AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Milk: ಹಸಿ ಹಾಲು ಹಾಗೂ ಕುದಿಸಿದ ಹಾಲು ಇವುಗಳಲ್ಲಿ ಯಾವುದು ಉತ್ತಮ?

ಹಾಲು ಕುಡಿದರೆ ಒಂದು ಪರಿಪೂರ್ಣ ಎನ್ನುವ ಭಾವನೆಯುಂಟಾಗುತ್ತದೆ. ಹಾಲು ಅನೇಕ ಆರೋಗ್ಯ ಪೋಷಕಾಂಶಗಳನ್ನು ಒಳಗೊಂಡಿದೆ. ಬಹುತೇಕ ಎಲ್ಲಾ ರೀತಿಯ ಪೋಷಕಾಂಶಗಳು ಲಭ್ಯವಿದೆ.

Milk: ಹಸಿ ಹಾಲು ಹಾಗೂ ಕುದಿಸಿದ ಹಾಲು ಇವುಗಳಲ್ಲಿ ಯಾವುದು ಉತ್ತಮ?
Milk
Follow us
TV9 Web
| Updated By: ನಯನಾ ರಾಜೀವ್

Updated on: Aug 27, 2022 | 9:47 AM

ಹಾಲು ಕುಡಿದರೆ ಒಂದು ಪರಿಪೂರ್ಣ ಎನ್ನುವ ಭಾವನೆಯುಂಟಾಗುತ್ತದೆ. ಹಾಲು ಅನೇಕ ಆರೋಗ್ಯ ಪೋಷಕಾಂಶಗಳನ್ನು ಒಳಗೊಂಡಿದೆ. ಬಹುತೇಕ ಎಲ್ಲಾ ರೀತಿಯ ಪೋಷಕಾಂಶಗಳು ಲಭ್ಯವಿದೆ. ಅದಕ್ಕಾಗಿಯೇ ಉತ್ತಮ ಆರೋಗ್ಯಕ್ಕಾಗಿ ಹಾಲು ಕುಡಿಯಲು ಸಲಹೆ ನೀಡಲಾಗುತ್ತದೆ.

ಆದರೆ ಕೆಲವರು ಹಸಿ ಹಾಲು ಕುಡಿಯುತ್ತಾರೆ. ಕೆಲವರು ಕುದಿಸಿದ ಹಾಲು ಕುಡಿಯುತ್ತಾರೆ. ಈ ಎರಡರಲ್ಲಿ ಯಾವುದು ಆರೋಗ್ಯಕ್ಕೆ ಉತ್ತಮ ಎಂಬ ಪ್ರಶ್ನೆ ಅನೇಕರಲ್ಲಿದೆ.

ಈ ವಿಷಯದ ಬಗ್ಗೆ ವೈದ್ಯಕೀಯ ತಜ್ಞರು ಹೇಳುವುದೇನೆಂದರೆ ಹಸಿ ಹಾಲು ಕುಡಿಯುವುದು ಆರೋಗ್ಯಕ್ಕೆ ಒಳ್ಳೆಯದಲ್ಲ. ಯುಎಸ್ ಡಿಪಾರ್ಟ್ಮೆಂಟ್ ಆಫ್ ಹೆಲ್ತ್ನ ಫುಡ್ ಅಂಡ್ ಡ್ರಗ್ ಅಡ್ಮಿನಿಸ್ಟ್ರೇಷನ್ ಪ್ರಕಾರ, ಹಸಿ ಹಾಲಿನಲ್ಲಿ ಹಾನಿಕಾರಕ ಬ್ಯಾಕ್ಟೀರಿಯಾಗಳಿವೆ. ಎಕೋಲಿ, ಲಿಸ್ಟೇರಿಯಾ ಮತ್ತು ಸಾಲ್ಮೊನೆಲ್ಲಾ ಮುಂತಾದ ಬ್ಯಾಕ್ಟೀರಿಯಾಗಳು ಹಸಿ ಹಾಲಿನಲ್ಲಿ ಇರುವ ಸಾಧ್ಯತೆಯಿದೆ. ಅದಕ್ಕಾಗಿಯೇ ಹಸಿ ಹಾಲು ಕುಡಿಯುವುದರಿಂದ ಆಹಾರ ವಿಷವಾಗುವ ಸಾಧ್ಯತೆಗಳಿವೆ.

