಯವಾಗಿರಲು ರೋಗನಿರೋಧಕ ಶಕ್ತಿ ಬಹಳ ಅವಶ್ಯಕ. ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುವ ಅನೇಕ ಆಹಾರಗಳು ನಮ್ಮ ಅಡುಗೆ ಮನೆಯಲ್ಲಿಯೇ ಲಭ್ಯವಿದೆ. ಆದರೆ ಅವುಗಳ ಬಗ್ಗೆ ಮಾಹಿತಿಯ ಕೊರತೆ ಇದೆ. ರೋಗನಿರೋಧಕ ಶಕ್ತಿ ಬಲವಾಗಿದ್ದರೆ, ಕೊರೊನಾ, ನೆಗಡಿ, ಕೆಮ್ಮು ಮತ್ತು ಇನ್ನಿತರ ಅಪಾಯವನ್ನು ನಿವಾರಿಸಬಹುದು ಎಂದು ವೈದ್ಯಕೀಯ ತಜ್ಞರು ಹೇಳಿದ್ದಾರೆ. ಹೀಗಾಗಿ ರೋಗನಿರೋಧಕ ಶಕ್ತಿ ಹೆಚ್ಚಿಸಲು ವಿವಿಧ ಜ್ಯೂಸ್​ಗಳನ್ನು ಕುಡಿಯುವ ಅಭ್ಯಾಸ ಮಾಡಿಕೊಳ್ಳಿ. ಈ ಜ್ಯೂಸ್​ಗಳಿಂದ ಸುಲಭವಾಗಿ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಬಹುದು. ಹಾಗಿದ್ದರೆ ಯಾವೆಲ್ಲ ಜ್ಯೂಸ್​ಗಳು ನಮ್ಮ ದೇಹಕ್ಕೆ ಸೂಕ್ತ ಎಂದು ತಿಳಿದುಕೊಳ್ಳುವುದು ಸೂಕ್ತ.

ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುವ ಏಳು ಬಗೆಯ ಜ್ಯೂಸ್​ಗಳು

ಟೊಮೆಟೋ ಜ್ಯೂಸ್​ ಟೊಮೆಟೋದಲ್ಲಿ ವಿಟಮಿನ್ ಸಿ, ಇ ಮತ್ತು ಬೀಟಾ ಕ್ಯಾರೋಟಿನ್ ಸಮೃದ್ಧವಾಗಿದೆ. ಇವು ಸ್ವತಂತ್ರ ರಾಡಿಕಲ್‌ಗಳಿಂದ ರಕ್ಷಿಸುತ್ತವೆ ಮತ್ತು ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತವೆ.  ಒಂದು ಲೋಟ ಟೊಮೆಟೋ ಜ್ಯೂಸ್ ಅನ್ನು ಪ್ರತಿದಿನ ಕುಡಿಯುವುದರಿಂದ ಚರ್ಮ ಮತ್ತು ರಕ್ತಕ್ಕೆ ಸಂಬಂಧಿಸಿದ ಸಮಸ್ಯೆಗಳು ಕಡಿಮೆಯಾಗಿ ಕರುಳು ಶುದ್ಧವಾಗುತ್ತದೆ.

ಕಿತ್ತಳೆ ಜ್ಯೂಸ್​ ನಮ್ಮ ದೇಹವು ಆರೋಗ್ಯಕರವಾಗಿ ಕಾರ್ಯನಿರ್ವಹಿಸಲು ವಿಟಮಿನ್ ಸಿ ಅಗತ್ಯವಿದೆ. ಇದು ದೇಹದ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ. ಕಿತ್ತಳೆ ವೈದ್ಯಕೀಯ ಶಕ್ತಿಯನ್ನು ಹೆಚ್ಚಿಸುವುದರ ಜೊತೆಗೆ, ಸೋಂಕಿನ ವಿರುದ್ಧ ಹೋರಾಡುವಲ್ಲಿ ಪರಿಣಾಮಕಾರಿಯಾಗಿ ಸಹಾಯ ಮಾಡುತ್ತದೆ.

