AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಳಿಗಾಲದಲ್ಲಿ ದಿನಕ್ಕೆ ಎಷ್ಟು ಲೋಟ ನೀರು ಕುಡಿಯಬೇಕು? ಕಡಿಮೆ ನೀರು ಕುಡಿಯುವ ಅಭ್ಯಾಸ ಇದ್ರೆ ಈ ಸಮಸ್ಯೆಗಳು ಬರುವುದು ಖಂಡಿತ

ಚಳಿಗಾಲದಲ್ಲಿ ಶೀತ ವಾತಾವರಣವಿರುವ ಕಾರಣ ಬಾಯಾರಿಕೆಯಾಗುವುದು ಕಡಿಮೆ. ಆದರೆ ಈ ಋತುವಿನಲ್ಲಿಯೂ ದೇಹಕ್ಕೆ ಸಾಕಷ್ಟು ನೀರಿನ ಅಗತ್ಯವಿರುತ್ತದೆ. ದೇಹದಲ್ಲಿ ನೀರಿನ ಅಂಶ ಕಡಿಮೆಯಾದರೆ ನಿರ್ಜಲೀಕರಣವಾಗಿ ಅನೇಕ ಆರೋಗ್ಯ ಸಮಸ್ಯೆಗಳು ಕಾಡುತ್ತದೆ. ಬೇಸಿಗೆಗೆ ಹೋಲಿಕೆ ಮಾಡಿದರೆ ಚಳಿಗಾಲದಲ್ಲಿ ದಿನಕ್ಕೆ ಎಷ್ಟು ಲೋಟ ನೀರು ಕುಡಿಯಬೇಕು? ನೀರು ಕುಡಿಯುವ ಪ್ರಮಾಣವು ಕಡಿಮೆಯಾದ್ರೆ ಯಾವೆಲ್ಲಾ ಆರೋಗ್ಯ ಸಮಸ್ಯೆಗಳು ಕಾಣಿಸಿಕೊಳ್ಳುತ್ತವೆ ಎನ್ನುವುದರ ಸಂಪೂರ್ಣ ಮಾಹಿತಿ ಇಲ್ಲಿದೆ.

ಚಳಿಗಾಲದಲ್ಲಿ ದಿನಕ್ಕೆ ಎಷ್ಟು ಲೋಟ ನೀರು ಕುಡಿಯಬೇಕು? ಕಡಿಮೆ ನೀರು ಕುಡಿಯುವ ಅಭ್ಯಾಸ ಇದ್ರೆ ಈ ಸಮಸ್ಯೆಗಳು ಬರುವುದು ಖಂಡಿತ
ಸಾಯಿನಂದಾ
| Updated By: ಅಕ್ಷತಾ ವರ್ಕಾಡಿ|

Updated on: Nov 29, 2024 | 12:27 PM

Share

ಇದೀಗ ಚಳಿಗಾಲ ಆರಂಭವಾಗಿದೆ, ಶೀತ ವಾತಾವರಣವಿರುವ ಕಾರಣ ನೀರು ಕುಡಿಯಬೇಕೆಂದೇನಿಸುವುದಿಲ್ಲ. ಈ ಚಳಿಯ ವಾತಾವರಣದಿಂದಾಗಿ ಈ ಋತುವಿನಲ್ಲಿ ನೀರಿನ ದಾಹ ಕಡಿಮೆಯಾದರೂ ದೇಹಕ್ಕೆ ಅಗತ್ಯವಾಗಿ ನೀರು ಬೇಕಾಗುತ್ತದೆ. ಆದರೆ ದೇಹದಲ್ಲಿ ನೀರಿನ ಅಂಶವು ಕಡಿಮೆಯಾದರೆ ಒಂದಲ್ಲ ಒಂದು ಆರೋಗ್ಯ ಸಮಸ್ಯೆಗಳು ಉಂಟಾಗುತ್ತದೆ. ಹೀಗಾಗಿ ಮೈ ಕೊರೆಯುವ ಚಳಿಯ ನಡುವೆ ಸೇವಿಸುವ ಆಹಾರದಿಂದ ಹಿಡಿದು, ಕುಡಿಯುವ ನೀರಿನ ಪ್ರಮಾಣದ ಬಗ್ಗೆಯೂ ಹೆಚ್ಚು ಗಮನಹರಿಸಬೇಕು.

