AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Oxygen Level: ದೇಹದಲ್ಲಿ ಆಕ್ಸಿಜನ್ ಪ್ರಮಾಣವನ್ನು ಹೆಚ್ಚಿಸುವುದು ಹೇಗೆ?

ಚಳಿಗಾಲ( Winter)ದಲ್ಲಿ ಗಾಳಿಯ ಗುಣಮಟ್ಟವು ತುಂಬಾ ಕಳಪೆಯಾಗಿರುತ್ತದೆ. ಇದು ಹೃದಯ ಮತ್ತು ಶ್ವಾಸಕೋಶದ ಮೇಲೆ ಕೆಟ್ಟ ಪರಿಣಾಮ ಬೀರುತ್ತದೆ.

Oxygen Level: ದೇಹದಲ್ಲಿ ಆಕ್ಸಿಜನ್ ಪ್ರಮಾಣವನ್ನು ಹೆಚ್ಚಿಸುವುದು ಹೇಗೆ?
Oxygen
TV9 Web
| Edited By: |

Updated on: Nov 07, 2022 | 1:05 PM

Share

ಚಳಿಗಾಲ( Winter)ದಲ್ಲಿ ಗಾಳಿಯ ಗುಣಮಟ್ಟವು ತುಂಬಾ ಕಳಪೆಯಾಗಿರುತ್ತದೆ. ಇದು ಹೃದಯ ಮತ್ತು ಶ್ವಾಸಕೋಶದ ಮೇಲೆ ಕೆಟ್ಟ ಪರಿಣಾಮ ಬೀರುತ್ತದೆ. ಜನರು ವಿಷಪೂರಿತ ಗಾಳಿಯಲ್ಲಿ ಬದುಕಬೇಕಾದ ಸಂದರ್ಭ ಎದುರಾಗಿದೆ. ಈ ಕಾರಣದಿಂದಾಗಿ ದೇಹದಲ್ಲಿ ಆಮ್ಲಜನಕದ ಕೊರತೆ ನಿರ್ಮಾಣವಾಗುತ್ತದೆ.

ಆರೋಗ್ಯ ತಜ್ಞರ ಪ್ರಕಾರ ದೇಹದಲ್ಲಿ ಆಮ್ಲಜನಕದ ಕೊರತೆಯಿಂದ ಉಸಿರಾಟದ ತೊಂದರೆ ಶುರುವಾಗುತ್ತದೆ. ಆಯಾಸ ಹೆಚ್ಚಾಗಿ ಮುಖ ನೀಲಿ ಬಣ್ಣಕ್ಕೆ ತಿರುಗುತ್ತದೆ. ಈ ಲಕ್ಷಣಗಳು ನಿಮ್ಮ ದೇಹದಲ್ಲಿಯೂ ಕಂಡುಬಂದರೆ, ಆಮ್ಲಜನಕದ ಮಟ್ಟವನ್ನು ಹೆಚ್ಚಿಸಲು ಈ ಸಲಹೆಗಳನ್ನು ಅನುಸರಿಸಿ.

ಹೆಚ್ಚು ನೀರು ಕುಡಿಯಿರಿ ದೇಹದಲ್ಲಿ ಆಮ್ಲಜನಕವನ್ನು ಹೆಚ್ಚಿಸಲು ಪ್ರತಿದಿನ ಸಾಕಷ್ಟು ನೀರು ಕುಡಿಯಲು ಆರೋಗ್ಯ ತಜ್ಞರು ಶಿಫಾರಸು ಮಾಡುತ್ತಾರೆ. ನೀವು ದಿನಕ್ಕೆ ಕನಿಷ್ಠ 3 ಲೀಟರ್ ನೀರನ್ನು ಕುಡಿಯಿರಿ. ಸಾಕಷ್ಟು ನೀರು ಕುಡಿಯುವ ಮೂಲಕ ಆಮ್ಲಜನಕವು ಜೀವಕೋಶಗಳನ್ನು ತಲುಪುತ್ತದೆ. ಇದು ದೇಹದಲ್ಲಿ ಆಮ್ಲಜನಕದ ಮಟ್ಟವನ್ನು ಹೆಚ್ಚಿಸುತ್ತದೆ.

