AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Type 2 Diabetes: ಟೈಪ್ 2 ಡಯಾಬಿಟಿಸ್ ನಿಯಂತ್ರಿಸಲು ವ್ಯಾಯಾಮ ಎಷ್ಟು ಸಹಾಯಕ ಗೊತ್ತಾ?

ಪ್ರತಿನಿತ್ಯ ವ್ಯಾಯಾಮ ಮಾಡುವುದು ಆರೋಗ್ಯಕ್ಕೆ ಎಷ್ಟು ಉತ್ತಮ? ವ್ಯಾಯಾಮ ಅಭ್ಯಾಸವು ಆರೋಗ್ಯಕ್ಕೆ ಯಾವ ರೀತಿಯಲ್ಲಿ ಸಹಾಯಕ ಎಂಬ ಮಾಹಿತಿ ಈ ಕೆಳಗಿನಂತಿದೆ.

Type 2 Diabetes: ಟೈಪ್ 2 ಡಯಾಬಿಟಿಸ್ ನಿಯಂತ್ರಿಸಲು ವ್ಯಾಯಾಮ ಎಷ್ಟು ಸಹಾಯಕ ಗೊತ್ತಾ?
ಸಾಂದರ್ಭಿಕ ಚಿತ್ರ
TV9 Web
| Updated By: shruti hegde|

Updated on: Oct 05, 2021 | 7:51 AM

Share

ಟೈಪ್ 2 ಮಧುಮೇಹ ಸಮಸ್ಯೆಯು ಇತ್ತೀಚಿನ ಜನರಿಗೆ ಹೆಚ್ಚು ಕಾಡುತ್ತಿದೆ. ನಿಯಮಿತವಾದ ಆಹಾರ ಮತ್ತು ವ್ಯಾಯಾಮದ ಮೂಲಕ ಮಧುಮೇಹ ಸಮಸ್ಯೆಯನ್ನು ನಿಯಂತ್ರಣದಲ್ಲಿಟ್ಟುಕೊಳ್ಳಬಹುದು. ಟೈಪ್ 2 ಡಯಾಬಿಟಿಸ್ ತೊಂದರೆಯಲ್ಲಿರುವವರು ನಿಯಮಿತ ಆಹಾರ ಸೇವನೆ ಮತ್ತು ವ್ಯಾಯಾಮ ಮಾಡುವ ಮೂಲಕ ಆರೋಗ್ಯವನ್ನು ಸುಧಾರಿಸಲು ಸಹಾಯಕವಾಗುತ್ತದೆ. ಕೇವಲ ವ್ಯಾಯಾಮ ಮಾತ್ರ ಸಾಕಾಗುವುದಿಲ್ಲ ಆಹಾರ ಸೇವನೆಯಲ್ಲಿನ ನಿಯಂತ್ರಣದ ಜತೆಗೆ ಆಹಾರ ಪದ್ಧತಿಯಲ್ಲಿನ ಕೆಲವು ಬದಲಾವಣೆಗಳು ಸಮಸ್ಯೆಯ ನಿಯಂತ್ರಣಕ್ಕೆ ಸಹಕಾರಿಯಾಗಿದೆ.

ನ್ಯಾಷನಲ್ ಇನ್​ಸ್ಟಿಟ್ಯೂಟ್​ ಆಫ್ ಡಯಾಬಿಟಿಸ್ ಆ್ಯಂಡ್ ಡೈಜೆಸ್ಟಿವ್ ಕ್ಲಿನಿಕಲ್ ಅಧ್ಯಯನವು ಮೂರು ವರ್ಷಗಳವರೆಗೆ ಮಧುಮೇಹ ಅಪಾಯದಲ್ಲಿರುವ ಜನರೊಂದಿಗೆ ಅಧ್ಯಯನ ನಡೆಸಿದೆ. ನಿಯಮಿತ ವ್ಯಾಯಾಮವು ಟೈಪ್ 2 ಡಯಾಬಿಟಿಸ್ ಸಮಸ್ಯೆಯ ಅಪಾಯವನ್ನು ಶೇ. 58ರಷ್ಟು ಕಡಿಮೆ ಮಾಡುತ್ತದೆ ಎಂಬುದು ಅಧ್ಯಯನದಿಂದ ತಿಳಿದು ಬಂದಿದೆ. ಹಾಗಿರುವಾಗ ವ್ಯಾಯಾಮದ ಮೂಲಕ ಎಷ್ಟೆಲ್ಲಾ ಆರೋಗ್ಯ ಪ್ರಯೋಜನಗಳು ಸಿಗುತ್ತವೆ ಎಂಬುದು ಈ ಕೆಳಗಿನಂತಿದೆ.

