ICMR Dietary Guidelines Part 8: ಪ್ರೊಟೀನ್ ಸಪ್ಲಿಮೆಂಟ್ಸ್ ಸೇವನೆ ಆರೋಗ್ಯಕ್ಕೆ ಹಾನಿಕಾರಕ, ಎಚ್ಚರಿಕೆ ನೀಡಿದ ಕೇಂದ್ರ

ಇಂಡಿಯನ್ ಕೌನ್ಸಿಲ್ ಆಫ್ ಮೆಡಿಕಲ್ ರಿಸರ್ಚ್ ಹಾಗೂ ನ್ಯಾಷನಲ್ ಆಫ್ ನ್ಯೂಟ್ರಿಷನ್ ಇತ್ತೀಚೆಗೆ ಬಿಡುಗಡೆ ಮಾಡಿದ ಆಹಾರ ಮಾರ್ಗಸೂಚಿಯಲ್ಲಿ ಅತಿಯಾದ ಪ್ರೊಟೀನ್ ಸಪ್ಲಿಮೆಂಟ್ ಸೇವನೆಯಿಂದ ಮೂತ್ರಪಿಂಡದ ಸಮಸ್ಯೆ ಸೇರಿದಂತೆ ಆರೋಗ್ಯ ಸಂಬಂಧಿ ಸಮಸ್ಯೆಗಳಿಗೆ ಗುರಿಯಾಗಬಹುದು ಎಂದು ಎಚ್ಚರಿಸಿದೆ.

ICMR Dietary Guidelines Part 8: ಪ್ರೊಟೀನ್ ಸಪ್ಲಿಮೆಂಟ್ಸ್ ಸೇವನೆ ಆರೋಗ್ಯಕ್ಕೆ ಹಾನಿಕಾರಕ, ಎಚ್ಚರಿಕೆ ನೀಡಿದ ಕೇಂದ್ರ
Follow us
| Updated By: ಅಕ್ಷಯ್​ ಪಲ್ಲಮಜಲು​​

Updated on: May 18, 2024 | 3:47 PM

ಹೈದರಾಬಾದ್‌ ಮೂಲದ ರಾಷ್ಟ್ರೀಯ ಪೌಷ್ಠಿಕಾಂಶ ಸಂಸ್ಥೆ ಹಾಗೂ ಐಸಿಎಂಆರ್‌ ಸಂಸ್ಥೆಗಳು ಸಿದ್ಧಪಡಿಸಿರುವ ಪರಿಷ್ಕೃತ ‘ಭಾರತೀಯರ ಆಹಾರಕ್ರಮ ಮಾರ್ಗಸೂಚಿ’ ಯಲ್ಲಿ ಭಾರತೀಯರಿಗೆ 17 ಮುಖ್ಯ ಮಾರ್ಗಸೂಚಿಗಳನ್ನು ನೀಡಲಾಗಿದೆ. ಇದರಲ್ಲಿ ಆರೋಗ್ಯಕರ ಜೀವನ ಶೈಲಿ ಹಾಗೂ ಆಹಾರ ಪದ್ಧತಿಯನ್ನು ರೂಢಿಸಿಕೊಳ್ಳುವುದರಿಂದ ನಿಮ್ಮ ಆರೋಗ್ಯವನ್ನು ಸ್ವತಃ ನೀವೇ ರಕ್ಷಿಸಿಕೊಳ್ಳಬಹುದು ಎಂದು ತಿಳಿಸಿದೆ.

