AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡೆಂಗ್ಯೂ, ಮಲೇರಿಯಾ ಮತ್ತು ಕೊರೊನಾ ವೈರಸ್​ ಸೋಂಕನ್ನು ತಪ್ಪಿಸುವುದು ಹೇಗೆ?

Dengue Malaria and Covid 19: ಮಳೆಗಾಲದ ಸಮಯದಲ್ಲಿ ಸಾಂಕ್ರಾಮಿಕ ವೈರಸ್​ಗಳು ಹರಡುವುದು ಹೆಚ್ಚು. ಇದರಿಂದ ನಿಮ್ಮ ಆರೋಗ್ಯ ಕೆಡುತ್ತದೆ. ಅದರಲ್ಲಿಯೂ ಪ್ರಸ್ತುತ ಸಮಯದಲ್ಲಿ ನಿಮ್ಮ ಆರೋಗ್ಯದ ಕುರಿತಾಗಿ ಪ್ರತೀ ಕ್ಷಣವೈ ಎಚ್ಚರಿಕೆಯಿಂದ ಇರುವುದು ಅತ್ಯವಾಗಿದೆ.

ಡೆಂಗ್ಯೂ, ಮಲೇರಿಯಾ ಮತ್ತು ಕೊರೊನಾ ವೈರಸ್​ ಸೋಂಕನ್ನು ತಪ್ಪಿಸುವುದು ಹೇಗೆ?
ಸಾಂದರ್ಭಿಕ ಚಿತ್ರ
TV9 Web
| Updated By: shruti hegde|

Updated on: Jun 20, 2021 | 11:48 AM

Share

ಮಳೆಗಾಲದ ಸಮಯದಲ್ಲಿ ಡೆಂಗ್ಯೂ, ಮಲೇರಿಯಾದಂತಹ ರೋಗ ಲಕ್ಷಣಗಳು ಕಾಣಿಸಿಕೊಳ್ಳುವುದು ಹೆಚ್ಚು. ಜತೆಗೆ ಈ ವರ್ಷ ಕೊವಿಡ್​-19 ವೈರಸ್ ಕೂಡಾ ತನ್ನ ಆರ್ಭಟ ತೋರುತ್ತಿರುವುದರಿಂದ ಹೆಚ್ಚು ಎಚ್ಚರಿಕೆಯಿಂದ ಇರುವುದು ಒಳ್ಳೆಯದು. ಮಲೇರಿಯಾ, ಡೆಂಗ್ಯೂ ಮತ್ತು ಕೊವಿಡ್​-19 ರೋಗ ಲಕ್ಷಣಗಳು ಸರಿಸುಮಾರು ಒಂದೇ ಆಗಿರುವುದರಿಂದ ಇವುಗಳನ್ನು ಗುರುತಿಸುವುದು ಕಷ್ಟವಾಗುತ್ತದೆ. ಜತೆಗೆ ಎಲ್ಲಾ ರೋಗ ಲಕ್ಷಣಗಳು ಒಟ್ಟಿಗೆ ಕಾಣಿಸಿಕೊಂಡರೆ ಚಿಕಿತ್ಸೆ ಪಡೆಯುವುದೂ ಸಹ ಕಷ್ಟವಾಗುತ್ತದೆ.

ಡೆಂಗ್ಯೂ: ಎಲುಬು ನೋವು, ಮೈಕೈ ಸೆಳೆತ, ತೀವ್ರ ತಲೆನೋವು ಕಾಣಿಸಿಕೊಳ್ಳುತ್ತದೆ. ಜತೆಗೆ ಸ್ನಾಯು ಮತ್ತು ಕೀಲು ನೋವು, ವಾಕರಿಕೆ,ಜ್ವರ, ವಾಂತಿ ಮತ್ತು ಅತಿಸಾರದೊಂದಿಗೆ ದೇಹವು ಕುಂಠಿತಗೊಳ್ಳುತ್ತದೆ. ಇವುಗಳು ಡೆಂಗ್ಯೂ ವೈರಸ್​ನ ಲಕ್ಷಣಗಳಾಗಿವೆ.

ಮಲೇರಿಯಾ: ಸಾಮಾನ್ಯವಾಗಿ ಸೊಳ್ಳೆಯ ಮೂಲಕ ಹರಡುವ, ಪ್ಲಾಸ್ಮೋಡಿಯಮ್​ ಎಂಬ ಪರಾವಲಂಬಿಯಿಂದ ಹರಡುವ ಮಾರಣಾಂತಿಕ ಖಾಯಿಲೆ ಇದಾಗಿದೆ. ನಡುಕ, ತಲೆನೋವು, ಜ್ವರ ಮತ್ತು ವಾಂತಿ ಈ ರೋಗದ ಲಕ್ಷಣಗಳಾಗಿವೆ. ಹೆಚ್ಚು ಬೆವರು ಮತ್ತು ಆಯಾಸದೊಂದಿಗೆ ದೇಹವು ಕುಗ್ಗುತ್ತದೆ.

