AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೇಹದಲ್ಲಿ ಈ ರೀತಿ ಬದಲಾವಣೆ ಕಂಡು ಬಂದ್ರೆ ತಡಮಾಡದೆಯೇ ವೈದ್ಯರನ್ನು ಭೇಟಿ ಮಾಡಿ

ಭಾರತದಲ್ಲೂ ಎಬೋಲಾ ವೈರಸ್‌ನ ಬಗ್ಗೆ ಆತಂಕ ಹೆಚ್ಚಾಗಿದೆ. ಅಂತಹ ಪರಿಸ್ಥಿತಿಯಲ್ಲಿ, ಅದನ್ನು ತಡೆಗಟ್ಟಲು ಹೆಚ್ಚಿನ ಮಾಹಿತಿ ಪಡೆಯುವುದು ಬಹಳ ಮುಖ್ಯವಾಗಿದೆ. ಇಲ್ಲವಾದಲ್ಲಿ ಇದು ಪ್ರಾಣಕ್ಕೆ ಅಪಾಯಕಾರಿಯಾಗಿಬಹುದು. ಹಾಗಾದರೆ ಇಬೋಲಾ ವೈರಸ್‌ನ ಆರಂಭಿಕ ಲಕ್ಷಣಗಳು ಹೇಗಿರುತ್ತವೆ, ಇದು ಯಾವ ರೀತಿ ಹರಡುತ್ತದೆ, ಜೊತೆಗೆ ಈ ಬಗ್ಗೆ ಮುನ್ನೆಚ್ಚರಿಕೆ ವಹಿಸುವುದು ಎಷ್ಟು ಮುಖ್ಯ ಎಂಬುದನ್ನು ತಿಳಿದುಕೊಳ್ಳಬೇಕು. ಈ ಕುರಿತು ಹೆಚ್ಚಿನ ಮಾಹಿತಿ ಸ್ಟೋರಿಯ್ಲಲಿದೆ.

ದೇಹದಲ್ಲಿ ಈ ರೀತಿ ಬದಲಾವಣೆ ಕಂಡು ಬಂದ್ರೆ ತಡಮಾಡದೆಯೇ ವೈದ್ಯರನ್ನು ಭೇಟಿ ಮಾಡಿ
Ebola Virus SymptomsImage Credit source: Getty Images
ಪ್ರೀತಿ ಭಟ್​, ಗುಣವಂತೆ
|

Updated on: May 24, 2026 | 6:51 PM

Share

ಇತ್ತೀಚಿನ ದಿನಗಳಲ್ಲಿ ಇಬೋಲಾ (Ebola) ವೈರಸ್‌ ಬಗ್ಗೆ ಜಾಗತಿಕ ಮಟ್ಟದಲ್ಲಿ ಆತಂಕ ಹೆಚ್ಚಾಗಿದೆ. ಇದು ಅತ್ಯಂತ ಅಪಾಯಕಾರಿ ವೈರಲ್ ಸೋಂಕುಗಳಲ್ಲಿ ಒಂದಾಗಿ ಪರಿಗಣಿಸಲಾಗಿದ್ದು, ಸೋಂಕಿತ ವ್ಯಕ್ತಿಯ ಸಂಪರ್ಕದಿಂದ ಹರಡಬಹುದು ಎಂದು ಆರೋಗ್ಯ ತಜ್ಞರು ಎಚ್ಚರಿಸಿದ್ದಾರೆ. ಆರಂಭದಲ್ಲಿ ಸಾಮಾನ್ಯ ಜ್ವರದ ಲಕ್ಷಣಗಳಂತೆ ಕಾಣುವ ಕಾರಣ, ಅನೇಕರು ಇದನ್ನು ನಿರ್ಲಕ್ಷಿಸುವ ಸಾಧ್ಯತೆ ಇದೆ. ಆದರೆ ಸಮಯಕ್ಕೆ ಚಿಕಿತ್ಸೆ ಪಡೆಯದಿದ್ದರೆ ಈ ಸೋಂಕು ಗಂಭೀರ ರೂಪ ಪಡೆಯಬಹುದು. ತಜ್ಞರ ಪ್ರಕಾರ, ಇಬೋಲಾ ವೈರಸ್‌ನ ಲಕ್ಷಣಗಳನ್ನು ಆರಂಭದಲ್ಲೇ ಗುರುತಿಸುವುದು ಮತ್ತು ಸೂಕ್ತ ಮುನ್ನೆಚ್ಚರಿಕೆ ಕ್ರಮಗಳನ್ನು ಅನುಸರಿಸುವುದು ಅತ್ಯಂತ ಅಗತ್ಯ. ಇಲ್ಲವಾದಲ್ಲಿ ಇದು ಪ್ರಾಣಕ್ಕೆ ಅಪಾಯಕಾರಿಯಾಗಿಬಹುದು.