ಒಬ್ಬ ವ್ಯಕ್ತಿ ಎಷ್ಟು ಲೋಟ ನೀರು ಕುಡಿಯಬೇಕು?

ಬೆಳಗ್ಗೆಯಿಂದ ರಾತ್ರಿಯವರೆಗೆ ದಿನವಿಡೀ ನೀರನ್ನು ಕುಡಿಯುವ ಅಭ್ಯಾಸವನ್ನು ರೂಢಿಸಿಕೊಳ್ಳಬೇಕು. ಚಳಿಗಾಲದಲ್ಲಿ ಒಬ್ಬ ವ್ಯಕ್ತಿ ಬಾಯಾರಿಕೆ ಆಗದಿದ್ದರೂ ಕೂಡ ದಿನಕ್ಕೆ 8 ರಿಂದ 10 ಗ್ಲಾಸ್ ನೀರು ಕುಡಿಯಲೇ ಬೇಕು. ಹೆಚ್ಚು ದೈಹಿಕ ಚಟುವಟಿಕೆಯಲ್ಲಿ ತೊಡಗುವ ಪುರುಷರು ದಿನಕ್ಕೆ 10 ರಿಂದ 14 ಲೋಟ ಮತ್ತು ಮಹಿಳೆಯರು 8 ರಿಂದ 12 ಲೋಟ ನೀರನ್ನು ಕುಡಿಯಬೇಕು ಎನ್ನುತ್ತಾರೆ ಆರೋಗ್ಯ ತಜ್ಞರು. ಅದಲ್ಲದೇ ನೀರಿನ ಬದಲಿಗೆ ಜ್ಯೂಸ್, ಹಾಲು, ಚಹಾ, ತೆಂಗಿನ ನೀರನ್ನು ಸೇವಿಸಬಹುದು. ಇದರಿಂದ ದೇಹವು ನಿರ್ಜಲೀಕರಣಗೊಳ್ಳುವುದಿಲ್ಲ ಹಾಗೂ ನಾನಾ ರೀತಿಯ ಆರೋಗ್ಯ ಸಮಸ್ಯೆಗಳು ಕಾಡುವುದಿಲ್ಲ ಎನ್ನುತ್ತಾರೆ ವೈದ್ಯರು.

ಚಳಿಗಾಲದಲ್ಲಿ ನೀರು ಕಡಿಮೆ ಕುಡಿದ್ರೆ ಕಾಣಿಸಿಕೊಳ್ಳುವ ಆರೋಗ್ಯ ಸಮಸ್ಯೆಗಳು:

ಬೊಜ್ಜಿನ ಸಮಸ್ಯೆ:

ಕಡಿಮೆ ನೀರು ಕುಡಿಯುವುದರಿಂದ ಬೊಜ್ಜಿನ ಸಮಸ್ಯೆ ಕಾಡುವ ಸಂಭವವೇ ಹೆಚ್ಚು. ದಿನಕ್ಕೆ ಇಂತಿಷ್ಟು ಪ್ರಮಾಣದಲ್ಲಿ ಆಹಾರ ಸೇವಿಸುತ್ತೇವೆ. ಆದರೆ ದೇಹಕ್ಕೆ ಬೇಕಾಗಿರುವಷ್ಟು ನೀರನ್ನು ಕುಡಿಯುವುದಿಲ್ಲ, ಈ ಕಾರಣದಿಂದಾಗಿ ಅನೇಕ ಬಾರಿ ಸೇವಿಸುವ ಆಹಾರವೇ ಹೆಚ್ಚಾಗಿ ಜೀರ್ಣವಾಗದೇ ಹೋದರೆ, ಬೊಜ್ಜು ಬೆಳೆಯಲು ಕಾರಣವಾಗುತ್ತದೆ.

ಬಾಯಿಯ ದುರ್ವಾಸನೆ:

ಕಡಿಮೆ ನೀರು ಕುಡಿಯುವ ಅಭ್ಯಾಸದಿಂದ ಬಾಯಿ ಒಣಗಲು ಪ್ರಾರಂಭಿಸುತ್ತದೆ. ಇದು ಬಾಯಿಯಲ್ಲಿ ಬ್ಯಾಕ್ಟೀರಿಯಾಗಳು ಉತ್ಪತ್ತಿಯಾಗಲು ದಾರಿ ಮಾಡಿಕೊಡುತ್ತವೆ. ಇದರಿಂದ ಬಾಯಿಯಿಂದ ಕೆಟ್ಟ ವಾಸನೆಯೂ ಬರುತ್ತದೆ.

