AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Milk: ಹಸಿ ಹಾಲು ಹಾಗೂ ಕುದಿಸಿದ ಹಾಲು ಇವುಗಳಲ್ಲಿ ಯಾವುದು ಉತ್ತಮ?

ಹಾಲು ಕುಡಿದರೆ ಒಂದು ಪರಿಪೂರ್ಣ ಎನ್ನುವ ಭಾವನೆಯುಂಟಾಗುತ್ತದೆ. ಹಾಲು ಅನೇಕ ಆರೋಗ್ಯ ಪೋಷಕಾಂಶಗಳನ್ನು ಒಳಗೊಂಡಿದೆ. ಬಹುತೇಕ ಎಲ್ಲಾ ರೀತಿಯ ಪೋಷಕಾಂಶಗಳು ಲಭ್ಯವಿದೆ.

Milk: ಹಸಿ ಹಾಲು ಹಾಗೂ ಕುದಿಸಿದ ಹಾಲು ಇವುಗಳಲ್ಲಿ ಯಾವುದು ಉತ್ತಮ?
Milk
TV9 Web
| Edited By: |

Updated on: Aug 27, 2022 | 9:47 AM

Share

ಹಾಲು ಕುಡಿದರೆ ಒಂದು ಪರಿಪೂರ್ಣ ಎನ್ನುವ ಭಾವನೆಯುಂಟಾಗುತ್ತದೆ. ಹಾಲು ಅನೇಕ ಆರೋಗ್ಯ ಪೋಷಕಾಂಶಗಳನ್ನು ಒಳಗೊಂಡಿದೆ. ಬಹುತೇಕ ಎಲ್ಲಾ ರೀತಿಯ ಪೋಷಕಾಂಶಗಳು ಲಭ್ಯವಿದೆ. ಅದಕ್ಕಾಗಿಯೇ ಉತ್ತಮ ಆರೋಗ್ಯಕ್ಕಾಗಿ ಹಾಲು ಕುಡಿಯಲು ಸಲಹೆ ನೀಡಲಾಗುತ್ತದೆ.

ಆದರೆ ಕೆಲವರು ಹಸಿ ಹಾಲು ಕುಡಿಯುತ್ತಾರೆ. ಕೆಲವರು ಕುದಿಸಿದ ಹಾಲು ಕುಡಿಯುತ್ತಾರೆ. ಈ ಎರಡರಲ್ಲಿ ಯಾವುದು ಆರೋಗ್ಯಕ್ಕೆ ಉತ್ತಮ ಎಂಬ ಪ್ರಶ್ನೆ ಅನೇಕರಲ್ಲಿದೆ.

ಈ ವಿಷಯದ ಬಗ್ಗೆ ವೈದ್ಯಕೀಯ ತಜ್ಞರು ಹೇಳುವುದೇನೆಂದರೆ ಹಸಿ ಹಾಲು ಕುಡಿಯುವುದು ಆರೋಗ್ಯಕ್ಕೆ ಒಳ್ಳೆಯದಲ್ಲ. ಯುಎಸ್ ಡಿಪಾರ್ಟ್ಮೆಂಟ್ ಆಫ್ ಹೆಲ್ತ್ನ ಫುಡ್ ಅಂಡ್ ಡ್ರಗ್ ಅಡ್ಮಿನಿಸ್ಟ್ರೇಷನ್ ಪ್ರಕಾರ, ಹಸಿ ಹಾಲಿನಲ್ಲಿ ಹಾನಿಕಾರಕ ಬ್ಯಾಕ್ಟೀರಿಯಾಗಳಿವೆ. ಎಕೋಲಿ, ಲಿಸ್ಟೇರಿಯಾ ಮತ್ತು ಸಾಲ್ಮೊನೆಲ್ಲಾ ಮುಂತಾದ ಬ್ಯಾಕ್ಟೀರಿಯಾಗಳು ಹಸಿ ಹಾಲಿನಲ್ಲಿ ಇರುವ ಸಾಧ್ಯತೆಯಿದೆ. ಅದಕ್ಕಾಗಿಯೇ ಹಸಿ ಹಾಲು ಕುಡಿಯುವುದರಿಂದ ಆಹಾರ ವಿಷವಾಗುವ ಸಾಧ್ಯತೆಗಳಿವೆ.

