AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರೋಗ ನಿರೋಧಕ ಶಕ್ತಿ ಹೆಚ್ಚಿಸಲು ಈ ಮೂರು ಪದಾರ್ಥಗಳನ್ನು ಖಾಲಿ ಹೊಟ್ಟೆಯಲ್ಲಿ ತಿನ್ನಬೇಕು

ಕೊರೊನಾ ಸೋಂಕಿನ ವಿರುದ್ಧ ಹೋರಾಡಲು ಮನುಷ್ಯನಿಗೆ ರೋಗ ನಿರೋಧಕ ಶಕ್ತಿ ಬೇಕೆ ಬೇಕು. ಯಾವ ವ್ಯಕ್ತಿಯ ದೇಹದಲ್ಲಿ ಇಮ್ಯೂನಿಟಿ ಪವರ್ ಕಡಿಮೆ ಇರುತ್ತದೆಯೋ ಆ ದೇಹದೊಳಗೆ ಕೊರೊನಾ ಸೋಂಕು ಸುಲಭವಾಗಿ ಪ್ರವೇಶಿಸುತ್ತದೆ. ಹೀಗಾಗಿ ಈ ವೇಳೆ ದೇಹದ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುವುದು ಒಳಿತು.

ರೋಗ ನಿರೋಧಕ ಶಕ್ತಿ ಹೆಚ್ಚಿಸಲು ಈ ಮೂರು ಪದಾರ್ಥಗಳನ್ನು ಖಾಲಿ ಹೊಟ್ಟೆಯಲ್ಲಿ ತಿನ್ನಬೇಕು
ಸಾಂಕೇತಿಕ ಚಿತ್ರ
sandhya thejappa
| Edited By: |

Updated on: May 23, 2021 | 8:00 AM

Share

ಬೆಂಗಳೂರು: ಕೊರೊನಾ ಆರ್ಭಟ ಕಡಿಮೆಯಾಗಿದೆ ಎಂದು ಯೋಚಿಸುವ ಹೊತ್ತಿಗೆ ಅದರ ಎರಡನೇ ಅಲೆ ದೇಶದಾದ್ಯಂತ ಬಂದು ಅಪ್ಪಳಿಸಿದೆ. ಬಾಳಿ ಬದುಕಬೇಕಾದ ಅದೆಷ್ಟೋ ಜೀವಿಗಳನ್ನು ಕೊರೊನಾ ಬಲಿ ಪಡೆಯುತ್ತಿದೆ. ಮನೆ ಮಂದಿಯನ್ನು ಕಳೆದುಕೊಂಡ ಕುಟುಂಬಸ್ಥರು ಕಣ್ಣೀರಲ್ಲಿ ಕೈ ತೊಳೆಯುವಂತಾಗಿದೆ. ಈ ಬಾರಿಯಂತು ಯುವ ಸಮೂಹಕ್ಕೆ ಕೊರೊನಾ ಲಗ್ಗೆ ಇಟ್ಟಿದೆ. ಸಾವಿನ ಸಂಖ್ಯೆಯಂತೂ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ. ಹಾಗಾಗಿ ಇಂತಹ ಸಂದಿಗ್ಧ ಸಮಯಲ್ಲಿ ಒಳ್ಳೆಯ ಆಹಾರವನ್ನು ಸೇವಿಸುವುದು ತುಂಬಾ ಮುಖ್ಯ. ಇದರ ಜೊತೆಗೆ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುವುದು ಕೂಡಾ ಅಷ್ಟೇ ಮುಖ್ಯವಾಗಿರುತ್ತದೆ.

