AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ICMR Dietary Guidelines Part 10 : ದಿನಕ್ಕೆ ಇಂತಿಷ್ಟು ಗಂಟೆಗಳ ವ್ಯಾಯಾಮ ಅಗತ್ಯ, ಐಸಿಎಂಆರ್ ಆಹಾರ ಮಾರ್ಗಸೂಚಿಯಲ್ಲಿ ಏನಿದೆ?

ಇತ್ತೀಚೆಗಿನ ದಿನಗಳಲ್ಲಿ ಒತ್ತಡಭರಿತ ಜೀವನ ಶೈಲಿಯಿಂದಾಗಿ ನಾನಾ ರೀತಿಯ ಆರೋಗ್ಯ ಸಮಸ್ಯೆಗಳು ಒಕ್ಕರಿಸಿಕೊಂಡು ಬಿಡುತ್ತಿದೆ. ಹೀಗಾಗಿ ಬ್ಯುಸಿ ಜೀವನದ ನಡುವೆ ಯೋಗ, ವ್ಯಾಯಾಮ ಹಾಗೂ ಆಹಾರದ ಬಗ್ಗೆ ಕಾಳಜಿ ವಹಿಸುವವರು ಕಡಿಮೆಯೇ. ಕೆಲವರು ಮಾತ್ರ ದೇಹವನ್ನು ಫಿಟ್ ಆಗಿಟ್ಟುಕೊಳ್ಳುವತ್ತ ಗಮನ ಹರಿಸುತ್ತಿದ್ದಾರೆ. ಆದರೆ ತಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳುವುದರ ಜೊತೆಗೆ ಕೆಲಸ, ನಿದ್ದೆ ಹಾಗೂ ವ್ಯಾಯಾಮಕ್ಕೆ ಇಂತಿಷ್ಟು ಸಮಯವನ್ನು ಮೀಸಲಿಡಬೇಕೆಂದು ಐಸಿಎಂಆರ್ ಮಾರ್ಗಸೂಚಿಯಲ್ಲಿ ತಿಳಿಸಿದೆ.

ICMR Dietary Guidelines Part 10 : ದಿನಕ್ಕೆ ಇಂತಿಷ್ಟು ಗಂಟೆಗಳ ವ್ಯಾಯಾಮ ಅಗತ್ಯ, ಐಸಿಎಂಆರ್ ಆಹಾರ ಮಾರ್ಗಸೂಚಿಯಲ್ಲಿ ಏನಿದೆ?
ICMR Dietary Guidelines
ಸಾಯಿನಂದಾ
| Edited By: |

Updated on: May 21, 2024 | 5:53 PM

Share

ಇತ್ತೀಚೆಗಿನ ದಿನಗಳಲ್ಲಿ ಬಹುತೇಕರು ಬಿಡುವಿಲ್ಲದ ಕೆಲಸದಲ್ಲಿರುವವರೇ ಹೆಚ್ಚು. ಅತಿಯಾದ ಕೆಲಸದ ಒತ್ತಡವು ದೈಹಿಕ ಮತ್ತು ಮಾನಸಿಕ ಆರೋಗ್ಯದ ಮೇಲೆಕೆಟ್ಟ ಪರಿಣಾಮಗಳನ್ನು ಬೀರುತ್ತದೆ. ಹೀಗಾಗಿ ದಿನಕ್ಕೆ ಇಂತಿಷ್ಟು ಗಂಟೆಗಳ ಕಾಲ ಮಾತ್ರ ಕೆಲಸ, ನಿದ್ದೆ ಹಾಗೂ ವ್ಯಾಯಾಮ ಮಾಡಬೇಕು ಎಂದು ಸ್ಪಷ್ಟವಾಗಿ ತಿಳಿಸಿದೆ.

ದಿನಕ್ಕೆ ಎಷ್ಟು ಗಂಟೆಗಳು ಕೆಲಸ ಮಾಡಬೇಕು?

ಕೆಲವರಿಗೆ ಕೆಲಸ ಬಿಟ್ಟರೆ ಬೇರೇನೂ ಇಲ್ಲ, ತಮ್ಮ ಹೆಚ್ಚಿನ ಸಮಯವನ್ನು ಉದ್ಯೋಗದ ಸ್ಥಳದಲ್ಲಿ ಕಳೆಯುತ್ತಾರೆ. ದಿನದ 24 ಗಂಟೆಯೂ ಕೆಲಸ ಮಾಡಲು ಸಿದ್ಧರಿರುವವರಿದ್ದಾರೆ. ಆದರೆ ಈ ಕೆಲಸ ಹಾಗೂ ವೈಯುಕ್ತಿಕ ಜೀವನದ ನಡುವೆ ವಿಶ್ರಾಂತಿ ಅತ್ಯಗತ್ಯ. ಅದಲ್ಲದೇ ವಯಸ್ಕರ ಕೆಲಸದ ಅವಧಿ ದಿನಕ್ಕೆ 8 ಗಂಟೆಗಳ ಮಾತ್ರ ಆಗಿರಬೇಕು ಎಂದು ಐಸಿಎಂಆರ್ ಸೂಚಿಸಿದೆ.

ಒಬ್ಬ ವ್ಯಕ್ತಿಗೆ ಎಷ್ಟು ಗಂಟೆಗಳ ನಿದ್ದೆ ಅಗತ್ಯ?