ಹಸಿ ಹಾಲನ್ನು ಕುಡಿಯುವುದರಿಂದ ಅದರಲ್ಲಿರುವ ಬ್ಯಾಕ್ಟೀರಿಯಾಗಳಿಂದ ನಮ್ಮ ಆರೋಗ್ಯಕ್ಕೆ ಹಾನಿಯಾಗುತ್ತದೆ. ಪರಿಣಾಮವಾಗಿ, ಅತಿಸಾರ ಮತ್ತು ನಿರ್ಜಲೀಕರಣದಂತಹ ಸಮಸ್ಯೆಗಳು ಉದ್ಭವಿಸುತ್ತವೆ. ದೇಹದಲ್ಲಿ ಆಮ್ಲದ ಪ್ರಮಾಣವೂ ಹೆಚ್ಚಾಗುತ್ತದೆ. ಹಾಲು ಕರೆಯುವ ಸಮಯದಲ್ಲಿ ಆ ಪ್ರಾಣಿಗಳ ಕೆಚ್ಚಲು ಕಲುಷಿತಗೊಳ್ಳುತ್ತದೆ.

ಅಲ್ಲದೆ..ಹಾಲು ಕರೆಯುವವರ ಕೈಗಳು ಅಥವಾ ಸುತ್ತಮುತ್ತಲಿನ ಪ್ರದೇಶಗಳು ಅಥವಾ ಬಟ್ಟಲು ಕೂಡ ಕಲುಷಿತವಾಗಬಹುದು. ನೀವು ಆ ಹಾಲನ್ನು ನೇರವಾಗಿ ಹಸಿಯಾಗಿ ಕುಡಿದರೆ, ಆ ಎಲ್ಲಾ ಮಾಲಿನ್ಯವು ನಿಮ್ಮ ದೇಹವನ್ನು ಸೇರುತ್ತದೆ.

ಇದು ಆರೋಗ್ಯಕ್ಕೆ ಒಳ್ಳೆಯದಲ್ಲ ಎನ್ನುತ್ತಾರೆ ತಜ್ಞರು. ಅದಕ್ಕಾಗಿಯೇ ಹಾಲನ್ನು ಚೆನ್ನಾಗಿ ಕುದಿಸಿದ ನಂತರ ಕುಡಿಯುವುದು ಯಾವುದೇ ಬ್ಯಾಕ್ಟೀರಿಯಾವನ್ನು ಕೊಲ್ಲುತ್ತದೆ.

ಮತ್ತು ಮಳೆಗಾಲ ಮತ್ತು ಚಳಿಗಾಲದಲ್ಲಿ ರಾತ್ರಿ ಬಿಸಿ ಹಾಲನ್ನು ಕುಡಿದರೆ ಚರ್ಮವು ಬಿಸಿಯಾಗಿರುತ್ತದೆ. ಇದಲ್ಲದೆ, ನಿದ್ರೆ ಕೂಡ ಉತ್ತಮವಾಗಿರುತ್ತದೆ. ಬಿಸಿ ಹಾಲಿನಲ್ಲಿ ಕ್ಯಾಲ್ಸಿಯಂ, ವಿಟಮಿನ್-ಡಿ ಮತ್ತು ಪೊಟ್ಯಾಸಿಯಮ್ ಕೂಡ ಇದೆ. ಇವು ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಬಿಸಿ ಹಾಲು ಯಾವುದೇ ಸಮಯದಲ್ಲಿ ಸುಲಭವಾಗಿ ಜೀರ್ಣವಾಗುತ್ತದೆ.

