AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Health Tips: ಸಿಟ್ರಸ್​ ಹಣ್ಣುಗಳು ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತವೆಯೇ? ಇಲ್ಲಿದೆ ಮಾಹಿತಿ

ಸಿಟ್ರಸ್​ ಹಣ್ಣುಗಳಲ್ಲಿ ವಿಟಮಿನ್​ ಸಿ ಅಧಿಕವಾಗಿರುತ್ತದೆ. ದೇಹಕ್ಕೆ ಬೇಕಾದ ಶಕ್ತಿಯುತ ಉತ್ಕರ್ಷಣ ನಿರೋಧಕವನ್ನು ನೀಡುತ್ತದೆ. ಆತಂಕ, ತೀವ್ರವಾದ ಉಸಿರಾಟದ ತೊಂದರೆಯಿಂದ ಮಿಟಮಿನ್​ ಸಿ ಅಂಶ ರಕ್ಷಿಸುತ್ತದೆ. ಸೋಂಕುಗಳ ವಿರುದ್ಧ ಹೋರಾಡಲು ಇದು ಸಹಾಯ ಮಾಡುತ್ತವೆ.

Health Tips: ಸಿಟ್ರಸ್​ ಹಣ್ಣುಗಳು ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತವೆಯೇ? ಇಲ್ಲಿದೆ ಮಾಹಿತಿ
ಸಿಟ್ರಸ್ ಹಣ್ಣುಗಳು
TV9 Web
| Edited By: |

Updated on: Jul 06, 2021 | 2:39 PM

Share

ಕೊವಿಡ್​19 ಸಾಂಕ್ರಾಮಿಕದಿಂದ ಜನರ ಜೀವನ ಶೈಲಿಯೇ ಬದಲಾಗಿದೆ. ಆರೋಗ್ಯವೂ ಸಹ ಹದಗೆಟ್ಟಿದೆ. ಹೀಗಿರುವಾಗ ಸೋಂಕಿನ ವಿರುದ್ಧ ಹೋರಾಡಲು ನಮ್ಮ ದೇಹದಲ್ಲಿ ರೋಗ ನಿರೋಧ ಶಕ್ತಿ ಸುಧಾರಿಸಬೇಕು. ಜತೆಗೆ ಉತ್ತಮ ವ್ಯಾಯಾಮ ಅಭ್ಯಾಸ ನಮ್ಮ ದಿನನಿತ್ಯದ ಅಭ್ಯಾಸವಾಗಿರಬೇಕು. ವಿಶೇಷವಾಗಿ ತಾಜಾ ಹಣ್ಣುಗಳು ಮತ್ತು ಸಿಟ್ರಸ್​ ಹೊಂದಿರುವ ಹಣ್ಣುಗಳನ್ನು ಸೇವಿಸುವದರಿಂದ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸಿಕೊಳ್ಳಬಹುದು ಎಂದು ತಜ್ಞರು ಹೇಳಿದ್ದಾರೆ.

ಸಿಟ್ರಸ್​ ಹಣ್ಣುಗಳಲ್ಲಿ ವಿಟಮಿನ್​ ಸಿ ಅಧಿಕವಾಗಿರುತ್ತದೆ. ದೇಹಕ್ಕೆ ಬೇಕಾದ ಶಕ್ತಿಯುತ ಉತ್ಕರ್ಷಣ ನಿರೋಧಕವನ್ನು ನೀಡುತ್ತದೆ. ಮಿಟಮಿನ್​ ಸಿ ಬಿಳಿ ರಕ್ತಕಣಗಳ ಉತ್ಪಾದನೆಯನ್ನು ಹೆಚ್ಚಿಸುತ್ತದೆ. ಸಿಟ್ರಸ್​ ಹಣ್ಣುಗಳಾದ ಕಿತ್ತಳೆ, ಅನಾನಸ್​, ನಿಂಬು, ಪೇರಲ ಹಣ್ಣು, ಕಿವಿ ಹಣ್ಣುಗಳು ಸಾಕಷ್ಟು ವಿಟಮಿನ್​ ಸಿ ಅಂಶದಿಂದ ಸಮೃದ್ಧವಾಗಿರುತ್ತದೆ. ಇದರ ಹೊರತಾಗಿ ಆಮ್ಲ (ನೆಲ್ಲಿಕಾಯಿ) ಹೆಚ್ಚು ಮಿಟಮಿನ್​ ಸಿ ಅಂಶವನ್ನು ಹೊಂದಿರುತ್ತದೆ. ಕಿತ್ತಳೆ ಹಣ್ಣಿಗಿಂತ ಆಮ್ಲದಲ್ಲಿ ಹೆಚ್ಚು ಮಿಟಮಿನ್​ ಸಿ ಅಂಶವಿರುತ್ತದೆ ಎಂದು ತಜ್ಞರು ಹೇಳುತ್ತಾರೆ.

