AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Eye Health: ನಿಮ್ಮ ಕಣ್ಣಿನ ಆರೋಗ್ಯ ಸುರಕ್ಷತೆಗೆ ಇಲ್ಲಿವೆ ಸಿಂಪಲ್ ಟಿಪ್ಸ್

ನಿಮ್ಮ ಕಣ್ಣಿನ ಆರೋಗ್ಯ ಸುಧಾರಿಸಿಕೊಳ್ಳಲು ಉತ್ತಮ ಆಹಾರ ಪದ್ಧತಿ ನಿಮ್ಮದಾಗಿರಲಿ. ತರಕಾರಿಗಳು, ಹಣ್ಣುಗಳನ್ನು ಸೇವಿಸುವ ಮೂಲಕ ನಿಮ್ಮ ಕಣ್ಣಿನ ಆರೋಗ್ಯವನ್ನು ಸುಧಾರಿಸಿಕೊಳ್ಳಬಹುದು.

Eye Health: ನಿಮ್ಮ ಕಣ್ಣಿನ ಆರೋಗ್ಯ ಸುರಕ್ಷತೆಗೆ ಇಲ್ಲಿವೆ ಸಿಂಪಲ್ ಟಿಪ್ಸ್
ಸಂಗ್ರಹ ಚಿತ್ರ
TV9 Web
| Updated By: shivaprasad.hs|

Updated on: Oct 16, 2021 | 8:08 AM

Share

ಇತ್ತೀಚಿನ ದಿನಗಳಲ್ಲಿ ಹೆಚ್ಚಿನವರಿಗೆ ದೃಷ್ಟಿದೋಷದ ಸಮಸ್ಯೆ ಕಾಡುತ್ತಿದೆ. ಚಿಕ್ಕ ವಯಸ್ಸಿನಲ್ಲಿಯೇ ಕನ್ನಡಕ ಹಾಕಿಕೊಳ್ಳುವ ಪರಿಸ್ಥಿತಿ. ಹೀಗಿರುವಾಗ ಕಣ್ಣಿನ ಆರೋಗ್ಯದ ಕುರಿತಾಗಿ ಯೋಚಿಸಲೇಬೇಕು. ನಿಮ್ಮ ಸೂಕ್ಷ್ಮ ಕಣ್ಣಿನ ಆರೋಗ್ಯವನ್ನು ಕಾಪಾಡಿಕೊಳ್ಳುವಲ್ಲಿ ಪೌಷ್ಟಿಕಯುಕ್ತ ಆಹಾರ ಸೇವಿಸುವುದು ಮುಖ್ಯವಾಗಿದೆ. ಆಹಾರ ಪದ್ಧತಿಯಲ್ಲಿ ಸುಧಾರಣೆಯ ಜತೆಗೆ ನಿಮ್ಮ ದೇಹವನ್ನು ಸದೃಢವಾಗಿಸಿಕೊಳ್ಳಿ. 

ಉತ್ತಮ ಆಹಾರ ಎಂದರೆ ನಿಮ್ಮ ಆಹಾರ ಪದ್ಧತಿಯಲ್ಲಿ ತಾಜಾ ತರಕಾರಿಗಳಿರಲಿ. ಉತ್ತಮ ಪೌಷ್ಟಿಕಯುಕ್ತ ಹಣ್ಣುಗಳನ್ನು ಸೇವಿಸಿ. ಆರೋಗ್ಯಕ್ಕೆ ಅಗತ್ಯವಿರುವ ದ್ವಿದಳ ಧಾನ್ಯಗಳನ್ನು ಸೇವಿಸಿ. ನೆನೆಸಿದ ಹೆಸರು ಕಾಳು, ಗೋಡಂಬಿ, ಕಡಲೆ, ದ್ರಾಕ್ಷಿ ಇವುಗಳಿಂದಲೂ ಆರೋಗ್ಯವನ್ನು ಸುಧಾರಿಸಿಕೊಳ್ಳಬಹುದು. ಜತೆಗೆ ನೀವು ನಿಮ್ಮ ಕಣ್ಣಿನ ಆರೋಗ್ಯದ ಸುರಕ್ಷತೆಗೆ ಏನು ಮಾಡಬೇಕು ಎಂಬುದು ಈ ಕೆಳಗಿನಂತಿದೆ ಪರಿಶೀಲಿಸಿ.

