AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Turmeric Water: ಬಿಸಿ ನೀರಿಗೆ ಚಿಟಿಕೆ ಅರಿಶಿಣ ಪುಡಿ ಮಿಶ್ರಣ ಮಾಡಿ ಸೇವಿಸಿ; ಆರೋಗ್ಯ ಪ್ರಯೋಜನಗಳೆಷ್ಟಿವೆ? ಮಾಹಿತಿ ಇಲ್ಲಿದೆ

ದೇಹದಲ್ಲಿ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸಿಕೊಳ್ಳುವ ಮೂಲಕ ಆರೋಗ್ಯವನ್ನು ಸುಧಾರಿಸಿಕೊಳ್ಳಬಹುದು. ಹಾಗಿರುವಾಗ ಅರಿಶಿಣ ಮತ್ತು ನೀರು ಸೇವನೆಯಿಂದ ಆರೋಗ್ಯಕ್ಕೆ ಎಷ್ಟು ಪ್ರಯೋಜನಗಳಿವೆ ಎಂಬ ಮಾಹಿತಿ ತಿಳಿಯೋಣ

Turmeric Water: ಬಿಸಿ ನೀರಿಗೆ ಚಿಟಿಕೆ ಅರಿಶಿಣ ಪುಡಿ ಮಿಶ್ರಣ ಮಾಡಿ ಸೇವಿಸಿ; ಆರೋಗ್ಯ ಪ್ರಯೋಜನಗಳೆಷ್ಟಿವೆ? ಮಾಹಿತಿ ಇಲ್ಲಿದೆ
ಸಂಗ್ರಹ ಚಿತ್ರ
TV9 Web
| Edited By: |

Updated on:Oct 26, 2021 | 8:11 AM

Share

ಆರೋಗ್ಯ ಸುಧಾರಣೆಯ ಬಗ್ಗೆ ಗಮನಹರಿಸಿದಾಗಲೆಲ್ಲಾ ನಮ್ಮ ಆರೋಗ್ಯಕ್ಕೆ ಸರಿಹೊಂದುವ ಆಹಾರ ಪದಾರ್ಥಗಳಾವುವು ಎಂಬ ಪ್ರಶ್ನೆ ಕಾಡುತ್ತದೆ. ಬದಲಾದ ಜೀವನಶೈಲಿ, ಅನಾರೋಗ್ಯದಿಂದ ಮನಸ್ಸು ಹದಗೆಡುತ್ತದೆ. ಹೀಗಿರುವಾಗ ನಿಮ್ಮ ಆರೋಗ್ಯ ಸಮಸ್ಯೆಯನ್ನು ಮೊದಲು ದೂರ ಮಾಡಿಕೊಳ್ಳುವ ಬಗ್ಗೆ ಹೆಚ್ಚು ಗಮನಕೊಡಿ. ನೀವು ಸೇವಿಸುವ ಆಹಾರ ವ್ಯವಸ್ಥೆಯಿಂದ ಆರೋಗ್ಯವನ್ನು ಬಹುಬೇಗ ಸುಧಾರಿಸಿಕೊಳ್ಳಬಹುದಾಗಿದೆ. ಜತೆಗೆ ದೇಹದಲ್ಲಿ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸಿಕೊಳ್ಳುವ ಮೂಲಕ ಆರೋಗ್ಯವನ್ನು ಸುಧಾರಿಸಿಕೊಳ್ಳಬಹುದು. ಹಾಗಿರುವಾಗ ಅರಿಶಿಣ ಮತ್ತು ನೀರು ಸೇವನೆಯಿಂದ ಆರೋಗ್ಯಕ್ಕೆ ಎಷ್ಟು ಪ್ರಯೋಜನಗಳಿವೆ ಎಂಬ ಮಾಹಿತಿ ತಿಳಿಯೋಣ.

ಅರಿಶಿಣ ನೀರು ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ. ನಿಮ್ಮ ದೇಹದಲ್ಲಿನ ಕಲ್ಮಶವನ್ನು ಹೊರಹಾಕಲು ಸಹಾಯ ಮಾಡುತ್ತದೆ. ಶೀತ, ಜ್ವರದಿಂದ ನಿಮ್ಮನ್ನು ದೂರವಿರಿಸುತ್ತದೆ. ಅರಿಶಿಣ ನೀರಿನ ಪ್ರಯೋಜನಗಳ ಕುರಿತಾಗಿ ಮಾಹಿತಿ ಇಲ್ಲಿದೆ.