ಖರ್ಜೂರ ತಿನ್ನಿ ಖರ್ಜೂರ ಆರೋಗ್ಯಕ್ಕೆ ಔಷಧಿ ಇದ್ದಂತೆ. ಇದು ಸೆಲೆನಿಯಮ್, ತಾಮ್ರ, ರಂಜಕ, ಕ್ಯಾಲ್ಸಿಯಂ, ಕಬ್ಬಿಣ, ಪೊಟ್ಯಾಸಿಯಮ್ ಮತ್ತು ಮೆಗ್ನೀಸಿಯಮ್, ಜೀವಸತ್ವಗಳು ಮತ್ತು ಖನಿಜಗಳನ್ನು ಹೊಂದಿರುತ್ತದೆ. ಇದರ ಸೇವನೆಯಿಂದ ದೇಹದಲ್ಲಿ ಆಮ್ಲಜನಕದ ಕೊರತೆ ದೂರವಾಗುತ್ತದೆ. ಅಲ್ಲದೆ ಅಧಿಕ ರಕ್ತದೊತ್ತಡ ನಿಯಂತ್ರಣದಲ್ಲಿರುತ್ತದೆ. ಹಾಗಾಗಿ ನೀವು ಸಾಕಷ್ಟು ಪ್ರಮಾಣದಲ್ಲಿ ನೀರನ್ನು ಕುಡಿಯಬೇಕು.

ಉಸಿರಾಟದ ವ್ಯಾಯಾಮ ಮಾಡಿ ದೇಹದಲ್ಲಿ ಆಮ್ಲಜನಕದ ಮಟ್ಟವನ್ನು ಹೆಚ್ಚಿಸಲು ಬೆನ್ನುಹುರಿಯ ಉಸಿರಾಟದ ವ್ಯಾಯಾಮವನ್ನು ಪ್ರತಿದಿನ ಮಾಡಿ. ಈ ವ್ಯಾಯಾಮವನ್ನು ಕುಳಿತು ಸಹ ಮಾಡಬಹುದು. ಆದ್ದರಿಂದ ಯಾರಾದರೂ ಉಸಿರಾಟದ ವ್ಯಾಯಾಮವನ್ನು ಮಾಡಬಹುದು. ಈ ವ್ಯಾಯಾಮವನ್ನು ಮಾಡುವುದರಿಂದ ರೋಗನಿರೋಧಕ ಶಕ್ತಿಯನ್ನು ಬಲಗೊಳ್ಳುತ್ತದೆ. ಜೊತೆಗೆ, ಉಸಿರಾಟದ ವ್ಯವಸ್ಥೆಯು ಬಲಗೊಳ್ಳುತ್ತದೆ. ಇದಲ್ಲದೆ, ದೇಹದಲ್ಲಿ ಆಮ್ಲಜನಕದ ಪ್ರಮಾಣವೂ ಹೆಚ್ಚಾಗುತ್ತದೆ.

ತಾಡಾಸನ ಮಾಡಿ ತಾಡಾಸನ ಮಾಡುವುದರಿಂದ ಉಸಿರಾಟದ ಪ್ರಕ್ರಿಯೆಯು ಸುಧಾರಿಸುತ್ತದೆ ಎಂದು ಸಂಶೋಧನೆಯೊಂದು ಬಹಿರಂಗಪಡಿಸಿದೆ. ಇದು ದೇಹದ ಭಂಗಿಯನ್ನೂ ಸರಿಪಡಿಸುತ್ತದೆ. ಇದು ಶ್ವಾಸಕೋಶದ ಮೇಲ್ಭಾಗವನ್ನು ಸಕ್ರಿಯಗೊಳಿಸಲು ಸಹ ಸಹಾಯ ಮಾಡುತ್ತದೆ. ಅಸ್ತಮಾ ರೋಗಿಗಳಿಗೆ ತಾಡಾಸನ ಮಾಡಲು ವೈದ್ಯರು ಸಲಹೆ ನೀಡುತ್ತಾರೆ.