ಸಿಟ್ರಸ್ ಹಣ್ಣುಗಳಾದ ಕಿತ್ತಳೆ, ದ್ರಾಕ್ಷಿ ಮತ್ತು ನಿಂಬೆಹಣ್ಣುಗಳಲ್ಲಿ ವಿಟಮಿನ್ ಸಿ ಮತ್ತು ಉತ್ಕರ್ಷಣ ನಿರೋಧಕಗಳು ಹೇರಳವಾಗಿವೆ. ಇವುಗಳು ಸಾಮಾನ್ಯ ಸೋಂಕುಗಳಿಂದ ನಮ್ಮನ್ನು ಸುರಕ್ಷಿತವಾಗಿರಿಸುವುದಲ್ಲದೆ ಹೃದಯ ಮತ್ತು ದೇಹದ ಆರೋಗ್ಯಕ್ಕೆ ಸಹಕಾರ ನೀಡುತ್ತವೆ.

ಕ್ಯಾರೆಟ್ ಜ್ಯೂಸ್  ಕ್ಯಾರೆಟ್‌ಗಳಲ್ಲಿ ಕಬ್ಬಿಣ ಮತ್ತು ಕ್ಯಾಲ್ಸಿಯಂ ಜೊತೆಗೆ ವಿಟಮಿನ್ ಎ, ಸಿ ಮತ್ತು ಇ ಸಮೃದ್ಧವಾಗಿದೆ. ಇದರಿಂದ ತಯಾರಿಸಿದ ಜ್ಯೂಸ್​, ಹೊಟ್ಟೆ ಉಬ್ಬುವಿಕೆಯನ್ನು ತೊಡೆದುಹಾಕಲು ಸಹಾಯ ಮಾಡುತ್ತದೆ. ಈ ಜ್ಯೂಸ್​ಗೆ ಸ್ವಲ್ಪ ಶುಂಠಿ ಮತ್ತು ಅರಿಶಿಣವನ್ನು ಸೇರಿಸುವುದರಿಂದ ನೆಗಡಿ ಮತ್ತು ಕೆಮ್ಮಿನಂತಹ ಸಮಸ್ಯೆಗಳನ್ನು ನಿವಾರಿಸಬಹುದು.

ಕಲ್ಲಂಗಡಿ ಜ್ಯೂಸ್  ಕಲ್ಲಂಗಡಿಯಲ್ಲಿ ವಿಟಮಿನ್ ಎ, ಸಿ, ಮೆಗ್ನೀಸಿಯಮ್ ಮತ್ತು ಸತುವು ಸಮೃದ್ಧವಾಗಿದೆ. ಇವುಗಳು ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುವಲ್ಲಿ ಸಹಾಯ ಮಾಡುತ್ತವೆ. ಕಲ್ಲಂಗಡಿ ಜ್ಯೂಸ್ ಸೋಂಕುಗಳನ್ನು ಕಡಿಮೆ ಮಾಡಲು ಹಾಗೂ ಸ್ನಾಯು ನೋವುಗಳನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ.

ಕಿವಿ ಹಣ್ಣು, ಸ್ಟ್ರಾಬೆರಿ ಜ್ಯೂಸ್  ಕಿವಿ ಮತ್ತು ಸ್ಟ್ರಾಬೆರಿ ಹಣ್ಣುಗಳು ಉತ್ಕರ್ಷಣ ನಿರೋಧಕಗಳು ಮತ್ತು ವಿಟಮಿನ್ ಸಿ ಯಿಂದ ಸಮೃದ್ಧವಾಗಿವೆ. ಇವು ಸೋಂಕಿನ ವಿರುದ್ಧ ಹೋರಾಡಲು ಸಹಾಯ ಮಾಡುತ್ತವೆ.

