AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಏನಿದು ಹೈಪೋಥರ್ಮಿಯಾ? ಇದರ ರೋಗಲಕ್ಷಣಗಳೇನು? ಈ ಕಾಯಿಲೆ ಬಾರದಂತೆ ತಡೆಯಲು ತಜ್ಞರು ನೀಡುವ ಸಲಹೆಗಳೇನು?

Hypothermia: ದೇಹದ ಉಷ್ಣತೆಯು ಸಾಮಾನ್ಯ ಸ್ಥಿತಿಗಿಂತ ಕಡಿಮೆಯಿದ್ದರೆ ಅದನ್ನು ಹೈಪೋಥರ್ಮಿಯಾ ಎಂದು ಕರೆಯುತ್ತಾರೆ. ಈ ವೇಳೆ ವ್ಯಕ್ತಿಗೆ ಸರಿಯಾದ ಚಿಕಿತ್ಸೆ ನೀಡದೇ ಹೋದರೆ ಹೃದಯಾಘಾತ ಅಥವಾ ಸಾವು ಕೂಡ ಸಂಭವಿಸಬಹುದು ಎನ್ನುತ್ತಾರೆ ತಜ್ಞರು. ಹಾಗಾದ್ರೆ ಈ ಹೈಪೋಥರ್ಮಿಯಾ ರೋಗಲಕ್ಷಣಗಳೇನು? ಹಾಗೂ ಈ ರೋಗಬಾರದಂತೆ ತೆಗೆದುಕೊಳ್ಳಬೇಕಾದ ಮುಂಜಾಗ್ರತ ಕ್ರಮಗಳ ಬಗ್ಗೆ ತಜ್ಞರು ಹೇಳುವುದೇನು? ಎನ್ನುವ ಮಾಹಿತಿಯು ಈ ಕೆಳಗಿದೆ.

ಏನಿದು ಹೈಪೋಥರ್ಮಿಯಾ? ಇದರ ರೋಗಲಕ್ಷಣಗಳೇನು? ಈ ಕಾಯಿಲೆ ಬಾರದಂತೆ ತಡೆಯಲು ತಜ್ಞರು ನೀಡುವ ಸಲಹೆಗಳೇನು?
ಸಾಂದರ್ಭಿಕ ಚಿತ್ರ
ಸಾಯಿನಂದಾ
| Edited By: |

Updated on:Dec 31, 2024 | 11:20 AM

Share

ಚಳಿಗಾಲ ಆರಂಭವಾಗಿದ್ದು ಕೆಲವು ಪ್ರದೇಶಗಳಲ್ಲಿ ವಿಪರೀತ ಚಳಿಯ ವಾತಾವರಣವಿದೆ. ಈ ಋತುವಿನಲ್ಲಿ ಅನೇಕ ರೀತಿಯ ಆರೋಗ್ಯ ಸಮಸ್ಯೆಗಳು ಕಾಣಿಸಿಕೊಳ್ಳುವುದು ಸಹಜ. ಈ ಶೀತ ವಾತಾವರಣದಲ್ಲಿ ಬೆಚ್ಚಗಿನ ಆಹಾರವನ್ನು ದೇಹ ಬಯಸುತ್ತದೆ. ಬೆಚ್ಚಗಿನ ಆಹಾರವು ದೇಹವನ್ನು ನಾನಾ ರೀತಿಯ ಆರೋಗ್ಯ ಸಮಸ್ಯೆಯಿಂದ ನಮ್ಮನ್ನು ರಕ್ಷಿಸುತ್ತದೆ. ಆದರೆ, ಕೆಲವೊಮ್ಮೆ ದೇಹದ ಉಷ್ಣತೆಯು 95 ಡಿಗ್ರಿ ಫ್ಯಾರನ್‌ಹೀಟ್ (35 ಡಿಗ್ರಿ ಸೆಲ್ಸಿಯಸ್) ಗಿಂತ ಕಡಿಮೆಯಾದಾಗ ಸಂಭವಿಸುವ ಸ್ಥಿತಿಯೇ ಈ ಹೈಪೋಥರ್ಮಿಯಾ ಆಗಿದೆ. ಈ ಕಾಯಿಲೆಯಿಂದ ಬಳಲುತ್ತಿರುವ ವ್ಯಕ್ತಿಯು ತಕ್ಷಣವೇ ಚಿಕಿತ್ಸೆಯನ್ನು ಪಡೆಯಬೇಕು. ಇಲ್ಲದಿದ್ದರೆ ಹೃದಯ ಸ್ತಂಭನವಾಗಿ ಸಾವು ಸಂಭವಿಸುವ ಸಾಧ್ಯತೆಯೇ ಹೆಚ್ಚು ಎನ್ನುತ್ತಾರೆ ತಜ್ಞರು.

ಹೈಪೋರ್ಮಿಯಾ ಕಾಯಿಲೆ ಎಷ್ಟು ಅಪಾಯಕಾರಿ?