ಆರೋಗ್ಯಕ್ಕೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಕನಸಿನಲ್ಲಿ ಬಂದ ದೇವರು ಹೇಳಿದ್ದಕ್ಕೆ ಮಣ್ಣು ಅಗೆದಾಗ ನಡೆಯಿತು ಅಚ್ಚರಿ!
ಕನಸಿನಲ್ಲಿ ಬಂದ ದೇವರು ಹೇಳಿದ್ದಕ್ಕೆ ಮಣ್ಣು ಅಗೆದಾಗ ನಡೆಯಿತು ಅಚ್ಚರಿ!
ಈ ವರ್ಷದ ಮೊದಲ ಸೂಪರ್ ಮೂನ್ ಭಾರತದಲ್ಲಿ ಕಂಡಿದ್ದು ಹೀಗೆ; ವಿಡಿಯೋ ವೈರಲ್
ಈ ವರ್ಷದ ಮೊದಲ ಸೂಪರ್ ಮೂನ್ ಭಾರತದಲ್ಲಿ ಕಂಡಿದ್ದು ಹೀಗೆ; ವಿಡಿಯೋ ವೈರಲ್
ನಟ ಭಯಂಕರ ವಜ್ರಮುನಿ ಅವರ ಕೊನೆಯ ದಿನಗಳು ಹೇಗಿದ್ದವು: ವಿಡಿಯೋ
ನಟ ಭಯಂಕರ ವಜ್ರಮುನಿ ಅವರ ಕೊನೆಯ ದಿನಗಳು ಹೇಗಿದ್ದವು: ವಿಡಿಯೋ
ಕಾನೂನು ಸುವ್ಯವಸ್ಥೆ ಕಾಪಾಡೋದು ಬಿಟ್ಟು ಶಾಸಕನ ಕಾಪಾಡುತ್ತಿದ್ದಾರೆ: ಜೋಶಿ
ಕಾನೂನು ಸುವ್ಯವಸ್ಥೆ ಕಾಪಾಡೋದು ಬಿಟ್ಟು ಶಾಸಕನ ಕಾಪಾಡುತ್ತಿದ್ದಾರೆ: ಜೋಶಿ
ಮೃತ ರಾಜಶೇಖರ್​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ ನೀಡಿದ ಸಚಿವ ಜಮೀರ್
ಮೃತ ರಾಜಶೇಖರ್​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ ನೀಡಿದ ಸಚಿವ ಜಮೀರ್
ಹಾರ್ದಿಕ್ ಸಿಡಿಲಬ್ಬರ; ಲಿಸ್ಟ್​ ಎ ಕ್ರಿಕೆಟ್‌ನಲ್ಲಿ ಚೊಚ್ಚಲ ಶತಕ
ಹಾರ್ದಿಕ್ ಸಿಡಿಲಬ್ಬರ; ಲಿಸ್ಟ್​ ಎ ಕ್ರಿಕೆಟ್‌ನಲ್ಲಿ ಚೊಚ್ಚಲ ಶತಕ
ಸುಂಟರಗಾಳಿಗೆ ಕುಸಿದ ಪೆಂಡಾಲ್​​: ಸಚಿವ ಸತೀಶ್​ ಜಾರಕಿಹೊಳಿ ಪಾರು
ಸುಂಟರಗಾಳಿಗೆ ಕುಸಿದ ಪೆಂಡಾಲ್​​: ಸಚಿವ ಸತೀಶ್​ ಜಾರಕಿಹೊಳಿ ಪಾರು
ವೆನೆಜುವೆಲಾ ಮೇಲೆ ಅಮೆರಿಕದಿಂದ ವೈಮಾನಿಕ ದಾಳಿ; ತುರ್ತು ಪರಿಸ್ಥಿತಿ ಘೋಷಣೆ
ವೆನೆಜುವೆಲಾ ಮೇಲೆ ಅಮೆರಿಕದಿಂದ ವೈಮಾನಿಕ ದಾಳಿ; ತುರ್ತು ಪರಿಸ್ಥಿತಿ ಘೋಷಣೆ
ಬಳ್ಳಾರಿ ಗಲಭೆ: ರೆಡ್ಡಿ, ಶ್ರೀರಾಮುಲುಗೆ ಫೋನ್​ ಮಾಡಿ ಧೈರ್ಯ ಹೇಳಿದ ದೇವೇಗೌಡ
ಬಳ್ಳಾರಿ ಗಲಭೆ: ರೆಡ್ಡಿ, ಶ್ರೀರಾಮುಲುಗೆ ಫೋನ್​ ಮಾಡಿ ಧೈರ್ಯ ಹೇಳಿದ ದೇವೇಗೌಡ
ಬೇಜವಾಬ್ದಾರಿ, ಅಹಂಕಾರ, ಪಕ್ಷಪಾತ: ಗಿಲ್ಲಿ ವಿರುದ್ಧ ದೂರಿನ ಸರಮಾಲೆ
ಬೇಜವಾಬ್ದಾರಿ, ಅಹಂಕಾರ, ಪಕ್ಷಪಾತ: ಗಿಲ್ಲಿ ವಿರುದ್ಧ ದೂರಿನ ಸರಮಾಲೆ