Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಂಟಿತನವೂ ಒಂದು ಸಮಸ್ಯೆ; ಏಕಾಂಗಿತನದಿಂದ ಹೊರಬರುವುದು ಹೇಗೆ?

ನಿಮಗೆ ಏನು ಇಷ್ಟವೋ ಅದರಲ್ಲಿ ನಿಮ್ಮನ್ನು ತೊಡಗಿಸಿಕೊಳ್ಳಿ. ಮನಸ್ಸು ಮತ್ತು ದೇಹವನ್ನು ಸಂತೋಷವಾಗಿಡುವ ವಿಷಯಗಳತ್ತ ಗಮನಹರಿಸಿ. ಫೋಟೋಗ್ರಫಿ, ಸಾಹಸ ಕ್ರೀಡೆಗಳು, ಪುಸ್ತಕ ಓದುವುದು, ಕುಂಬಾರಿಕೆ ಮುಂತಾದ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಿ.

ಒಂಟಿತನವೂ ಒಂದು ಸಮಸ್ಯೆ; ಏಕಾಂಗಿತನದಿಂದ ಹೊರಬರುವುದು ಹೇಗೆ?
ಏಕಾಂತImage Credit source: iStock
Follow us
ಸುಷ್ಮಾ ಚಕ್ರೆ
|

Updated on: Nov 21, 2023 | 8:39 PM

ಕೆಲವೊಮ್ಮೆ ಏಕಾಂತವಾಗಿರಬೇಕು ಎನಿಸುತ್ತದೆ. ಇನ್ನು ಕೆಲವೊಮ್ಮೆ ಏಕಾಂತವೇ ಶಾಪವೆನಿಸುತ್ತದೆ. ಸ್ವಲ್ಪ ಸಮಯ ನಮ್ಮ ಮನಸು ಒಂಟಿಯಾಗಿರಬೇಕೆಂದು ಬಯಸುವುದು ಸಾಮಾನ್ಯ. ಆದರೆ, ಒಂಟಿತನ ಕೆಲವೊಮ್ಮೆ ಮಾನಸಿಕ ಸಮಸ್ಯೆಗಳನ್ನು ಕೂಡ ತಂದೊಡ್ಡಬಹುದು. ಸಂತೋಷ, ದುಃಖದ ಕ್ಷಣಗಳನ್ನು ಹಂಚಿಕೊಳ್ಳಲು ಯಾರಾದರೂ ಬೇಕೆಂದು ಮನುಷ್ಯ ಬಯಸುವುದು ಸಹಜ. ಇದು ಭಾವನಾತ್ಮಕ ಸಮಸ್ಯೆಯಾಗಿದ್ದು, ಅದು ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗುತ್ತದೆ. ಇತ್ತೀಚಿನ ವರದಿಯಲ್ಲಿ ವಿಶ್ವ ಆರೋಗ್ಯ ಸಂಸ್ಥೆ (WHO) ಒಂಟಿತನವನ್ನು ಆರೋಗ್ಯ ಸಮಸ್ಯೆಯಾಗಿ ಬಿಂಬಿಸಿದೆ. ಏಕಾಂತವನ್ನು ನಿರ್ವಹಿಸಲು ಸಲಹೆಗಳು ಇಲ್ಲಿವೆ.

ನಿಮ್ಮ ಹವ್ಯಾಸಗಳನ್ನು ಮತ್ತೆ ಶುರು ಮಾಡಿ:

ನಿಮಗೆ ಏನು ಇಷ್ಟವೋ ಅದರಲ್ಲಿ ನಿಮ್ಮನ್ನು ತೊಡಗಿಸಿಕೊಳ್ಳಿ. ಮನಸ್ಸು ಮತ್ತು ದೇಹವನ್ನು ಸಂತೋಷವಾಗಿಡುವ ವಿಷಯಗಳತ್ತ ಗಮನಹರಿಸಿ. ಫೋಟೋಗ್ರಫಿ, ಸಾಹಸ ಕ್ರೀಡೆಗಳು, ಪುಸ್ತಕ ಓದುವುದು, ಕುಂಬಾರಿಕೆ ಮುಂತಾದ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಿ.