ಕಡಿಮೆ ಬೆವರುವಿಕೆ ಹಾಗೂ ಮೂತ್ರ ವಿಸರ್ಜನೆ:

ದೇಹವು ನಿರ್ಜಲೀಕರಣವಾದಾಗ ಬೆವರು ಮತ್ತು ಮೂತ್ರ ವಿಸರ್ಜನೆಯು ಕಡಿಮೆಯಾಗುತ್ತದೆ. ಇದರಿಂದ ವಿಷವು ದೇಹದಿಂದ ಹೊರಬರಲು ಸಾಧ್ಯವಾಗಲ್ಲ. ಇದು ಇನ್ನಿತ್ತರ ಆರೋಗ್ಯ ಸಮಸ್ಯೆಗಳು ಕಾಣಿಸಿಕೊಳ್ಳಲು ದಾರಿ ಮಾಡಿಕೊಡುತ್ತದೆ.

ತಲೆನೋವು:

ನೀರಿನ ಕೊರತೆಯಿಂದಾಗಿ ಮೆದುಳಿನ ಜೀವಕೋಶಗಳು ತಾತ್ಕಾಲಿಕವಾಗಿ ಕುಗ್ಗುವುದರಿಂದ ತಲೆನೋವಿನ ಸಮಸ್ಯೆಗಳು ಕಾಣಿಸಿಕೊಳ್ಳಬಹುದು.

ಮಲಬದ್ಧತೆ:

ನೀರಿನ ಕೊರತೆಯು ಹೊಟ್ಟೆಯಲ್ಲಿ ಆಮ್ಲ ರಚನೆಯ ಪ್ರಮಾಣವನ್ನು ಹೆಚ್ಚಿಸುತ್ತದೆ, ಇದರಿಂದಾಗಿ ಹೊಟ್ಟೆಯಲ್ಲಿ ಅನಿಲವು ರೂಪುಗೊಳ್ಳುತ್ತವೆ. ಮಲಬದ್ಧತೆ ಸೇರಿದಂತೆ, ಎದೆಯುರಿಯಂತಹ ಸಮಸ್ಯೆಗಳು ಉಂಟಾಗುತ್ತದೆ.

ಇದನ್ನೂ ಓದಿ: ನೀವು ಅತಿಯಾದ ಚಳಿಯಿಂದ ಬಳಲುತ್ತಿದ್ದೀರಾ? ಈ ಪೋಷಕಾಂಶದ ಕೊರತೆಯೇ ಕಾರಣ

ಆಯಾಸ:

ದೇಹವು ಸರಿಯಾಗಿ ಕಾರ್ಯನಿರ್ವಹಿಸಲು ನೀರಿನ ಅಗತ್ಯವಿದೆ. ದೇಹದಲ್ಲಿ ನೀರಿನ ಕೊರತೆಯಿದ್ದರೆ ಸಣ್ಣ ಪುಟ್ಟ ಕೆಲಸ ಮಾಡಿದರೂ ಸುಸ್ತು, ಆಯಾಸವಾಗುತ್ತದೆ.

ಒಣ ತ್ವಚೆ:

ದೇಹದಲ್ಲಿ ನೀರಿನ ಕೊರತೆಯಿಂದ ತ್ವಚೆಯೂ ಒಣಗುವುದು, ಕಪ್ಪು ವರ್ತುಲ, ತುರಿಕೆ, ಸುಕ್ಕುಗಳು ಸೇರಿದಂತೆ ಇನ್ನಿತರ ಸಮಸ್ಯೆಗಳು ಕಾಡುತ್ತದೆ.

