AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Health tips: ಕಲಬೆರಕೆ ವಸ್ತುಗಳನ್ನು ಮಾರಾಟ ಮಾಡುವ ವ್ಯಕ್ತಿಗೆ ಶಿಕ್ಷೆ ಏನು? ನಿಯಮ ಹೇಳುವುದೇನು?

ಆಹಾರದಲ್ಲಿ ಕಲಬೆರಕೆ ಮಾಡುವುದು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಇದನ್ನು ಅರಿಯದ ಜನರು ಅದನ್ನು ಪ್ರತಿನಿತ್ಯ ಒಂದಲ್ಲಾ ಒಂದು ರೀತಿಯಲ್ಲಿ ಸೇವನೆ ಮಾಡುತ್ತಾರೆ. ಇದರಿಂದ ಆರೋಗ್ಯ ಹದಗೆಡುವುದಲ್ಲದೆ ನಾನಾ ರೀತಿಯ ಕಾಯಿಲೆಗಳಿಗೆ ಆಹ್ವಾನ ನೀಡಿದಂತಾಗುತ್ತದೆ. ಕಾನೂನಿನ ಅಡಿಯಲ್ಲಿ ಆಹಾರ ಪದಾರ್ಥಗಳ ಕಲಬೆರಕೆಯನ್ನು ನಿಷೇಧಿಸಲಾಗಿದೆ ಮತ್ತು ಕಲಬೆರಕೆ ಸರಕುಗಳನ್ನು ಮಾರಾಟ ಮಾಡುವ ವ್ಯಕ್ತಿಯ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಲಾಗುತ್ತದೆ. ಹಾಗಾದರೆ ಕಲಬೆರಕೆ ಮಾಡುವ ವ್ಯಕ್ತಿ ಸಿಕ್ಕಿಬಿದ್ದರೆ ಶಿಕ್ಷೆ ಏನು? ಇಲ್ಲಿದೆ ಸಂಪೂರ್ಣ ಮಾಹಿತಿ.

Health tips: ಕಲಬೆರಕೆ ವಸ್ತುಗಳನ್ನು ಮಾರಾಟ ಮಾಡುವ ವ್ಯಕ್ತಿಗೆ ಶಿಕ್ಷೆ ಏನು? ನಿಯಮ ಹೇಳುವುದೇನು?
ಸಾಂದರ್ಭಿಕ ಚಿತ್ರ
ಪ್ರೀತಿ ಭಟ್​, ಗುಣವಂತೆ
| Updated By: ಅಕ್ಷಯ್​ ಪಲ್ಲಮಜಲು​​|

Updated on: Nov 22, 2024 | 3:20 PM

Share

ಇತ್ತೀಚಿನ ದಿನಗಳಲ್ಲಿ ಎಲ್ಲಾ ರೀತಿಯ ಆಹಾರಗಳಲ್ಲಿಯೂ ಕಲಬೆರಕೆ ಮಾಡಲಾಗುತ್ತಿದೆ. ಅದರಲ್ಲಿಯೂ ಆಹಾರ ಪದಾರ್ಥಗಳ ವಿಷಯಕ್ಕೆ ಬಂದಾಗ, ಕಲಬೆರಕೆ ಅತ್ಯಂತ ಸಾಮಾನ್ಯವಾಗಿದೆ ಅದಲ್ಲದೆ ಅಂತಹ ಘಟನೆಗಳು ಮುನ್ನೆಲೆಗೆ ಬರುತ್ತಲೇ ಇರುತ್ತವೆ. ಕಲಬೆರಕೆ ಮತ್ತು ಆಹಾರ ಸುರಕ್ಷತೆಗೆ ಸಂಬಂಧಿಸಿದ ವಿಷಯಗಳಿಗಾಗಿ ಭಾರತದಲ್ಲಿ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆಯನ್ನು ಜಾರಿಗೆ ತರಲಾಗಿದೆ. ಇದಲ್ಲದೆ, ಅದರ ಅಡಿಯಲ್ಲಿ ಮಾಡಲಾದ ಭಾರತೀಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರದ (ಎಫ್ಎಸ್ಎಸ್ಎಐ) ನಿಯಮಗಳನ್ನು ಸಹ ಅನುಸರಿಸಲಾಗುತ್ತದೆ.

ಇಷ್ಟೆಲ್ಲಾ ಕಠಿಣ ಕ್ರಮಗಳಿದ್ದಾಗಲೂ ಜನರು ಆಹಾರದಲ್ಲಿ ಕಲಬೆರಕೆ ಮಾಡುತ್ತಿದ್ದಾರೆ. ಇದನ್ನು ಅರಿಯದ ಜನರು ಅದನ್ನು ಪ್ರತಿನಿತ್ಯ ಒಂದಲ್ಲಾ ಒಂದು ರೀತಿಯಲ್ಲಿ ಸೇವನೆ ಮಾಡುತ್ತಾರೆ. ಇದರಿಂದ ಆರೋಗ್ಯ ಹದಗೆಡುವುದಲ್ಲದೆ ನಾನಾ ರೀತಿಯ ಕಾಯಿಲೆಗಳಿಗೆ ಆಹ್ವಾನ ನೀಡಿದಂತಾಗುತ್ತದೆ. ಕಾನೂನಿನ ಅಡಿಯಲ್ಲಿ ಆಹಾರ ಪದಾರ್ಥಗಳ ಕಲಬೆರಕೆಯನ್ನು ನಿಷೇಧಿಸಲಾಗಿದೆ ಮತ್ತು ಕಲಬೆರಕೆ ಸರಕುಗಳನ್ನು ಮಾರಾಟ ಮಾಡುವ ವ್ಯಕ್ತಿಯ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಲಾಗುತ್ತದೆ. ಹಾಗಾದರೆ ಕಲಬೆರಕೆ ಮಾಡುವ ವ್ಯಕ್ತಿ ಸಿಕ್ಕಿಬಿದ್ದರೆ ಶಿಕ್ಷೆ ಏನು? ಇಲ್ಲಿದೆ ಸಂಪೂರ್ಣ ಮಾಹಿತಿ.

