AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ICMR Dietary Guidelines Part 6: ಈ ಆಹಾರಗಳನ್ನು ದಿನನಿತ್ಯ ಸೇವಿಸಿದರೆ ನೀವೇ ಆರೋಗ್ಯವಂತರು, ಐಸಿಎಂಆರ್ ಆಹಾರ ಮಾರ್ಗಸೂಚಿಯಲ್ಲಿ ಏನಿದೆ?

ದಿನನಿತ್ಯ ಸೇವಿಸುವ ಆಹಾರ ಪದಾರ್ಥಗಳು ಪೌಷ್ಟಿಕಾಂಶಯುಕ್ತವಾಗಿದ್ದಷ್ಟು ಆರೋಗ್ಯವಂತರಾಗಿರಬಹುದು. ಸೊಪ್ಪು, ಹಸಿರು ತರಕಾರಿಗಳು, ಹಣ್ಣು ಹಂಪಲು ಹಾಗೂ ಬೇಳೆಕಾಳುಗಳ ಸೇವನೆಯಿಂದ ಅರೋಗ್ಯಕ್ಕೆ ಏನೆಲ್ಲಾ ಲಾಭದಾಯಕ ಅಂಶಗಳಿವೆ ಹಾಗೂ ಯಾವೆಲ್ಲಾ ಆಹಾರಗಳನ್ನು ಎಷ್ಟು ಪ್ರಮಾಣದಲ್ಲಿ ಸೇವಿಸಬೇಕೆಂದು ಐಸಿಎಂಆರ್ ಭಾರತೀಯರಿಗೆ ಪರಿಷ್ಕೃತ ಆಹಾರ ಮಾರ್ಗಸೂಚಿಯಲ್ಲಿ ತಿಳಿಸಿದೆ.

ICMR Dietary Guidelines Part 6: ಈ ಆಹಾರಗಳನ್ನು ದಿನನಿತ್ಯ ಸೇವಿಸಿದರೆ ನೀವೇ ಆರೋಗ್ಯವಂತರು, ಐಸಿಎಂಆರ್ ಆಹಾರ ಮಾರ್ಗಸೂಚಿಯಲ್ಲಿ ಏನಿದೆ?
ICMR Dietary Guidelines
ಸಾಯಿನಂದಾ
| Edited By: |

Updated on: May 16, 2024 | 6:11 PM

Share

ನಾವು ಸೇವಿಸುವ ಆಹಾರಗಳಲ್ಲಿ ಸೊಪ್ಪು ಹಸಿರು ತರಕಾರಿಗಳು ಹಾಗೂ ಹಣ್ಣು ಹಂಪಲು ಹಾಗೂ ಬೇಳೆಕಾಳನ್ನು ತಿನ್ನಬೇಕೆಂದು ಹಿರಿಯರು ಹೇಳಿರುವುದನ್ನು ಕೇಳಿರಬಹುದು. ಆದರೆ ಇದೀಗ ಐಸಿಎಂಆರ್ ಮಾರ್ಗಸೂಚಿಯಲ್ಲಿ ನಿತ್ಯವು ಸೇವಿಸುವ ಪ್ರತಿಯೊಂದು ತರಕಾರಿಗಳಿಗೆ ಪರಿಧಮನಿಯ ಹೃದಯ ಕಾಯಿಲೆಯ ಅಪಾಯವನ್ನು ಕಡಿಮೆ ಮಾಡುತ್ತದೆ ಎಂದು ತಿಳಿಸಿದೆ.

ತರಕಾರಿಗಳು ಮತ್ತು ದ್ವಿದಳ ಧಾನ್ಯಗಳನ್ನು ಹೆಚ್ಚು ಏಕೆ ಸೇವಿಸಬೇಕು?

ತರಕಾರಿಗಳು ಅಹಾಗೂ ದ್ವಿದಳ ಧಾನ್ಯಗಳಲ್ಲಿ ಅಗತ್ಯವಾದ ಪೋಷಕಾಂಶಗಳಲ್ಲಿ ಸಮೃದ್ಧವಾಗಿವೆ. ಮಿನರಲ್ಸ್-ಕಬ್ಬಿಣ, ಪೋಟ್ಯಾಷಿಯಂ, ಮೆಗ್ನೆಷಿಯಂ, ಸತು, ವಿಟಮಿನ್ಸ್, ಫೋಲೆಟ್, ಥೈಯಾಮಿನ್ ಮತ್ತು ನಿಯಾಸಿನ್‌ಗಳನ್ನು ಒಳಗೊಂಡಿದೆ. ದ್ವಿದಳ ಧಾನ್ಯಗಳು ಕೆಟ್ಟ ಕೊಲೆಸ್ಟ್ರಾಲ್ ಕಡಿಮೆ ಮಾಡುವ ಸಾಮರ್ಥ್ಯವನ್ನು ಹೊಂದಿದೆ. ಅದಲ್ಲದೇ, ತರಕಾರಿಗಳು, ಧಾನ್ಯಗಳು, ಬೀನ್ಸ್ ಕಾಳುಗಳು, ಬೀಜಗಳ ಸೇವನೆಯಿಂದ ಹೃದ್ರೋಗ, ಅಧಿಕ ರಕ್ತದೊತ್ತಡ, ಪಾರ್ಶ್ವವಾಯು ಮತ್ತು ಟೈಪ್ 2 ಡಯಾಬಿಟಿಸ್ ಅಪಾಯಗಳ ಮಟ್ಟವು ಕಡಿಮೆಯಾಗುತ್ತದೆ.

