AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಿವಿ ನೋವನ್ನು ನಿರ್ಲಕ್ಷಿಸಿದರೆ ಮುಂದೆ ಭಾರೀ ಬೆಲೆ ಕಟ್ಟಬೇಕಾಗುತ್ತದೆ.. ಈ ತಪ್ಪುಗಳನ್ನು ಮಾಡಬೇಡಿ

Ear Pain: ಕಿವಿನೋವು ಒಂದು ದಿನ ಅಥವಾ ಎರಡು ದಿನಗಳಿಗಿಂತ ಹೆಚ್ಚು ಇದ್ದರೆ, ಅದನ್ನು ನಿರ್ಲಕ್ಷಿಸಬಾರದು. ತಕ್ಷಣ ವೈದ್ಯರನ್ನು ಸಂಪರ್ಕಿಸಬೇಕು. ಏಕೆಂದರೆ ಇದು ಗಂಭೀರ ಕಾಯಿಲೆಗಳ ಆರಂಭಿಕ ಸಂಕೇತವಾಗಿದೆ. ನೀವು ಕಿವಿ ನೋವಿನಿಂದ ಬಳಲುತ್ತಿದ್ದರೆ, ನೀರು, ಶಾಂಪೂ, ಸೋಪ್ ಅನ್ನು ಕಿವಿಗೆ ಹಾಕಿಕೊಳ್ಳುವುದನ್ನು ತಪ್ಪಿಸಿ

ಕಿವಿ ನೋವನ್ನು ನಿರ್ಲಕ್ಷಿಸಿದರೆ ಮುಂದೆ ಭಾರೀ ಬೆಲೆ ಕಟ್ಟಬೇಕಾಗುತ್ತದೆ.. ಈ ತಪ್ಪುಗಳನ್ನು ಮಾಡಬೇಡಿ
ಕಿವಿ ನೋವನ್ನು ನಿರ್ಲಕ್ಷಿಸಿದರೆ ಮುಂದೆ ಭಾರೀ ಬೆಲೆ ಕಟ್ಟಬೇಕಾಗುತ್ತದೆ
ಸಾಧು ಶ್ರೀನಾಥ್​
|

Updated on:Apr 01, 2024 | 4:38 PM

Share

ಶೀತ ಬಂದಾಗ ಅನೇಕ ಜನರು ಕಿವಿ ನೋವನ್ನು ಅನುಭವಿಸುತ್ತಾರೆ. ಆದರೆ ಇದು ಆಗಾಗ್ಗೆ ಸಂಭವಿಸುತ್ತಿದ್ದರೆ ಜಾಗರೂಕರಾಗಿರಿ. ಇದು ಅನೇಕ ದೊಡ್ಡ ಅಪಾಯಗಳ ಸಂಕೇತವಾಗಿದೆ. ಕಿವಿ ನೋವನ್ನು ಹೋಗಲಾಡಿಸಲು, ಅನೇಕ ಜನರು ಆಯುರ್ವೇದವನ್ನು ತೆಗೆದುಕೊಳ್ಳುತ್ತಾರೆ. ಅಥವಾ ನೋವು ನಿವಾರಕ ಔಷಧಿಗಳನ್ನು ಬಳಸುತ್ತಾರೆ. ಇದರಿಂದ ಕೆಲವೊಮ್ಮೆ ಕಿವಿ ನೋವು (Ear Infection) ವಾಸಿಯಾಗುತ್ತದೆ. ಆದರೆ ಮುಂದೆ ಮತ್ತೆ ನೋವು ಉಲ್ಬಣಗೊಳ್ಳುತ್ತದೆ (Ear Pain management).

