AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಫ್ಯಾಟಿ ಲಿವರ್ ಅನ್ನು ನೈಸರ್ಗಿಕವಾಗಿ ಮತ್ತೆ ಮೊದಲಿನ ಸ್ಥಿತಿಗೆ ತರಬೇಕೇ? ಹಾಗಿದ್ರೆ ತಪ್ಪದೆ ಈ ಕೆಲಸಗಳನ್ನು ಮಾಡಿ

ಇತ್ತೀಚಿನ ದಿನಗಳಲ್ಲಿ ಯಕೃತ್ತಿನಲ್ಲಿ ಕೊಬ್ಬು ಶೇಖರಣೆ ಅಂದರೆ ಫ್ಯಾಟಿ ಲಿವರ್ ಸಮಸ್ಯೆ ಸಾಮಾನ್ಯವಾಗಿದೆ. ಇಂದು 3 ರಲ್ಲಿ ಒಬ್ಬರು ಈ ಫ್ಯಾಟಿ ಲಿವರ್ ನಿಂದ ಬಳಲುತ್ತಿದ್ದಾರೆ ಎಂದು ಅನೇಕ ವರದಿಗಳಿಂದ ತಿಳಿದುಬಂದಿದೆ. ಆದರೆ ಫ್ಯಾಟಿ ಲಿವರ್ ಸಮಸ್ಯೆಯನ್ನು ಸರಿಪಡಿಸಬಹುದೇ ಎಂಬ ಆತಂಕ ಹಲವರದ್ದು. ಹಾಗಾಗಿ ಈ ಬಗ್ಗೆ ಸರಿಯಾಗಿ ತಿಳಿದುಕೊಂಡರೆ ಮುಂದೆ ಇಂತಹ ಸಮಸ್ಯೆಗಳು ಬರುವುದನ್ನು ತಡೆಯಬಹುದು. ಈ ಕುರಿತು ಮತ್ತಷ್ಟು ಮಾಹಿತಿ ಸ್ಟೋರಿಯಲ್ಲಿದೆ.

ಫ್ಯಾಟಿ ಲಿವರ್ ಅನ್ನು ನೈಸರ್ಗಿಕವಾಗಿ ಮತ್ತೆ ಮೊದಲಿನ ಸ್ಥಿತಿಗೆ ತರಬೇಕೇ? ಹಾಗಿದ್ರೆ ತಪ್ಪದೆ ಈ ಕೆಲಸಗಳನ್ನು ಮಾಡಿ
Fatty LiverImage Credit source: Getty Images
ಪ್ರೀತಿ ಭಟ್​, ಗುಣವಂತೆ
|

Updated on: May 24, 2026 | 7:25 PM

Share

ಇತ್ತೀಚಿನ ದಿನಗಳಲ್ಲಿ ಫ್ಯಾಟಿ ಲಿವರ್ (Fatty Liver) ಸಮಸ್ಯೆ ವೇಗವಾಗಿ ಹೆಚ್ಚುತ್ತಿದೆ. ಅನೇಕ ವರದಿಗಳ ಪ್ರಕಾರ, ಪ್ರತಿ ಮೂವರಲ್ಲಿ ಒಬ್ಬರಿಗೆ ಫ್ಯಾಟಿ ಲಿವರ್ ಸಮಸ್ಯೆ ಕಾಣಿಸುತ್ತಿದೆ. ಅಸ್ವಸ್ಥ ಆಹಾರ ಪದ್ಧತಿ, ವ್ಯಾಯಾಮದ ಕೊರತೆ, ಅತಿಯಾದ ತೂಕ ಮತ್ತು ಮದ್ಯಪಾನದ ಅಭ್ಯಾಸಗಳು ಇದರ ಪ್ರಮುಖ ಕಾರಣಗಳಾಗಿವೆ. ಆದರೆ ತಜ್ಞರ ಪ್ರಕಾರ, ಆರಂಭಿಕ ಹಂತದಲ್ಲೇ ಗಮನಿಸಿದರೆ ಫ್ಯಾಟಿ ಲಿವರ್ ಅನ್ನು ಬಹುಮಟ್ಟಿಗೆ ರಿವರ್ಸ್ ಮಾಡಬಹುದು. ಗ್ಯಾಸ್ಟ್ರೋಎಂಟರಾಲಜಿಸ್ಟ್ ಡಾ. ಮನೀಷ್ ಹೇಳುವ ಪ್ರಕಾರ, ಲಿವರ್‌ನಲ್ಲಿ ಫೈಬ್ರೋಸಿಸ್ ಉಂಟಾಗುವ ಮುನ್ನವೇ ಸರಿಯಾದ ಜೀವನಶೈಲಿ ಅನುಸರಿಸಿದರೆ ಲಿವರ್ ಮೇಲಿನ ಕೊಬ್ಬನ್ನು ಕಡಿಮೆ ಮಾಡಬಹುದು. ಆದರೆ ಸಮಸ್ಯೆ ಗಂಭೀರವಾಗಿ ಸಿರೋಸಿಸ್ ಹಂತಕ್ಕೆ ತಲುಪಿದರೆ ಲಿವರ್ ಟ್ರಾನ್ಸ್‌ಪ್ಲಾಂಟ್ ಅಗತ್ಯವಾಗುವ ಸಾಧ್ಯತೆ ಇದೆ ಎನ್ನುತ್ತಾರೆ. ಹಾಗಾದರೆ ಫ್ಯಾಟಿ ಲಿವರ್ ಅನ್ನು ಮತ್ತೆ ಮೊದಲಿನ ಸ್ಥಿತಿಗೆ ತರಲು ಎಷ್ಟು ಸಮಯ ಬೇಕಾಗುತ್ತದೆ, ಯಾವ ರೀತಿಯ ಆಹಾರವನ್ನು ಸೇವಿಸಬೇಕು ಮತ್ತು ಯಾವುದನ್ನು ಸೇವಿಸಬಾರದು ಎಂಬುದನ್ನು ಸ್ಟೋರಿ ಮೂಲಕ ತಿಳಿದುಕೊಳ್ಳಿ.

ಫ್ಯಾಟಿ ಲಿವರ್ ಸುಧಾರಿಸಲು ಎಷ್ಟು ಸಮಯ ಬೇಕು?

ತಜ್ಞರ ಪ್ರಕಾರ, ಸಾಮಾನ್ಯವಾಗಿ ಫ್ಯಾಟಿ ಲಿವರ್ ಸುಧಾರಿಸಲು ಸುಮಾರು ಮೂರು ತಿಂಗಳು ಬೇಕಾಗಬಹುದು. ಈ ಅವಧಿಯಲ್ಲಿ ಆಹಾರ ಪದ್ಧತಿ, ವ್ಯಾಯಾಮ ಮತ್ತು ಜೀವನಶೈಲಿಯಲ್ಲಿ ಬದಲಾವಣೆ ಮಾಡುವುದು ಅತ್ಯಂತ ಮುಖ್ಯ. ಮದ್ಯಪಾನ ಮಾಡುವವರು ಅದನ್ನು ನಿಧಾನವಾಗಿ ಕಡಿಮೆ ಮಾಡಬೇಕು. ಜೊತೆಗೆ ತಿಂಗಳಿಗೆ ಒಮ್ಮೆ SGPT ಪರೀಕ್ಷೆ ಮಾಡಿಸಿಕೊಂಡರೆ ಲಿವರ್ ಆರೋಗ್ಯದಲ್ಲಿ ಆಗುತ್ತಿರುವ ಸುಧಾರಣೆಯನ್ನು ತಿಳಿದುಕೊಳ್ಳಬಹುದು.

ವಾಕ್ ಮಾಡುವುದು ಬಹಳ ಮುಖ್ಯ:

ಪ್ರತಿದಿನ ನಡೆಯುವುದು ಬಹಳ ಮುಖ್ಯ. ಡಾ. ಮನೀಷ್ ಅವರ ಪ್ರಕಾರ, ವಾರಕ್ಕೆ ಕನಿಷ್ಠ ಐದು ದಿನ ಬ್ರಿಸ್ಕ್ ವಾಕ್ ಮಾಡುವುದು ಉತ್ತಮ. ಜೊತೆಗೆ ದಿನಕ್ಕೆ 5 ರಿಂದ 7 ಸಾವಿರ ಹೆಜ್ಜೆ ನಡೆಯಿರಿ, 2 ದಿನ ಸ್ಟ್ರೆಂಗ್ತ್ ಟ್ರೈನಿಂಗ್ ಮಾಡಿ, ಊಟದ ನಂತರ 10 ನಿಮಿಷ ನಡೆಯುವ ಅಭ್ಯಾಸ ಬೆಳೆಸಿಕೊಳ್ಳಿ, ಬೆಳಗಿನ ಸೂರ್ಯನ ಬೆಳಕಿನಲ್ಲಿ ನಡೆಯುವುದರಿಂದ ವಿಟಮಿನ್ D ದೊರೆಯುತ್ತದೆ. ಇದು ಲಿವರ್ ಆರೋಗ್ಯಕ್ಕೆ ಸಹಾಯಕವಾಗಿದೆ.

ಇದನ್ನೂ ಓದಿ: ಪ್ರತಿದಿನ ಕಿತ್ತಳೆ ತಿಂದರೆ ಫ್ಯಾಟಿ ಲಿವರ್ ಕಡಿಮೆಯಾಗುತ್ತದೆಯೇ? ಅಧ್ಯಯನ ಏನು ಹೇಳುತ್ತದೆ?

ಸಕ್ಕರೆ ಸೇವನೆ ಕಡಿಮೆ ಮಾಡುವುದು ಅಗತ್ಯ:

ತಜ್ಞರ ಪ್ರಕಾರ, ಹೆಚ್ಚು ಸಕ್ಕರೆ ಇರುವ ಆಹಾರಗಳು ಲಿವರ್‌ಗೆ ಹಾನಿಕಾರಕ. ಆದ್ದರಿಂದ ಸಿಹಿ ಪದಾರ್ಥಗಳು, ಸಕ್ಕರೆ ಹಾಕಿದ ಚಹಾ ಅಥವಾ ಕಾಫಿ, ಬೇಕರಿ ಆಹಾರಗಳು, ಸಿಹಿ ಪಾನೀಯಗಳು ಇವುಗಳನ್ನು ಸಾಧ್ಯವಾದಷ್ಟು ಕಡಿಮೆ ಮಾಡಬೇಕು. ಸಂಪೂರ್ಣವಾಗಿ ಸಕ್ಕರೆ ಬಿಡುವುದಕ್ಕಿಂತ ನಿಯಂತ್ರಿತ ಪ್ರಮಾಣದಲ್ಲಿ ಸೇವಿಸುವುದು ಉತ್ತಮ.

ಹಸಿರು ತರಕಾರಿಗಳು ಲಿವರ್ ಆರೋಗ್ಯಕ್ಕೆ ಉತ್ತಮ:

ಪಾಲಕ್, ಬ್ರೋಕೋಲಿ, ಸೌತೆಕಾಯಿ, ಹೀರೇಕಾಯಿ ಮತ್ತು ಹಾಗಲಕಾಯಿ ಮುಂತಾದ ಹಸಿರು ತರಕಾರಿಗಳು ಲಿವರ್‌ನಲ್ಲಿ ಉಂಟಾಗುವ ಉರಿಯನ್ನು ಕಡಿಮೆ ಮಾಡಲು ಸಹಾಯ ಮಾಡುತ್ತವೆ. ತಜ್ಞರ ಸಲಹೆಯಂತೆ, ದಿನಕ್ಕೆ ಕನಿಷ್ಠ ಒಂದು ತರಕಾರಿ ಆಹಾರದಲ್ಲಿ ಇರಬೇಕು.

ಪ್ರೋಟೀನ್ ಆಹಾರ ಬಹಳ ಮುಖ್ಯ:

ಫ್ಯಾಟಿ ಲಿವರ್ ಸಮಸ್ಯೆಯಲ್ಲಿ ಪ್ರೋಟೀನ್ ಸಮೃದ್ಧ ಆಹಾರ ಸೇವಿಸುವುದು ಅಗತ್ಯ. ನೀವು ಶಾಕಾಹಾರಿಗಳಾಗಿದ್ದರೆ ಹಸಿರು ಮೂಂಗ್ ದಾಲ್, ಕಡಲೆ, ರಾಜ್ಮಾ, ಸ್ಪ್ರೌಟ್ಸ್,ಪನೀರ್, ಟೋಫು ಸೇವನೆ ಮಾಡಬಹುದು. ನೀವು ಮಾಂಸಾಹಾರಿಗಳಾಗಿದ್ದರೆ ಮೊಟ್ಟೆ, ಗ್ರಿಲ್ ಮಾಡಿದ ಚಿಕನ್ ಮತ್ತು ಮೀನನ್ನು ಸೇವನೆ ಮಾಡಬಹುದು. ಜೊತೆಗೆ ವಿಟಮಿನ್ B12 ಹೊಂದಿರುವ ಆಹಾರಗಳು ಕೂಡ ಲಿವರ್ ಆರೋಗ್ಯ ಸುಧಾರಿಸಲು ಸಹಕಾರಿ.