ಲೇಡಿ ಹಾರ್ಡಿಂಜ್ ಮೆಡಿಕಲ್ ಕಾಲೇಜಿನ ಮೆಡಿಸಿನ್ ವಿಭಾಗದ ಡಾ.ಎಲ್.ಎಚ್. ​​ಘೋಟೆಕರ್, ಟಿವಿ 9 ಭಾರತ್ ವರ್ಷ್ ಸುದ್ದಿ ವಾಹಿನಿಯೊಂದಿಗೆ ಮಾತನಾಡಿ, ದೇಹದ ಉಷ್ಣತೆಯು ಕಡಿಮೆಯಿದ್ದಾಗ ಹೈಪೋಥರ್ಮಿಯಾ ಕಾಯಿಲೆಯು ಕಾಣಿಸಿಕೊಳ್ಳುತ್ತದೆ. ಈ ವೇಳೆಯಲ್ಲಿ ಹೃದಯ, ನರಮಂಡಲ ಮತ್ತು ಇತರ ಅಂಗಗಳು ಸಾಮಾನ್ಯವಾಗಿ ಕಾರ್ಯನಿರ್ವಹಿಸುವುದಿಲ್ಲ. ಸರಿಯಾದ ಚಿಕಿತ್ಸೆ ನೀಡದಿದ್ದರೆ ಹೃದಯ ಸ್ತಂಭನವಾಗಿ ಸಾವು ಸಂಭವಿಸುವ ಸಾಧ್ಯತೆ ಹೆಚ್ಚಿದೆ. ಚಳಿಗಾಲದಲ್ಲಿ ಹೆಚ್ಚು ಹೊತ್ತು ಮನೆಯಿಂದ ಹೊರಗಿರುವವರಿಗೆ ಈ ಕಾಯಿಲೆ ಬರುವ ಅಪಾಯ ಹೆಚ್ಚು. ಶೀತ ವಾತಾವರಣಕ್ಕೆ ಮೈಯೊಡ್ಡಿ ಉಂಟಾಗುವ ಬಹುತೇಕ ಸಾವುಗಳಿಗೆ ಈ ಹೈಪೋಥರ್ಮಿಯಾ ಪ್ರಮುಖ ಕಾರಣವಾಗಿದೆ. ಈ ಋತುವಿನಲ್ಲಿ ಪ್ರತಿಯೊಬ್ಬ ವ್ಯಕ್ತಿಯು ಆರೋಗ್ಯ ಕಾಳಜಿ ವಹಿಸುವುದು ಅತ್ಯಗತ್ಯ ಎಂದು ತಿಳಿಸಿದ್ದಾರೆ.

ಹೈಪೋಥರ್ಮಿಯಾ ಏಕೆ ಸಂಭವಿಸುತ್ತದೆ?

* ಚಳಿಗಾಲದಲ್ಲಿ ಹೆಚ್ಚು ಸಮಯ ಶೀತವಾತಾವರಣಕ್ಕೆ ಮೈಯೊಡ್ದುವುದು.

* ಶೀತ ವಾತಾವರಣದಲ್ಲಿ ಬೆಚ್ಚಗಿನ ಬಟ್ಟೆಗಳನ್ನು ಧರಿಸದೇ ಇರುವುದು.

* ದೀರ್ಘಕಾಲದಿಂದ ಕಡಿಮೆ ಉಷ್ಣತೆಯಲ್ಲಿ ಬಳಲುತ್ತಿರುವುದು.

ಇದನ್ನೂ ಓದಿ: ಬೆಳಿಗ್ಗೆ, ಸಂಜೆ ಅಥವಾ ರಾತ್ರಿ: ಮೊಟ್ಟೆಗಳನ್ನು ತಿನ್ನಲು ಸರಿಯಾದ ಸಮಯ ಯಾವುದು?

ಹೈಪೋಥರ್ಮಿಯಾ ಕಾಯಿಲೆಯ ಲಕ್ಷಣಗಳು

* ಮೈನಡುಕ

* ಅತಿಯಾದ ಚಳಿಯ ಭಾವನೆ

* ತೀವ್ರ ತಲೆನೋವು

* ಪ್ರಜ್ಞಾಹೀನತೆ

* ಸುಸ್ತು, ಆಯಾಸ

* ಅಸ್ಪಷ್ಟ ಮಾತು

* ಹೈಪೋಥರ್ಮಿಯಾ ಕಾಯಿಲೆ ಬಾರದಂತೆ ತಡೆಯುವುದು ಹೇಗೆ?*

* ಸಾಧ್ಯವಾದಷ್ಟು ದೇಹವನ್ನು ಬೆಚ್ಚಗಿರಿಸುವ ಆಹಾರವನ್ನು ಸೇವಿಸುವುದು.

* ಬೆಳಗ್ಗೆ ಮತ್ತು ಸಂಜೆಯ ವೇಳೆ ಕಡಿಮೆ ತಾಪಮಾನದಲ್ಲಿ ಹೊರಗೆ ಹೋಗುವುದನ್ನು ತಪ್ಪಿಸುವುದು.

* ದೇಹವನ್ನು ಬೆಚ್ಚಗಿಡಲು ನಿಯಮಿತ ವ್ಯಾಯಾಮ ಮಾಡುವುದು.

* ಚಳಿಗಾಲಕ್ಕೆ ಮೈ ಬೆಚ್ಚಗೆ ಇರಿಸುವ ಸೂಕ್ತವಾದ ಬಟ್ಟೆಗಳನ್ನು ಧರಿಸುವುದು.

ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:59 am, Tue, 31 December 24

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್