ನೇರ ಉರಿಯಲ್ಲಿ ಆಹಾರ ಬೇಯಿಸಿದರೆ ಕ್ಯಾನ್ಸರ್ ಬರುವುದು ಖಚಿತ! ಹೇಗೆ ತಡೆಯುವುದು ತಿಳಿಯಿರಿ

ನೇರವಾಗಿ ಜ್ವಾಲೆಯ ಮೇಲೆ ರೊಟ್ಟಿಗಳನ್ನು ಬೇಯಿಸಿ ತಿನ್ನುವುದನ್ನು ಅನೇಕ ಜನರು ಇಷ್ಟ ಪಡುತ್ತಾರೆ ಆದರೆ ಈ ರೀತಿ ಮಾಡುವುದು ಕ್ಯಾನ್ಸರ್ ಗೆ ಕಾರಣವಾಗುತ್ತದೆ ಎಂದು ಸಂಶೋಧನೆಗಳು ಹೇಳುತ್ತವೆ. ಹೌದು. ಇದು ಆಶ್ಚರ್ಯ ಎನಿಸಿದರೂ ಸತ್ಯ. ಕೆಲವರು ಮಾಂಸ ಆಹಾರಗಳನ್ನು ಕೂಡ ನೇರವಾಗಿ ಉರಿಯುವ ಜ್ವಾಲೆಯ ಮೇಲೆ ಹುರಿದು ಬೇಯಿಸುತ್ತಾರೆ. ಆದರೆ ಈ ರೀತಿ ಆಹಾರಗಳನ್ನು ಉರಿಯಲ್ಲಿ ನೇರವಾಗಿ ಇಟ್ಟು ಬೇಯಿಸುವುದು ಅನಾರೋಗ್ಯದ ಅಪಾಯವನ್ನು ಹೆಚ್ಚಿಸುತ್ತದೆ ಎಂದು ಆರೋಗ್ಯ ತಜ್ಞರು ಎಚ್ಚರಿಸುತ್ತಾರೆ. ಈ ರೀತಿ ಬರುವ ಕ್ಯಾನ್ಸರ್ ಅನ್ನು ತಪ್ಪಿಸಲು ವೈದ್ಯರು ಕೆಲವು ಸಲಹೆಗಳನ್ನು ಕೂಡ ಸೂಚಿಸುತ್ತಾರೆ. ಈ ರೀತಿ ಮಾಡುವುದರಿಂದ ಕ್ಯಾನ್ಸರ್ ಅಪಾಯವನ್ನು ಕಡಿಮೆ ಮಾಡಬಹುದು. ಹಾಗಾದರೆ ಯಾವ ರೀತಿಯ ನಿಯಮಗಳನ್ನು ಅನುಸರಿಸಬೇಕು? ಇಲ್ಲಿದೆ ಮಾಹಿತಿ.

ನೇರ ಉರಿಯಲ್ಲಿ ಆಹಾರ ಬೇಯಿಸಿದರೆ ಕ್ಯಾನ್ಸರ್ ಬರುವುದು ಖಚಿತ! ಹೇಗೆ ತಡೆಯುವುದು ತಿಳಿಯಿರಿ
ಸಾಂದರ್ಭಿಕ ಚಿತ್ರ
Edited By:

Updated on: Sep 14, 2024 | 11:28 AM

ರೊಟ್ಟಿ ಮತ್ತು ಚಪಾತಿ ಪ್ರತಿ ಭಾರತೀಯ ಕುಟುಂಬದ ಪ್ರಧಾನ ಆಹಾರವಾಗಿದೆ. ನೇರವಾಗಿ ಜ್ವಾಲೆಯ ಮೇಲೆ ರೊಟ್ಟಿಗಳನ್ನು ಬೇಯಿಸಿ ತಿನ್ನುವುದನ್ನು ಅನೇಕ ಜನರು ಇಷ್ಟ ಪಡುತ್ತಾರೆ ಆದರೆ ಈ ರೀತಿ ಮಾಡುವುದು ಕ್ಯಾನ್ಸರ್ ಗೆ ಕಾರಣವಾಗುತ್ತದೆ ಎಂದು ಸಂಶೋಧನೆಗಳು ಹೇಳುತ್ತವೆ. ಹೌದು. ಇದು ಆಶ್ಚರ್ಯ ಎನಿಸಿದರೂ ಸತ್ಯ. ಕೆಲವರು ಮಾಂಸ ಆಹಾರಗಳನ್ನು ಕೂಡ ನೇರವಾಗಿ ಉರಿಯುವ ಜ್ವಾಲೆಯ ಮೇಲೆ ಹುರಿದು ಬೇಯಿಸುತ್ತಾರೆ. ಆದರೆ ಈ ರೀತಿ ಆಹಾರಗಳನ್ನು ಉರಿಯಲ್ಲಿ ನೇರವಾಗಿ ಇಟ್ಟು ಬೇಯಿಸುವುದು ಅನಾರೋಗ್ಯದ ಅಪಾಯವನ್ನು ಹೆಚ್ಚಿಸುತ್ತದೆ ಎಂದು ಆರೋಗ್ಯ ತಜ್ಞರು ಎಚ್ಚರಿಸುತ್ತಾರೆ. ಈ ರೀತಿ ಬರುವ ಕ್ಯಾನ್ಸರ್ ಅನ್ನು ತಪ್ಪಿಸಲು ವೈದ್ಯರು ಕೆಲವು ಸಲಹೆಗಳನ್ನು ಕೂಡ ಸೂಚಿಸುತ್ತಾರೆ. ಈ ರೀತಿ ಮಾಡುವುದರಿಂದ ಕ್ಯಾನ್ಸರ್ ಅಪಾಯವನ್ನು ಕಡಿಮೆ ಮಾಡಬಹುದು. ಹಾಗಾದರೆ ಯಾವ ರೀತಿಯ ನಿಯಮಗಳನ್ನು ಅನುಸರಿಸಬೇಕು? ಇಲ್ಲಿದೆ ಮಾಹಿತಿ.

ಬ್ರೆಡ್, ರೊಟ್ಟಿ ಮತ್ತು ಚಪಾತಿ ಇತ್ಯಾದಿಗಳನ್ನು ಅನೇಕ ಜನರು ಹೆಚ್ಚಿನ ಉರಿಯಲ್ಲಿ ಬೇಯಿಸುತ್ತಾರೆ. ಇದರಿಂದ ಆಹಾರ ಚೆನ್ನಾಗಿ ಬೇಯುವುದಲ್ಲದೆ ರುಚಿ ಹೆಚ್ಚಾಗುತ್ತದೆ ಎಂಬುದು ಜನರ ಭಾವನೆ. ತಜ್ಞರು ಹೇಳುವ ಪ್ರಕಾರ ಆಹಾರ ಬೇಯಿಸಲು ಈ ಕ್ರಮವನ್ನು ಅನುಸರಿಸುವುದಾದರೆ ಉರಿಯಲ್ಲಿ ನೇರವಾಗಿ ಇಟ್ಟ ಆಹಾರ ಕಪ್ಪು ಬಣ್ಣಕ್ಕೆ ತಿರುಗಬಾರದು ಎಂದು ಹೇಳುತ್ತಾರೆ. ಅಂದರೆ ಬೆಂಕಿಯ ಜ್ವಾಲೆಯನ್ನು ಕಡಿಮೆ ಮಾಡುವ ಮೂಲಕ ಆಹಾರವನ್ನು ಆಗಾಗ ತಿರುಗಿಸುವ ಮೂಲಕ, ಅವು ಹೆಚ್ಚು ಕಾಲ ಜ್ವಾಲೆಯಲ್ಲಿ ಇರದಂತೆ ನೋಡಿಕೊಳ್ಳಬೇಕು. ಇದರಿಂದ ಇದು ಕಪ್ಪಗಾಗುವುದನ್ನು ತಡೆಯಬಹುದು. ಈ ರೀತಿ ಮಾಡುವ ಮೂಲಕ ಆರೋಗ್ಯ ಕಾಪಾಡಿಕೊಳ್ಳಬೇಕು. ಅಥವಾ ಕಪ್ಪಾದ ಪ್ರದೇಶಗಳನ್ನು ತೆಗೆದು ಹಾಕಬೇಕು.

