AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Fenugreek: ಮೆಂತ್ಯೆಯು ಈ ಸಮಸ್ಯೆಗಳಿಗೆ ದಿವ್ಯೌಷಧ, ಪ್ರಯೋಜನಗಳ ಬಗ್ಗೆ ತಿಳಿಯಿರಿ

ಪ್ರಸ್ತುತ ದಿನಗಳಲ್ಲಿ ಜನರ ಜೀವನಶೈಲಿ ತುಂಬಾ ಕಳಪೆಯಾಗುತ್ತಾ ಹೋಗುತ್ತಿದೆ. ಪ್ರತಿ ಮನೆಯಲ್ಲೂ ಅಧಿಕ ರಕ್ತದೊತ್ತಡ, ಬೊಜ್ಜು, ಮಧುಮೇಹ ಅಥವಾ ಹೃದಯಕ್ಕೆ ಸಂಬಂಧಿಸಿದ ಅಪಾಯಕಾರಿ ಕಾಯಿಲೆಗಳು ಇವೆ.

Fenugreek: ಮೆಂತ್ಯೆಯು ಈ ಸಮಸ್ಯೆಗಳಿಗೆ ದಿವ್ಯೌಷಧ, ಪ್ರಯೋಜನಗಳ ಬಗ್ಗೆ ತಿಳಿಯಿರಿ
Fenugreek
TV9 Web
| Edited By: |

Updated on: Sep 17, 2022 | 7:00 AM

Share

ಪ್ರಸ್ತುತ ದಿನಗಳಲ್ಲಿ ಜನರ ಜೀವನಶೈಲಿ ತುಂಬಾ ಕಳಪೆಯಾಗುತ್ತಾ ಹೋಗುತ್ತಿದೆ. ಪ್ರತಿ ಮನೆಯಲ್ಲೂ ಅಧಿಕ ರಕ್ತದೊತ್ತಡ, ಬೊಜ್ಜು, ಮಧುಮೇಹ ಅಥವಾ ಹೃದಯಕ್ಕೆ ಸಂಬಂಧಿಸಿದ ಅಪಾಯಕಾರಿ ಕಾಯಿಲೆಗಳು ಇವೆ.

ಇದಕ್ಕೆ ದೊಡ್ಡ ಕಾರಣವೆಂದರೆ ಅನಾರೋಗ್ಯಕರ ಆಹಾರ ಮತ್ತು ನೀರಸ ದಿನಚರಿ ಎಂದು ತಜ್ಞರು ಹೇಳುತ್ತಾರೆ. ಅನೇಕ ಆರೋಗ್ಯ ಸಮಸ್ಯೆಗಳ ಜೊತೆಗೆ ಜನರು ಒತ್ತಡವನ್ನೂ ಎದುರಿಸುತ್ತಿದ್ದಾರೆ. ಇತ್ತೀಚಿನ ದಿನಗಳಲ್ಲಿ ಜಂಕ್ ಫುಡ್‌ಗಳ ಅತಿಯಾದ ಸೇವನೆಯಿಂದ ಯುವಜನರು ಈ ಕಾಯಿಲೆಗಳಿಗೆ ತುತ್ತಾಗುತ್ತಿರುವುದು ತುಂಬಾ ಆತಂಕಕಾರಿಯಾಗಿದೆ.

ಆದರೆ, ದಿನಚರಿ, ಸರಿಯಾದ ಆಹಾರ ಕ್ರಮ, ದಿನನಿತ್ಯದ ವ್ಯಾಯಾಮದ ಮೂಲಕ ಇದನ್ನು ನಿಯಂತ್ರಿಸಬಹುದು ಎನ್ನುತ್ತಾರೆ ತಜ್ಞರು. ಹೀಗೆ ಮಾಡುವುದರಿಂದ ಶುಗರ್, ಕೊಲೆಸ್ಟ್ರಾಲ್, ರಕ್ತದೊತ್ತಡ ಹೆಚ್ಚಾಗುವಂತಹ ಸಮಸ್ಯೆಗಳು ಕಡಿಮೆಯಾಗುತ್ತವೆ.