ತಜ್ಞರು ಹೇಳುವಂತೆ, ಫ್ಯಾಟಿ ಲಿವರ್ ಸಮಸ್ಯೆಯನ್ನು ನಿರ್ಲಕ್ಷಿಸಬಾರದು. ಸರಿಯಾದ ಆಹಾರ, ನಿಯಮಿತ ವ್ಯಾಯಾಮ ಮತ್ತು ಆರೋಗ್ಯಕರ ಅಭ್ಯಾಸಗಳಿಂದ ಲಿವರ್ ಆರೋಗ್ಯವನ್ನು ಮತ್ತೆ ಉತ್ತಮ ಸ್ಥಿತಿಗೆ ತರಬಹುದು. ಸಮಯಕ್ಕೆ ಗಮನ ಕೊಟ್ಟರೆ ಗಂಭೀರ ಸಮಸ್ಯೆಗಳನ್ನು ತಪ್ಪಿಸಬಹುದು.

ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Preethi Bhat Gunavante
Preethi Bhat Gunavante

ಪ್ರೀತಿ ಭಟ್ ಗುಣವಂತೆ – ಮೂಲತಃ ಹೊನ್ನಾವರದ ಗುಣವಂತೆಯವಳು. ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ (M.C.J) ಎಂ.ಎ ಮಾಡಿದ್ದು ಪತ್ರಿಕಾ ರಂಗದಲ್ಲಿ 6 ವರ್ಷಗಳ ಅನುಭವವಿದೆ. ಸುದ್ದಿ ಬಿಡುಗಡೆ ವಾರ ಪತ್ರಿಕೆಯಲ್ಲಿ, ಉದಯವಾಣಿ ದಿನ ಪತ್ರಿಕೆಯಲ್ಲಿ ಕೆಲಸ ಮಾಡಿದ್ದೇನೆ. ಅದಾದ ಬಳಿಕ 2023ರಿಂದ ಟಿವಿ9 ಕನ್ನಡದಲ್ಲಿ ಕೆಲಸ ಮಾಡುತ್ತಿದ್ದೇನೆ. ಅಧ್ಯಾತ್ಮ, ಆರೋಗ್ಯ, ಜೀವನಶೈಲಿಗೆ ಸಂಬಂಧಿಸಿದ ಲೇಖನಗಳನ್ನು ಬರೆಯುವುದರಲ್ಲಿ ಆಸಕ್ತಿ ಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುವಲ್ಲಿ ಪ್ರೀತಿಯಿಂದ, ಪ್ರಾಮಾಣಿಕವಾಗಿ ಪ್ರಯತ್ನಿಸುತ್ತಿದ್ದೇನೆ. ಬರವಣಿಗೆ ಹೊರತು ಪಡಿಸಿದರೆ ನನ್ನ ಆಸಕ್ತಿಕರ ಕ್ಷೇತ್ರ ಪ್ರವಾಸ.