ಇಬೋಲಾ ವೈರಸ್‌ನ ಆರಂಭಿಕ ಲಕ್ಷಣಗಳು?

ಗೋರಖ್‌ಪುರದ ರೀಜೆನ್ಸಿ ಆಸ್ಪತ್ರೆಯ ಇಂಟರ್ನಲ್ ಮೆಡಿಸಿನ್ ತಜ್ಞ ಡಾ. ವಿಜಯ್ ಕುಮಾರ್ ಶರ್ಮಾ ಅವರ ಪ್ರಕಾರ, ಇಬೋಲಾ ವೈರಸ್‌ನ ಆರಂಭಿಕ ಲಕ್ಷಣಗಳು ಸಾಮಾನ್ಯ ವೈರಲ್ ಜ್ವರದಂತೆಯೇ ಕಾಣುತ್ತವೆ. ಆದರೆ ಜ್ವರ ಹೆಚ್ಚಾಗಿ ಕಾಣಿಸಿಕೊಳ್ಳುವುದು, ತೀವ್ರ ತಲೆನೋವು, ದೇಹ ಮತ್ತು ಸ್ನಾಯು ನೋವು, ಅತಿಯಾದ ಆಯಾಸ ಮತ್ತು ದುರ್ಬಲತೆ, ಗಂಟಲು ನೋವು, ವಾಂತಿ ಮತ್ತು ಅತಿಸಾರ, ಹೊಟ್ಟೆ ನೋವು ಬಂದರೆ ನಿರ್ಲಕ್ಷ್ಯ ಮಾಡಬೇಡಿ. ಏಕೆಂದರೆ ಸೋಂಕು ಗಂಭೀರ ಹಂತಕ್ಕೆ ತಲುಪಿದರೆ ಕೆಲವರಲ್ಲಿ ದೇಹದ ಒಳಭಾಗ ಅಥವಾ ಹೊರಭಾಗದಲ್ಲಿ ರಕ್ತಸ್ರಾವ (Bleeding) ಕೂಡ ಕಾಣಿಸಬಹುದು. ಇಂತಹ ಲಕ್ಷಣಗಳು ಕಂಡುಬಂದರೆ ತಕ್ಷಣ ವೈದ್ಯಕೀಯ ಸಹಾಯ ಪಡೆಯುವುದು ಅಗತ್ಯ.

ಇಬೋಲಾ ವೈರಸ್ ಹೇಗೆ ಹರಡುತ್ತದೆ?

ಇಬೋಲಾ ವೈರಸ್ ಸೋಂಕಿತ ವ್ಯಕ್ತಿಯ ರಕ್ತ, ದೇಹದ ದ್ರವಗಳು ಅಥವಾ ನೇರ ಸಂಪರ್ಕದ ಮೂಲಕ ಹರಡಬಹುದು. ಸೋಂಕಿತ ವ್ಯಕ್ತಿಯನ್ನು ಸರಿಯಾದ ಸುರಕ್ಷತಾ ಕ್ರಮಗಳಿಲ್ಲದೆ ನೋಡಿಕೊಳ್ಳುವುದರಿಂದ ಸೋಂಕಿನ ಅಪಾಯ ಹೆಚ್ಚಾಗುತ್ತದೆ.

ಇದನ್ನೂ ಓದಿ: ಕಾಂಗೋ, ಉಗಾಂಡಾದಲ್ಲಿ ಎಬೋಲಾ ರುದ್ರನರ್ತನ: ಕೇಂದ್ರ ಆರೋಗ್ಯ ಸಚಿವಾಲಯದಿಂದ ಪ್ರಯಾಣಿಕರಿಗೆ ಮಹತ್ವದ ಸೂಚನೆ

ಇಬೋಲಾ ವೈರಸ್‌ನಿಂದ ಹೇಗೆ ರಕ್ಷಿಸಿಕೊಳ್ಳಬೇಕು?