ಕೊರೊನಾ ಸೋಂಕಿನ ವಿರುದ್ಧ ಹೋರಾಡಲು ಮನುಷ್ಯನಿಗೆ ರೋಗ ನಿರೋಧಕ ಶಕ್ತಿ ಬೇಕೆ ಬೇಕು. ಯಾವ ವ್ಯಕ್ತಿಯ ದೇಹದಲ್ಲಿ ಇಮ್ಯೂನಿಟಿ ಪವರ್ ಕಡಿಮೆ ಇರುತ್ತದೆಯೋ ಆ ದೇಹದೊಳಗೆ ಕೊರೊನಾ ಸೋಂಕು ಸುಲಭವಾಗಿ ಪ್ರವೇಶಿಸುತ್ತದೆ. ಹೀಗಾಗಿ ಈ ವೇಳೆ ದೇಹದ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುವುದು ಒಳಿತು. ಹಾಗಾದರೆ ಯಾವ ಪದಾರ್ಥವನ್ನು ಸೇವಿಸುವುದರಿಂದ ರೋಗ ನಿರೋಧಕ ಶಕ್ತಿ ಹೆಚ್ಚಾಗುತ್ತದೆ? ಜೊತೆಗೆ ಯಾವ ಸಮಯಕ್ಕೆ ಸ್ವೀಕರಿಸಬೇಕು?

ನಾವು ತಿಳಿಸಲು ಹೊಟಿರುವ ಆ ಮೂರು ಪದಾರ್ಥಗಳನ್ನು ಖಾಲಿ ಹೊಟ್ಟೆಯಲ್ಲಿ ತಿನ್ನಬೇಕು. ಖಾಲಿ ಹೊಟ್ಟೆಯಲ್ಲಿ ಪದಾರ್ಥಗಳನ್ನು ಸೇವಿಸುವುದರಿಂದ ರೋಗ ನಿರೋಧಕ ಶಕ್ತಿ ಹೆಚ್ಚಾಗುತ್ತದೆ. ಮೂರು ಪದಾರ್ಥಗಳನ್ನು ಖಾಲಿ ಹೊಟ್ಟೆಯಲ್ಲಿ ಸ್ವೀಕರಿಸಿದಾಗ ಜೀಣಾಂಗ ಕಾರ್ಯ ಚೆನ್ನಾಗಿರುತ್ತದೆ. ಈ ಕಾರಣ ಖಾಲಿ ಹೊಟ್ಟೆಯಲ್ಲಿ ಸೇವಿಸುವುದು ಉತ್ತಮ.

*ಬೆಳ್ಳುಳ್ಳಿ ಎಲ್ಲರ ಮನೆಯಲ್ಲಿ ಬೆಳ್ಳುಳ್ಳಿ ಇದ್ದೆ ಇರುತ್ತದೆ. ಅಡುಗೆಗೆ ಇದನ್ನು ಬಳಸುತ್ತಾರೆ. ಸಾರಿನ ಒಗ್ಗರಣೆಗೆ ಬೆಳ್ಳುಳ್ಳಿ ಬೇಕೆ ಬೇಕು. ಮಾಂಸದ ಅಡುಗೆಯ ರುಚಿಯನ್ನು ಈ ಬೆಳ್ಳುಳ್ಳಿ ಹೆಚ್ಚಿಸುತ್ತದೆ. ಮೂಲವ್ಯಾಧಿ, ಮಲಬದ್ಧತೆ, ಕಿವಿ ನೋವು, ರಕ್ತದೊತ್ತಡ ಸೇರಿದಂತೆ ಹಲವು ಕಾಯಿಲೆಗಳಿಗೆ ಬೆಳ್ಳುಳ್ಳಿ ರಾಮಬಾಣ. ಇದು ಹಸಿವನ್ನು ಹೆಚ್ಚಿಸುವ ಗುಣವನ್ನು ಹೊಂದಿದೆ. ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಬೆಳ್ಳುಳಿಯನ್ನು ಸೇವಿಸಿದಾಗ ಒಂದೇ ಗಂಟೆಯಲ್ಲಿ ಜೀರ್ಣವಾಗುತ್ತದೆ. ಕೊಲೆಸ್ಟ್ರಾಲ್ ಕಡಿಮೆ ಮಾಡುವ ಜೊತೆಗೆ ದೇಹದಲ್ಲಿರುವ ವಿಷ ಪದಾರ್ಥಗಳನ್ನು ಮಲ ಮತ್ತು ಮೂತ್ರದ ಮೂಲಕ ಹೊರ ಹಾಕಲು ಸಹಾಯಕವಾಗುತ್ತದೆ. ಇದನ್ನು ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಸೇವಿಸುವುದರಿಂದ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸುತ್ತದೆ. ಅಲ್ಲದೆ ಹೃದಯದ ಆರೋಗ್ಯವನ್ನು ಸುಧಾರಿಸುತ್ತದೆ.

ಬೆಳ್ಳುಳ್ಳಿ

*ನೆಲ್ಲಿಕಾಯಿ ಸಹಜವಾಗಿ ಎಲ್ಲರಿಗೂ ಇಷ್ಟವಾಗುವ ಕಾಯಿ ಎಂದರೆ ನೆಲ್ಲಿಕಾಯಿ. ಇದು ಆರೋಗ್ಯಕ್ಕೆ ತುಂಬಾ ಒಳ್ಳೆಯದು. ನೆಲ್ಲಿಕಾಯಿಯನ್ನು ತಿಂದ ಕೊನೆಯಲ್ಲಿ ನೀರು ಕುಡಿದಾಗ ಬಾಯಿಯೆಲ್ಲಾ ಸಿಹಿಯಾಗುತ್ತದೆ. ಇದರ ಉಪ್ಪಿನ ಕಾಯಿ ತಿನ್ನಲು ಇನ್ನು ರುಚಿಯಾಗಿರುತ್ತದೆ. ನೆಲ್ಲಿಕಾಯಿ ಚೂರ್ಣ ಮತ್ತು ಕೊತ್ತಂಬರಿಯನ್ನು ಸಮ ಪ್ರಮಾಣದಲ್ಲಿ ತೆಗೆದುಕೊಂಡು ನೀರಿನಲ್ಲಿ ನೆನೆಸಿಡಬೇಕು. ಬೆಳಿಗ್ಗೆ ಚೆನ್ನಾಗಿ ಕಿವುಚಿ ಸೋಸಬೇಕು. ಅದಕೆಕ ಕಲ್ಲು ಸಕ್ಕರೆ ಪುಡಿ ಸೇರಿಸಿ ಸೇವಿಸುವುದರಿಂದ ತಲೆ ಸುತ್ತುವಿಕೆ ನಿವಾರಣೆಯಾಗುತ್ತದೆ. ವಿಟಮಿನ್ ಸಿಯನ್ನು ಹೊಂದಿರುವ ನೆಲ್ಲಿಕಾಯಿಯನ್ನು ಬಿಸಿ ನೀರಿನೊಂದಿಗೆ ಖಾಲಿ ಹೊಟ್ಟೆಗೆ ಸೇವಿದಾಗ ದೇಹದ ರೋಗ ನಿರೋಧಕ ಶಕ್ತಿ ಹೆಚ್ಚಾಗುತ್ತದೆ.

ನೆಲ್ಲಿಕಾಯಿ

*ಜೇನುತುಪ್ಪ ಬಹು ಹಿಂದಿನ ಕಾಲದಿಂದಲೂ ಜೇನುತುಪ್ಪವನ್ನು ಔಷಧಿಗೆ ಬಳಕೆ ಮಾಡುತ್ತಾ ಬಂದಿದ್ದಾರೆ. ತೂಕವನ್ನು ಕಡಿಮೆ ಮಾಡಿಕೊಳ್ಳುವವರಿಗೆ ಈ ಜೇನು ತುಪ್ಪದ ಸಾಮರ್ಥ್ಯದ ಬಗ್ಗೆ ಅರಿವಿರುತ್ತದೆ. ಬಿಸಿ ನೀರಿನೊಂದಿಗೆ ಒಂದು ಚಮಚ ಜೇನುತುಪ್ಪ ಬೆರೆಸಿ ಪತ್ರಿದಿನ ಬೆಳಿಗ್ಗೆ ಖಾಲಿ ಹೊಟ್ಟೆಗೆ ಕುಡಿದರೆ ತೂಕ ಕಡಿಮೆಯಾಗುವ ಜೊತೆಗೆ ರೋಗ ನಿರೋಧಕ ಶಕ್ತಿ ಹೆಚ್ಚಾಗುತ್ತದೆ.

ಜೇನುತುಪ್ಪ

ಇದನ್ನೂ ಓದಿ

ನಿಮ್ಮ ಮನೆಯನ್ನು ಸುಂದರವಾಗಿಸಲು ಇಲ್ಲಿದೆ ಸರಳ ಉಪಾಯ!