ಈ ಸಮಯದಲ್ಲಿ, ನೀವು ನಿಮ್ಮ ಆಹಾರದಲ್ಲಿ ಈ ಪ್ರಯೋಜನಕಾರಿ ತರಕಾರಿಗಳು ಮತ್ತು ಬೀಜಗಳನ್ನು ಸೇರಿಸಿದರೆ ಅದು ನಿಮ್ಮ ಆರೋಗ್ಯಕ್ಕೆ ಒಳ್ಳೆಯದು ಎಂದು ಹೇಳಲಾಗುತ್ತದೆ.

ಮೆಂತ್ಯೆ ಮತ್ತು ಮೆಂತ್ಯೆ ಬೀಜಗಳ ಬಗ್ಗೆ ನಮಗೆಲ್ಲರಿಗೂ ತಿಳಿದಿದೆ. ಮೆಂತ್ಯವು ತುಂಬಾ ಶಕ್ತಿಯುತವಾದ ಆಹಾರವಾಗಿದೆ. ಇದು ಅನೇಕ ರೋಗಗಳನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಇದು ಕೆಟ್ಟ ಕೊಲೆಸ್ಟ್ರಾಲ್ ಅನ್ನು ನಿಯಂತ್ರಿಸುವ ಪೋಷಕಾಂಶವಾದ ಸ್ಟೀರಾಯ್ಡ್ ಸಪೋನಿನ್ ಅನ್ನು ಹೊಂದಿರುತ್ತದೆ.

ಕ್ಯಾಲ್ಸಿಯಂ, ಸೆಲೆನಿಯಮ್, ಮ್ಯಾಂಗನೀಸ್, ಮೆಗ್ನೀಸಿಯಮ್, ಪೊಟ್ಯಾಸಿಯಮ್, ನಿಯಾಸಿನ್, ಫೈಬರ್, ಪ್ರೋಟೀನ್, ಕಬ್ಬಿಣ ಮತ್ತು ಪೊಟ್ಯಾಸಿಯಮ್ ಮೆಂತ್ಯ ಮತ್ತು ಬೀಜಗಳಲ್ಲಿ ಹೇರಳವಾಗಿ ಕಂಡುಬರುತ್ತವೆ. ಆಹಾರದಲ್ಲಿ ಪೊಟ್ಯಾಸಿಯಮ್ ಸಮೃದ್ಧವಾಗಿರುವ ಆಹಾರವನ್ನು ಸೇರಿಸುವ ಮೂಲಕ ರಕ್ತದೊತ್ತಡವನ್ನು ನಿಯಂತ್ರಿಸಬಹುದು.

ಮೆಂತ್ಯವು ಉತ್ಕರ್ಷಣ ನಿರೋಧಕ, ಸ್ಟೀರಾಯ್ಡ್ ಸಪೋನಿನ್ ಗುಣಲಕ್ಷಣಗಳನ್ನು ಸಹ ಹೊಂದಿದೆ. ಇದರಲ್ಲಿ ವಿಟಮಿನ್ ಎ ಮತ್ತು ವಿಟಮಿನ್ ಸಿ ಕೂಡ ಇದೆ. ಇದು ಕಣ್ಣು ಮತ್ತು ಚರ್ಮಕ್ಕೂ ಒಳ್ಳೆಯದು. ಮೆಂತ್ಯೆಯು ಮಧುಮೇಹ ರೋಗಿಗಳಿಗೆ ಆಯುರ್ವೇದ ಔಷಧವಾಗಿ ಕೆಲಸ ಮಾಡುತ್ತದೆ.

ಆರೋಗ್ಯಕ್ಕೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಈ ಮೇಲಿನ ಲೇಖನವು ಟಿವಿ9ನ ಅಧಿಕೃತ ಮಾಹಿತಿಯಾಗಿರುವುದಿಲ್ಲ, ಸಾಮಾನ್ಯ ಮಾಹಿತಿಯನ್ನು ಒಳಗೊಂಡಿರುತ್ತದೆ.

ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ಕೊಡಗಿನಲ್ಲಿ ರೆಸಾರ್ಟ್, ವಿಲ್ಲಾಗಳಿಗಾಗಿ ಬೆಟ್ಟ ಬಗೆದ ಮಾಫಿಯಾ ಗ್ಯಾಂಗ್
ಕೊಡಗಿನಲ್ಲಿ ರೆಸಾರ್ಟ್, ವಿಲ್ಲಾಗಳಿಗಾಗಿ ಬೆಟ್ಟ ಬಗೆದ ಮಾಫಿಯಾ ಗ್ಯಾಂಗ್