ಕ್ಯಾರೆಟ್​ನಲ್ಲಿ ವಿಟಮಿನ್ ಎ ಸಮೃದ್ಧವಾಗಿರುತ್ತದೆ. ದೃಷ್ಟಿ ಸುಧಾರಣೆಗೆ ಇದು ತುಂಬಾ ಪ್ರಯೋಜನಕಾರಿ. ವಾರಕ್ಕೆ ಎರಡು ಬಾರಿಯಾದರೂ ಕ್ಯಾರೆಟ್ ಜ್ಯೂಸ್ ಕುಡಿಯುವ ಅಭ್ಯಾಸವನ್ನು ರೂಢಿಯಲ್ಲಿಟ್ಟುಕೊಳ್ಳಿ. ಇದು ನಿಮ್ಮ ದೇಹದ ಸದೃಢತೆಯ ಜತೆಗೆ ಕಣ್ಣಿನ ಆರೋಗ್ಯ ಸುಧಾರಿಸಲು ಸಹಾಯಕವಾಗಿದೆ.

ಆಮ್ಲಾ ರಸದಲ್ಲಿ ವಿಟಮಿನ್ ಸಿ ಇದೆ. ಇದು ಕಣ್ಣಿನ ಆರೋಗ್ಯಕ್ಕೆ ತುಂಬಾ ಒಳ್ಳೆಯದು. ನೀವು ಆಮ್ಲಾ ಜ್ಯೂಸ್ ಕುಡಿಯುವ ಮೂಲಕ ಕಣ್ಣಿನ ಸುರಕ್ಷತೆ ಮಾಡಬಹುದು. ಕಣ್ಣಿನ ಆರೋಗ್ಯಕ್ಕೆ ಆಮ್ಲಾ ಸೇವಿಸುವ ಅಭ್ಯಾಸವನ್ನು ರೂಢಿಯಲ್ಲಿಕೊಳ್ಳಿ. ಜತೆಗೆ ಜೋಳದಲ್ಲಿಯೂ ಸಹ ಕಣ್ಣಿನ ಆರೋಗ್ಯ ಸುಧಾರಿಸುವ ಪೋಷಕಾಂಶಗಳಿರುತ್ತವೆ. ಜೋಳದಲ್ಲಿರುವ ಲುಟೀನ್​ನಂತಹ ಪದಾರ್ಥಗಳು ಕಣ್ಣಿನ ಆರೋಗ್ಯವನ್ನು ಸುಧಾರಿಸುತ್ತವೆ.

ಹಸಿರು ಸೊಪ್ಪು ನಿಮ್ಮ ಆಹಾರ ಪದ್ಧತಿಯಲ್ಲಿ ಸೇರಿರಲಿ. ಪಾಲಾಕ್ ರಸ ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಇದು ವಿಟಮಿನ್ ಎ, ವಿಟಮಿನ್ ಸಿ, ವಿಟಮಿನ್ ಕೆ, ಮೆಗ್ನೀಷಿಯಮ್, ಮ್ಯಾಂಗನೀಸ್ ಮತ್ತು ಕಬ್ಬಿಣದಿಂದ ಸಮೃದ್ಧವಾಗಿದೆ. ಹಾಗಿರುವಾಗ ಪಾಲಾಕ್​ನಿಂದ ತಯಾರಿಸುವ ಆಹಾರ ಪದಾರ್ಥಗಳನ್ನು ಸೇವಿಸುವ ಮೂಲಕ ಅರೋಗ್ಯವನ್ನು ಸುಧಾರಿಸಿಕೊಳ್ಳಿ.

ಇದನ್ನೂ ಓದಿ:

Health Tips: ನಿಮ್ಮ ಹಲ್ಲುಗಳನ್ನು ಬಿಳುಪಾಗಿಸಲು ಇಲ್ಲಿವೆ ಸಲಹೆಗಳು​

Mental Health: ನೀವು ಮಾನಸಿಕ ಒತ್ತಡದಿಂದ ಬಳಲುತ್ತಿದ್ದೀರಾ? ಸಮಸ್ಯೆಗೆ ಪರಿಹಾರಗಳು ಇಲ್ಲಿವೆ

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