ಕಲಬೆರಕೆ ಮಾಡುವ ವ್ಯಕ್ತಿ ಸಿಕ್ಕಿಬಿದ್ದರೆ ಶಿಕ್ಷೆ ಏನು?

ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆ, 2006 ರ ಪ್ರಕಾರ, ಒಬ್ಬ ವ್ಯಕ್ತಿಯು ಕಲಬೆರಕೆ ಆಹಾರ ಪದಾರ್ಥಗಳನ್ನು ಉತ್ಪಾದಿಸುವುದು, ಮಾರಾಟ ಮಾಡುವುದು ಅಥವಾ ವಿತರಿಸುವುದು ಕಂಡುಬಂದರೆ, ಅದನ್ನು ಗಂಭೀರ ಅಪರಾಧವೆಂದು ಪರಿಗಣಿಸಲಾಗುತ್ತದೆ. ತಪ್ಪಿತಸ್ಥರೆಂದು ಕಂಡುಬಂದರೆ ದಂಡ ಮತ್ತು ಶಿಕ್ಷೆ ಎರಡನ್ನೂ ವಿಧಿಸಲು ಅವಕಾಶವಿದೆ. ಕಲಬೆರಕೆ ಆಹಾರ ಪದಾರ್ಥಗಳನ್ನು ತಯಾರಿಸಿ ಮಾರಾಟ ಮಾಡಿದರೆ 1 ಲಕ್ಷ ರೂ.ವರೆಗೆ ದಂಡ ವಿಧಿಸಬಹುದು. ಅಪರಾಧದ ಗಂಭೀರತೆಯನ್ನು ಪರಿಗಣಿಸಿ, ಅಂತಹ ಪ್ರಕರಣಗಳಿಗೆ 6 ತಿಂಗಳಿನಿಂದ 7 ವರ್ಷಗಳ ವರೆಗೆ ಶಿಕ್ಷೆ ವಿಧಿಸಬಹುದು. ಕಲಬೆರಕೆ ಆಹಾರ ಪದಾರ್ಥಗಳನ್ನು ಸೇವಿಸಿ ವ್ಯಕ್ತಿಯು ಸಾವನ್ನಪ್ಪಿದರೆ, ಕಲಬೆರಕೆ ಮಾಡುವವರಿಗೆ ಜೀವಾವಧಿ ಶಿಕ್ಷೆ ಅಥವಾ 10 ವರ್ಷಗಳವರೆಗೆ ಜೈಲು ಶಿಕ್ಷೆ ವಿಧಿಸಬಹುದು.

ಇದನ್ನೂ ಓದಿ; ಆರೋಗ್ಯ ಕಾಪಾಡಿಕೊಳ್ಳಲು 6-6-6 ವಾಕಿಂಗ್ ದಿನಚರಿ

ಕಲಬೆರಕೆ ಆಹಾರಗಳಿಂದ ದೂರವಿರುವುದು ಹೇಗೆ?

ಆರೋಗ್ಯ ಕಾಪಾಡಿಕೊಳ್ಳಲು ವ್ಯಾಯಾಮ ಮತ್ತು ಉತ್ತಮ ಜೀವನ ಶೈಲಿ ರೂಢಿಸಿಕೊಳ್ಳುವುದರ ಜೊತೆಗೆ ಆಹಾರದ ಆಯ್ಕೆಯು ಸಹ ತುಂಬಾ ಮುಖ್ಯವಾಗುತ್ತದೆ. ಸಾಧ್ಯವಾದಷ್ಟು ಕಲಬೆರಕೆ ಆಗದಂತಹ ಪದಾರ್ಥಗಳನ್ನು ಸೇವನೆ ಮಾಡಿ. ನಿಮಗೆ ಈ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲದಿದ್ದಾಗ ನೈಸರ್ಗಿಕ ಪದಾರ್ಥಗಳ ಮೊರೆ ಹೋಗಿ. ಇದನ್ನು ಬಳಕೆ ಮಾಡುವುದರಿಂದ ಆರೋಗ್ಯವೂ ಚೆನ್ನಾಗಿರುತ್ತದೆ. ಅದಲ್ಲದೆ ನೀವು ಮನೆಯಲ್ಲಿಯೇ ನಿಮಗೆ ಅಗತ್ಯವಿರುವ ಹಣ್ಣು, ತರಕಾರಿ, ಧಾನ್ಯಗಳನ್ನು ಬೆಳೆಯಬಹುದು. ಹಿಟ್ಟುಗಳನ್ನು ಗಿರಣಿಗಳಿಂದ ತರಬಹುದು. ಈ ರೀತಿ ಸಣ್ಣ ಪುಟ್ಟ ಬದಲಾವಣೆಗಳನ್ನು ಮಾಡಿಕೊಳ್ಳುವುದರಿಂದ ಕಲಬೆರಕೆ ಆಹಾರಗಳಿಂದ ಸಾಧ್ಯವಾದಷ್ಟು ದೂರವಿರಬಹುದು. ಅಲ್ಲದೆ ಹೊರಗಡೆ ಸಿಗುವ ಆಹಾರ ಮತ್ತು ರೆಡಿಮೇಡ್ ತಿನಿಸುಗಳಿಂದ ದೂರವಿರುವುದು ಉತ್ತಮ.

ಆರೋಗ್ಯಕ್ಕೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