ಹಸಿ ಹಾಲನ್ನು ಕುಡಿಯುವುದರಿಂದ ಅದರಲ್ಲಿರುವ ಬ್ಯಾಕ್ಟೀರಿಯಾಗಳಿಂದ ನಮ್ಮ ಆರೋಗ್ಯಕ್ಕೆ ಹಾನಿಯಾಗುತ್ತದೆ. ಪರಿಣಾಮವಾಗಿ, ಅತಿಸಾರ ಮತ್ತು ನಿರ್ಜಲೀಕರಣದಂತಹ ಸಮಸ್ಯೆಗಳು ಉದ್ಭವಿಸುತ್ತವೆ. ದೇಹದಲ್ಲಿ ಆಮ್ಲದ ಪ್ರಮಾಣವೂ ಹೆಚ್ಚಾಗುತ್ತದೆ. ಹಾಲು ಕರೆಯುವ ಸಮಯದಲ್ಲಿ ಆ ಪ್ರಾಣಿಗಳ ಕೆಚ್ಚಲು ಕಲುಷಿತಗೊಳ್ಳುತ್ತದೆ.

ಅಲ್ಲದೆ..ಹಾಲು ಕರೆಯುವವರ ಕೈಗಳು ಅಥವಾ ಸುತ್ತಮುತ್ತಲಿನ ಪ್ರದೇಶಗಳು ಅಥವಾ ಬಟ್ಟಲು ಕೂಡ ಕಲುಷಿತವಾಗಬಹುದು. ನೀವು ಆ ಹಾಲನ್ನು ನೇರವಾಗಿ ಹಸಿಯಾಗಿ ಕುಡಿದರೆ, ಆ ಎಲ್ಲಾ ಮಾಲಿನ್ಯವು ನಿಮ್ಮ ದೇಹವನ್ನು ಸೇರುತ್ತದೆ.

ಇದು ಆರೋಗ್ಯಕ್ಕೆ ಒಳ್ಳೆಯದಲ್ಲ ಎನ್ನುತ್ತಾರೆ ತಜ್ಞರು. ಅದಕ್ಕಾಗಿಯೇ ಹಾಲನ್ನು ಚೆನ್ನಾಗಿ ಕುದಿಸಿದ ನಂತರ ಕುಡಿಯುವುದು ಯಾವುದೇ ಬ್ಯಾಕ್ಟೀರಿಯಾವನ್ನು ಕೊಲ್ಲುತ್ತದೆ.

ಮತ್ತು ಮಳೆಗಾಲ ಮತ್ತು ಚಳಿಗಾಲದಲ್ಲಿ ರಾತ್ರಿ ಬಿಸಿ ಹಾಲನ್ನು ಕುಡಿದರೆ ಚರ್ಮವು ಬಿಸಿಯಾಗಿರುತ್ತದೆ. ಇದಲ್ಲದೆ, ನಿದ್ರೆ ಕೂಡ ಉತ್ತಮವಾಗಿರುತ್ತದೆ. ಬಿಸಿ ಹಾಲಿನಲ್ಲಿ ಕ್ಯಾಲ್ಸಿಯಂ, ವಿಟಮಿನ್-ಡಿ ಮತ್ತು ಪೊಟ್ಯಾಸಿಯಮ್ ಕೂಡ ಇದೆ. ಇವು ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಬಿಸಿ ಹಾಲು ಯಾವುದೇ ಸಮಯದಲ್ಲಿ ಸುಲಭವಾಗಿ ಜೀರ್ಣವಾಗುತ್ತದೆ.

ಆರೋಗ್ಯಕ್ಕೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು