AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾಲಿನ್ಯದಿಂದ ನಿಮ್ಮ ಕೂದಲು ಮತ್ತು ತ್ವಚೆಯ ಆರೋಗ್ಯ ರಕ್ಷಣೆ ಹೇಗೆಂದು ಯೋಚಿಸುತ್ತಿದ್ದೀರಾ? ಇಲ್ಲಿವೆ ಸಲಹೆಗಳು

ಆಹಾರದಲ್ಲಿ ಅಪೌಷ್ಟಿಕತೆ ಮತ್ತು ಜೀವನ ಶೈಲಿಯಲ್ಲಿ ಕೆಲ ಬದಲಾವಣೆಗಳಿಂದ ನಿಮಗೆ ಆರೋಗ್ಯ ಸಮಸ್ಯೆಗಳು ಕಾಡುತ್ತಿರಬಹುದು. ಅದರಲ್ಲಿಯೂ ಮುಖ್ಯವಾಗಿ ಚಳಿಗಾಲದ ಸಮಯದಲ್ಲಿ ನಿಮ್ಮ ಆರೋಗ್ಯ ಕಾಳಜಿಗೆ ನೀವು ಈ ಕೆಲವು ಸಲಹೆಗಳನ್ನು ಅನುಸರಿಸುವುದು ಒಳ್ಳೆಯದು

ಮಾಲಿನ್ಯದಿಂದ ನಿಮ್ಮ ಕೂದಲು ಮತ್ತು ತ್ವಚೆಯ ಆರೋಗ್ಯ ರಕ್ಷಣೆ ಹೇಗೆಂದು ಯೋಚಿಸುತ್ತಿದ್ದೀರಾ? ಇಲ್ಲಿವೆ ಸಲಹೆಗಳು
ಸಂಗ್ರಹ ಚಿತ್ರ
TV9 Web
| Edited By: |

Updated on: Nov 23, 2021 | 8:25 AM

Share

ಮಾಲಿನ್ಯದಿಂದ ನಿಮಗೆ ಚರ್ಮದ ಅಲರ್ಜಿ ಸಮಸ್ಯೆ ಕಾಡುತ್ತಿರಬಹುದು. ಕೂದಲು ಉದುರುವ ಸಮಸ್ಯೆ ಹೆಚ್ಚಾಗಿರಬಹುದು. ಹೀಗಿರುವಾಗ ಚರ್ಮ ಮತ್ತು ಕೂದಲಿನ ಆರೈಕೆಗೆ ಅದೆಷ್ಟೋ ಔಷಧಿಗಳನ್ನು ಬಳಸುತ್ತಿರುತ್ತೀರಿ. ಆದರೆ ಚರ್ಮದ ಆರೋಗ್ಯ ಮತ್ತು ಕೂದಲಿನ ಆರೈಕೆಗೆ ಈ ಕೆಲವು ಸಲಹೆಗಳನ್ನು ಪಾಲಿಸಿ. ಇದರಿಂದ ನೀವು ಕೂದಲು ಉದುರುವ ಸಮಸ್ಯೆಯಿಂದ ಪರಿಹಾರ ಕಂಡುಕೊಳ್ಳಬಹುದಾಗಿದೆ. ಆಹಾರದಲ್ಲಿ ಅಪೌಷ್ಟಿಕತೆ ಮತ್ತು ಜೀವನ ಶೈಲಿಯಲ್ಲಿ ಕೆಲ ಬದಲಾವಣೆಗಳಿಂದ ನಿಮಗೆ ಆರೋಗ್ಯ ಸಮಸ್ಯೆಗಳು ಕಾಡುತ್ತಿರಬಹುದು. ಅದರಲ್ಲಿಯೂ ಮುಖ್ಯವಾಗಿ ಚಳಿಗಾಲದ ಸಮಯದಲ್ಲಿ ನಿಮ್ಮ ಆರೋಗ್ಯ ಕಾಳಜಿಗೆ ನೀವು ಈ ಕೆಲವು ಸಲಹೆಗಳನ್ನು ಅನುಸರಿಸುವುದು ಒಳ್ಳೆಯದು.

ವಾಹನಗಳಿಂದ ಹೊರಬರುವ ವಿಷಕಾರಕ ಹೊಗೆ, ಕಾರ್ಖಾನೆಗಳಿಂದ ಹರಬರುವ ಅನಿಲ, ಸಿಗರೇಟ್ ಹೊಗೆ ಇವುಗಳು ನಿಮ್ಮ ಸುಂದರವಾರ ತ್ವಚೆಯನ್ನು ಹಾನಿಗೊಳಗಾಗಿಸಬಹುದು. ಹಾಗಿರುವಾಗ ಆರೋಗ್ಯ ಸುಧಾರಣೆಗೆ ಕೆಲವು ಟಿಪ್ಸ್​ಗಳು ಈ ಕೆಳಗಿನಂತಿವೆ. ಇವುಗಳನ್ನು ನೀವು ಪಾಲಿಸುವ ಮೂಲಕ ಚರ್ಮ ಮತ್ತು ಆರೋಗ್ಯಕರ ಕೂದಲಿನ ಆರೈಕೆ ಮಾಡಬಹುದಾಗಿದೆ.

ಹೊಗೆ, ಧೂಳು, ವಿಷಕಾರಿ ಅನಿಲ, ಇವುಗಳಿಂದ ಚರ್ಮದ ಅಲರ್ಜಿಯಂತಹ ಸಮಸ್ಯೆಗಳು ಕಾಣಿಸಿಕೊಳ್ಳುವ ಸಾಧ್ಯತೆಗಳು ಇರುತ್ತವೆ. ಇದರಿಂದ ಕೂದಲು ಉದುರುವ ಸಮಸ್ಯೆಗಳು ಕಂಡುಬರುತ್ತವೆ. ಹೀಗಿರುವಾಗ ನೀವು ಹೊಳೆಯುವ ಕೂದಲು ಮತ್ತು ತ್ವಚೆಯ ಸೌಂದರ್ಯ ಹೆಚ್ಚಿಸಿಕೊಳ್ಳಲು ಈ ಕೆಲವು ಮಾರ್ಗಗಳನ್ನು ಅನುಸರಿಸಿ.

ಚರ್ಮದ ಆರೈಕೆಗೆ ಸಲಹೆಗಳು ಸನ್​ಸ್ಕ್ರೀನ್​ ಬಳಸಿ ನಿಮ್ಮ ಚರ್ಮದ ಆರೈಕೆಗೆ ಸನ್​ಸ್ಕ್ರೀನ್​ ಉತ್ತಮ ಆಯ್ಕೆ. ಸನ್​ಸ್ಕ್ರೀನ್​ನಲ್ಲಿರುವ ಉತ್ಕರ್ಷಣ ನಿರೋಧಕಗಳು ಮಾಲಿನ್ಯದಿಂದ ಸಂಪೂರ್ಣ ರಕ್ಷಣೆ ನೀಡುತ್ತದೆ. ಮಾಲಿನ್ಯಕ್ಕೆ ಕಾರಣವಾಗುವ ವಿಷಕಾರಿ ಅನಿಲಗಳು, ಹೊಗೆ ಇವುಗಳಿಂದ ನಿಮ್ಮ ಆರೋಗ್ಯ ಹಾನಿಗೊಳಗಾಗುತ್ತದೆ. ಚರ್ಮದ ಸಮಸ್ಯೆಯಿಂದ ರಕ್ಷಣೆ ಪಡೆಯಲು ನೀವು ಸನ್​ಸ್ಕ್ರೀನ್​ ಬಳಸುವುದು ಒಳ್ಳೆಯದು.

ಮುಖ ತೊಳೆಯಿರಿ ಹೊರಗಡೆ ತಿರುಗಾಡಿ ಬಂದ ತಕ್ಷಣ ಮುಖ ತೊಳೆಯುವ ಅಭ್ಯಾಸ ಮಾಡಿಕೊಳ್ಳಿ. ಇದರಿಂದ ನಿಮ್ಮ ಮುಖವು ತಾಜಾತನದಿಂದ ಕೂಡಿರುವುದಲ್ಲದೇ ಧೂಳು, ಕೊಳಕು ಮತ್ತು ಮಾಲಿನ್ಯಕಾರಕಗಳಿಂದ ನಿಮ್ಮ ಚರ್ಮವನ್ನು ರಕ್ಷಿಸುತ್ತದೆ. ಆರೋಗ್ಯಕರ ಚರ್ಮವನ್ನು ಪಡೆಯಲು ಈ ಅಭ್ಯಾಸವನ್ನು ಯಾವಾಗಲೂ ರೂಢಿಯಲ್ಲಿಟ್ಟುಕೊಳ್ಳಿ.