  • ಸೋಂಕಿತ ವ್ಯಕ್ತಿಯಿಂದ ದೂರವಿರಿ
  • ಮಾಸ್ಕ್, ಗ್ಲೌವ್ಸ್ ಮತ್ತು ಸುರಕ್ಷತಾ ಸಾಧನಗಳನ್ನು ಬಳಸಿ
  • ಕೈಗಳನ್ನು ಸಾಬೂನು ಮತ್ತು ನೀರಿನಿಂದ ನಿಯಮಿತವಾಗಿ ತೊಳೆಯಿರಿ
  • ಸ್ಯಾನಿಟೈಸರ್ ಬಳಸುವ ಅಭ್ಯಾಸ ಬೆಳೆಸಿಕೊಳ್ಳಿ
  • ಸೋಂಕಿನ ಲಕ್ಷಣಗಳು ಕಂಡುಬಂದರೆ ತಕ್ಷಣ ವೈದ್ಯರನ್ನು ಸಂಪರ್ಕಿಸಿ
  • ಸೋಂಕಿತ ವ್ಯಕ್ತಿಯನ್ನು ಪ್ರತ್ಯೇಕವಾಗಿ ಇರಿಸಿ
  • ವಿದೇಶಗಳಿಂದ ಬಂದವರು ವಿಶೇಷ ಎಚ್ಚರಿಕೆ ವಹಿಸಬೇಕು

ಇಬೋಲಾ ಸೋಂಕು ಪ್ರಕರಣಗಳು ಕಂಡುಬಂದಿರುವ ದೇಶಗಳಿಂದ ಬಂದಿರುವವರು ತಮ್ಮ ಆರೋಗ್ಯದ ಮೇಲೆ ವಿಶೇಷ ಗಮನಹರಿಸಬೇಕು ಎಂದು ತಜ್ಞರು ಹೇಳಿದ್ದಾರೆ. ಜ್ವರ, ದೌರ್ಬಲ್ಯ ಅಥವಾ ಇತರೆ ಲಕ್ಷಣಗಳು ಕಂಡುಬಂದರೆ ತಕ್ಷಣ ವೈದ್ಯಕೀಯ ಪರೀಕ್ಷೆ ಮಾಡಿಸಿಕೊಳ್ಳುವುದು ಅಗತ್ಯ. ತಜ್ಞರ ಅಭಿಪ್ರಾಯದಂತೆ, ಭಯಪಡುವುದಕ್ಕಿಂತ ಜಾಗೃತಿ ಮತ್ತು ಮುನ್ನೆಚ್ಚರಿಕೆ ಅತ್ಯಂತ ಮುಖ್ಯ. ಸಮಯಕ್ಕೆ ಲಕ್ಷಣಗಳನ್ನು ಗುರುತಿಸಿ ಚಿಕಿತ್ಸೆ ಪಡೆದರೆ ಜೀವ ಉಳಿಸುವ ಸಾಧ್ಯತೆ ಹೆಚ್ಚಿರುತ್ತದೆ.

ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Preethi Bhat Gunavante
Preethi Bhat Gunavante

ಪ್ರೀತಿ ಭಟ್ ಗುಣವಂತೆ – ಮೂಲತಃ ಹೊನ್ನಾವರದ ಗುಣವಂತೆಯವಳು. ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ (M.C.J) ಎಂ.ಎ ಮಾಡಿದ್ದು ಪತ್ರಿಕಾ ರಂಗದಲ್ಲಿ 6 ವರ್ಷಗಳ ಅನುಭವವಿದೆ. ಸುದ್ದಿ ಬಿಡುಗಡೆ ವಾರ ಪತ್ರಿಕೆಯಲ್ಲಿ, ಉದಯವಾಣಿ ದಿನ ಪತ್ರಿಕೆಯಲ್ಲಿ ಕೆಲಸ ಮಾಡಿದ್ದೇನೆ. ಅದಾದ ಬಳಿಕ 2023ರಿಂದ ಟಿವಿ9 ಕನ್ನಡದಲ್ಲಿ ಕೆಲಸ ಮಾಡುತ್ತಿದ್ದೇನೆ. ಅಧ್ಯಾತ್ಮ, ಆರೋಗ್ಯ, ಜೀವನಶೈಲಿಗೆ ಸಂಬಂಧಿಸಿದ ಲೇಖನಗಳನ್ನು ಬರೆಯುವುದರಲ್ಲಿ ಆಸಕ್ತಿ ಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುವಲ್ಲಿ ಪ್ರೀತಿಯಿಂದ, ಪ್ರಾಮಾಣಿಕವಾಗಿ ಪ್ರಯತ್ನಿಸುತ್ತಿದ್ದೇನೆ. ಬರವಣಿಗೆ ಹೊರತು ಪಡಿಸಿದರೆ ನನ್ನ ಆಸಕ್ತಿಕರ ಕ್ಷೇತ್ರ ಪ್ರವಾಸ.