ಸಿಟ್ರಸ್​ ಹಣ್ಣುಗಳಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚಾಗಿರುತ್ತದೆ. ದೇಹಕ್ಕೆ ಆವರಿಸಿರುವ ಕೆಟ್ಟ ಬ್ಯಾಕ್ಟೀರಿಯಾಗಳ ವಿರುದ್ಧ ಹೋರಾಡಲು ಸಹಾಯ ಮಾಡುತ್ತದೆ. ವಿಟಮಿನ್​ ಸಿ ನಮ್ಮ ದೇಹದ ಪ್ರತಿರಕ್ಷಣಾ ವ್ಯವಸ್ಥೆಯನ್ನು ಸುಧಾರಿಸುತ್ತದೆ. ಕೊರೊನಾ ವೈರಸ್​ ಮನುಷ್ಯನ ಆರೋಗ್ಯದ ಮೇಲೆ ಒತ್ತಡವನ್ನು ಉಂಟು ಮಾಡುತ್ತದೆ. ಜತೆಗೆ ಪ್ರತಿರಕ್ಷಣೆಯನ್ನು ಕಡಿಮೆ ಮಾಡುತ್ತದೆ. ಇದರಿಂದ ಸುಧಾರಿಸಿಕೊಳ್ಳಲು ವಿಟಮಿನ್​ ಸಿ ಅಂಶ ದೇಹಕ್ಕೆ ಬೇಕು ಎಂದು ತಜ್ಞರು ಹೇಳಿದ್ದಾರೆ.

ಆತಂಕ, ತೀವ್ರವಾದ ಉಸಿರಾಟದ ತೊಂದರೆಯಿಂದ ಮಿಟಮಿನ್​ ಸಿ ಅಂಶ ರಕ್ಷಿಸುತ್ತದೆ. ಸೋಂಕುಗಳ ವಿರುದ್ಧ ಹೋರಾಡಲು ಇದು ಸಹಾಯ ಮಾಡುತ್ತವೆ. ಹಾಗಿರುವಾಗ ದೇಹಕ್ಕೆ ಬೇಕಾದ ಅಗತ್ಯವಾದ ವಿಟಮಿನ್​ ಸಿ ಅಂಶವನ್ನು ಪಡೆಯಲು ಮತ್ತು ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸಿಕೊಳ್ಳಲು ದಿನಕ್ಕೆ ಕನಿಷ್ಠ 100 ಗ್ರಾಂ ಸಿಟ್ರಸ್​ ಹಣ್ಣುಗಳನ್ನು ಸೇವಿಸುವುದು ಉತ್ತಮ ಎಂದು ತಜ್ಞರು ಹೇಳುತ್ತಾರೆ.

ಇದನ್ನೂ ಓದಿ:

ರೋಗ ನಿರೋಧಕ ಶಕ್ತಿ ಹೆಚ್ಚಿಸಲು ಈ ಮೂರು ಪದಾರ್ಥಗಳನ್ನು ಖಾಲಿ ಹೊಟ್ಟೆಯಲ್ಲಿ ತಿನ್ನಬೇಕು

ಹುಣಸೆ ಬೀಜ: ನೀವು ಮೊಣಕಾಲು ನೋವು ಮತ್ತು ಕೀಲು ನೋವಿನಿಂದ ಬಳಲುತ್ತಿದ್ದೀರಾ?

ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?