ಕೊವಿಡ್​-19: ಸೋಂಕಿತ ವ್ಯಕ್ತಿಯು ಕೆಮ್ಮಿದಾಗ ಅಥವಾ ಸೀನಿದಾಗ ಹೊರಹೊಮ್ಮುವ ಎಂಜಲು ಅಥವಾ ಹನಿಗಳ ಮೂಲಕ ಇನ್ನಿತರರಿಗೆ ಈ ವೈರಸ್​ ಹರಡುವ ಸಾಧ್ಯತೆ ಹೆಚ್ಚು. ಜ್ವರ, ಒಣ ಕೆಮ್ಮು, ಗಂಟಲು ನೋವು, ಆಯಾಸ, ವಿಪರೀತ ತಲೆನೋವು, ಅತಿಸಾರ, ಉಸಿರಾಟದ ತೊಂದರೆ ಇವುಗಳು ಕೊರೊನಾ ವೈರಸ್​ ರೋಗ ಲಕ್ಷಣಗಳಾಗಿವೆ.

ಕೊವಿಡ್​-19, ಡೆಂಗ್ಯೂ ಮತ್ತು ಮಲೇರಿಯಾದಂತಹ ರೋಗಗಳ ಸೋಂಕಿನ ಪ್ರಕರಣಗಳು ಮಳೆಗಾಲದಲ್ಲಿ ಹೆಚ್ಚಾಗಬಹುದು. ಆದ್ದರಿಂದ ಇಂತಹ ರೋಗ ಲಕ್ಷಣಗಳ ವಿರುದ್ಧವಾಗಿ ಹೋರಾಡಲು ಕಟ್ಟು ನಿಟ್ಟಿನ ಕ್ರಮಗಳನ್ನು ಅನುಸರಿಸುವುದು ಅತ್ಯಗತ್ಯ. ಈ ಕುರಿತಂತೆ ಸರ್ಕಾರ ಮತ್ತು ಆರೋಗ್ಯ ಸಂಸ್ಥೆಗಳು ಸಿದ್ಧರಾಗಬೇಕು. ಇದೇ ಸಮಯದಲ್ಲಿ ಜನರು ತಮ್ಮ ಆರೋಗ್ಯದ ಸುಕ್ಷತೆಯ ಕುರಿತಾಗಿ ಹೆಚ್ಚು ಗಮನ ಕೊಡಲೇ ಬೇಕಾದ ಅವಶ್ಯಕತೆ ಇದೆ.

ಕೊರೊನಾ ವೈರಸ್​ ನಿಯಂತ್ರಣಕ್ಕಾಗಿ ಜಾರಿಗೆ ತಂದ ಒಂದಿಷ್ಟು ನಿಯಮಾವಳಿಗಳನ್ನು ತಪ್ಪಿಸದೇ ಪಾಲಿಸಲೇಬೇಕು. ಜತೆಗೆ ಮನೆಯ ಸುತ್ತ-ಮುತ್ತಲು ಮತ್ತು ಮನೆಯನ್ನು ಹೆಚ್ಚು ಸ್ವಚ್ಛವಾಗಿರುವಂತೆ ನೋಡಿಕೊಳ್ಳಿ. ಮನೆಯ ಸುತ್ತಲು ಮಲೆಗಾಳದ ನೀರು ನಿಲ್ಲು ಅವಕಾಶ ಮಾಡಿಕೊಡಬೇಡಿ. ಜತೆ ಜತೆಗೆ ಸೊಳ್ಳೆ ಪರದೆಯನ್ನು ಬಳಸಿ. ಬಿಸಿ ನೀರನ್ನು ಸೇವಿಸಿ. ತಣ್ಣಗಿನ ಗಾಳಿಯಲ್ಲಿ ಓಡಾಡುವುದನ್ನು ಕಡಿಮೆ ಮಾಡಿ.

ಮಳೆಗಾಲದ ಸಮಯದಲ್ಲಿ ಸಾಂಕ್ರಾಮಿಕ ವೈರಸ್​ಗಳು ಹರಡುವುದು ಹೆಚ್ಚು. ಇದರಿಂದ ನಿಮ್ಮ ಆರೋಗ್ಯ ಕೆಡುತ್ತದೆ. ಅದರಲ್ಲಿಯೂ ಪ್ರಸ್ತುತ ಸಮಯದಲ್ಲಿ ನಿಮ್ಮ ಆರೋಗ್ಯದ ಕುರಿತಾಗಿ ಪ್ರತೀ ಕ್ಷಣವೈ ಎಚ್ಚರಿಕೆಯಿಂದ ಇರುವುದು ಅತ್ಯವಾಗಿದೆ. ಹಾಗಾಗಿ ಯಾವುದೇ ಕಾರಣಕ್ಕೂ ನಿಮ್ಮ ಅರೋಗ್ಯದ ಕುರಿತಾಗಿ ನಿರ್ಲಕ್ಷ್ಯ ಮಾಡದೇ ಎಚ್ಚರಿಕೆಯಿಂದ ಆರೋಗ್ಯವನ್ನು ಕಾಪಾಡಿಕೊಳ್ಳಿ.

ಇದನ್ನೂ ಓದಿ:

ಕೊಪ್ಪಳದ ಏಳು ವರ್ಷ ಮಗುವಿಗೆ ವಕ್ಕರಿಸಿದ ಕೊರೊನಾ

ಮಲೇರಿಯಾ ನಿರ್ಮೂಲನೆಗೆ ಮಂಗಳೂರಿನಲ್ಲಿ ಕೈಗೊಂಡ ಕ್ರಮಕ್ಕೆ ಜಾಗತಿಕ ಮಟ್ಟದಲ್ಲಿ ಜೈ ಹೋ…

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