ಇದನ್ನೂ ಓದಿ: ಉಪ್ಪಿನಲ್ಲಿ ಎಷ್ಟು ವಿಧ?; ಆರೋಗ್ಯಕ್ಕೆ ಯಾವ ರೀತಿಯ ಉಪ್ಪು ಉತ್ತಮ?

ಸೋಷಿಯಲ್ ಕಾರ್ಯದಲ್ಲಿ ತೊಡಗಿಸಿಕೊಳ್ಳಿ:

ನಿಮ್ಮ ಗಮನವನ್ನು ಬೇರೆಡೆಗೆ ತಿರುಗಿಸಲು ಮತ್ತು ಸಾಮಾಜಿಕ ಕೆಲಸಗಳಲ್ಲಿ ತೊಡಗಿಸಿಕೊಳ್ಳಲು ಪ್ರಯತ್ನಿಸಿ. ಇದರಿಂದ ಜನರೊಂದಿಗೆ ಬೆರೆಯಲು ಸಾಧ್ಯವಾಗುತ್ತದೆ.

ಅರ್ಥಪೂರ್ಣ ಸಂಬಂಧಗಳನ್ನು ಬೆಳೆಸಿಕೊಳ್ಳಿ:

ಏಕಾಂತದಿಂದ ಹೊರಬರಲು ಹಳೆಯ ಸ್ನೇಹಿತರೊಂದಿಗೆ ಮತ್ತೆ ಸಂಪರ್ಕ ಬೆಳೆಸಿ. ಅವರೊಂದಿಗೆ ಮಾತನಾಡಿ, ಟ್ರಿಪ್ ಹೋಗಿ.

ಇದನ್ನೂ ಓದಿ: ಮಾನಸಿಕ ಒತ್ತಡದಿಂದ ಮೈಗ್ರೇನ್ ಬರುತ್ತಾ?

ಮನೋವೈದ್ಯರಿಂದ ಸಲಹೆ ಪಡೆಯಿರಿ:

ಏಕಾಂಗಿತನವೇ ಮುಂದೆ ಖಿನ್ನತೆಯಾಗಿ ಬದಲಾಗಬಹುದು. ಹೀಗಾಗಿ, ಯಾವುದೇ ಹಿಂಜರಿಕೆಯಿಲ್ಲದೆ ಮನೋವೈದ್ಯರ ಬಳಿ ನಿಮ್ಮ ಸಮಸ್ಯೆಯನ್ನು ಹೇಳಿಕೊಳ್ಳಿ.

