AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Eye Health: ನಿಮ್ಮ ಕಣ್ಣಿನ ಆರೋಗ್ಯ ಸುರಕ್ಷತೆಗೆ ಇಲ್ಲಿವೆ ಸಿಂಪಲ್ ಟಿಪ್ಸ್

ನಿಮ್ಮ ಕಣ್ಣಿನ ಆರೋಗ್ಯ ಸುಧಾರಿಸಿಕೊಳ್ಳಲು ಉತ್ತಮ ಆಹಾರ ಪದ್ಧತಿ ನಿಮ್ಮದಾಗಿರಲಿ. ತರಕಾರಿಗಳು, ಹಣ್ಣುಗಳನ್ನು ಸೇವಿಸುವ ಮೂಲಕ ನಿಮ್ಮ ಕಣ್ಣಿನ ಆರೋಗ್ಯವನ್ನು ಸುಧಾರಿಸಿಕೊಳ್ಳಬಹುದು.

Eye Health: ನಿಮ್ಮ ಕಣ್ಣಿನ ಆರೋಗ್ಯ ಸುರಕ್ಷತೆಗೆ ಇಲ್ಲಿವೆ ಸಿಂಪಲ್ ಟಿಪ್ಸ್
ಸಂಗ್ರಹ ಚಿತ್ರ
TV9 Web
| Edited By: |

Updated on: Oct 16, 2021 | 8:08 AM

Share

ಇತ್ತೀಚಿನ ದಿನಗಳಲ್ಲಿ ಹೆಚ್ಚಿನವರಿಗೆ ದೃಷ್ಟಿದೋಷದ ಸಮಸ್ಯೆ ಕಾಡುತ್ತಿದೆ. ಚಿಕ್ಕ ವಯಸ್ಸಿನಲ್ಲಿಯೇ ಕನ್ನಡಕ ಹಾಕಿಕೊಳ್ಳುವ ಪರಿಸ್ಥಿತಿ. ಹೀಗಿರುವಾಗ ಕಣ್ಣಿನ ಆರೋಗ್ಯದ ಕುರಿತಾಗಿ ಯೋಚಿಸಲೇಬೇಕು. ನಿಮ್ಮ ಸೂಕ್ಷ್ಮ ಕಣ್ಣಿನ ಆರೋಗ್ಯವನ್ನು ಕಾಪಾಡಿಕೊಳ್ಳುವಲ್ಲಿ ಪೌಷ್ಟಿಕಯುಕ್ತ ಆಹಾರ ಸೇವಿಸುವುದು ಮುಖ್ಯವಾಗಿದೆ. ಆಹಾರ ಪದ್ಧತಿಯಲ್ಲಿ ಸುಧಾರಣೆಯ ಜತೆಗೆ ನಿಮ್ಮ ದೇಹವನ್ನು ಸದೃಢವಾಗಿಸಿಕೊಳ್ಳಿ. 

ಉತ್ತಮ ಆಹಾರ ಎಂದರೆ ನಿಮ್ಮ ಆಹಾರ ಪದ್ಧತಿಯಲ್ಲಿ ತಾಜಾ ತರಕಾರಿಗಳಿರಲಿ. ಉತ್ತಮ ಪೌಷ್ಟಿಕಯುಕ್ತ ಹಣ್ಣುಗಳನ್ನು ಸೇವಿಸಿ. ಆರೋಗ್ಯಕ್ಕೆ ಅಗತ್ಯವಿರುವ ದ್ವಿದಳ ಧಾನ್ಯಗಳನ್ನು ಸೇವಿಸಿ. ನೆನೆಸಿದ ಹೆಸರು ಕಾಳು, ಗೋಡಂಬಿ, ಕಡಲೆ, ದ್ರಾಕ್ಷಿ ಇವುಗಳಿಂದಲೂ ಆರೋಗ್ಯವನ್ನು ಸುಧಾರಿಸಿಕೊಳ್ಳಬಹುದು. ಜತೆಗೆ ನೀವು ನಿಮ್ಮ ಕಣ್ಣಿನ ಆರೋಗ್ಯದ ಸುರಕ್ಷತೆಗೆ ಏನು ಮಾಡಬೇಕು ಎಂಬುದು ಈ ಕೆಳಗಿನಂತಿದೆ ಪರಿಶೀಲಿಸಿ.

