Turmeric Water: ಬಿಸಿ ನೀರಿಗೆ ಚಿಟಿಕೆ ಅರಿಶಿಣ ಪುಡಿ ಮಿಶ್ರಣ ಮಾಡಿ ಸೇವಿಸಿ; ಆರೋಗ್ಯ ಪ್ರಯೋಜನಗಳೆಷ್ಟಿವೆ? ಮಾಹಿತಿ ಇಲ್ಲಿದೆ

ದೇಹದಲ್ಲಿ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸಿಕೊಳ್ಳುವ ಮೂಲಕ ಆರೋಗ್ಯವನ್ನು ಸುಧಾರಿಸಿಕೊಳ್ಳಬಹುದು. ಹಾಗಿರುವಾಗ ಅರಿಶಿಣ ಮತ್ತು ನೀರು ಸೇವನೆಯಿಂದ ಆರೋಗ್ಯಕ್ಕೆ ಎಷ್ಟು ಪ್ರಯೋಜನಗಳಿವೆ ಎಂಬ ಮಾಹಿತಿ ತಿಳಿಯೋಣ

Turmeric Water: ಬಿಸಿ ನೀರಿಗೆ ಚಿಟಿಕೆ ಅರಿಶಿಣ ಪುಡಿ ಮಿಶ್ರಣ ಮಾಡಿ ಸೇವಿಸಿ; ಆರೋಗ್ಯ ಪ್ರಯೋಜನಗಳೆಷ್ಟಿವೆ? ಮಾಹಿತಿ ಇಲ್ಲಿದೆ
ಸಂಗ್ರಹ ಚಿತ್ರ
Follow us
| Updated By: shruti hegde

Updated on:Oct 26, 2021 | 8:11 AM

ಆರೋಗ್ಯ ಸುಧಾರಣೆಯ ಬಗ್ಗೆ ಗಮನಹರಿಸಿದಾಗಲೆಲ್ಲಾ ನಮ್ಮ ಆರೋಗ್ಯಕ್ಕೆ ಸರಿಹೊಂದುವ ಆಹಾರ ಪದಾರ್ಥಗಳಾವುವು ಎಂಬ ಪ್ರಶ್ನೆ ಕಾಡುತ್ತದೆ. ಬದಲಾದ ಜೀವನಶೈಲಿ, ಅನಾರೋಗ್ಯದಿಂದ ಮನಸ್ಸು ಹದಗೆಡುತ್ತದೆ. ಹೀಗಿರುವಾಗ ನಿಮ್ಮ ಆರೋಗ್ಯ ಸಮಸ್ಯೆಯನ್ನು ಮೊದಲು ದೂರ ಮಾಡಿಕೊಳ್ಳುವ ಬಗ್ಗೆ ಹೆಚ್ಚು ಗಮನಕೊಡಿ. ನೀವು ಸೇವಿಸುವ ಆಹಾರ ವ್ಯವಸ್ಥೆಯಿಂದ ಆರೋಗ್ಯವನ್ನು ಬಹುಬೇಗ ಸುಧಾರಿಸಿಕೊಳ್ಳಬಹುದಾಗಿದೆ. ಜತೆಗೆ ದೇಹದಲ್ಲಿ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸಿಕೊಳ್ಳುವ ಮೂಲಕ ಆರೋಗ್ಯವನ್ನು ಸುಧಾರಿಸಿಕೊಳ್ಳಬಹುದು. ಹಾಗಿರುವಾಗ ಅರಿಶಿಣ ಮತ್ತು ನೀರು ಸೇವನೆಯಿಂದ ಆರೋಗ್ಯಕ್ಕೆ ಎಷ್ಟು ಪ್ರಯೋಜನಗಳಿವೆ ಎಂಬ ಮಾಹಿತಿ ತಿಳಿಯೋಣ.

ಅರಿಶಿಣ ನೀರು ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ. ನಿಮ್ಮ ದೇಹದಲ್ಲಿನ ಕಲ್ಮಶವನ್ನು ಹೊರಹಾಕಲು ಸಹಾಯ ಮಾಡುತ್ತದೆ. ಶೀತ, ಜ್ವರದಿಂದ ನಿಮ್ಮನ್ನು ದೂರವಿರಿಸುತ್ತದೆ. ಅರಿಶಿಣ ನೀರಿನ ಪ್ರಯೋಜನಗಳ ಕುರಿತಾಗಿ ಮಾಹಿತಿ ಇಲ್ಲಿದೆ.