Read More
ಸಭೆ ಬಳಿಕ ಕರ್ನಾಟಕ ರಾಜಕೀಯ ಬಗ್ಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಖಡಕ್ ಮಾತು
ಸಭೆ ಬಳಿಕ ಕರ್ನಾಟಕ ರಾಜಕೀಯ ಬಗ್ಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಖಡಕ್ ಮಾತು
ಗುರು ಸಂಚಾರ ತುಲಾ ರಾಶಿಯ ಮೇಲೆ ಯಾವ ರೀತಿ ಪರಿಣಾಮ ಬೀರಲಿದೆ?
ಗುರು ಸಂಚಾರ ತುಲಾ ರಾಶಿಯ ಮೇಲೆ ಯಾವ ರೀತಿ ಪರಿಣಾಮ ಬೀರಲಿದೆ?
ಡಿಕೆಶಿ ಆರಾಧ್ಯ ಗುರುಗಳಾದ ನೊಣವಿನಕೆರೆ ಸ್ವಾಮೀಜಿ ಭವಿಷ್ಯ ಏನ್ಗೊತ್ತಾ?
ಡಿಕೆಶಿ ಆರಾಧ್ಯ ಗುರುಗಳಾದ ನೊಣವಿನಕೆರೆ ಸ್ವಾಮೀಜಿ ಭವಿಷ್ಯ ಏನ್ಗೊತ್ತಾ?
ಗೆಲ್ಲಲೇಬೇಕಾದ ಪಂದ್ಯದಲ್ಲಿ ಒಂದಂಕಿ ದಾಟದ ವೈಭವ್
ಗೆಲ್ಲಲೇಬೇಕಾದ ಪಂದ್ಯದಲ್ಲಿ ಒಂದಂಕಿ ದಾಟದ ವೈಭವ್
90 ವರ್ಷದ ಅತ್ತೆಯನ್ನು ಎತ್ತಿಕೊಂಡು 9 ಕಿ.ಮೀ ನಡೆದ ಬುಡಕಟ್ಟು ಮಹಿಳೆ
90 ವರ್ಷದ ಅತ್ತೆಯನ್ನು ಎತ್ತಿಕೊಂಡು 9 ಕಿ.ಮೀ ನಡೆದ ಬುಡಕಟ್ಟು ಮಹಿಳೆ
6 ವಿದ್ಯಾರ್ಥಿಗಳ IAS ಕನಸು ಕಿತ್ತುಕೊಂಡ ಬೆಂಗಳೂರು ರಸ್ತೆ, ಆಗಿದ್ದೇನು?
6 ವಿದ್ಯಾರ್ಥಿಗಳ IAS ಕನಸು ಕಿತ್ತುಕೊಂಡ ಬೆಂಗಳೂರು ರಸ್ತೆ, ಆಗಿದ್ದೇನು?
ಉಂಡ ಮನೆಗೆ ಕನ್ನ ಹಾಕಿದ ಆಸಾಮಿ: ಕರ್ನಾಟಕ ಬ್ಯಾಂಕ್​ಗೆ 16 ಲಕ್ಷ ರೂ ವಂಚನೆ
ಉಂಡ ಮನೆಗೆ ಕನ್ನ ಹಾಕಿದ ಆಸಾಮಿ: ಕರ್ನಾಟಕ ಬ್ಯಾಂಕ್​ಗೆ 16 ಲಕ್ಷ ರೂ ವಂಚನೆ
ಯೂತ್​​ ಕಾಂಗ್ರೆಸಿಗರ ಗಲಾಟೆ ಪ್ರಕರಣಕ್ಕೆ ಟ್ವಿಸ್ಟ್
ಯೂತ್​​ ಕಾಂಗ್ರೆಸಿಗರ ಗಲಾಟೆ ಪ್ರಕರಣಕ್ಕೆ ಟ್ವಿಸ್ಟ್
ದರ್ಶನ್ ಕೇಸ್: ಚುರುಕುಗೊಳ್ಳಲಿದೆ ರೇಣುಕಾಸ್ವಾಮಿ ಪ್ರಕರಣದ ಕೋರ್ಟ್ ವಿಚಾರಣೆ
ದರ್ಶನ್ ಕೇಸ್: ಚುರುಕುಗೊಳ್ಳಲಿದೆ ರೇಣುಕಾಸ್ವಾಮಿ ಪ್ರಕರಣದ ಕೋರ್ಟ್ ವಿಚಾರಣೆ
ಎಷ್ಟು ಕಾದ್ರೂ ಡಾಕ್ಟ್ರೇ ಬರ್ತಿಲ್ಲ! ಆಸ್ಪತ್ರೆಯಲ್ಲಿ ರೋಗಿಗಳ ಪರದಾಟ
ಎಷ್ಟು ಕಾದ್ರೂ ಡಾಕ್ಟ್ರೇ ಬರ್ತಿಲ್ಲ! ಆಸ್ಪತ್ರೆಯಲ್ಲಿ ರೋಗಿಗಳ ಪರದಾಟ