AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Guru Purnima 2024: ಗುರು ಪೂರ್ಣಿಮೆಯ ದಿನ ಈ ವಿಶೇಷ ಕೆಲಸ ಮಾಡಿ ನಿಮ್ಮ ಗುರುಗಳಿಗೆ ಗೌರವ ನೀಡಿ

ಗುರುಗಳಿಗೆ ಗೌರವ ಸಲ್ಲಿಸುವುದು ನಮ್ಮ ಸಂಸ್ಕ್ರತಿ. ಇನ್ನೇನು ಗುರು ಪೂರ್ಣಿಮೆಯ ಆಚರಣೆ ಹತ್ತಿರದಲ್ಲಿದೆ ಆ ದಿನ ಯಾವುದಾದರೂ ಒಂದು ವಿಶೇಷ ಕೆಲಸ ಮಾಡುವ ಮೂಲಕ ನಮ್ಮ ಗುರುಗಳಿಗೆ ಗೌರವ ಸಲ್ಲಿಸುವುದು ಒಳಿತು. ಈ ಆಚರಣೆ ಹೀಗೆ ಇರಬೇಕೆಂದಿಲ್ಲ. ನಿಮ್ಮ ಮನಸ್ಸಿಗೆ ತೃಪ್ತಿ ಸಿಗುವ ಕೆಲಸ ಯಾವುದಾದರೂ ಒಳ್ಳೆಯದೇ. ಹಾಗಾಗಿ ನಿಮ್ಮ ಗುರುಗಳಿಗೆ ಗೌರವ ಸೂಚಿಸಲು ಉತ್ತಮ ಕೆಲಸ ಮಾಡಿ.

Guru Purnima 2024: ಗುರು ಪೂರ್ಣಿಮೆಯ ದಿನ ಈ ವಿಶೇಷ ಕೆಲಸ ಮಾಡಿ ನಿಮ್ಮ ಗುರುಗಳಿಗೆ ಗೌರವ ನೀಡಿ
ಸಾಂದರ್ಭಿಕ ಚಿತ್ರ
ಪ್ರೀತಿ ಭಟ್​, ಗುಣವಂತೆ
| Updated By: ಅಕ್ಷಯ್​ ಪಲ್ಲಮಜಲು​​|

Updated on: Jul 20, 2024 | 11:05 AM

Share

ಗುರು ಯಾವ ಕ್ಷೇತ್ರದಲ್ಲಿದ್ದರೂ ಅವರಿಗೆ ಗೌರವ ಸಲ್ಲಿಸುವುದು ನಮ್ಮ ಸಂಸ್ಕ್ರತಿ. ಇನ್ನೇನು ಗುರು ಪೂರ್ಣಿಮೆಯ ಆಚರಣೆ ಹತ್ತಿರದಲ್ಲಿದೆ ಆ ದಿನ ಯಾವುದಾದರೂ ಒಂದು ವಿಶೇಷ ಕೆಲಸ ಮಾಡುವ ಮೂಲಕ ನಮ್ಮ ಗುರುಗಳಿಗೆ ಗೌರವ ಸಲ್ಲಿಸುವುದು ಒಳಿತು. ಈ ಆಚರಣೆ ಹೀಗೆ ಇರಬೇಕೆಂದಿಲ್ಲ. ನಿಮ್ಮ ಮನಸ್ಸಿಗೆ ತೃಪ್ತಿ ಸಿಗುವ ಕೆಲಸ ಯಾವುದಾದರೂ ಒಳ್ಳೆಯದೇ. ಹಾಗಾಗಿ ನಿಮ್ಮ ಗುರುಗಳಿಗೆ ಗೌರವ ಸೂಚಿಸಲು ಉತ್ತಮ ಕೆಲಸ ಮಾಡಿ.