ಇತ್ತೀಚೆಗಿನ ದಿನಗಳಲ್ಲಿ ಅಥ್ಲೆಟಿಕ್ ಕಾರ್ಯಕ್ಷಮತೆಯನ್ನು ಹೆಚ್ಚಿಸಲು, ಸ್ನಾಯುಗಳ ಬೆಳವಣಿಗೆ ಹೆಚ್ಚಿಸಲು ನೈಸರ್ಗಿಕವಲ್ಲದ ಪ್ರೊಟೀನ್ ಸಪ್ಲಿಮೆಂಟ್ಸ್ ಪೌಡರ್ ಗಳನ್ನು ಅತಿಯಾಗಿ ಸೇವನೆ ಮಾಡಲಾಗುತ್ತಿದೆ. ಈ ಪ್ರೊಟೀನ್ ಸಪ್ಲಿಮೆಂಟ್ ಪೌಡರ್ ಗಳ ಬದಲು ನೈಸರ್ಗಿಕ ಮೂಲಗಳ ಮೂಲಕ ಉತ್ತಮ ಗುಣಮಟ್ಟದ ಪ್ರೊಟೀನ್ ಗಳು ಮತ್ತು ಅಗತ್ಯ ಅಮೈನೋ ಆಮ್ಲಗಳನ್ನು ಹೊಂದಿರುವ ಆಹಾರವನ್ನು ಸೇವಿಸುವುದು ಆರೋಗ್ಯಕ್ಕೆ ಒಳ್ಳೆಯದು ಎನ್ನಲಾಗಿದೆ.

ಪ್ರೊಟೀನ್ ಸಪ್ಲಿಮೆಂಟ್ಸ್ ಸೇವನೆಯಿಂದ ದೂರವಿರಿ

ಈ ಪ್ರೊಟೀನ್ ಪುಡಿಗಳಲ್ಲಿ ಮೊಟ್ಟೆ, ಹಾಲು ಜೊತೆಗೆ ಸೋಯಾಬೀನ್, ಬಟಾಣಿ ಮತ್ತು ಅಕ್ಕಿಯನ್ನು ಸೇರಿಸಲಾಗುತ್ತದೆ. ಅದಲ್ಲದೇ, ಈ ಪುಡಿಗಳಲ್ಲಿ ಸೇರಿಸಲಾದ ಸಕ್ಕರೆ, ನಾನ್ ಕ್ಯಾಲೋರಿಕ್ ಸ್ವೀಟ್ನರ್, ಕೃತಕ ಫ್ಲೇವರ್ ಗಳನ್ನೂ ಹೊಂದಿರುತ್ತದೆ. ಅತಿಯಾದ ಪ್ರೊಟೀನ್ ಪೌಡರ್‌ಗಳ ದೀರ್ಘಕಾಲದ ಸೇವನೆಯು ಮೂಳೆಗಳಲ್ಲಿ ಸವೆತ ಮತ್ತು ಮೂತ್ರಪಿಂಡದ ಹಾನಿಗೆ ಕಾರಣವಾಗಿದೆ. ಹೀಗಾಗಿ ಈ ಪ್ರೊಟೀನ್ ಸಪ್ಲಿಮೆಂಟ್ಸನ್ನು ಸೇವಿಸುವುದು ಒಳ್ಳೆಯದಲ್ಲ ಎಂದು ತಿಳಿಸಿದೆ.

ಇದನ್ನೂ ಓದಿ: ಅಡುಗೆಗೆ ಬಳಸುವ ಈ ಎಣ್ಣೆಯಲ್ಲಿ ಸ್ಯಾಚುರೇಟೆಡ್ ಕೊಬ್ಬು ಅಧಿಕ, ಆರೋಗ್ಯಕ್ಕೆ ಅಪಾಯ ಖಂಡಿತ

ಪ್ರೊಟೀನ್‌ ಯಾವ ಆಹಾರದಿಂದ ದೊರೆಯುತ್ತದೆ?

