AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Stress: ಒತ್ತಡವು ನಿಮಗೇ ಗೊತ್ತಿಲ್ಲದಂತೆ ನಿಮ್ಮ ಜೀವನವನ್ನು ನರಕಕ್ಕೆ ತಳ್ಳಬಹುದು

ಮನೆ, ಕಚೇರಿ, ಮೀಟಿಂಗ್, ಹೊಸ ಹೊಸ ಅಸೈನ್​ಮೆಂಟ್​ಗಳಿಂದ ನೀವು ದಣಿದು ಒತ್ತಡ(Stress)ದಲ್ಲಿ ಜೀವನ ಸಾಗಿಸುತ್ತಿದ್ದರೆ, ಮೊದಲು ವೈದ್ಯರನ್ನು ಸಂಪರ್ಕಿಸಿ. ನಿಮಗೆ ನೀವು ಸಮಯಕೊಡದಿದ್ದರೆ ಮುಂದೊಂದು ದಿನ ಆರೋಗ್ಯ ಸಮಸ್ಯೆಗಳು ಫ್ರೀ ಆಗಿ ನಿಮ್ಮನ್ನು ಸೇರುತ್ತವೆ.

Stress: ಒತ್ತಡವು ನಿಮಗೇ ಗೊತ್ತಿಲ್ಲದಂತೆ ನಿಮ್ಮ ಜೀವನವನ್ನು ನರಕಕ್ಕೆ ತಳ್ಳಬಹುದು
Stress
TV9 Web
| Edited By: |

Updated on: Jun 13, 2022 | 4:51 PM

Share

ಮನೆ, ಕಚೇರಿ, ಮೀಟಿಂಗ್, ಹೊಸ ಹೊಸ ಅಸೈನ್​ಮೆಂಟ್​ಗಳಿಂದ ನೀವು ದಣಿದು ಒತ್ತಡ(Stress)ದಲ್ಲಿ ಜೀವನ ಸಾಗಿಸುತ್ತಿದ್ದರೆ, ಮೊದಲು ವೈದ್ಯರನ್ನು ಸಂಪರ್ಕಿಸಿ. ನಿಮಗೆ ನೀವು ಸಮಯಕೊಡದಿದ್ದರೆ ಮುಂದೊಂದು ದಿನ ಆರೋಗ್ಯ ಸಮಸ್ಯೆಗಳು ಫ್ರೀ ಆಗಿ ನಿಮ್ಮನ್ನು ಸೇರುತ್ತವೆ. ರಾತ್ರಿ ನಿದ್ರೆ ಬಾರದಿದ್ದರೆ, ಕೆಲವು ವಿಚಾರಗಳು ನಿಮ್ಮನ್ನು ಕಾಡುತ್ತಿದ್ದರೆ, ಯಾರೊಂದಿಗೂ ಮಾತನಾಡಲು ಮನಸ್ಸಿಲ್ಲದಿದ್ದರೆ ನಿಮ್ಮ ಅಮೂಲ್ಯ ಸಮಯವನ್ನು ನಿಮಗಾಗಿಯೇ ಮೀಸಲಿಡಿ, ನಿಮಗೆ ನೀವೇ ಕಂಪನಿ ಕೊಟ್ಟುಕೊಳ್ಳಿ. ಒಳ್ಳೆಯ ಸಂಗೀತವನ್ನು ಆಲಿಸಿ, ಬೇರೆ ಉತ್ತಮ ಹವ್ಯಾಸಗಳಿದ್ದರೆ ಅವುಗಳನ್ನೂ ಮಾಡಿ. ನಿತ್ಯ ಒಂದು ಗಂಟೆಯಾದರೂ ನಿಮಗಾಗಿ ನೀವು ಬದುಕಿ.

ಮೊದಲು ಕೇವಲ ಒತ್ತಡ ಬಳಿಕ ತಲೆನೋವು, ಖಿನ್ನತೆ, ಏಕಾಗ್ರತೆ ಕೊರತೆ, ಬೇಸರ, ಒಂಟಿ ಭಾವನೆ, ಜೀವನದ ಮೇಲೆ ಜಿಗುಪ್ಸೆ, ರಕ್ತದೊತ್ತಡ, ಹೃದಯ ಸಂಬಂಧಿ ಕಾಯಿಲೆ, ಮಧುಮೇಹ ಹೀಗೆ ಒಂದಕ್ಕೊಂದು ಸಂಬಂಧ ಪಡುತ್ತಾ ಒತ್ತಡ ಅತಿಯಾದರೆ ಜೀವಕ್ಕೂ ಅಪಾಯ.

ಮನುಷ್ಯ ಎಂದ ಮೇಲೆ ಕೆಲಸ, ಒತ್ತಡ ಎಲ್ಲವೂ ಸಹಜ ಆದರೆ ಅದರ ಮಧ್ಯೆ ನಿಮ್ಮ ಮಾನಸಿಕ ಆರೋಗ್ಯವನ್ನು ಕಾಪಾಡಿಕೊಳ್ಳಲು ನೀವು ನಿಮ್ಮ ದಿನಚರಿಯಲ್ಲಿ ಕೆಲವನ್ನು ಅಡಕ ಮಾಡಿಕೊಳ್ಳಲೇಬೇಕು.

ಹೌದು, ಒತ್ತಡದ ಜೀವನದ ನಡುವೆ ಆಗಾಗ ಸ್ವಲ್ಪ ಬಿಡುವು ಪಡೆದುಕೊಳ್ಳಬೇಕು, ಶಾಪಿಂಗ್, ಕುಟುಂಬದ ಕಾರ್ಯಕ್ರಮಗಳನ್ನು ಅಟೆಂಡ್ ಮಾಡುವುದು, ಪ್ರವಾಸ ಹೋಗುವುದು, ಸ್ನೇಹಿತರೆಲ್ಲಾ ಒಟ್ಟಿಗೆ ಸೇರಿ ಹರಟೆ ಹೊಡೆಯುವುದು ಇವೆಲ್ಲವೂ ನಿಮ್ಮ ಒತ್ತಡವನ್ನು ಕಡಿಮೆ ಮಾಡುವ ಔಷಧದಂತೆ ಕಾರ್ಯ ನಿರ್ವಹಿಸುತ್ತದೆ.

ಒತ್ತಡವು ನಿಮ್ಮ ಮೇಲೆ ಹೇಗೆಲ್ಲಾ ಪರಿಣಾಮ ಬೀರಬಲ್ಲದು? -ನಿಮ್ಮ ರೋಗ ನಿರೋಧಕ ಶಕ್ತಿಯನ್ನು ಕಡಿಮೆಗೊಳಿಸುವುದು -ಯಾವುದೇ ನಿರ್ಧಾರ ತೆಗೆದುಕೊಳ್ಳುವಲ್ಲಿ ಸದಾ ಗೊಂದಲ -ಖಿನ್ನತೆ -ಉದರ ಬೇನೆ -ಶಾಂತವಾಗಿ ಕುಳಿತುಕೊಳ್ಳಲಾಗದ ಪರಿಸ್ಥಿತಿ -ಶಕ್ತಿ ಕುಂದುವಿಕೆ -ತಲೆ ನೋವು -ನಿದ್ರಾಹೀನತೆ -ಉಸಿರಾಟದ ತೊಂದರೆ -ಆತಂಕ -ಹೃದಯ ಬಡಿತ ಹೆಚ್ಚಳ -ಯಾವುದೇ ವಿಷಯಗಳಲ್ಲಿ ಹೆಚ್ಚು ಗಮನಕೊಡಲು ಸಾಧ್ಯವಾಗದೇ ಇರುವುದು

ನೀವು ಮಾಡಬೇಕಾಗಿದ್ದೇನು? ನಿತ್ಯ ಧ್ಯಾನ ಮಾಡಿ, ಕುಟುಂಬದವರ ಜತೆ ಸಮಯ ಕಳೆಯಿರಿ, ಉಸಿರಾಟಕ್ಕೆ ಸಂಬಂಧಿಸಿದ ವ್ಯಾಯಾಮ ಅಥವಾ ಪ್ರಾಣಾಯಾಮ ಮಾಡಿ, ಚೆನ್ನಾಗಿ ಊಟ ಮಾಡಿ, ಒಳ್ಳೆಯ ನಿದ್ರೆ ಮಾಡಿ ಎಲ್ಲಾ ರೋಗಗಳಿಂದ ಸದಾ ದೂರವಿರಿ.

ಈ ಲೇಖನವು ಟಿವಿ9ನ ಅಧಿಕೃತ ಮಾಹಿತಿಯಾಗಿರುವುದಿಲ್ಲ, ನಿಮಗೆ ಯಾವುದೇ ಸಮಸ್ಯೆಗಳಿದ್ದರೆ ವೈದ್ಯರನ್ನು ಭೇಟಿಯಾಗಿ

ಆರೋಗ್ಯಕ್ಕೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಪ್ರಮುಖ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Web contact
Web contact

TV9 Kannada

Read More
ಫೈನಲ್​ನಲ್ಲಿ ಸಿಎಸ್​​ಕೆ ದಾಖಲೆ ಮುರಿದ ಆರ್​ಸಿಬಿ
ಫೈನಲ್​ನಲ್ಲಿ ಸಿಎಸ್​​ಕೆ ದಾಖಲೆ ಮುರಿದ ಆರ್​ಸಿಬಿ
ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ‘ಶಿವ ತಾಂಡವ’ ರಂಗು!
ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ‘ಶಿವ ತಾಂಡವ’ ರಂಗು!
ಐಪಿಎಲ್ ಫೈನಲ್: ಬೆಂಗಳೂರಿನಲ್ಲಿ ಖಾಕಿ ಸರ್ಪಗಾವಲು; ತೀವ್ರ ಕಟ್ಟೆಚ್ಚರ
ಐಪಿಎಲ್ ಫೈನಲ್: ಬೆಂಗಳೂರಿನಲ್ಲಿ ಖಾಕಿ ಸರ್ಪಗಾವಲು; ತೀವ್ರ ಕಟ್ಟೆಚ್ಚರ
ಬಾಗೇಪಲ್ಲಿ ಭೀಕರ ರಸ್ತೆ ಅಪಘಾತ ಪ್ರಕರಣ: ಎಸ್‌ಪಿ ಬಿಗ್ ಸ್ಟೇಟ್‌ಮೆಂಟ್
ಬಾಗೇಪಲ್ಲಿ ಭೀಕರ ರಸ್ತೆ ಅಪಘಾತ ಪ್ರಕರಣ: ಎಸ್‌ಪಿ ಬಿಗ್ ಸ್ಟೇಟ್‌ಮೆಂಟ್
ಪ್ರಮಾಣವಚನ ದಿನವೇ ಕಾಂಗ್ರೆಸ್ ಭವನ ಶಂಕುಸ್ಥಾಪನೆಗೆ ಡಿಕೆಶಿ ಪ್ಲ್ಯಾನ್​
ಪ್ರಮಾಣವಚನ ದಿನವೇ ಕಾಂಗ್ರೆಸ್ ಭವನ ಶಂಕುಸ್ಥಾಪನೆಗೆ ಡಿಕೆಶಿ ಪ್ಲ್ಯಾನ್​
ಪವರ್​ ಪ್ಲೇನಲ್ಲೇ ಗುಜರಾತ್ ಪವರ್ ಕಸಿದ ಆರ್​ಸಿಬಿ
ಪವರ್​ ಪ್ಲೇನಲ್ಲೇ ಗುಜರಾತ್ ಪವರ್ ಕಸಿದ ಆರ್​ಸಿಬಿ
ಆರ್​​ಸಿಬಿ ಫ್ಯಾನ್ಸ್‌ಗೆ ಬೆಂಗಳೂರು ಕಮಿಷನರ್ ಕಠಿಣ ವಾರ್ನಿಂಗ್!
ಆರ್​​ಸಿಬಿ ಫ್ಯಾನ್ಸ್‌ಗೆ ಬೆಂಗಳೂರು ಕಮಿಷನರ್ ಕಠಿಣ ವಾರ್ನಿಂಗ್!
ಸಿದ್ ಶ್ರೀರಾಮ್ ಗಾಯನಕ್ಕೆ ಹಿನ್ನೆಲೆ ಸಂಗೀತದ ಅವಶ್ಯಕತೆಯೇ ಇಲ್ಲ: ವಿಡಿಯೋ
ಸಿದ್ ಶ್ರೀರಾಮ್ ಗಾಯನಕ್ಕೆ ಹಿನ್ನೆಲೆ ಸಂಗೀತದ ಅವಶ್ಯಕತೆಯೇ ಇಲ್ಲ: ವಿಡಿಯೋ
ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಬಿಗ್​​ ಅಪ್ಡೇಡ್​​ ನೀಡಿದ ಡಿ.ಕೆ ಶಿವಕುಮಾರ್
ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಬಿಗ್​​ ಅಪ್ಡೇಡ್​​ ನೀಡಿದ ಡಿ.ಕೆ ಶಿವಕುಮಾರ್
ಶ್ರೀ ಕೃಷ್ಣನ ಸನ್ನಿಧಾನದಲ್ಲಿ ವಸಿಷ್ಠ ಸಿಂಹ, ಹರಿಪ್ರಿಯ ದಂಪತಿ: ವಿಡಿಯೋ
ಶ್ರೀ ಕೃಷ್ಣನ ಸನ್ನಿಧಾನದಲ್ಲಿ ವಸಿಷ್ಠ ಸಿಂಹ, ಹರಿಪ್ರಿಯ ದಂಪತಿ: ವಿಡಿಯೋ