ಕಿವಿನೋವು ಒಂದು ದಿನ ಅಥವಾ ಎರಡು ದಿನಗಳಿಗಿಂತ ಹೆಚ್ಚು ಇದ್ದರೆ, ಅದನ್ನು ನಿರ್ಲಕ್ಷಿಸಬಾರದು. ತಕ್ಷಣ ವೈದ್ಯರನ್ನು ಸಂಪರ್ಕಿಸಬೇಕು. ಏಕೆಂದರೆ ಇದು ಗಂಭೀರ ಕಾಯಿಲೆಗಳ ಆರಂಭಿಕ ಸಂಕೇತವಾಗಿದೆ. ನೀವು ಕಿವಿ ನೋವಿನಿಂದ ಬಳಲುತ್ತಿದ್ದರೆ, ನೀರು, ಶಾಂಪೂ, ಸೋಪ್ ಅನ್ನು ಕಿವಿಗೆ ಹಾಕಿಕೊಳ್ಳುವುದನ್ನು ತಪ್ಪಿಸಿ. ಕೆಲವೊಮ್ಮೆ ನೀರು ಕಿವಿಯಲ್ಲಿ ಸೇರಿಕೊಮಡರೆ ಕಿವಿಕಟ್ಟಿಕೊಂಡು ನೋವು ಪ್ರಾರಂಭವಾಗುತ್ತದೆ.

ಸ್ನಾನ ಮಾಡುವಾಗ ಹತ್ತಿ ಉಂಡೆಗಳನ್ನು ಕಿವಿಯಲ್ಲಿ ಇಟ್ಟುಕೊಳ್ಳಬೇಕು. ಹೀಗೆ ಮಾಡುವುದರಿಂದ ನೀರು ಒಳಗೆ ಹೋಗುವ ಸಾಧ್ಯತೆ ಕಡಿಮೆಯಾಗುತ್ತದೆ. ಕೆಲವೊಮ್ಮೆ ಗಂಟಲು ನೋವಿನಿಂದಾಗಿಯೂ ಕಿವಿನೋವು ಪ್ರಾರಂಭವಾಗುತ್ತದೆ. ಕಿವಿ ನೋವು ಅನೇಕ ಸಮಸ್ಯೆಗಳನ್ನು ಉಂಟುಮಾಡಬಹುದು. ಈ ಸಮಸ್ಯೆಯನ್ನು ತಡೆಗಟ್ಟಲು, ಮೊದಲನೆಯದಾಗಿ, ಸಮಯಕ್ಕೆ ಶೀತ ಮತ್ತು ಕೆಮ್ಮನ್ನು ಕಡಿಮೆ ಮಾಡಲು ಸರಿಯಾದ ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳಬೇಕು.

ಇದನ್ನೂ ಓದಿ: ಒಣ ಕೊಬ್ಬರಿ ತಿನ್ನುವುದರಿಂದ ಆಗುವ ಲಾಭಗಳೇನು? ಮಧುಮೇಹ ನಿಯಂತ್ರಣಕ್ಕೆ ಅದು ಒಳ್ಳೆಯದಾ?

ಅದರ ನಂತರವೂ ನೋವು ಮುಂದುವರಿದರೆ, ತಕ್ಷಣ ವೈದ್ಯರನ್ನು ಸಂಪರ್ಕಿಸಿ. ಈ ನೋವನ್ನು ಹೆಚ್ಚು ದಿನ ನಿರ್ಲಕ್ಷಿಸಿದರೆ ಕಿವಿಯಿಂದ ಕೀವು ಬರುವ ಅಪಾಯವಿದೆ. ಅಷ್ಟೇ ಅಲ್ಲ ಕಿವಿಯಿಂದ ಕೀವು ಜೊತೆಗೆ ರಕ್ತವೂ ಸುರಿಯಲು ಶುರುವಾಗುತ್ತದೆ. ಅಂತಹ ಪರಿಸ್ಥಿತಿಯಲ್ಲಿ ತಕ್ಷಣ ವೈದ್ಯರನ್ನು ಸಂಪರ್ಕಿಸಿ. ಕಿವಿಯೊಳಗಿನ ಸೋಂಕಿನಿಂದ ಇದು ಸಂಭವಿಸುತ್ತದೆ. ಅಥವಾ ಬೇರೆ ಯಾವುದಾದರೂ ಗಂಟಲಿನ ಸಮಸ್ಯೆಯೂ ಕಾರಣವಾಗಿರಬಹುದು.

ಆರೋಗ್ಯ ಕುರಿತಾದ ಹೆಚ್ಚಿನ ಲೇಖನಗಳಿಗೆ ಇಲ್ಲಿ ಕ್ಲಿಕ್ ಮಾಡಿ

Published On - 4:37 pm, Mon, 1 April 24

Follow Us
sadhu srinath
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Read More
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್