Read More
ಸಭೆ ಬಳಿಕ ಕರ್ನಾಟಕ ರಾಜಕೀಯ ಬಗ್ಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಖಡಕ್ ಮಾತು
ಸಭೆ ಬಳಿಕ ಕರ್ನಾಟಕ ರಾಜಕೀಯ ಬಗ್ಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಖಡಕ್ ಮಾತು
ಗುರು ಸಂಚಾರ ತುಲಾ ರಾಶಿಯ ಮೇಲೆ ಯಾವ ರೀತಿ ಪರಿಣಾಮ ಬೀರಲಿದೆ?
ಗುರು ಸಂಚಾರ ತುಲಾ ರಾಶಿಯ ಮೇಲೆ ಯಾವ ರೀತಿ ಪರಿಣಾಮ ಬೀರಲಿದೆ?
ಡಿಕೆಶಿ ಆರಾಧ್ಯ ಗುರುಗಳಾದ ನೊಣವಿನಕೆರೆ ಸ್ವಾಮೀಜಿ ಭವಿಷ್ಯ ಏನ್ಗೊತ್ತಾ?
ಡಿಕೆಶಿ ಆರಾಧ್ಯ ಗುರುಗಳಾದ ನೊಣವಿನಕೆರೆ ಸ್ವಾಮೀಜಿ ಭವಿಷ್ಯ ಏನ್ಗೊತ್ತಾ?
ಗೆಲ್ಲಲೇಬೇಕಾದ ಪಂದ್ಯದಲ್ಲಿ ಒಂದಂಕಿ ದಾಟದ ವೈಭವ್
ಗೆಲ್ಲಲೇಬೇಕಾದ ಪಂದ್ಯದಲ್ಲಿ ಒಂದಂಕಿ ದಾಟದ ವೈಭವ್
90 ವರ್ಷದ ಅತ್ತೆಯನ್ನು ಎತ್ತಿಕೊಂಡು 9 ಕಿ.ಮೀ ನಡೆದ ಬುಡಕಟ್ಟು ಮಹಿಳೆ
90 ವರ್ಷದ ಅತ್ತೆಯನ್ನು ಎತ್ತಿಕೊಂಡು 9 ಕಿ.ಮೀ ನಡೆದ ಬುಡಕಟ್ಟು ಮಹಿಳೆ
6 ವಿದ್ಯಾರ್ಥಿಗಳ IAS ಕನಸು ಕಿತ್ತುಕೊಂಡ ಬೆಂಗಳೂರು ರಸ್ತೆ, ಆಗಿದ್ದೇನು?
6 ವಿದ್ಯಾರ್ಥಿಗಳ IAS ಕನಸು ಕಿತ್ತುಕೊಂಡ ಬೆಂಗಳೂರು ರಸ್ತೆ, ಆಗಿದ್ದೇನು?
ಉಂಡ ಮನೆಗೆ ಕನ್ನ ಹಾಕಿದ ಆಸಾಮಿ: ಕರ್ನಾಟಕ ಬ್ಯಾಂಕ್​ಗೆ 16 ಲಕ್ಷ ರೂ ವಂಚನೆ
ಉಂಡ ಮನೆಗೆ ಕನ್ನ ಹಾಕಿದ ಆಸಾಮಿ: ಕರ್ನಾಟಕ ಬ್ಯಾಂಕ್​ಗೆ 16 ಲಕ್ಷ ರೂ ವಂಚನೆ
ಯೂತ್​​ ಕಾಂಗ್ರೆಸಿಗರ ಗಲಾಟೆ ಪ್ರಕರಣಕ್ಕೆ ಟ್ವಿಸ್ಟ್
ಯೂತ್​​ ಕಾಂಗ್ರೆಸಿಗರ ಗಲಾಟೆ ಪ್ರಕರಣಕ್ಕೆ ಟ್ವಿಸ್ಟ್
ದರ್ಶನ್ ಕೇಸ್: ಚುರುಕುಗೊಳ್ಳಲಿದೆ ರೇಣುಕಾಸ್ವಾಮಿ ಪ್ರಕರಣದ ಕೋರ್ಟ್ ವಿಚಾರಣೆ
ದರ್ಶನ್ ಕೇಸ್: ಚುರುಕುಗೊಳ್ಳಲಿದೆ ರೇಣುಕಾಸ್ವಾಮಿ ಪ್ರಕರಣದ ಕೋರ್ಟ್ ವಿಚಾರಣೆ
ಎಷ್ಟು ಕಾದ್ರೂ ಡಾಕ್ಟ್ರೇ ಬರ್ತಿಲ್ಲ! ಆಸ್ಪತ್ರೆಯಲ್ಲಿ ರೋಗಿಗಳ ಪರದಾಟ
ಎಷ್ಟು ಕಾದ್ರೂ ಡಾಕ್ಟ್ರೇ ಬರ್ತಿಲ್ಲ! ಆಸ್ಪತ್ರೆಯಲ್ಲಿ ರೋಗಿಗಳ ಪರದಾಟ