ಪ್ರತಿಯೊಬ್ಬ ವ್ಯಕ್ತಿಗೂ ದೇಹಕ್ಕೆ ವಿಶ್ರಾಂತಿ ಅತ್ಯಗತ್ಯ. ಆರೋಗ್ಯವು ಉತ್ತಮವಾಗಿರಲು ನಿದ್ದೆಯು ಸರಿಯಾಗಿ ಮಾಡಬೇಕು. ಸಾಮಾನ್ಯವಾಗಿ ವಯಸ್ಕರು 8 ಗಂಟೆಗಳ ಕಾಲ ನಿದ್ರಿಸಬೇಕು. ದೇಹಕ್ಕೆ ವಿಶ್ರಾಂತಿ ಸಿಗುವುದಲ್ಲದೆ ಹಾರ್ಮೋನ್ ನಿಯಂತ್ರಣ ಹಾಗೂ ನೆನಪಿನ ಶಕ್ತಿಯ ಹೆಚ್ಚಳಕ್ಕೆ ನಿದ್ದೆಯು ಅಗತ್ಯವಾಗಿದೆ. ನಿದ್ದೆ ಮಾಡುವುದರಿಂದ ಸ್ಥೂಲಕಾಯತೆ, ಹೃದಯರಕ್ತನಾಳದ ಕಾಯಿಲೆಗಳು ಮತ್ತು ಮಾನಸಿಕ ಸಮಸ್ಯೆಗಳು ಸೇರಿದಂತೆ ಇನ್ನಿತ್ತರ ಸಮಸ್ಯೆಗಳನ್ನು ದೂರವಾಗಿಸಲು ಸಹಕಾರಿಯಾಗಿದೆ ಎನ್ನಲಾಗಿದೆ.

ಇದನ್ನೂ ಓದಿ: ಅಡುಗೆಗೆ ಬಳಸುವ ಈ ಎಣ್ಣೆಯಲ್ಲಿ ಸ್ಯಾಚುರೇಟೆಡ್ ಕೊಬ್ಬು ಅಧಿಕ, ಆರೋಗ್ಯಕ್ಕೆ ಅಪಾಯ ಖಂಡಿತ

ವ್ಯಾಯಾಮದ ಅವಧಿಯು ಎಷ್ಟಿರಬೇಕು?

ಯೋಗ ಹಾಗೂ ವ್ಯಾಯಾಮದಂತಹ ದೈಹಿಕ ಚಟುವಟಿಕೆಯಲ್ಲಿ ಸಕ್ರಿಯರಾಗಿರುವುದರಿಂದ ಫಿಟ್ನೆಸ್ ಆಗಿರಲು ಸಾಧ್ಯ. ಅದಲ್ಲದೇ ಒತ್ತಡರಹಿತ ಜೀವನವನ್ನು ನಿಮ್ಮದಾಗಿಸಿಕೊಳ್ಳಬಹುದು. ಹೆಚ್ಚಿನವರನ್ನು ಕಾಡುತ್ತಿರುವ ಮಧುಮೇಹ, ಅಧಿಕ ರಕ್ತದೊತ್ತಡ ಮತ್ತು ಸ್ಥೂಲಕಾಯದಂತಹ ದೀರ್ಘಕಾಲದ ಕಾಯಿಲೆಗಳನ್ನು ದೂರವಾಗಿಸಲು ದೈಹಿಕ ಚಟುವಟಿಕೆಯಲ್ಲಿ ತೊಡಗಿಕೊಳ್ಳುವುದು ಅಗತ್ಯ. ಹೀಗಾಗಿ ವಯಸ್ಕರು ದಿನಕ್ಕೆ ಕನಿಷ್ಠ 60 ನಿಮಿಷಗಳ ಕಾಲ ದೈಹಿಕ ಚಟುವಟಿಕೆಯಲ್ಲಿ ತೊಡಗಿಸಿಕೊಳ್ಳಬೇಕು ಎಂದು ಹೇಳಿದೆ. ವಾಕಿಂಗ್, ಸೈಕ್ಲಿಂಗ್, ಮೆಟ್ಟಿಲುಗಳನ್ನು ಹತ್ತಿ ಇಳಿಯುವಂತಹ ಚಟುವಟಿಕೆಯಲ್ಲಿ ತೊಡಗಿಸಿಕೊಳ್ಳಬೇಕು. ಈ ಆಹಾರ ಮಾರ್ಗಸೂಚಿಯನ್ನು ಅನುಸರಿಸಿದರೆ ಮಾನಸಿಕ ಹಾಗೂ ದೈಹಿಕ ಆರೋಗ್ಯ ಸಮಸ್ಯೆಗಳಿಂದ ಪಾರಾಗಬಹುದು ಎಂದು ತಿಳಿಸಿದೆ.

ಇನ್ನಷ್ಟು ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಸಾಯಿನಂದಾ
ಸಾಯಿನಂದಾ

ಮೂಲತಃ ಉಡುಪಿಯವರು. ಪ್ರತಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿಯನ್ನು ಪಡೆದಿದ್ದಾರೆ. ಪ್ರತಿಷ್ಠಿತ ಕಾಲೇಜುಗಳಲ್ಲಿ ಉಪನ್ಯಾಸಕಿಯಾಗಿ ಕೆಲಸ ಮಾಡಿದ ಅನುಭವ ಇದೆ. ಪ್ರಾರಂಭದಿಂದಲೂ ಬರವಣಿಗೆಯಲ್ಲಿ ಒಲವು ಹೆಚ್ಚಿರುವ ಇವರು ಕರ್ನಾಟಕ ಟೈಮ್ ವೆಬ್ ಸೈಟ್ ನಲ್ಲಿ ಕೆಲಸ ಮಾಡಿದ ಅನುಭವವಿದೆ. ಬಿಡುವು ಸಿಕ್ಕಾಗಲೆಲ್ಲಾ ಸಿನಿಮಾ ನೋಡುವುದು ಹಾಗೂ ಓದುವುದು ಇವರ ಹವ್ಯಾಸ

Read More
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