ಪ್ರೊಟೀನ್‌ ಮಾಂಸ, ಮೀನು, ಮೊಟ್ಟೆ ಮತ್ತು ಡೈರಿ ಉತ್ಪನ್ನಗಳಲ್ಲಿ ಹೆಚ್ಚಾಗಿರುತ್ತದೆ. ಹೀಗಾಗಿ ಇವುಗಳ ನಿಯಮಿತ ಸೇವನೆಯಿಂದಾಗಿ ನಮ್ಮ ದೇಹಕ್ಕೆ ಅಗತ್ಯವಾಗಿ ಬೇಕಾಗುವ ಅಮೈನೋ ಆಮ್ಲಗಳನ್ನು ಪಡೆಯಬಹುದು. ಸಸ್ಯಹಾರಿಗಳು ದ್ವಿದಳ ಧಾನ್ಯಗಳು ಮತ್ತು ಬೀಜಗಳನ್ನು ಸೇವನೆ ಮಾಡುವ ಮೂಲಕ ಪ್ರೊಟೀನನ್ನು ಪಡೆಯಬಹುದು. ಈ ಮೊಟ್ಟೆಯಲ್ಲಿ ಹೆಚ್ಚಿನ ಪ್ರೊಟೀನ್‌ ಅಂಶವು ಇರುವುದರಿಂದ ದಿನನಿತ್ಯ ಸೇವಿಸುವುದು ಆರೋಗ್ಯಕ್ಕೆ ಒಳ್ಳೆಯದು ಎನ್ನಲಾಗಿದೆ. ಅದಲ್ಲದೇ ದಿನನಿತ್ಯ 80 ಗ್ರಾಂ ಮಾಂಸದೊಂದಿಗೆ 30 ಗ್ರಾಂ ಬೇಳೆಕಾಳುಗಳ ಸೇವನೆ ಸೇರಿರಲಿ ಎಂದು ಐಸಿಎಂಆರ್ ಮಾರ್ಗಸೂಚಿಯಲ್ಲಿ ತಿಳಿಸಿದೆ.

ಇನ್ನಷ್ಟು ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Nithya Bhavishya: ನವರಾತ್ರಿಯ ಮೂರನೇ ದಿನದ ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ನವರಾತ್ರಿಯ ಮೂರನೇ ದಿನದ ರಾಶಿ ಭವಿಷ್ಯ ತಿಳಿಯಿರಿ
ಶ್ರೀರಂಗಪಟ್ಟಣ ದಸರಾ ವೇದಿಕೆಗೆ ಶಿವಣ್ಣ ಎಂಟ್ರಿ; ಅಭಿಮಾನಿಗಳಿಗೆ ಭಾರಿ ಖುಷಿ
ಶ್ರೀರಂಗಪಟ್ಟಣ ದಸರಾ ವೇದಿಕೆಗೆ ಶಿವಣ್ಣ ಎಂಟ್ರಿ; ಅಭಿಮಾನಿಗಳಿಗೆ ಭಾರಿ ಖುಷಿ
ಮನೆಯೆದುರು ಇಟ್ಟಿದ್ದ ಚಪ್ಪಲಿಯೇ ಮಾಯ; ಈ ಕಳ್ಳನ ಕೆಲಸ ನೋಡಿ
ಮನೆಯೆದುರು ಇಟ್ಟಿದ್ದ ಚಪ್ಪಲಿಯೇ ಮಾಯ; ಈ ಕಳ್ಳನ ಕೆಲಸ ನೋಡಿ
ಜಮ್ಮುವಿನ ಕತ್ರಾದಲ್ಲಿ ಭಾರೀ ಬಸ್‌ ಬೆಂಕಿ ದುರಂತ
ಜಮ್ಮುವಿನ ಕತ್ರಾದಲ್ಲಿ ಭಾರೀ ಬಸ್‌ ಬೆಂಕಿ ದುರಂತ
ಬೆಂಗಳೂರು: ಭೂಮಿ ಪೂಜೆಗೂ ಮುನ್ನ ಜಮೀರ್ ಪ್ರಾರ್ಥನೆ ಹೇಗಿತ್ತು ನೋಡಿ
ಬೆಂಗಳೂರು: ಭೂಮಿ ಪೂಜೆಗೂ ಮುನ್ನ ಜಮೀರ್ ಪ್ರಾರ್ಥನೆ ಹೇಗಿತ್ತು ನೋಡಿ
ಕೀ ವಿಚಾರಕ್ಕೆ ಸ್ವರ್ಗದ ಮಂದಿ ಜತೆ ನರಕದವರ ಕಿರಿಕ್; ದೊಡ್ಡ ಜಗಳದ ಮುನ್ಸೂಚನೆ
ಕೀ ವಿಚಾರಕ್ಕೆ ಸ್ವರ್ಗದ ಮಂದಿ ಜತೆ ನರಕದವರ ಕಿರಿಕ್; ದೊಡ್ಡ ಜಗಳದ ಮುನ್ಸೂಚನೆ