ಸಂಧಿವಾತ ಸಂಧಿವಾತ ಸಮಸ್ಯೆ ಇತ್ತೀಚೆಗೆ ಮಹಿಳೆಯರಲ್ಲಿ ಸಾಮಾನ್ಯ ಸಮಸ್ಯೆಯಾಗಿದೆ. ಅರಿಶಿಣವು ಉರಿಯೂತ ಗುಣಲಕ್ಷಣಗಳನ್ನು ಹೊಂದಿದೆ. ಇದು ಕೀಲು ನೋವನ್ನು ನಿವಾರಿಸಲು ಸಹಾಯ ಮಾಡುತ್ತದೆ. ಒಂದು ಲೋಟ ಅರಿಶಿಣ ನೀರನ್ನು ಕುಡಿಯುವುದರಿಂದ ಕೀಲು ನೋವು ನಿವಾರಣೆಯಾಗುತ್ತದೆ.

ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ ಅರಿಶಿಣದಲ್ಲಿರುವ ಕರ್ಕ್ಯುಮಿನ್​ ರೋಗ ನಿರೋಧಕ ಶಕ್ತಿ ಹೆಚ್ಚಿಸಲು ಸಹಾಯ ಮಾಡುತ್ತದೆ. ಇದು ರೋಗದಿಂದ ಆದಷ್ಟು ದೂರವಿರಲು ಸಹಾಯಕವಾಗಿದೆ. ಅರಿಶಿಣದಲ್ಲಿರುವ ಬ್ಯಾಕ್ಟೀರಿಯಾ ವಿರೋಧಿ ಗುಣವು ಒಟ್ಟಾರೆ ಆರೋಗ್ಯಕ್ಕೆ ಒಳ್ಳೆಯದು.

ತೂಕ ನಷ್ಟಕ್ಕೆ ಸಹಾಯಕ ತೂಕ ನಷ್ಟಕ್ಕೆ ಮುಖ್ಯವಾಗಿ ಗಮನವಹಿಸುವ ವಿಷಯವೆಂದರೆ ಜೀರ್ಣಾಂಗ ವ್ಯವಸ್ಥೆಯನ್ನು ಸುಧಾರಿಸುವುದು. ನೀವು ಅರಿಶಿಣ ನೀರನ್ನು ಸೇವಿಸುವ ಮೂಲಕ ಜೀರ್ಣಾಂಗ ವ್ಯವಸ್ಥೆಯನ್ನು ಸುಧಾರಿಸಿಕೊಳ್ಳಬಹುದು.

ಚರ್ಮಕ್ಕೆ ಒಳ್ಳೆಯದು ಅರಿಶಿಣವು ಉತ್ಕರ್ಷಣ ನಿರೋಧಕಗಳನ್ನು ಹೊಂದಿರುತ್ತದೆ. ಅರಿಶಿಣ ನೀರಿನ ಬಳಕೆಯು ಸ್ವತಂತ್ರ ರಾಡಿಕಲ್​ಗಳಿಂದ ಉಂಟಾಗುವ ಹಾನಿಯನ್ನು ತಡೆಯಲು ಸಹಾಯಕವಾಗಿದೆ. ಇದನ್ನು ನಿಯಮಿತವಾಗಿ ಸೇವಿಸುವ ಮೂಲಕ ಅಲರ್ಜಿಯಂತಹ ಸಮಸ್ಯೆಗಳಿಂದ ಪರಿಹಾರ ಕಂಡುಕೊಳ್ಳಬಹುದು.

ಇದನ್ನೂ ಓದಿ:

Health Tips: ನಿಮ್ಮ ಹಲ್ಲುಗಳನ್ನು ಬಿಳುಪಾಗಿಸಲು ಇಲ್ಲಿವೆ ಸಲಹೆಗಳು​

Health Tips: ನಿಮ್ಮ ಈ ಕೆಲವು ಅಭ್ಯಾಸಗಳು ಮೂತ್ರಪಿಂಡಕ್ಕೆ ಹಾನಿಕಾರಕ!

Published On - 8:10 am, Tue, 26 October 21

ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