  • ವೈದ್ಯರು ಹೇಳುವ ಪ್ರಕಾರ ನೇರವಾಗಿ ಉರಿಯ ಮೇಲೆ ಬೇಯಿಸಿದ ಆಹಾರವನ್ನು ಸಾಧ್ಯವಾದಷ್ಟು ಕಡಿಮೆ ತಿನ್ನಬೇಕು.
  • ನೇರವಾಗಿ ಜ್ವಾಲೆಯ ಮೇಲೆ ಆಹಾರ ಬೇಯಿಸುವ ಬದಲು ಬಾಣಲೆಯಲ್ಲಿ ಇಡಬೇಕು. ಈ ರೀತಿ ಮಾಡುವುದರಿಂದ ಕಡಿಮೆ ಶಾಖದಲ್ಲಿ ಆಹಾರ ಬೇಯುತ್ತದೆ.
  • ನೀವೂ ಕೂಡ ಈ ರೀತಿಯಾಗಿ ಆಹಾರ ಸೇವನೆ ಮಾಡುತ್ತಿದ್ದರೆ ಅದರ ಜೊತೆಗೆ ಉತ್ಕರ್ಷಣ ನಿರೋಧಕ ಸಮೃದ್ಧ ಹಣ್ಣುಗಳು ಮತ್ತು ತರಕಾರಿಗಳನ್ನು ಸೇರಿಸಿಕೊಳ್ಳಿ ಎಂದು ತಜ್ಞರು ಹೇಳುತ್ತಾರೆ. ಈ ಫ್ರೀ ರಾಡಿಕಲ್ಗಳು ಆಕ್ಸಿಡೇಟಿವ್ ಒತ್ತಡವನ್ನು ಕಡಿಮೆ ಮಾಡುತ್ತದೆ ಮತ್ತು ಕ್ಯಾನ್ಸರ್ ತಡೆಗಟ್ಟಲು ಸಹಾಯ ಮಾಡುತ್ತದೆ.

ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Preethi Bhat Gunavante

ಪ್ರೀತಿ ಭಟ್ ಗುಣವಂತೆ – ಮೂಲತಃ ಹೊನ್ನಾವರದ ಗುಣವಂತೆಯವಳು. ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ (M.C.J) ಎಂ.ಎ ಮಾಡಿದ್ದು ಪತ್ರಿಕಾ ರಂಗದಲ್ಲಿ 6 ವರ್ಷಗಳ ಅನುಭವವಿದೆ. ಸುದ್ದಿ ಬಿಡುಗಡೆ ವಾರ ಪತ್ರಿಕೆಯಲ್ಲಿ, ಉದಯವಾಣಿ ದಿನ ಪತ್ರಿಕೆಯಲ್ಲಿ ಕೆಲಸ ಮಾಡಿದ್ದೇನೆ. ಅದಾದ ಬಳಿಕ 2023ರಿಂದ ಟಿವಿ9 ಕನ್ನಡದಲ್ಲಿ ಕೆಲಸ ಮಾಡುತ್ತಿದ್ದೇನೆ. ಅಧ್ಯಾತ್ಮ, ಆರೋಗ್ಯ, ಜೀವನಶೈಲಿಗೆ ಸಂಬಂಧಿಸಿದ ಲೇಖನಗಳನ್ನು ಬರೆಯುವುದರಲ್ಲಿ ಆಸಕ್ತಿ ಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುವಲ್ಲಿ ಪ್ರೀತಿಯಿಂದ, ಪ್ರಾಮಾಣಿಕವಾಗಿ ಪ್ರಯತ್ನಿಸುತ್ತಿದ್ದೇನೆ. ಬರವಣಿಗೆ ಹೊರತು ಪಡಿಸಿದರೆ ನನ್ನ ಆಸಕ್ತಿಕರ ಕ್ಷೇತ್ರ ಪ್ರವಾಸ.

Read More
Follow Us