ಇನ್ನಷ್ಟು ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಕಿವಿಯ ಲಕ್ಷಣ ಯಾವ ರೀತಿ ಇದ್ರೆ ಅದೃಷ್ಟ ನೋಡಿ
ಕಿವಿಯ ಲಕ್ಷಣ ಯಾವ ರೀತಿ ಇದ್ರೆ ಅದೃಷ್ಟ ನೋಡಿ
ತಕ್ಕ ಪಾಠ ಕಲಿಸುತ್ತೇವೆ; ಉಗ್ರರ ದಾಳಿಗೆ ಸಚಿವ ಪ್ರಲ್ಹಾದ್ ಜೋಶಿ ಖಂಡನೆ
ತಕ್ಕ ಪಾಠ ಕಲಿಸುತ್ತೇವೆ; ಉಗ್ರರ ದಾಳಿಗೆ ಸಚಿವ ಪ್ರಲ್ಹಾದ್ ಜೋಶಿ ಖಂಡನೆ
ಮಂಜುನಾಥ್, ಸಾವಿಗೂ ಮುನ್ನ ಪತ್ನಿಯೊಂದಿಗೆ ಕಾಶ್ಮೀರದಲ್ಲಿ ಕಳೆದ ಕೊನೆ ಕ್ಷಣ
ಮಂಜುನಾಥ್, ಸಾವಿಗೂ ಮುನ್ನ ಪತ್ನಿಯೊಂದಿಗೆ ಕಾಶ್ಮೀರದಲ್ಲಿ ಕಳೆದ ಕೊನೆ ಕ್ಷಣ
ಉಗ್ರರ ದಾಳಿ ಬಳಿಕ ಭದ್ರತಾ ಪರಿಶೀಲನೆಗೆ ಶ್ರೀನಗರಕ್ಕೆ ತೆರಳಿದ ಅಮಿತ್ ಶಾ
ಉಗ್ರರ ದಾಳಿ ಬಳಿಕ ಭದ್ರತಾ ಪರಿಶೀಲನೆಗೆ ಶ್ರೀನಗರಕ್ಕೆ ತೆರಳಿದ ಅಮಿತ್ ಶಾ
ಪಹಲ್ಗಾಮ್‌: ಪತ್ನಿ ಎದುರೇ ಪತಿಯನ್ನ ಕೊಂದು ಮೋದಿಗೆ ಹೋಗಿ ಹೇಳು ಎಂದ ಉಗ್ರ
ಪಹಲ್ಗಾಮ್‌: ಪತ್ನಿ ಎದುರೇ ಪತಿಯನ್ನ ಕೊಂದು ಮೋದಿಗೆ ಹೋಗಿ ಹೇಳು ಎಂದ ಉಗ್ರ
ಪತ್ನಿ ಪಲ್ಲವಿ ಹಾಗೂ ಮಗನೊಂದಿಗೆ ಪ್ರವಾಸ ತೆರಳಿದ್ದ ಮಂಜುನಾಥ್
ಪತ್ನಿ ಪಲ್ಲವಿ ಹಾಗೂ ಮಗನೊಂದಿಗೆ ಪ್ರವಾಸ ತೆರಳಿದ್ದ ಮಂಜುನಾಥ್
ಕೇವಲ ಕಳ್ಳತನಕ್ಕಾಗಿ ನಡೆದ ಕೊಲೆ ಅಲ್ಲ ಇದು, ಬೇರೆ ಕಾರಣವೂ ಇದೆ: ಡಿಸಿಪಿ
ಕೇವಲ ಕಳ್ಳತನಕ್ಕಾಗಿ ನಡೆದ ಕೊಲೆ ಅಲ್ಲ ಇದು, ಬೇರೆ ಕಾರಣವೂ ಇದೆ: ಡಿಸಿಪಿ
ದರ್ಶನ್ ಜಾಮೀನು ರದ್ದು ಅರ್ಜಿ: ಸುಪ್ರೀಂಕೋರ್ಟ್​ನಲ್ಲಿ ಇಂದು ನಡೆದ ವಾದವೇನು?
ದರ್ಶನ್ ಜಾಮೀನು ರದ್ದು ಅರ್ಜಿ: ಸುಪ್ರೀಂಕೋರ್ಟ್​ನಲ್ಲಿ ಇಂದು ನಡೆದ ವಾದವೇನು?
ದರ್ಶನ್, ಪವಿತ್ರಾ ಗೌಡ ಸಂಬಂಧದ ಬಗ್ಗೆ ಸುಪ್ರೀಂಕೋರ್ಟ್ ಕೇಳಿದ ಪ್ರಶ್ನೆ ಏನು?
ದರ್ಶನ್, ಪವಿತ್ರಾ ಗೌಡ ಸಂಬಂಧದ ಬಗ್ಗೆ ಸುಪ್ರೀಂಕೋರ್ಟ್ ಕೇಳಿದ ಪ್ರಶ್ನೆ ಏನು?
ನಾವು ಇದುವರೆಗೆ ಯಾರನ್ನೂ ಅಪರಾಧಿಗಳು ಅಂತ ಹೇಳಿಲ್ಲ: ರಿಕ್ಕಿ ರೈ ವಕೀಲ
ನಾವು ಇದುವರೆಗೆ ಯಾರನ್ನೂ ಅಪರಾಧಿಗಳು ಅಂತ ಹೇಳಿಲ್ಲ: ರಿಕ್ಕಿ ರೈ ವಕೀಲ