ಇತ್ತೀಚಿನ ದಿನಗಳಲ್ಲಿ ಆರೋಗ್ಯ ಸಮಸ್ಯೆಗಳು ಹೆಚ್ಚಾಗುತ್ತಿದೆ ಕೆಲವು ಹಳ್ಳಿಗಳಲ್ಲಿ ಅಥವಾ ನಮ್ಮ ಸುತ್ತಮುತ್ತಲಿರುವ ಜನರಿಗೆ ಕೆಲವು ರೋಗಗಳ ಬಗ್ಗೆ ಸರಿಯಾದ ಮಾಹಿತಿ ಇಲ್ಲ. ಅದೂ ಅಲ್ಲದೆ ಕೆಲವು ಭಾಗದಲ್ಲಿ ರೋಗಗಳ ಬಗ್ಗೆ ಇರುವ ತಪ್ಪು ತಿಳುವಳಿಕೆ ಆಸ್ಪತ್ರೆಗೆ ಹೋಗುವುದನ್ನು ತಡೆಯುತ್ತದೆ, ಇದು ಕಾಯಿಲೆಯ ಉಲ್ಬಣಕ್ಕೆ ಕಾರಣವಾಗಬಹುದು. ಹಾಗಾಗಿ ಈ ಗುರು ಪೂರ್ಣಿಮೆಯ ದಿನ ಸಾಧ್ಯವಾದಷ್ಟು ನಮ್ಮ ನೆರೆಹೊರೆಯವರಿಗೆ ಈ ಸಮಯದಲ್ಲಿ ಹೆಚ್ಚಾಗುತ್ತಿರುವ ರೋಗಗಳ ಬಗ್ಗೆ ಮಾಹಿತಿ ನೀಡಿ. ಯಾವ ರೀತಿಯ ಆಹಾರ ಸೇವನೆ ಮಾಡಬೇಕು? ಮಾಡಬಾರದು? ಅಥವಾ ಕಾಯಿಲೆಗಳು ಹೆಚ್ಚಾಗುತ್ತಿರಲು ಕಾರಣವೇನು ಎಂಬ ಬಗ್ಗೆ ತಿಳಿ ಹೇಳಿ.

ಇದನ್ನೂ ಓದಿ: ಆರೋಗ್ಯದ ವಿಷಯದಲ್ಲಿ ಗುರು, ಶಿಷ್ಯನಿಗೆ ನೀಡುವ ಆರೋಗ್ಯಕರ ಸಲಹೆಗಳು

ಸಾಮಾನ್ಯವಾಗಿ ಡೆಂಗ್ಯೂ, ಚಿಕನ್ ಗುನ್ಯ, ವಿಷಮಶೀತ ಜ್ವರ, ಕಾಲರಾ, ಮಲೇರಿಯಾ, ಚರ್ಮದ ಸಮಸ್ಯೆ ಹೀಗೆ ಅನೇಕ ರೋಗಗಳು ಮಳೆಗಾಲದಲ್ಲಿ ಹೆಚ್ಚಾಗಿ ಕಂಡು ಬರುತ್ತವೆ. ಇದನ್ನು ಹೇಗೆ ನಿಯಂತ್ರಣ ಮಾಡಬೇಕು? ಇದಕ್ಕೆ ಕಾರಣವೇನು? ಹೀಗೆ ಕೆಲವು ಅಗತ್ಯ ಮಾಹಿತಿಗಳನ್ನು ನೀಡುವುದರಿಂದ ಕಾಯಿಲೆ ಹೆಚ್ಚಾಗುವುದನ್ನು ಸಣ್ಣ ಮಟ್ಟದಲ್ಲಿ ನಿಯಂತ್ರಣ ಮಾಡಬಹುದು ಜೊತೆಗೆ ಸಮಾಜಕ್ಕೆ ನಮ್ಮ ಕಡೆಯಿಂದ ಚಿಕ್ಕ ಅಳಿಲು ಸೇವೆಯೂ ಆಗುತ್ತದೆ. ನಮಗೆ ಗೊತ್ತಿರುವ ಆರೋಗ್ಯ ಸಲಹೆಗಳನ್ನು ಅದರ ಬಗ್ಗೆ ತಿಳಿಯದವರೊಂದಿಗೆ ಹಂಚಿಕೊಳ್ಳುವುದರಿಂದ ಅವರಿಗೂ ಆ ರೋಗದ ಬಗ್ಗೆ ಮಾಹಿತಿ ನೀಡಿದಂತಾಗುತ್ತದೆ. ಇದರಿಂದ ನಿಮ್ಮ ಸುತ್ತಮುತ್ತಲಿರುವ ಜನರ ಆರೋಗ್ಯ ಕಾಪಾಡಬಹುದು, ಈ ಒಳ್ಳೆಯ ಕೆಲಸ ನಿಮ್ಮ ಗುರುಗಳಿಗೂ ಗೌರವ ನೀಡಿದಂತಾಗುತ್ತದೆ. ಆದರೆ ನೀವು ಆರೋಗ್ಯ ಸಲಹೆಗಳನ್ನು ನೀಡುವ ಮೊದಲು ಆರೋಗ್ಯ ತಜ್ಞರನ್ನು ಸಂಪರ್ಕಿಸಿ, ಬಳಿಕ ಸರಿಯಾದ ಮಾಹಿತಿಯನ್ನು ನೀಡಿ.

ಆರೋಗ್ಯಕ್ಕೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