ವಾರಕ್ಕೊಮ್ಮೆ ಮಸಾಜ್ ಮಾಡಿ ನಿಮ್ಮ ಚರ್ಮದ ಆರೈಕೆಗೆ ನೀವು ವಾರಕ್ಕೊಮ್ಮೆ ಮಸಾಜ್ ಮಾಡುವ ಅಭ್ಯಾಸವನ್ನು ರೂಢಿಯಲ್ಲಿಟ್ಟುಕೊಳ್ಳಿ. ಕೊಬ್ಬರಿ ಎಣ್ಣೆ ಹಚ್ಚಿ ಮಸಾಜ್ ಮಾಡಿದ ಬಳಿಕ ನೀವು ಸ್ನಾನ ಮಾಡಿ. ವಾರಕ್ಕೊಮ್ಮೆ ಈ ಅಭ್ಯಾಸವನ್ನು ರೂಢಿಯಲ್ಲಿಟ್ಟುಕೊಳ್ಳುವುದರಿಂದ ನಿಮ್ಮ ಚರ್ಮದ ಆರೈಕೆ ಮಾಡಬಹುದಾಗಿದೆ.

ಕೂದಲು ಆರೈಕೆಗೆ ಸಲಹೆಗಳು ಹೊರಗಡೆ ಹೋಗುವಾಗ ನಿಮ್ಮ ಮುಖವನ್ನು ಮತ್ತು ಕೂದಲನ್ನು ತೆಳುವಾದ ಬಟ್ಟೆಯಿಂದ ಮುಚ್ಚಿಕೊಳ್ಳಿ. ಚಳಿಗಾಲದ ಸಮಯದಲ್ಲಿ ಇದು ಉತ್ತಮ ಆಯ್ಕೆ. ಮಾಲಿನ್ಯದಿಂದ ನಿಮ್ಮ ಕೂದಲು ಮತ್ತು ಚರ್ಮದ ಆರೈಕೆ ಮಾಡಲು ಈ ಅಭ್ಯಾಸ ಒಳ್ಳೆಯದು.

ವಾರಕ್ಕೆ ಎರಡು ಬಾರಿಯಾದರೂ ತಲೆಸ್ನಾನ ಮಾಡಿ ವಾರಕ್ಕೆ ಎರಡು ಬಾರಿಯಾದರೂ ತಲೆಸ್ನಾನ ಮಾಡುವ ಅಭ್ಯಾಸವನ್ನು ರೂಢಿಯಲ್ಲಿಟ್ಟುಕೊಳ್ಳಿ. ಮಾಲಿನ್ಯದಿಂದ ನಿಮ್ಮ ಕೂದಲು ಉದುರುವ ಸಮಸ್ಯೆ ಮತ್ತು ಚರ್ಮದ ಅಲರ್ಜಿ ಸಮಸ್ಯೆ ಇನ್ನೂ ಹೆಚ್ಚಾಗುತ್ತದೆ. ಹಾಗಾಗಿ ತಲೆಸ್ನಾನದಿಂದ ನಿಮ್ಮ ಕೂದಲು ಸ್ವಚ್ಛವಾಗುವುದರಿಂದ ತಲೆಹೊಟ್ಟು, ಕೂದಲು ಉದುರುವ ಸಮಸ್ಯೆ ಇವುಗಳಿಂದ ಪರಿಹಾರ ಕಂಡುಕೊಳ್ಳಬಹುದಾಗಿದೆ.

ಇದನ್ನೂ ಓದಿ:

Health Tips: ವಿಪರೀತ ಬೆನ್ನು ನೋವಿನ ಸಮಸ್ಯೆಯೇ? ಪರಿಹಾರಕ್ಕಾಗಿ ಇಲ್ಲಿದೆ ತಜ್ಞರ ಸಲಹೆಗಳು

Health tips: ಚಳಿಗಾಲದಲ್ಲಿ ಶೀತದ ಸಮಸ್ಯೆಯಿಂದ ದೂರ ಇರಲು ಈ 5 ವಿಧಾನಗಳನ್ನು ಅನುಸರಿಸಿ

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