ವ್ಯಾಯಾಮದಿಂದ ಪ್ರಯೋಜನಗಳು *ತೂಕದ ನಿಯಂತ್ರಣ *ಒಳ್ಳೆಯ ಕೊಲೆಸ್ಟ್ರಾಲ್ ಮಟ್ಟ *ಬಲವಾದ ಸ್ನಾಯುಗಳು *ಬಲವಾದ ಮೂಳೆಗಳು *ಮನಸ್ಥಿತಿ ಸುಧಾರಣೆ *ಶಕ್ತಿ *ಉತ್ತಮ ನಿದ್ರೆ *ಒತ್ತಡ ನಿರ್ವಹಣೆ

ಮಧುಮೇಹ ಸಮಸ್ಯೆ ಹೊಂದಿರುವವರಿಗೆ ಹೃದಯ ಸಂಬಂಧಿ ಖಾಯಿಲೆಗಳು ಕಾಣಿಸಿಕೊಳ್ಳುವುದು ಹೆಚ್ಚು. ಹಾಗಿರುವಾಗ ಹೃದಯವನ್ನು ಆರೋಗ್ಯವಾಗಿರಿಸಲು ಮತ್ತು ಸದೃಢವಾಗಿರಿಸಲು ವ್ಯಾಯಾಮ ಅತ್ಯವಶ್ಯಕ. ಜತೆಗೆ ವ್ಯಾಯಾಮ ಮಾಡುವ ಮೂಲಕ ದೇಹದಲ್ಲಿನ ಕೊಲೆಸ್ಟ್ರಾಲ್ ಮಟ್ಟವನ್ನು ನಿಯಂತ್ರಣದಲ್ಲಿಡಬಹುದು. ಹಾಗಾಗಿ ಪ್ರತಿನಿತ್ಯ ವ್ಯಾಯಾಮ ಅಭ್ಯಾಸ ಆರೋಗ್ಯಕ್ಕೆ ಪ್ರಯೋಜನಗಳನ್ನು ನೀಡುತ್ತದೆ.

ಮುಖ್ಯವಾಗಿ ಗಮನಿಸಬೇಕಾದ ಅಂಶವೆಂದರೆ, ಯಾವುದೇ ಆರೋಗ್ಯ ಖಾಯಿಲೆಯಾಗಲೀ ವೈದ್ಯರಲ್ಲಿ ಪರೀಕ್ಷೆ ಮಾಡಿಸಿಕೊಳ್ಳಿ. ವೈದ್ಯರ ಸಲಹೆಯ ಮೇರೆಗೆ ವ್ಯಾಯಾಮ ಅಭ್ಯಾಸಗಳನ್ನು ರೂಢಿಯಲ್ಲಿಟ್ಟುಕೊಳ್ಳುವುದು ಉತ್ತಮ. ಈ ಮೂಲಕ ನಿಮ್ಮ ಆರೋಗ್ಯವನ್ನು ಉತ್ತಮ ರೀತಿಯಲ್ಲಿ ಸುಧಾರಿಸಿಕೊಳ್ಳಲು ಸಹಾಯಕ.

ಇದನ್ನೂ ಓದಿ:

Health Tips: ಹೃದಯ ಆರೋಗ್ಯ ಸುಧಾರಣೆಗೆ ಈ ಹಣ್ಣುಗಳ ಸೇವನೆ ಪ್ರಯೋಜನಕಾರಿ

Health Tips: ಈ 5 ರೋಗ ಲಕ್ಷಣಗಳು ಶ್ವಾಸಕೋಶ ಕಾಯಿಲೆಯ ಎಚ್ಚರದ ಗಂಟೆ, ಎಂದಿಗೂ ನಿರ್ಲಕ್ಷಿಸಬೇಡಿ

ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?