ಕ್ಯಾರೆಟ್​ನಲ್ಲಿ ವಿಟಮಿನ್ ಎ ಸಮೃದ್ಧವಾಗಿರುತ್ತದೆ. ದೃಷ್ಟಿ ಸುಧಾರಣೆಗೆ ಇದು ತುಂಬಾ ಪ್ರಯೋಜನಕಾರಿ. ವಾರಕ್ಕೆ ಎರಡು ಬಾರಿಯಾದರೂ ಕ್ಯಾರೆಟ್ ಜ್ಯೂಸ್ ಕುಡಿಯುವ ಅಭ್ಯಾಸವನ್ನು ರೂಢಿಯಲ್ಲಿಟ್ಟುಕೊಳ್ಳಿ. ಇದು ನಿಮ್ಮ ದೇಹದ ಸದೃಢತೆಯ ಜತೆಗೆ ಕಣ್ಣಿನ ಆರೋಗ್ಯ ಸುಧಾರಿಸಲು ಸಹಾಯಕವಾಗಿದೆ.

ಆಮ್ಲಾ ರಸದಲ್ಲಿ ವಿಟಮಿನ್ ಸಿ ಇದೆ. ಇದು ಕಣ್ಣಿನ ಆರೋಗ್ಯಕ್ಕೆ ತುಂಬಾ ಒಳ್ಳೆಯದು. ನೀವು ಆಮ್ಲಾ ಜ್ಯೂಸ್ ಕುಡಿಯುವ ಮೂಲಕ ಕಣ್ಣಿನ ಸುರಕ್ಷತೆ ಮಾಡಬಹುದು. ಕಣ್ಣಿನ ಆರೋಗ್ಯಕ್ಕೆ ಆಮ್ಲಾ ಸೇವಿಸುವ ಅಭ್ಯಾಸವನ್ನು ರೂಢಿಯಲ್ಲಿಕೊಳ್ಳಿ. ಜತೆಗೆ ಜೋಳದಲ್ಲಿಯೂ ಸಹ ಕಣ್ಣಿನ ಆರೋಗ್ಯ ಸುಧಾರಿಸುವ ಪೋಷಕಾಂಶಗಳಿರುತ್ತವೆ. ಜೋಳದಲ್ಲಿರುವ ಲುಟೀನ್​ನಂತಹ ಪದಾರ್ಥಗಳು ಕಣ್ಣಿನ ಆರೋಗ್ಯವನ್ನು ಸುಧಾರಿಸುತ್ತವೆ.

ಹಸಿರು ಸೊಪ್ಪು ನಿಮ್ಮ ಆಹಾರ ಪದ್ಧತಿಯಲ್ಲಿ ಸೇರಿರಲಿ. ಪಾಲಾಕ್ ರಸ ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಇದು ವಿಟಮಿನ್ ಎ, ವಿಟಮಿನ್ ಸಿ, ವಿಟಮಿನ್ ಕೆ, ಮೆಗ್ನೀಷಿಯಮ್, ಮ್ಯಾಂಗನೀಸ್ ಮತ್ತು ಕಬ್ಬಿಣದಿಂದ ಸಮೃದ್ಧವಾಗಿದೆ. ಹಾಗಿರುವಾಗ ಪಾಲಾಕ್​ನಿಂದ ತಯಾರಿಸುವ ಆಹಾರ ಪದಾರ್ಥಗಳನ್ನು ಸೇವಿಸುವ ಮೂಲಕ ಅರೋಗ್ಯವನ್ನು ಸುಧಾರಿಸಿಕೊಳ್ಳಿ.

ಇದನ್ನೂ ಓದಿ:

Health Tips: ನಿಮ್ಮ ಹಲ್ಲುಗಳನ್ನು ಬಿಳುಪಾಗಿಸಲು ಇಲ್ಲಿವೆ ಸಲಹೆಗಳು​

Mental Health: ನೀವು ಮಾನಸಿಕ ಒತ್ತಡದಿಂದ ಬಳಲುತ್ತಿದ್ದೀರಾ? ಸಮಸ್ಯೆಗೆ ಪರಿಹಾರಗಳು ಇಲ್ಲಿವೆ

ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