ಆರೋಗ್ಯಕ್ಕೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಉತ್ತರ ಪ್ರದೇಶದ ಕಲ್ಲು ಗಣಿಗಾರಿಕೆ ವೇಳೆ ಭೂಕುಸಿತವಾಗಿ ಓರ್ವ ಸಾವು
ಉತ್ತರ ಪ್ರದೇಶದ ಕಲ್ಲು ಗಣಿಗಾರಿಕೆ ವೇಳೆ ಭೂಕುಸಿತವಾಗಿ ಓರ್ವ ಸಾವು
ನಾಯಕತ್ವ ಬದಲಾವಣೆ ಬಗ್ಗೆ ನಂಗೇನೂ ಗೊತ್ತಿಲ್ಲ, ಸಿಎಂ ಹತ್ರನೇ ಕೇಳಿ; ಡಿಕೆಶಿ
ನಾಯಕತ್ವ ಬದಲಾವಣೆ ಬಗ್ಗೆ ನಂಗೇನೂ ಗೊತ್ತಿಲ್ಲ, ಸಿಎಂ ಹತ್ರನೇ ಕೇಳಿ; ಡಿಕೆಶಿ
ರಾಹುಲ್ ಗಾಂಧಿಗೆ ಧೈರ್ಯ ತುಂಬಿದ್ದೇನೆ; ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ
ರಾಹುಲ್ ಗಾಂಧಿಗೆ ಧೈರ್ಯ ತುಂಬಿದ್ದೇನೆ; ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ
‘ಗತವೈಭವ’ಕ್ಕಾಗಿ ಒಂದು ಕೋಟಿ ಮೌಲ್ಯದ ಆಭರಣ ಧರಿಸಿದ್ದ ಆಶಿಕಾ: ವಿಡಿಯೋ
‘ಗತವೈಭವ’ಕ್ಕಾಗಿ ಒಂದು ಕೋಟಿ ಮೌಲ್ಯದ ಆಭರಣ ಧರಿಸಿದ್ದ ಆಶಿಕಾ: ವಿಡಿಯೋ
ಸುದೀಪ್​ ಅವರನ್ನೇ ಮ್ಯಾನ್ಯುಪಲೇಷನ್ ಮಾಡಲು ಹೋದ ಜಾನ್ವಿ
ಸುದೀಪ್​ ಅವರನ್ನೇ ಮ್ಯಾನ್ಯುಪಲೇಷನ್ ಮಾಡಲು ಹೋದ ಜಾನ್ವಿ
ಬೆಳಗಾವಿ: 28 ಕೃಷ್ಣಮೃಗಗಳ ಸಾವು; ತನಿಖೆ ಬಗ್ಗೆ ಸಚಿವ ಈಶ್ವರ್ ಖಂಡ್ರೆ ಮಾತು
ಬೆಳಗಾವಿ: 28 ಕೃಷ್ಣಮೃಗಗಳ ಸಾವು; ತನಿಖೆ ಬಗ್ಗೆ ಸಚಿವ ಈಶ್ವರ್ ಖಂಡ್ರೆ ಮಾತು
ಗುಜರಾತ್​​ನಲ್ಲಿ ಮೋದಿ ರೋಡ್ ಶೋ; ಸಾಂಪ್ರದಾಯಿಕ ನೃತ್ಯದ ಮೂಲಕ ಸ್ವಾಗತ
ಗುಜರಾತ್​​ನಲ್ಲಿ ಮೋದಿ ರೋಡ್ ಶೋ; ಸಾಂಪ್ರದಾಯಿಕ ನೃತ್ಯದ ಮೂಲಕ ಸ್ವಾಗತ
Cabinet Reshuffle: ಸಂಪುಟ ಪುನಾರಚನೆಗೆ ಹೈಕಮಾಂಡ್​ ಗ್ರೀನ್ ​ಸಿಗ್ನಲ್
Cabinet Reshuffle: ಸಂಪುಟ ಪುನಾರಚನೆಗೆ ಹೈಕಮಾಂಡ್​ ಗ್ರೀನ್ ​ಸಿಗ್ನಲ್
ನೆತ್ತಿಗೇರಿತು ಕಿಚ್ಚನ ಸಿಟ್ಟು, ರಕ್ಷಿತಾ-ಗಿಲ್ಲಿಗೆ ಕಾದಿದೆ ಹಬ್ಬ
ನೆತ್ತಿಗೇರಿತು ಕಿಚ್ಚನ ಸಿಟ್ಟು, ರಕ್ಷಿತಾ-ಗಿಲ್ಲಿಗೆ ಕಾದಿದೆ ಹಬ್ಬ
ರಾಹುಲ್ ಗಾಂಧಿಯದು ಐರನ್ ಲೆಗ್ ಎಂಬುದು ಮತ್ತೆ ಸಾಬೀತಾಗಿದೆ; ಬಿವೈ ವಿಜಯೇಂದ್ರ
ರಾಹುಲ್ ಗಾಂಧಿಯದು ಐರನ್ ಲೆಗ್ ಎಂಬುದು ಮತ್ತೆ ಸಾಬೀತಾಗಿದೆ; ಬಿವೈ ವಿಜಯೇಂದ್ರ