ಆರೋಗ್ಯಕ್ಕೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ದೆಹಲಿಯ ಅಕ್ಷರಧಾಮದಲ್ಲಿ ಮಾಕ್ ಡ್ರಿಲ್; ಮತ್ತೆ ಹೊತ್ತಿದ ದೀಪಗಳು
ದೆಹಲಿಯ ಅಕ್ಷರಧಾಮದಲ್ಲಿ ಮಾಕ್ ಡ್ರಿಲ್; ಮತ್ತೆ ಹೊತ್ತಿದ ದೀಪಗಳು
ನಗರದ ಹಲವಾರು ಏರಿಯಾಗಳ ನಿವಾಸಿಗಳಿಗೆ ಸೈರನ್ ಕೇಳಿಸಿಲ್ಲ
ನಗರದ ಹಲವಾರು ಏರಿಯಾಗಳ ನಿವಾಸಿಗಳಿಗೆ ಸೈರನ್ ಕೇಳಿಸಿಲ್ಲ
ಮಗಳ ಸಿನಿಮಾ ಪಯಣಕ್ಕೆ ದರ್ಶನ್, ಸುದೀಪ್ ಬೆಂಬಲ ನೆನೆದ ನಟ ಪ್ರೇಮ್
ಮಗಳ ಸಿನಿಮಾ ಪಯಣಕ್ಕೆ ದರ್ಶನ್, ಸುದೀಪ್ ಬೆಂಬಲ ನೆನೆದ ನಟ ಪ್ರೇಮ್
ಭಾರತದ ದಾಳಿಗೆ ಬಲಿಯಾದ ಉಗ್ರರಿಗೆ ಪಾಕಿಸ್ತಾನದ ಧ್ವಜ ಹೊದಿಸಿ ಅಂತ್ಯಕ್ರಿಯೆ
ಭಾರತದ ದಾಳಿಗೆ ಬಲಿಯಾದ ಉಗ್ರರಿಗೆ ಪಾಕಿಸ್ತಾನದ ಧ್ವಜ ಹೊದಿಸಿ ಅಂತ್ಯಕ್ರಿಯೆ
ರಾಜತಾಂತ್ರಿಕವಾಗಿಯೂ ಭಾರತ ಪಾಕಿಸ್ತಾನದ ವಿರುದ್ಧ ಗೆದ್ದಿದೆ: ಡಾ ಮಂಜುನಾಥ್
ರಾಜತಾಂತ್ರಿಕವಾಗಿಯೂ ಭಾರತ ಪಾಕಿಸ್ತಾನದ ವಿರುದ್ಧ ಗೆದ್ದಿದೆ: ಡಾ ಮಂಜುನಾಥ್
ಬೆಂಗಳೂರಿನಲ್ಲಿ ಬ್ಲ್ಯಾಕ್ ಔಟ್: ಕಗ್ಗತ್ತಲಾದ ರಾಜಧಾನಿ, ವಿಡಿಯೋ ನೋಡಿ
ಬೆಂಗಳೂರಿನಲ್ಲಿ ಬ್ಲ್ಯಾಕ್ ಔಟ್: ಕಗ್ಗತ್ತಲಾದ ರಾಜಧಾನಿ, ವಿಡಿಯೋ ನೋಡಿ
ಆಪರೇಷನ್​ ಸಿಂಧೂರ್: ಭಾರತ ವಿವೇಕಯುತದಿಂದ ಹೆಜ್ಜೆ ಇಟ್ಟಿದೆ, ​ಗುರೂಜಿ
ಆಪರೇಷನ್​ ಸಿಂಧೂರ್: ಭಾರತ ವಿವೇಕಯುತದಿಂದ ಹೆಜ್ಜೆ ಇಟ್ಟಿದೆ, ​ಗುರೂಜಿ
ಆಪರೇಷನ್ ಸಿಂಧೂರ್: ಮೋದಿಯ ನಾಯಕತ್ವವ ಕೊಂಡಾಡಿದ ತಾರಾ
ಆಪರೇಷನ್ ಸಿಂಧೂರ್: ಮೋದಿಯ ನಾಯಕತ್ವವ ಕೊಂಡಾಡಿದ ತಾರಾ
ಸರ್ಕಾರದ ನಿರ್ಧಾರ ಸರಿ ಇದೆ: ಆಪರೇಷನ್ ಸಿಂಧೂರ್ ಬಗ್ಗೆ ಶಿವಣ್ಣ ಪ್ರತಿಕ್ರಿಯೆ
ಸರ್ಕಾರದ ನಿರ್ಧಾರ ಸರಿ ಇದೆ: ಆಪರೇಷನ್ ಸಿಂಧೂರ್ ಬಗ್ಗೆ ಶಿವಣ್ಣ ಪ್ರತಿಕ್ರಿಯೆ
ಸೇನೆ ಮತ್ತು ಪ್ರಧಾನಿ ಮೋದಿಯವರಿಗೆ ಅಭಿನಂದನೆಗಳು: ಮುತಾಲಿಕ್
ಸೇನೆ ಮತ್ತು ಪ್ರಧಾನಿ ಮೋದಿಯವರಿಗೆ ಅಭಿನಂದನೆಗಳು: ಮುತಾಲಿಕ್