ಲೆಟಿಸ್ ಲೆಟಿಸ್​ನಲ್ಲಿ ವಿಟಮಿನ್ ಎ, ಬಿ ಮತ್ತು ಸಿ ಸಮೃದ್ಧವಾಗಿದೆ. ಇದರಿಂದ ತಯಾರಿಸಿದ ಜ್ಯೂಸ್​ ಕುಡಿಯುವುದರಿಂದ ಕಬ್ಬಿಣ ಮತ್ತು ಕ್ಯಾಲ್ಸಿಯಂನಂತಹ ಸಾಕಷ್ಟು ಪೋಷಕಾಂಶಗಳು ದೊರೆಯುತ್ತವೆ. ಈ ಜ್ಯೂಸ್​ ಪ್ರತಿಕಾಯಗಳ ಉತ್ಪಾದನೆಯನ್ನು ಹೆಚ್ಚಿಸುತ್ತದೆ.

ಸೇಬು, ಕ್ಯಾರೆಟ್, ಕಿತ್ತಳೆ ಮಿಶ್ರಿತ ಜ್ಯೂಸ್ ಸೇಬು, ಕ್ಯಾರೆಟ್ ಮಿಶ್ರಿತ ಜ್ಯೂಸ್ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ. ಇವುಗಳಲ್ಲಿ ವಿಟಮಿನ್ ಎ, ವಿಟಮಿನ್ ಬಿ -6, ಪೊಟ್ಯಾಸಿಯಮ್ ಮತ್ತು ಫೋಲಿಕ್ ಆಸಿಡ್ ಸಮೃದ್ಧವಾಗಿದೆ. ಇವು ತ್ವರಿತ ಶಕ್ತಿಯನ್ನು ನೀಡಲು ಮತ್ತು ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಲು ಸಹಾಯ ಮಾಡುತ್ತವೆ.

ಇದನ್ನೂ ಓದಿ: Mosambi Juice Benefits: ಮೂಸಂಬಿ ಜ್ಯೂಸ್​ ಆರೋಗ್ಯಕ್ಕೆ ಉತ್ತಮ; ವಾರಕ್ಕೆ ಎರಡು ಬಾರಿಯಾದರೂ ಮೂಸಂಬಿ ಜ್ಯೂಸ್​ ಸವಿಯಿರಿ

Beetroot Juice: ಬೀಟ್​ರೂಟ್​​ ಜ್ಯೂಸ್​ ಕುಡಿಯುವುದರಿಂದಾಗುವ ಅನೇಕ ಆರೋಗ್ಯಕರ ಬದಲಾವಣೆಗಳ ಬಗ್ಗೆ ಗಮನಹರಿಸಿ

ಬಳ್ಳಾರಿಯಲ್ಲಿ ಜನಾರ್ದನ ರೆಡ್ಡಿ ಮನೆ ಮುಂದೆ ಫೈರಿಂಗ್‌: ಶಾಕಿಂಗ್ ರಿಯಾಕ್ಷನ್
ಬಳ್ಳಾರಿಯಲ್ಲಿ ಜನಾರ್ದನ ರೆಡ್ಡಿ ಮನೆ ಮುಂದೆ ಫೈರಿಂಗ್‌: ಶಾಕಿಂಗ್ ರಿಯಾಕ್ಷನ್
ಹೊಸ ವರ್ಷಾಚರಣೆಗೆ ಆಂಧ್ರದಲ್ಲಿ ಅಪರೂಪದ ಟಗರು ಕಾಳಗ
ಹೊಸ ವರ್ಷಾಚರಣೆಗೆ ಆಂಧ್ರದಲ್ಲಿ ಅಪರೂಪದ ಟಗರು ಕಾಳಗ
ಈ ತಿಂಗಳಿಂದಲೇ ಬಜೆಟ್ ಸಿದ್ಧತೆ ಆರಂಭ ಎಂದ ಸಿಎಂ ಸಿದ್ದರಾಮಯ್ಯ
ಈ ತಿಂಗಳಿಂದಲೇ ಬಜೆಟ್ ಸಿದ್ಧತೆ ಆರಂಭ ಎಂದ ಸಿಎಂ ಸಿದ್ದರಾಮಯ್ಯ
ಹೊಸ ವರ್ಷದ ಪ್ರಯುಕ್ತ ನೀಲಕಂಠವರ್ಣಿ ಸ್ವಾಮಿಗೆ ವಿಶೇಷ ಅಭಿಷೇಕ
ಹೊಸ ವರ್ಷದ ಪ್ರಯುಕ್ತ ನೀಲಕಂಠವರ್ಣಿ ಸ್ವಾಮಿಗೆ ವಿಶೇಷ ಅಭಿಷೇಕ
ಬಾಂಗ್ಲಾದಲ್ಲಿ ಮತ್ತೋರ್ವ ಹಿಂದೂ ಮೇಲೆ ಹಲ್ಲೆ ನಡೆಸಿ, ಬೆಂಕಿ ಹಚ್ಚಿದ ಗುಂಪು
ಬಾಂಗ್ಲಾದಲ್ಲಿ ಮತ್ತೋರ್ವ ಹಿಂದೂ ಮೇಲೆ ಹಲ್ಲೆ ನಡೆಸಿ, ಬೆಂಕಿ ಹಚ್ಚಿದ ಗುಂಪು
46 ಎಸೆತಗಳಲ್ಲಿ 58 ರನ್ ಬಾರಿಸಿ ತಂಡ ಗೆಲ್ಲಿಸಿದ ಬಾಬರ್ ಆಝಂ
46 ಎಸೆತಗಳಲ್ಲಿ 58 ರನ್ ಬಾರಿಸಿ ತಂಡ ಗೆಲ್ಲಿಸಿದ ಬಾಬರ್ ಆಝಂ
ರಾಹುಲ್ ಗಾಂಧಿಯನ್ನು ಶ್ರೀರಾಮನಿಗೆ ಹೋಲಿಸಿದ ಕಾಂಗ್ರೆಸ್ ನಾಯಕ ನಾನಾ ಪಟೋಲೆ
ರಾಹುಲ್ ಗಾಂಧಿಯನ್ನು ಶ್ರೀರಾಮನಿಗೆ ಹೋಲಿಸಿದ ಕಾಂಗ್ರೆಸ್ ನಾಯಕ ನಾನಾ ಪಟೋಲೆ
ಬಿಗ್​​ಬಾಸ್​​ ಶೋನಲ್ಲಿ ಈ ವಾರ ಏನು ಮಾಡ್ತೀನಿ ನೋಡ್ತಿರಿ: ಸುದೀಪ್
ಬಿಗ್​​ಬಾಸ್​​ ಶೋನಲ್ಲಿ ಈ ವಾರ ಏನು ಮಾಡ್ತೀನಿ ನೋಡ್ತಿರಿ: ಸುದೀಪ್
ಮದ್ಯದ ಅಮಲಲ್ಲಿ ಫುಟ್ಪಾತ್​​ಗೆ ಕಾರು ನುಗ್ಗಿಸಿದ ಚಾಲಕ: ಬಾಲಕಿ ಜಸ್ಟ್​​ಮಿಸ್
ಮದ್ಯದ ಅಮಲಲ್ಲಿ ಫುಟ್ಪಾತ್​​ಗೆ ಕಾರು ನುಗ್ಗಿಸಿದ ಚಾಲಕ: ಬಾಲಕಿ ಜಸ್ಟ್​​ಮಿಸ್
ಕರ್ನಾಟಕದವರನ್ನ ಬಿಟ್ಟು ಬೇರೆಯವರಿಗೆ ಮನೆ ಕೊಡಲ್ಲ: ಸಚಿವ ಜಮೀರ್ ಖಡಕ್ ಮಾತು
ಕರ್ನಾಟಕದವರನ್ನ ಬಿಟ್ಟು ಬೇರೆಯವರಿಗೆ ಮನೆ ಕೊಡಲ್ಲ: ಸಚಿವ ಜಮೀರ್ ಖಡಕ್ ಮಾತು