ಸಂಧಿವಾತ ಸಂಧಿವಾತ ಸಮಸ್ಯೆ ಇತ್ತೀಚೆಗೆ ಮಹಿಳೆಯರಲ್ಲಿ ಸಾಮಾನ್ಯ ಸಮಸ್ಯೆಯಾಗಿದೆ. ಅರಿಶಿಣವು ಉರಿಯೂತ ಗುಣಲಕ್ಷಣಗಳನ್ನು ಹೊಂದಿದೆ. ಇದು ಕೀಲು ನೋವನ್ನು ನಿವಾರಿಸಲು ಸಹಾಯ ಮಾಡುತ್ತದೆ. ಒಂದು ಲೋಟ ಅರಿಶಿಣ ನೀರನ್ನು ಕುಡಿಯುವುದರಿಂದ ಕೀಲು ನೋವು ನಿವಾರಣೆಯಾಗುತ್ತದೆ.

ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ ಅರಿಶಿಣದಲ್ಲಿರುವ ಕರ್ಕ್ಯುಮಿನ್​ ರೋಗ ನಿರೋಧಕ ಶಕ್ತಿ ಹೆಚ್ಚಿಸಲು ಸಹಾಯ ಮಾಡುತ್ತದೆ. ಇದು ರೋಗದಿಂದ ಆದಷ್ಟು ದೂರವಿರಲು ಸಹಾಯಕವಾಗಿದೆ. ಅರಿಶಿಣದಲ್ಲಿರುವ ಬ್ಯಾಕ್ಟೀರಿಯಾ ವಿರೋಧಿ ಗುಣವು ಒಟ್ಟಾರೆ ಆರೋಗ್ಯಕ್ಕೆ ಒಳ್ಳೆಯದು.

ತೂಕ ನಷ್ಟಕ್ಕೆ ಸಹಾಯಕ ತೂಕ ನಷ್ಟಕ್ಕೆ ಮುಖ್ಯವಾಗಿ ಗಮನವಹಿಸುವ ವಿಷಯವೆಂದರೆ ಜೀರ್ಣಾಂಗ ವ್ಯವಸ್ಥೆಯನ್ನು ಸುಧಾರಿಸುವುದು. ನೀವು ಅರಿಶಿಣ ನೀರನ್ನು ಸೇವಿಸುವ ಮೂಲಕ ಜೀರ್ಣಾಂಗ ವ್ಯವಸ್ಥೆಯನ್ನು ಸುಧಾರಿಸಿಕೊಳ್ಳಬಹುದು.

ಚರ್ಮಕ್ಕೆ ಒಳ್ಳೆಯದು ಅರಿಶಿಣವು ಉತ್ಕರ್ಷಣ ನಿರೋಧಕಗಳನ್ನು ಹೊಂದಿರುತ್ತದೆ. ಅರಿಶಿಣ ನೀರಿನ ಬಳಕೆಯು ಸ್ವತಂತ್ರ ರಾಡಿಕಲ್​ಗಳಿಂದ ಉಂಟಾಗುವ ಹಾನಿಯನ್ನು ತಡೆಯಲು ಸಹಾಯಕವಾಗಿದೆ. ಇದನ್ನು ನಿಯಮಿತವಾಗಿ ಸೇವಿಸುವ ಮೂಲಕ ಅಲರ್ಜಿಯಂತಹ ಸಮಸ್ಯೆಗಳಿಂದ ಪರಿಹಾರ ಕಂಡುಕೊಳ್ಳಬಹುದು.

ಇದನ್ನೂ ಓದಿ:

Health Tips: ನಿಮ್ಮ ಹಲ್ಲುಗಳನ್ನು ಬಿಳುಪಾಗಿಸಲು ಇಲ್ಲಿವೆ ಸಲಹೆಗಳು​

Health Tips: ನಿಮ್ಮ ಈ ಕೆಲವು ಅಭ್ಯಾಸಗಳು ಮೂತ್ರಪಿಂಡಕ್ಕೆ ಹಾನಿಕಾರಕ!

Published On - 8:10 am, Tue, 26 October 21

ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