Health Tips: ದುಡ್ಡು ಖರ್ಚು ಮಾಡದೇ, ಜಿಮ್​ಗೆ ಹೋಗದೇ ಫಿಟ್ ಆಗಿ ಇರುವುದು ಹೇಗೆ?

(Honey amla and garlic should be consumed on an empty stomach to boost immunity)

Follow Us
ಅವಳಿ ಮಕ್ಕಳನ್ನ ಕೊಂದು ತಾಯಿ ಆತ್ಮಹತ್ಯೆಗೆ ಯತ್ನಿಸಿದ್ಯಾಕೆ?
ಅವಳಿ ಮಕ್ಕಳನ್ನ ಕೊಂದು ತಾಯಿ ಆತ್ಮಹತ್ಯೆಗೆ ಯತ್ನಿಸಿದ್ಯಾಕೆ?
‘ಭೀಮ ತೀರದಲ್ಲಿ’ ಸಿನಿಮಾ ಮರು ಬಿಡುಗಡೆ ಯಾಕೆ? ಕಾರಣ ತಿಳಿಸಿದ ಚಿತ್ರತಂಡ
‘ಭೀಮ ತೀರದಲ್ಲಿ’ ಸಿನಿಮಾ ಮರು ಬಿಡುಗಡೆ ಯಾಕೆ? ಕಾರಣ ತಿಳಿಸಿದ ಚಿತ್ರತಂಡ
ಸಚಿವರ ಬರ್ತ್​​ಡೇ: ಸರ್ಕಾರಿ ಶಾಲೆ ಮಕ್ಕಳಿಗೆ, ಪೋಷಕರಿಗೆ ವಿಮಾನಯಾನ ಭಾಗ್ಯ
ಸಚಿವರ ಬರ್ತ್​​ಡೇ: ಸರ್ಕಾರಿ ಶಾಲೆ ಮಕ್ಕಳಿಗೆ, ಪೋಷಕರಿಗೆ ವಿಮಾನಯಾನ ಭಾಗ್ಯ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್
ಮಿಸ್ ಆಗಿ ಅಮೆರಿಕದ 3 ಫೈಟರ್​​ ಜೆಟ್​​ಗಳನ್ನು ಹೊಡೆದುರುಳಿಸಿದ ಕುವೈತ್​​
ಮಿಸ್ ಆಗಿ ಅಮೆರಿಕದ 3 ಫೈಟರ್​​ ಜೆಟ್​​ಗಳನ್ನು ಹೊಡೆದುರುಳಿಸಿದ ಕುವೈತ್​​
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾ ಬೆಂಬಲಕ್ಕೆ ನಿಂತ ಭಕ್ತ ಸಮೂಹ
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾ ಬೆಂಬಲಕ್ಕೆ ನಿಂತ ಭಕ್ತ ಸಮೂಹ
ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು, ಈಗಲೂ ಇದೆ: HDK ಸ್ಫೋಟಕ ಮಾತು
ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು, ಈಗಲೂ ಇದೆ: HDK ಸ್ಫೋಟಕ ಮಾತು
ಸ್ವಾಮಿ ವಿವೇಕಾನಂದರ ಕೆನಡಾ ಭೇಟಿಯನ್ನು ಉಲ್ಲೇಖಿಸಿದ ಪ್ರಧಾನಿ ಕಾರ್ನಿ
ಸ್ವಾಮಿ ವಿವೇಕಾನಂದರ ಕೆನಡಾ ಭೇಟಿಯನ್ನು ಉಲ್ಲೇಖಿಸಿದ ಪ್ರಧಾನಿ ಕಾರ್ನಿ
Lunar Eclipse 2026: ಚಂದ್ರ ಗ್ರಹಣ ಯಾರಿಗೆ ಶುಭ ಸುದ್ದಿ ತರುತ್ತೆ?
Lunar Eclipse 2026: ಚಂದ್ರ ಗ್ರಹಣ ಯಾರಿಗೆ ಶುಭ ಸುದ್ದಿ ತರುತ್ತೆ?