ಪ್ರತಿನಿತ್ಯ ಎಷ್ಟು ಪ್ರಮಾಣದಲ್ಲಿ ಹಣ್ಣುಗಳು ಮತ್ತು ತರಕಾರಿಗಳನ್ನು ತಿನ್ನಬೇಕು?

ಪೌಷ್ಟಿಕಾಂಶಯುಕ್ತ ಆಹಾರಗಳನ್ನು ಗಮನದಲ್ಲಿಟ್ಟುಕೊಂಡು ಪ್ರತಿಯೊಬ್ಬ ವ್ಯಕ್ತಿಯು ದಿನಕ್ಕೆ 400 ಗ್ರಾಂನಷ್ಟು ತರಕಾರಿಗಳು, 100 ಗ್ರಾಂನಷ್ಟು ತಾಜಾ ಹಣ್ಣುಗಳು, 100 ಗ್ರಾಂ ಹಸಿರು ಸೊಪ್ಪು ತರಕಾರಿಗಳು, ಗೆಡ್ಡೆಗಳನ್ನು ಸೇವಿಸಬೇಕು. ಗರ್ಭಾವಸ್ಥೆಯಲ್ಲಿ, ಕಬ್ಬಿಣ ಮತ್ತು ಫೋಲಿಕ್ ಆಮ್ಲದ ಅವಶ್ಯಕತೆಗಳು ಹೆಚ್ಚಿರುವ ಕಾರಣ ಹಣ್ಣು ಹಂಪಲು ಹಾಗೂ ತರಕಾರಿಗಳನ್ನು ಆಹಾರ ಕ್ರಮದಲ್ಲಿ ಸೇರಿಸಿಕೊಳ್ಳಿ ಎಂದು ಶಿಫಾರಸು ಮಾಡಲಾಗಿದೆ.

ಇದನ್ನೂ ಓದಿ: ಈ ರೀತಿಯ ಆಹಾರ ಪದ್ಧತಿ ಬಂಜೆತನಕ್ಕೆ ಕಾರಣವಾಗಬಹುದು; ಸಂಶೋಧನೆ

ಯಾವ ತರಕಾರಿಗಳು ಮತ್ತು ಹಣ್ಣುಗಳಿಗೆ ಆದ್ಯತೆ ನೀಡುವುದು ಉತ್ತಮ?

ತಾಜಾ, ಸ್ಥಳೀಯವಾಗಿ ಲಭ್ಯವಿರುವ ಹಣ್ಣುಗಳು ಹಾಗೂ ತರಕಾರಿಗಳತ್ತ ಗಮನ ಕೊಡುವುದು ಒಳ್ಳೆಯದು. ಅದರಲ್ಲಿ ಋತುಮಾನದ ತರಕಾರಿಗಳು ಮತ್ತು ಹಣ್ಣುಗಳು ದೇಹಕ್ಕೆ ಅಗತ್ಯವಿರುವ ಎಲ್ಲಾ ಪೋಷಕಾಂಶಗಳನ್ನು ಒದಗಿಸುತ್ತದೆ. ಟೊಮೆಟೊ, ಹಸಿರು ಸೊಪ್ಪು ತರಕಾರಿಗಳು, ಮೂಲಂಗಿ, ಬೀಟ್ರೂಟ್, ಆಲೂಗಡ್ಡೆ, ಗೆಣಸು, ನೇರಳೆ, ಕಿತ್ತಳೆ ಹಣ್ಣುಗಳನ್ನು ಹೆಚ್ಚು ಸೇವಿಸಿದರೆ ಆರೋಗ್ಯಕ್ಕೆ ಹಿತಕರ ಎಂದು ಮಾರ್ಗ ಸೂಚಿಯಲ್ಲಿ ತಿಳಿಸಲಾಗಿದೆ.

ಅಡುಗೆಯ ನಷ್ಟವನ್ನು ತಡೆಯುವುದು ಹೇಗೆ?

ಒಂದು ವೇಳೆ ಕತ್ತರಿಸಿದ ನಂತರ ತರಕಾರಿಗಳನ್ನು ತೊಳೆದರೆ, ದೇಹಕ್ಕೆ ಅಗತ್ಯವಾಗಿ ಬೇಕಾಗುವ ಪೋಷಕಾಂಶಗಳು ಸಿಗುವುದಿಲ್ಲ. ಹೀಗಾಗಿ ಕತ್ತರಿಸುವ ಅಥವಾ ಸಿಪ್ಪೆಸುಲಿಯುವ ಮೊದಲು ತರಕಾರಿಗಳನ್ನು ತೊಳೆದುಕೊಳ್ಳುವುದರಿಂದ ಇದು ಪೋಷಕಾಂಶಗಳ ನಷ್ಟವನ್ನು ತಡೆಯುತ್ತದೆ.

ಇನ್ನಷ್ಟು ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